No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸಾಗರ

ಸಿಗಂಧೂರು ಸೇತುವೆ ಬಳಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ | ಕಾರಣವೇನು? ಬೇಡಿಕೆಗಳೇನು?

ಜನಪ್ರತಿನಿಧಿಗಳಿಗೆ ಸವಾಲು ಹಾಕಿದ ತೀ.ನಾ. ಶ್ರೀನಿವಾಸ್ ಹೇಳಿದ್ದೇನು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 2, 2026
in ಸಾಗರ
0
ಸಿಗಂಧೂರು ಸೇತುವೆ ಬಳಿ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ | ಕಾರಣವೇನು? ಬೇಡಿಕೆಗಳೇನು?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅರಣ್ಯ ಭೂಮಿ ಸಾಗುವಳಿದಾರರ ಬೇಡಿಕೆಗಳಿಗೆ ಶಾಶ್ವತ ಪರಿಹಾರ ಒದಗಿಸಬೇಕು, ದಶಕಗಳ ಕಾಲದಿಂದ ಪರಿಹಾರವಾಗದ ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಆಗ್ರಹಿಸಿ ಮಲೆನಡು ರೈತ ಹೋರಾಟ ಸಮಿತಿ ವತಿಯಿಂದ ಸಿಗಂಧೂರು ಸೇತುವೆ ಬಳಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಸಮಿತಿಯ ಜಿಲ್ಲಾ ಸಂಚಾಲಕ ತೀ.ನಾ. ಶ್ರೀನಿವಾಸ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರು ಒಂದು ವರ್ಷದೊಳಗೆ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಿದ್ದರು. ಆದರೆ ಈಗ ಮೂರು ವರ್ಷ ಕಳೆದರೂ ಈ ಬಗ್ಗೆ ಚಕಾರವೆತ್ತುತ್ತಿಲ್ಲ. ಮಲೆನಾಡ ರೈತರ ಸಂಕಷ್ಟದ ವಿಷಯದಲ್ಲಿ ಸರ್ಕಾರಗಳು ತೋರುತ್ತಿರುವ ನಿರ್ಲಕ್ಷ್ಯ ಖಂಡನೀಯ ಎಂದರು.

ಬಡವರ ಧ್ವನಿಯಾಗಬೇಕಾದ ಜನಪ್ರತಿನಿಧಿಗಳು ಸಮಸ್ಯೆ ಬಗೆಹರಿಸುವ ಬದಲು ಕೋರ್ಟ್’ಗೆ ಹೋಗಲು ಸೂಚಿಸುತ್ತಿರುವುದು ಸರಿಯಲ್ಲ. ರೈತರೇ ಕೋರ್ಟ್’ಗೆ ಹೋಗುವುದಾದರೆ ಜನಪ್ರತಿನಿಧಿಗಳು ಯಾಕೆ ಬೇಕು? ಅವರು ಕೂಡಲೇ ರಾಜೀನಾಮೆ ನೀಡಲಿ ಎಂದು ಸವಾಲು ಹಾಕಿದರು.

ಒಂದು ವೇಳೆ ಸಮಸ್ಯೆ ಶೀಘ್ರವಾಗಿ ಇತ್ಯರ್ಥವಾಗದಿದ್ದರೆ ಮುಂದಿನ ದಿನಗಳಲ್ಲಿ ಜಿಲ್ಲಾಕಾರಿಗಳ ಕಚೇರಿ ಹಾಗೂ ಸಚಿವರ ಕಚೇರಿಗಳಿಗೆ ಮುತ್ತಿಗೆ ಹಾಕುವುದಾಗಿ ಅವರು ಎಚ್ಚರಿಕೆ ನೀಡಿದರು.

