ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಭಾಗಮಂಡಲದಲ್ಲಿರುವ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಸಂಪ್ರದಾಯದಂತೆ ಪ್ರತೀ ವರ್ಷ ಮಹಾಶಿವರಾತ್ರಿ ಪೂಜಾ ಕಾರ್ಯಕ್ರಮವನ್ನು ಅತ್ಯಂತ ಶ್ರದ್ಧಾ ಭಕ್ತಯಿಂದ ಆಚರಿಸಿಕೊಂಡು ಬರಲಾಗುತ್ತಿದೆ. ಅದರಂತೆ ಈ ವರ್ಷವೂ ಫೆಬ್ರವರಿ, 15 ರಂದು “ಮಹಾಶಿವರಾತ್ರಿ” #Mahashivarathri ಪೂಜಾ ಕಾರ್ಯಕ್ರಮ ನಡೆಯಲಿದೆ.
ಆದ್ದರಿಂದ ಭಕ್ತಾದಿಗಳು ಫೆಬ್ರವರಿ, 15 ರಂದು ಶ್ರೀ ಭಗಂಡೇಶ್ವರ–ತಲಕಾವೇರಿ ದೇವಾಲಯಗಳಲ್ಲಿ ಮಹಾಶಿವರಾತ್ರಿ ಪ್ರಯುಕ್ತ ನಡೆಯುವ ಪೂಜಾ ಪೂಜಾ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾಗಿ ದೇವಾಲಯದ ಆಡಳಿತಾಧಿಕಾರಿ ಪರವಾಗಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾದ ಚಂದ್ರಶೇಖರ್ ಎನ್.ಜಿ ಇವರು ಕೋರಿದ್ದಾರೆ.
ಶ್ರೀ ಭಗಂಡೇಶ್ವರ ದೇವಾಲಯದಲ್ಲಿ #Shri Bhagandeshwara Temple ಬೆಳಗ್ಗೆ 7 ಗಂಟೆಗೆ ಶತರುದ್ರಾಭಿಷೇಕ, ಬೆಳಗ್ಗೆ 09.30 ಕ್ಕೆ ರುದ್ರಹೋಮ, ಮಧ್ಯಾಹ್ನ 12 ಗಂಟೆಗೆ ಮಹಾಮಂಗಳಾರತಿ, ದೇವರ ಉತ್ಸವ, ಪ್ರಸಾದ ವಿತರಣೆ, ಅನ್ನ ಸಂತರ್ಪಣೆ. ಸಂಜೆ 05.30 ರಿಂದ ಭಜನೆ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ. ಸಂಜೆ 06 ಗಂಟೆಗೆ ತಾಯಂಬಕ ಸೇವೆ, ಸಾಯಂಕಾಲ 06:30 ಕ್ಕೆ ಲಕ್ಷದೀಪೋತ್ಸವ, ಏಕಾದಶ ರುದ್ರಾಭಿಷೇಕ. ಸಂಜೆ 07:30 ಗಂಟೆಗೆ ಮಹಾಮಂಗಳಾರತಿ, ದೇವರ ನೃತ್ಯ ಉತ್ಸವ, ಲಘು ಉಪಹಾರ. ರಾತ್ರಿ 10:30 ಕ್ಕೆ ದೇವರ ತ್ರಿವೇಣಿ ಸಂಗಮ ಬೇಟಿ ಮತ್ತು ಬಾಣಬಿರುಸು ಕಾರ್ಯಕ್ರಮ. ರಾತ್ರಿ 11 ಗಂಟೆಗೆ ಯಕ್ಷ ಕಾವ್ಯ ತರಂಗಿಣಿ ಭಾಗವತ ದಿ. ಚಂದಪ್ಪ ಪೂಜಾರಿ ಪ್ರತಿಷ್ಠಾನ (ರಿ) ದರ್ಬೆ ಬಂಟ್ವಾಳ ದಕ್ಷಿಣ ಕನ್ನಡ ಇವರಿಂದ ಸ್ವರ ಮಾಧುರಿ ಕಾವ್ಯ ಕನ್ನಿಕೆ ಬಿರುದಾಂಕಿತ ಸಂದ್ಯಾ ಪೂಜಾರಿ ದರ್ಬೆ ಇವರ ದಕ್ಷ ನಿರ್ದೇಶನದಲ್ಲಿ ಯಕ್ಷಗಾನ ಬಯಲಾಟ- ಪ್ರಸಂಗ “ಓಂ ನಮಃ ಶಿವಾಯ”.
ಶ್ರೀ ತಲಕಾವೇರಿ ದೇವಾಲಯದಲ್ಲಿ ಬೆಳಗ್ಗೆ 9.30 ಗಂಟೆಗೆ ಶತರುದ್ರಾಭಿಷೇಕ. ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, ಪ್ರಸಾದ ವಿತರಣೆ. ಸಾಯಂಕಾಲ 7 ಗಂಟೆಗೆ ಏಕಾದಶ ರುದ್ರಾಭಿಷೇಕ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಲಿದೆ ಎಂದು ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯಾದ ಚಂದ್ರಶೇಖರ್ ಅವರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















