ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಮತ್ತು ಶಿವಮೊಗ್ಗ ಜಿಲ್ಲಾ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಸಹಯೋಗದಲ್ಲಿ ಮಾ.21 ಮತ್ತು 22ರಂದು ಶಿವಮೊಗ್ಗದ ನೆಹರೂ ಒಳಾಂಗಣ ಕ್ರೀಡಾಂಗಣದಲ್ಲಿ ರಾಜ್ಯಮಟ್ಟದ ಯೂತ್ ಬಾಕ್ಸಿಂಗ್ ಪಂದ್ಯಾವಳಿಯನ್ನು ಅಯೋಜಿಸುತ್ತಿದ್ದೇವೆ ಎಂದು ಸಂಘದ ಸಹ ಕಾರ್ಯದರ್ಶಿ ವಿನೋದ್ ಹೇಳಿದ್ದಾರೆ.
ಅವರು ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 2008-09ರಲ್ಲಿ ಜನಿಸಿರುವ ಪುರುಷ ಮತ್ತು ಮಹಿಳಾ ಕ್ರೀಡಾಪಟುಗಳು ವಿವಿಧ ತೂಕದ ವಿಭಾಗದಲ್ಲಿ ಭಾಗವಹಿಸಬಹುದು. ಪಂದ್ಯಾವಳಿಗೆ ಪ್ರಥಮ ಚಿಕಿತ್ಸೆ ವ್ಯವಸ್ಥೆ ಕೂಡ ಮಾಡಲಾಗಿದೆ ಎಂದರು.
ಪಂದ್ಯಾವಳಿಯಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ತೀರ್ಪುಗಾರರು ಭಾಗವಹಿಸಲಿದ್ದು, ಜಿಲ್ಲೆಯಿಂದ ಓರ್ವ ಮಹಿಳಾ ತೀರ್ಪುಗಾರರು ಭಾಗವಹಿಸಲಿದ್ದಾರೆ. ಬಾಕ್ಸಿಂಗ್ ಫೆಡರೇಷನ್ ಆಫ್ ಇಂಡಿಯಾ ನಿಯಮಾವಳಿ ಪ್ರಕಾರವೇ ಪಂದ್ಯಾವಳಿಗಳು ನಡೆಯಲಿದ್ದು, ಈ ಪಂದ್ಯಾವಳಿಯಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಸರ್ಕಾರದಿಂದ ಸಾಕಷ್ಟು ಸೌಲಭ್ಯ ಸಿಗಲಿದೆ ಮತ್ತು ಪ್ರಥಮ ಸ್ಥಾನ ಪಡೆದವರು ರಾಷ್ಟ್ರಮಟ್ಟದಲ್ಲಿ ಕರ್ನಾಟಕವನ್ನು ಪ್ರತಿನಿಧಿಸುವರು ಮತ್ತು ಅಲ್ಲಿ ವಿಜೇತರಾದರೆ ಭಾರತದ ತಂಡಕ್ಕೆ ಆಯ್ಕೆ ಸೇರಿದಂತೆ ಸರ್ಕಾರದ ಸಾಕಷ್ಟು ಸೌಲಭ್ಯಗಳು ಸಿಗುವುದರಿಂದ ಈ ಪಂದ್ಯಾವಳಿ ಮಹತ್ವ ಪಡೆದಿದೆ ಎಂದರು.
ಪಂದ್ಯಾವಳಿಗೆ ಅತಿಥಿಗಳಾಗಿ ಶಿವಮೊಗ್ಗದ ಗಣ್ಯರು, ಸರ್ಕಾರಿ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕರ್ನಾಟಕ ಅಮೆಚೂರ್ ಬಾಕ್ಸಿಂಗ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಸಾಯಿಸತೀಶ್ ಸೇರಿದಂತೆ ರಾಜ್ಯ ಸಂಸ್ಥೆಯ ಕ್ಯಾಪ್ಟನ್ ಧನಸಂಜನ್, ಕ್ಯಾ.ಚಂದ್ರಶೇಖರ್, ಮುಕುಂದ ಕಿಲಕರ್ ಮುಖ್ಯ ತೀರ್ಪುಗಾರರಾಗಿ ಭಾಗವಹಿಸಲಿದ್ದಾರೆ ಎಂದರು.
ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯಿಂದ ವಿವಿಧ ವಿಭಾಗಗಳಲ್ಲಿ 12 ಕ್ರೀಡಾಪಟುಗಳು ಭಾಗವಹಿಸಲಿದ್ದು, ಸುಮಾರು ೨೦೦ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಅಸೋಸಿಯೇಷನ್ ಪದಾಧಿಕಾರಿಗಳಾದ ದೇವರಾಜ್ ನಾಯಕ್, ಮೀನಾಕ್ಷಿ, ಶ್ರೇಯಸ್, ಕ್ರೀಡಾ ಪಟುಗಳಾದ ಪ್ರೀತಿಶ್ರೀ, ದಿಗಂತ್, ಸಮ್ರದ್ದ್, ನಿಹಾರಿಕ, ಪ್ರಿಯಾಂಕ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