ಕೆಪಿಸಿ ಭೂಮಿ ನಂಬಿ ಬದುಕುತ್ತಿರುವ ತಮಗೆ ಕೂಡಲೇ ಹಕ್ಕುಪತ್ರ ನೀಡಬೇಕು. 1964 ರಿಂದಲೂ ಮುಳುಗಡೆ ಸಂತ್ರಸ್ತರು ಅನುಭವಿಸುತ್ತಿರುವ ನೋವನ್ನು ಆಲಿಸುವಲ್ಲಿ ಶಾಸಕಾಂಗ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ವಿಧಾನಸಭೆ ಚುನಾವಣೆಗೆ ಮುನ್ನ ಯಡಿಯೂರಪ್ಪನವರು 15 ದಿನಗಳಲ್ಲಿ ಶರಾವತಿ ಸಂತ್ರಸ್ಥರ ಸಮಸ್ಯೆಯನ್ನು ಬಗೆಹರಿಸುವುದಾಗಿ ಶಿವಮೊಗ್ಗ ಈಡಿಗರ ಭವನದಲ್ಲಿ ಘೋಷಿಸಿದ್ದರು. ಆಗಿನ ಮುಖ್ಯಮಂತ್ರಿ ಬೊಮ್ಮಯಿ ಇದನ್ನೇ ಹೇಳಿದ್ದರು. ಕರ್ನಾಟಕದಿಂದ ದೆಹಲಿಯವರೆಗೂ ಬಿಜೆಪಿ ಅಧಿಕಾರದಲ್ಲಿ ಇದ್ದರೂ ಮಲೆನಾಡಿನ ರೈತರ ಯಾವುದೇ ಬೇಡಿಕೆ ಈಡೇರಿಸಲಿಲ್ಲ ಎಂದು ಕಿರಿ ಕಾರಿದರು.

ಸಮಿತಿಯ ಕಾನೂನು ಸಲಹೆಗಾರರು, ಹೈಕೋರ್ಟ್ ಹಿರಿಯ ನ್ಯಾಯವಾದಿಗಳೂ ಅದ ಕುಮಾರಸ್ವಾಮಿ ಮಾತನಾಡಿ, ಕಳೆದ 80 ವರ್ಷದಿಂದ ರಾಜ್ಯಕ್ಕಾಗಿ ಜೀವನ ತ್ಯಾಗ ಮಾಡಿದ ಜನರು ಇಲ್ಲಿನವರು. ರಾಜ್ಯಕ್ಕೆ ಬೆಳಕು ನೀಡಲು ತಮ್ಮ ಎಲ್ಲವನ್ನೂ ತ್ಯಾಗ ಮಾಡಿದ ಇಲ್ಲಿನ ಜನರನ್ನು ಕತ್ತಲಲ್ಲಿ ಕೂರಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇಲ್ಲಿನ ರೈತರ ಸಮಸ್ಯೆಗಳನ್ನು ಪರಿಹರಿಸುವುದಾಗಿ ಜನಪ್ರತಿನಿಧಿಗಳು, ರಾಜ್ಯ ಸರ್ಕಾರ, ಆಡಳಿತ ಭರವಸೆ ನೀಡಿದೆಯೇ ವಿನಾ ಯಾವುದೂ ಈಡೇರಿಲ್ಲ. ಈ ಭಾಗದ ಜನರಿಗೆ ದೊರೆಯಬೇಕಾದ ನ್ಯಾಯಕ್ಕಾಗಿ ಇದು ಹೋರಾಟದ ಆರಂಭವಷ್ಟೆ. ಬೇಡಿಕೆಗಳು ಈಡೇರದೇ ಇದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಹೋರಾಟ ಮಾಡುವುದು ಮಾತ್ರವಲ್ಲ ವಿಧಾನಸೌಧಕ್ಕೆ ಬೀಗ ಹಾಕುವ ಮೂಲಕ ಪ್ರತಿಭಟಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಿವನಾಗ ಪಾರ್ಥ ಅವಧೂತ ಸ್ವಾಮೀಜಿ ಮಾತನಾಡಿ, ಮಲೆನಾಡು ಭಾಗದ ರೈತರಿಗೆ ಎಂದಿಗೂ ನೆಮ್ಮದಿ ಇಲ್ಲ ಎನ್ನುವಂತಾಗಿದೆ. ಅನ್ನದಾತೋ ಸುಖೀಭವ ಎನ್ನುತ್ತಾರೆ. ಆದರೆ, ನಮ್ಮ ಮಲೆನಾಡಿನ ರೈತರಿಗೆ ನೆಮ್ಮದಿಯಿಲ್ಲ ಎನ್ನುವಂತಾಗಿದೆ. ಸೇತುವೆ ನಿರ್ಮಾಣಕ್ಕೂ ಮುನ್ನದಿಂದಲೂ ಇಲ್ಲಿನ ಜನರ ಅನುಕೂಲಕ್ಕೆ ಭರವಸೆ ನೀಡಲಾಗಿತ್ತು. ಆದರೆ, ಯಾವುದೇ ಭರವಸೆ ಈಡೇರಿಲ್ಲ. ಯಾವಾಗ ಪರಿಹಾರ ದೊರೆಯುತ್ತದೆ. ಸರ್ಕಾರಕ್ಕೆ ನಾಚಿಕೆಯಾಗುವುದಿಲ್ಲ ಎಂದು ಕಿಡಿ ಕಾರಿದರು.

ಇಲ್ಲಿನ ರೈತರು ಅವರ ಜಾಗವನ್ನು ಕೇಳುತ್ತಿದ್ದಾರೆಯೇ ವಿನಃ ಬೇರೆಯವರ ಜಾಗ ಕೇಳುತ್ತಿಲ್ಲ. ಈ ರಾಜ್ಯಕ್ಕೆ ಬೆಳಕು ಕೊಟ್ಟಂತಹ ಇಲ್ಲಿನ ಜನರ ಜೀವನ ಬೆಳಗಲು ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾಕಾರರ ಬೇಡಿಕೆಗಳೇನು?
1. ಶರಾವತಿ ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಸುಮಾರು 1 ವರ್ಷ ಅಧ್ಯಯನ ನಡೆಸಿದ ಮದನ್ ಗೋಪಾಲ್ ಅವರು ಶಿಫಾರಸ್ಸು ಮಾಡಿದ ವರದಿಯಂತೆ ತಕ್ಷಣ ಬಗೆಹರಿಸಬೇಕು. ಸುಪ್ರೀಂಕೋರ್ಟ್, ರಾಜ್ಯ ಸರ್ಕಾರ, ಕೇಂದ್ರ ಸರ್ಕಾರ ಅಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಶರಾವತಿ ಸಂತ್ರಸ್ತರ ಸಮಸ್ಯೆ ಬಗೆಹರಿಸಿ ಎಂದು ಆದೇಶಿಸಿ ಒಂದು ವರ್ಷವಾದರೂ ಜಿಲ್ಲಾಡಳಿತ ಕ್ರಮ ಕೈಗೊಂಡಿಲ್ಲ. ಕೂಡಲೇ ಸಂತ್ರಸ್ತರ ಎಲ್ಲಾ ಜಮೀನುಗಳ ಜಂಟಿ ಸರ್ವೇ ನಡೆಸಿ ಹಕ್ಕುಪತ್ರ ಕೊಡಲು ಕ್ರಮ ಕೈಕೊಳ್ಳಬೇಕು. ಸಂತ್ರಸ್ತರಿಗೆ ಬಿಡುಗಡೆಯಾದ ಮತ್ತು ಅನುಭವದಲ್ಲಿರುವ ಜಮೀನುಗಳನ್ನು ಅರಣ್ಯ ಇಲಾಖೆ, ಕಂದಾಯ ಇಲಾಖೆಗೆ ವರ್ಗಾಯಿಸಬೇಕು.
2. ಶರಾವತಿ ಸಂತ್ರಸ್ತರ ಮಾದರಿಯಲ್ಲಿ ಗಾಜನೂರಿನ ತುಂಗಾ ಅಣೆಕಟ್ಟು, ಭದ್ರಾ ಆಣೆಕಟ್ಟು, ಅಂಬ್ಲಿಗೊಳ ಆಣೆಕಟ್ಟು, ಚಕ್ರಾ, ವರಾಹಿ, ಸಾವೆಹಲ್ಲು ಮುಳುಗಡೆ ಸಂತ್ರಸ್ತರ ಸಮಸ್ಯೆಯನ್ನು ಬಗೆಹರಿಸಬೇಕು.

3. ಸಾಗರ, ಹೊಸನಗರ ತಾಲೂಕಿನಲ್ಲಿ ಕೆಪಿಸಿ ವಿದ್ಯುತ್ ಯೋಜನೆಗಾಗಿ ಸ್ವಾಧೀನ ಮಾಡಿಕೊಂಡು 65 ವರ್ಷವಾದರೂ ಬಳಸಿಕೊಳ್ಳದೇ ಇರುವ ಭೂಮಿಯನ್ನು ಕರ್ನಾಟಕ ಭೂಸ್ವಾಧೀನ ಕಾಯ್ದೆಯಂತೆ ಮುಳುಗಡೆ ಸಂತ್ರಸ್ಥರಿಗೆ, ಭೂರಹಿತ ಸಾಗುವಳಿದಾರರಿಗೆ ಮಂಜೂರು ಮಾಡಬೇಕು.

4. 2006-2008ರಲ್ಲಿ ಜಾರಿಗೆ ಬಂದ ಅರಣ್ಯ ಹಕ್ಕುಕಾಯ್ದೆಯನ್ನು ದೇಶದ ಎಲ್ಲಾ ರಾಜ್ಯಗಳಲ್ಲಿ ಜಾರಿ ಮಾಡಲಾಗಿದೆ. ಕರ್ನಾಟಕದಲ್ಲಿ ಮಾತ್ರ ಜಾರಿ ಬಂದಿಲ್ಲ. ಸುಪ್ರೀಂಕೋರ್ಟ್ ಅರಣ್ಯ ಭೂಮಿ ಸಾಗುವಳಿದಾರರಿಗೆ ನೈಸರ್ಗಿಕ ನ್ಯಾಯ ಕೊಡಿ ಎಂದು ಆದೇಶಿಸಿ 5 ವರ್ಷವಾದರೂ ಆದೇಶವನು, ಸರ್ಕಾರ ಪಾಲಿಸಿಲ್ಲ. ವಿಚಾರಣೆ ನಡೆಸದೇ ರಾಜ್ಯದಲ್ಲಿ ರೈತರ 3 ಲಕ ಅರ್ಜಿ ವಜಾ ಮಾಡಲಾಗಿದೆ. ಕರ್ನಾಟಕ ವಿಧಾನಸಭೆ 75 ವರ್ಷದ ಅನುಭವದ ದಾಖಲೆ ಕೇಳುವ ಬದಲು 25 ವರ್ಷದ ಅನುಭವ ದಾಖಲೆ ಸಾಕೆನ್ನುವ ತಿದ್ದುಪಡಿಯನ್ನು ಕಾಯ್ದೆಗೆ ತರಬೇಕೆಂದು ಸರ್ವಾನುಮತದ ನಿರ್ಣಯ ಮಾಡಿದೆ. ಕೇಂದ್ರದ ಕಾಯ್ದೆ ಬಗ್ಗೆ ರಾಜ್ಯದ ಎಂಪಿಗಳು ಕಣ್ಣೆತ್ತಿ ನೋಡಿಲ್ಲ. ಅರಣ್ಯ ಹಕ್ಕು ಕಾಯ್ದೆ ಪಗತಿ ಪರಿಶೀಲನೆಯನ್ನು ಒಮ್ಮೆಯೂ ನಡೆಸಿಲ್ಲ. ರಾಜ್ಯ ಸರ್ಕಾರ ಜಿಲ್ಲಾ ಅರಣ್ಯ ಹಕ್ಕು ಸಮಿತಿಯಲ್ಲಿ 4 ಜನ ಜಿಲ್ಲಾ ಎಂದು ಕಾನೂನಿನಲ್ಲಿದೆ. ಆದ್ದರಿಂದ ಅರ್ಜಿ ಪರಿಶೀಲನೆಗೆ 1 ವರ್ಷ ಅವಕಾಶ ಕೊಡಬೇಕು ಎಂದು ಸುಪ್ರೀಂಕೋರ್ಟ್’ಗೆ ಪಂಚಾಯ್ತಿ ಸದಸ್ಯರು ಇರಬೇಕು. ಉಪವಿಭಾಗ ಸಮಿತಿಯಲ್ಲಿ 4 ಜನ ತಾಲೂಕು ಪಂಚಾಯ್ತಿ ಸದಸ್ಯರು ಇರಬೇಕು ಅರ್ಜಿ ಸಲ್ಲಿಸಿದೆ. ಇನ್ನೊಂದು ಕಡೆ 3 ಲಕ್ಷ ಅರ್ಜಿಯನ್ನು ಸುಪ್ರೀಂಕೋರ್ಟ್ ಆದೇಶದ ವಿರುದ್ಧ ವಜಾ ಮಾಡಿದೆ.

5. ಸುಪ್ರೀಂಕೋರ್ಟ್ ಆದೇಶ ಎಂದು ಡೀಮ್ಸ್ ಫಾರೆಸ್ಟ್ (ಪರಿಭಾವಿತ ಅರಣ್ಯ) ಎಂದು ಸೊಪ್ಪಿನಬೆಟ್ಟ, ಕಾನು, ಕಾಡಿ ಎಂದು ಸುಪ್ರೀಂಕೋರ್ಟ್ ಅದೇಶ ಮಾಡಿದೆ. ಅರಣ್ಯ ಸ್ವರೂಪ ಇಲ್ಲದಿರುವ ಗ್ರಾಮ, ಊರುಗಳಿರುವ ಹಕ್ಕುಪತ್ರ ಪಡೆದಿರುವ, ಬಗಹುಕುಂ ಸಾಗುವಳಿ ಮಾಡಿಕೊಂಡಿರುವ ಪ್ರದೇಶಗಳ ವಸ್ತುಸ್ಥಿತಿ ವರದಿ ಮಾಡಿ ಆ ಪದೇಶಗಳನ್ನು ಪ್ರದೇಶವನ್ನಾಗಿ 2014 ರಂದು ಸರ್ಕಾರ ಘೋಷಿಸಿದೆ. ಈಗ ಮತ್ತೊಮೆ ಈ ಜಮೀನುಗಳ ವಸುಸ್ಥಿತಿ ಮಾಹಿತಿ ಕೊಡಿ ಡೀಮ್ಸ್ ಫಾರೆಸ್ಟ್’ನಿಂದ ಕೈಬಿಡಲು ಅವಕಾಶವಿದೆ. ವಸ್ತುನಿಷ್ಟವಾಗಿ ಸ್ಥಳ ತನಿಖೆ ಮಾಡಿ ಗ್ರಾಮಸ್ಥರ ಸಮ್ಮುಖದಲ್ಲಿ ವರದಿ ಕೊಡಬೇಕು. 6. 27-04-1970ರ ಹಿಂದೆ ಅರಣ್ಯ, ಭೂಮಿ ಸಾಗುವಳಿ ಮಾಡಿಕೊಂಡು ಬಂದಿರುವ ರೈತರಿಗೆ ಜಮೀನು ಮಂಜೂರು ಮಾಡಲು 1996ರಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ 43.000 ಎಕರೆ ಭೂಮಿಯನ್ನು ಬಿಡುಗಡೆ ಮಾಡಿದೆ. ಕೇಂದ್ರ-ರಾಜ್ಯ ಸರ್ಕಾರಗಳ ಹಲವಾರು ಆದೇಶಗಳು ಬಂದು 30 ವರ್ಷಗಳಾದರೂ ರೈತರಿಗೆ ಹಕ್ಕುಪತ್ರ ಕೊಟ್ಟಿಲ್ಲ. ಕೂಡಲೇ ಹಕ್ಕುಪತ್ರ ಕೊಡಬೇಕು.

7. ಕರೂರು, ಭಾರಂಗಿ ಹೋಬಳಿ ಮತ್ತು ಆವಿನಹಳ್ಳಿ ಹೋಬಳಿಯ ಕೆಲವು ಭಾಗಗಳನ್ನು ಶರಾವತಿ ಅಭಯಾರಣ್ಯ ಎಂದು ನಿಯಮಬಾಹಿರವಾಗಿ, ಗ್ರಾಮಪಂಚಾಯಿ ಮತ್ತು ಆ ಭಾಗದ ಜನರ ಅಭಿಪ್ರಾಯ ಪಡೆಯದೇ ಕೇಂದ್ರದ ವನ್ಯಜೀವಿ ಇಲಾಖೆ ಘೋಷಿಸಿತ್ತು. ಕೇಂದ್ರ ಸರ್ಕಾರದ ಅಕೌಂಟೆಂಟ್ ಜನರಲ್ ನಿಯಮಬಾಹಿರವಾಗಿ ಅಭಯಾರಣ್ಯ ಘೋಷಿಸಿರುವುದರಿಂದ ಯಾವುದೇ ಹಣಕಾಸು ಮಂಜೂರು ಮಾಡಲಾಗುವುದಿಲ್ಲ ಎಂದು ಘೋಷಿಸಿತ್ತು. ಈಗಲೂ ಸಿಂಗಳೀಕ ಅಭಯಾರಣ್ಯ ಎಂದು ನಿಯಮಬಾಹಿರವಾಗಿ ಘೋಷಿಸಲಾಗಿದೆ. ಈ ವ್ಯಾಪ್ತಿಯ ಪ್ರದೇಶದಲ್ಲಿ ಹಕ್ಕುಪತ್ರ ಪಡೆದವರಿಗೆ ಕಂದಾಯ ಇಲಾಖೆ ಇವರ ಜನವಸತಿಗೆ ತೊಂದರೆ ಕೊಡಲಾಗುತ್ತಿದೆ. ಬಿಳಿಗಾರು, ಕಾನೂರು, ಯಡುಮನೆ ಇತರಕಡೆ ವನ್ಯಜೀವಿವಲಯದ ಅಧಿಕಾರಿಗಳು ದೌರ್ಜನ್ಯ ನಡೆಸುತ್ತಿದ್ದಾರೆ.

8. ಅರಣ್ಯ ವ್ಯವಸ್ಥಾಪನಾ ಸಮಿತಿ 30-40 ವರ್ಷಗಳ ಹಿಂದೆ ರಚನೆಯಾದರೂ ಈಗ ವ್ಯವಸ್ಥಾಪನಾ ಅಧಿಕಾರಿ ನೇಮಕ ಆಗಿ ರೈತರು ಹಕ್ಕುಪತ್ರ ಪಡೆದ ಜಮೀನು, ಮನೆಗಳನ್ನು ಅರಣ್ಯ ಎಂದು ಘೋಷಿಸಲು ಆರಂಭಿಸಿದೆ. ಯಾವುದೇ ಕಾರಣಕ್ಕೆ ಮಂಜೂರಾದ ಜಮೀನು, ನಿಯಮಾನುಸಾರವಾಗಿ ಅರ್ಜಿ ಸಲ್ಲಿಸಿದ ಬರ್ಗ ಹುಕುಂ ಸಾಗುವಳಿ ಮಾಡುತ್ತಿದ್ದವರಿಗೆ ಮತ್ತು ಮನೆಗಳಿಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಆದೇಶ ಮಾಡಬೇಕು.
ರಾಜ್ಯದ ಮುಖ್ಯಮಂತ್ರಿಗಳು ಕೂಡಲೇ ಮಲೆನಾಡಿನ ರೈತರಿಗೆ ಕೊಟ್ಟ ಮಾತಿನಂತೆ, ರೈತರ ಸಮಸ್ಯೆ ಪರಿಹರಿಸಲು ಅಧಿಕಾರಿಗಳು, ಜನಪ್ರತಿನಿಧಿಗಳು, ರೈತರ ಪ್ರತಿನಿಧಿಗಳ ಸಭೆ ಕರೆದು ಮೇಲ್ಕಂಡ ಬೇಡಿಕೆಗಳು ಮತ್ತು ಇತರ ಬೇಡಿಕೆಗಳನ್ನು ತಕ್ಷಣ ಈಡೇರಿಸಲು ಸರ್ಕಾರಿ ಅದೇಶ ಹೊರಡಿಸಬೇಕು.

(ವರದಿ: ಮಧುರಾಮ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: ForesthosanagarKannada News WebsiteLatest News KannadaMalnad NewsSagarSharavathi RiverSharavathi River SubmergenceSiganduru Bridgeಅರಣ್ಯ ಭೂಮಿಶರಾವತಿ ಮುಳುಗಡೆಶಿವಮೊಗ್ಗಸಿಗಂಧೂರು ಸೇತುವೆ
Share207Tweet130Send
Previous Post

ಭದ್ರಾವತಿ | ಎತ್ತಿನಗಾಡಿಯಿಂದ ಬಿದ್ದು ಕೂಲಿಕಾರ್ಮಿಕ ಸಾವು

Next Post

ಒತ್ತಡದ ಬದುಕಿನಿಂದ ಮುಕ್ತರಾಗಲು ಯೋಗಾಭ್ಯಾಸ ಅತ್ಯವಶ್ಯ: ರುದ್ರೇಗೌಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಒತ್ತಡದ ಬದುಕಿನಿಂದ ಮುಕ್ತರಾಗಲು ಯೋಗಾಭ್ಯಾಸ ಅತ್ಯವಶ್ಯ: ರುದ್ರೇಗೌಡ

ಒತ್ತಡದ ಬದುಕಿನಿಂದ ಮುಕ್ತರಾಗಲು ಯೋಗಾಭ್ಯಾಸ ಅತ್ಯವಶ್ಯ: ರುದ್ರೇಗೌಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮಂಗಳೂರು-ಸುಬ್ರಹ್ಮಣ್ಯ-ಮಂಗಳೂರು ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ಅಪ್ಡೇಟ್

April 16, 2026
ಶಿವಮೊಗ್ಗ | ಮೂರು ಅಪರಾಧ ಪ್ರಕರಣ ಸುದ್ದಿ ಒಂದೇ ಕ್ಲಿಕ್’ನಲ್ಲಿ

ಮದುವೆ ಸಮಾರಂಭದಲ್ಲಿ ಗೃಹಿಣಿಯ ಸೊಂಟ ಮುಟ್ಟಿದ ಯುವಕ | ಪ್ರಶ್ನಿಸಿದವರ ಮೇಲೆ ಹಲ್ಲೆ

April 16, 2026
ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆ | ಶಿಕಾರಿಪುರದ ಕುಮದ್ವತಿ ಕೇಂದ್ರಿಯ ವಸತಿ ಶಾಲೆಗೆ ಶೇ.100 ಫಲಿತಾಂಶ

April 16, 2026
ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

ಗಾನ ವೇದಿಕೆಯಲ್ಲಿ ಪುಟ್ಟ ಗಾಯಕರ ವೈಭವ ‘ಸರಿಗಮಪ ಲಿಟಲ್ ಚಾಂಪ್ಸ್’ | ಏಪ್ರಿಲ್ 18 ರಿಂದ ಜೀ಼ ಕನ್ನಡ ವಾಹಿನಿಯಲ್ಲಿ

April 16, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ತೀರ್ಥಹಳ್ಳಿ, ಮದುವೆ ಮುಗಿಸಿ ಮನೆಗೆ ಬಂದ ಕುಟುಂಬಸ್ಥರಿಗೆ ಕಾದಿತ್ತು ಶಾಕ್!

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL