No Result
View All Result
“Rasamum Rasayanamum- Artistry meets Chemistry”
English Articles

“Rasamum Rasayanamum- Artistry meets Chemistry”

by ಕಲ್ಪ ನ್ಯೂಸ್
March 11, 2026
0

Kalpa Media House  |  Special Article  |The connections between Chemistry and music is an area of immense potential for research....

Read moreDetails
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

March 9, 2026
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026
  • Advertise With Us
  • Grievances
  • About Us
  • Contact Us
Thursday, March 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ. ಮೈತ್ರೇಯಿ ಆದಿತ್ಯಪ್ರಸಾದ್

ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 12, 2026
in ಡಾ. ಮೈತ್ರೇಯಿ ಆದಿತ್ಯಪ್ರಸಾದ್
0
ಭಕ್ತಿಯ ಸಂಗೀತದ ಮಹೋತ್ಸವ | “ಭಕ್ತಿ ಭಾವ ಕುಸುಮಾಂಜಲಿ ಸಂಗೀತ ವೈಭವ”
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಶಿಶಿರ ಋತುವಿನ ತಂಪು ನಿಧಾನವಾಗಿ ಕಡಿಮೆಯಾಗಿ ಪ್ರಕೃತಿಯಲ್ಲಿ ಹೊಸ ಚೈತನ್ಯ ಮೂಡಿಸುವ ಕಾಲವೇ ವಸಂತ. ಹಸಿರಿನ ಮೆತ್ತನೆಯ ಹೊದಿಕೆಯಲ್ಲಿ ಕಂಗೊಳಿಸುವ ಹೊಲಗಳು, ಹೂವುಗಳಿಂದ ಮೆರೆಯುವ ಮರಗಳು—ಇವೆಲ್ಲವೂ ವಸಂತನ ಆಗಮನವನ್ನು ಸಾರುತ್ತವೆ. ಒಣಗಿದ್ದ ಕೊಂಬೆಗಳು ಮತ್ತೆ ಮೊಗ್ಗು ಬಿಡುತ್ತವೆ. ಕೋಗಿಲೆಯ ಮಧುರ ಕೂಗು ಗಾಳಿಯಲ್ಲಿ ಹರಡುತ್ತದೆ. ಮಲ್ಲಿಗೆ, ಚಂಪಕ, ಕನಕಾಂಬರಿಯ ಸುಗಂಧದಿಂದ ಪ್ರಕೃತಿ ಪರಿಮಳಗೊಳ್ಳುತ್ತದೆ. ವಸಂತ ಬಂದಾಗ ಪ್ರಕೃತಿ ಹೊಸ ರೂಪವನ್ನು ತಾಳುತ್ತದೆ. ಎಲ್ಲೆಡೆ ಹಸಿರು, ಎಲ್ಲೆಡೆ ಸಂತೋಷ, ಎಲ್ಲೆಡೆ ಜೀವಂತಿಕೆ. ಗಾಳಿ ಕೂಡ ಮೃದುವಾಗಿ ಬೀಸುತ್ತಾ ಮನಸ್ಸಿಗೆ ಹರ್ಷವನ್ನು ನೀಡುತ್ತದೆ. ಮನುಷ್ಯನ ಮನದಲ್ಲಿಯೂ ಹೊಸ ಕನಸುಗಳು ಮೊಳೆಯುತ್ತವೆ. ವಸಂತವು ಕೇವಲ ಒಂದು ಋತುವಲ್ಲ; ಅದು ಪ್ರಕೃತಿಯ ನಗು, ಜೀವಜಗತ್ತಿನ ಪುನರ್ಜನ್ಮದ ಸಂಕೇತ.

ವಸಂತದ ಆಗಮನದಲ್ಲಿಯೇ ಯುಗಾದಿ ಹಾಗೆಯೇ ಶ್ರೀರಾಮನವಮಿಯನ್ನು ಆಚರಿಸುವುದು. ಹಾಗಾಗಿ ವಸಂತದಂತೆ ಮನಸ್ಸಿಗೆ ಆನಂದ ಮತ್ತು ಶಾಂತಿಯನ್ನು ನೀಡುವ ಮಹಾನ್ ವ್ಯಕ್ತಿತ್ವವೇ ರಾಮ. ಧರ್ಮದ ಮಾರ್ಗವನ್ನು ಅನುಸರಿಸಿದ ಆದರ್ಶಪುರುಷನಾಗಿ ರಾಮನು ಎಲ್ಲರ ಹೃದಯದಲ್ಲಿ ನೆಲೆಸಿದ್ದಾನೆ. ಅವನು ಬರುತ್ತಾನೆಂದರೆ ಜನರ ಮನದಲ್ಲಿ ಭಕ್ತಿ, ಪ್ರೀತಿ ಮತ್ತು ಭರವಸೆ ತುಂಬುತ್ತದೆ. ರಾಮನ ಆಗಮನದ ಸಂತೋಷವು ವಸಂತ ಬಂದಾಗ ಪ್ರಕೃತಿಯಲ್ಲಿ ಮೂಡುವ ಹರ್ಷದಂತೆಯೇ ಇತ್ತು.

ಹೀಗಾಗಿ ವಸಂತಾಗಮನ ಪ್ರಕೃತಿಯನ್ನು ಸುಂದರಗೊಳಿಸಿದರೆ, ರಾಮನ ಆಗಮನ ಮಾನವ ಹೃದಯಗಳನ್ನು ಸುಂದರಗೊಳಿಸುತ್ತದೆ. ಎರಡೂ ಜೀವನಕ್ಕೆ ಹೊಸ ಬೆಳಕು, ಹೊಸ ಆಶೆ ಮತ್ತು ಹೊಸ ಸಂತೋಷವನ್ನು ತರುತ್ತವೆ. ಈ ಎಲ್ಲವನ್ನೂ ಒಳಗೊಂಡಿರುವ ನಾಮ ಸಂಕೀರ್ತನೆಯ ಕಾರ್ಯಕ್ರಮವೇ ಭಕ್ತಿ ಭಾವ ಕುಸುಮಾಂಜಲಿ.

ಏಕೆಂದರೆ ನಾಹಂ ವಸಾಮಿ ವೈಕುಂಠೇ ಎಂಬ ಶ್ಲೋಕವೊಂದರಲ್ಲಿ ಮದ್ಭಕ್ತಾ ಯತ್ರ ಗಾಯಂತಿ ತತ್ರ ತಿಷ್ಠಾಮಿ ನಾರದ ಎಂದು ಭಗವಂತ ನನ್ನ ಭಕ್ತರು ಭಕ್ತಿಯಿಂದ ಹಾಡುವ ಸ್ಥಳದಲ್ಲೇ ವಾಸಿಸುತ್ತೇನೆ ಎಂದು ಹೇಳಿದ್ದಾನೆ. ಅಲ್ಲದೆ ಕಲೌ ದೋಷನಿಧೇ ರಾಜನ್ ಅಸ್ತಿ ಏಕೋ ಮಹಾನ್ ಗುಣಃ l ಕೀರ್ತನಾದೇವ ಕೃಷ್ಣಸ್ಯ ಮುಕ್ತ ಸಂಗಃ ಪರಂ ವ್ರಜೇತ್ ಅಂದರೆ ಈ ಕಲಿಯುಗ ಅನೇಕ ದೋಷಗಳಿಂದ ತುಂಬಿದ್ದರು ಸಹ ಇಲ್ಲೊಂದು ಮಹತ್ತರ ಗುಣವನ್ನು ಅದೇನೆಂದರೆ ಭಗವಂತನ ನಾಮ ಸಂಕೀರ್ತನೆ ಮಾಡುವುದರಿಂದಲೇ ಮನುಷ್ಯ ಭಾವ ಬಂಧನಗಳಿಂದ ಮುಕ್ತಿ ಪಡೆದು ಬರಮ ಪದವನ್ನು ಹೊಡೆಯುತ್ತಾನೆ ಎಂದು ಭಾಗವತ ಪುರಾಣದಲ್ಲಿರುವ ಶ್ಲೋಕವಾಗಿದೆ.ಇಂದಿನ ಯಾಂತ್ರಿಕ ಜೀವನದಲ್ಲಿ ಮನಸ್ಸಿಗೆ ನೆಮ್ಮದಿ ನೀಡುವ ಕ್ಷಣಗಳು ವಿರಳವಾಗುತ್ತಿವೆ. ದಿನನಿತ್ಯದ ಕೆಲಸದ ಒತ್ತಡ, ಜೀವನದ ಓಟ—ಇವೆಲ್ಲದರ ನಡುವೆ ಮನಸಿಗೆ ಮುದ ನೀಡುವ ಸಂಗೀತವೇ ನಮ್ಮನ್ನು ಮತ್ತೆ ಜೀವನದ ಸೌಂದರ್ಯಕ್ಕೆ ಕರೆದೊಯ್ಯುತ್ತದೆ. ಅಂತಹ ಭಾವಪೂರ್ಣ ಅನುಭವವನ್ನು ನೀಡುವ ಅಪರೂಪದ ಸಂಗೀತ ಕಾರ್ಯಕ್ರಮವಾಗಿ “ಭಕ್ತಿ ಭಾವ ಕುಸುಮಾಂಜಲಿ ಎಂಬ ಸಂಗೀತ ವೈಭವ” ಕಾರ್ಯಕ್ರಮ ಆಯೋಜನೆಯಾಗಿರುವುದು ನಗರದ ಸಂಗೀತಾಸಕ್ತರಿಗೆ ಸಂತಸದ ವಿಷಯವೇ ಸರಿ. ಕಲಿಯುಗದಲ್ಲಿ ನಾಮ ಸಂಕೀರ್ತನೆಯೇ ಪರಮಪದಕ್ಕೆ ಸೋಪಾನವೆಂಬಂತೆ ರಾಮ, ಕೃಷ್ಣ, ಶಿವ, ದುರ್ಗೆಯೇ ಮೊದಲಾದವರ ನಾಮ ಸಂಕೀರ್ತನೆ ಸನಾತನ ಧರ್ಮದಲ್ಲಿ ಅತ್ಯಂತ ಮಹತ್ವದ ಸ್ಥಾನವನ್ನು ಪಡೆದಿದೆ. ಇದನ್ನೇ ಗಮನದಲ್ಲಿರಿಸಿದ ವಿಶೇಷ ಕಾರ್ಯಕ್ರಮ ಇದು.

ಭಕ್ತಿ ಮತ್ತು ಸಂಗೀತ ಎಂಬ ಎರಡು ಪವಿತ್ರ ಪ್ರವಾಹಗಳು ಒಂದಾಗುವಾಗ ಮನಸ್ಸಿನಲ್ಲಿ ಮೂಡುವ ಆನಂದವನ್ನು ವರ್ಣಿಸಲು ಪದಗಳು ಸಾಲುವುದಿಲ್ಲ. ನಮ್ಮ ಪರಂಪರೆಯ ಭಕ್ತಿಗೀತೆಗಳು ಕೇವಲ ಕಿವಿಗೆ ಸಿಹಿಯಾಗುವ ಸಂಗೀತವಷ್ಟೇ ಅಲ್ಲ; ಅವು ಆತ್ಮವನ್ನು ತಲುಪುವ ಭಾವದ ಸಂದೇಶಗಳಾಗಿವೆ. ದೇವರ ನಾಮವನ್ನು ಸ್ಮರಿಸುವ ಪ್ರತಿಯೊಂದು ರಾಗವೂ ಮನಸ್ಸಿನ ನೋವುಗಳನ್ನು ಶಮನಗೊಳಿಸಿ ಆತ್ಮೀಯತೆಯ ಬೆಳಕನ್ನು ಹರಡುತ್ತದೆ.

ಪಂಡಿತ್ ಶಿವಕುಮಾರ್ ಜಿ. ಮಹಾಂತ ಅವರು ಭಕ್ತಿಯ ಗಾನಸುಧೆ ಹರಿಸಿದರೆ, ನಗರದಲ್ಲಿ ತಮ್ಮ ಚಿಂತನ, ಬರಹ, ಮಾತುಗಳಿಂದ ಮನೆಮಾತಾಗಿರುವ ಶ್ರೀ ವಿನಯ್ ಶಿವಮೊಗ್ಗ  ಪ್ರೇಕ್ಷಕರನ್ನು ಭಾವಲೋಕಕ್ಕೆ ಕರೆದೊಯ್ಯಲಿದ್ದಾರೆ. ಸಂಗೀತದ ಪ್ರತಿಯೊಂದು ಸ್ವರವೂ ಭಕ್ತಿಯ ಸುವಾಸನೆಯಾಗಿ ಹರಡಿ, ಕಾರ್ಯಕ್ರಮವನ್ನು ಒಂದು ಆಧ್ಯಾತ್ಮಿಕ ಅನುಭವವಾಗಿಸಲಿದೆ.ಇಂತಹ ಕಾರ್ಯಕ್ರಮಗಳು ನಮ್ಮ ಸಂಸ್ಕೃತಿ ಮತ್ತು ಪರಂಪರೆಯ ಮೌಲ್ಯಗಳನ್ನು ಉಳಿಸುವಲ್ಲಿ ಮಹತ್ವದ ಪಾತ್ರವಹಿಸುತ್ತವೆ. ಭಕ್ತಿಯ ಸಂದೇಶವನ್ನು ಮುಂದಿನ ಪೀಳಿಗೆಗೂ ತಲುಪಿಸುವ ಸೇತುವೆಯಾಗುವ ಈ ಕಾರ್ಯಕ್ರಮಕ್ಕೆ ನಗರದ ಜನತೆ ಕುಟುಂಬ ಸಮೇತರಾಗಿ ಬಂದು ಸಂಗೀತದ ಸವಿಯನ್ನು ಅನುಭವಿಸುವ ಮೂಲಕ ಕಲಾವಿದರಿಗೆ ಪ್ರೋತ್ಸಾಹ ನೀಡುವುದು ನಮ್ಮ ಕರ್ತವ್ಯವೂ ಹೌದು.

ಸಂಗೀತ ಎಂದರೆ ಕೇವಲ ಮನರಂಜನೆ ಮಾತ್ರವಲ್ಲ; ಅದು ಮನಸ್ಸನ್ನು ಶುದ್ಧಗೊಳಿಸುವ ಒಂದು ದೈವಿಕ ಸಾಧನೆ. ಆ ದೈವಿಕ ಅನುಭವವನ್ನು ನೀಡಲಿರುವ “ಭಕ್ತಿ ಭಾವ ಕುಸುಮಾಂಜಲಿ” ಕಾರ್ಯಕ್ರಮವು ನಿಜಕ್ಕೂ ಒಂದು ಸಾಂಸ್ಕೃತಿಕ ಹಬ್ಬವಾಗಲಿದೆ.

ದಿ. ಮಣೂರ್ ಗೋವಿಂದರಾಯ ಪ್ರಭು ಚಾರಿಟೇಬಲ್ ಟ್ರಸ್ಟ್ ಅರ್ಪಿಸುವ ಈ ಕಾರ್ಯಕ್ರಮ ಇದೇ 14 ರ ಶನಿವಾರ ಸಂಜೆ 5:30ಕ್ಕೆ ಕುವೆಂಪು ರಂಗಮಂದಿರದಲ್ಲಿ ಆಯೋಜನೆಯಾಗಿದೆ. ಮನಸ್ಸಿಗೆ ಮುದ ನೀಡಿ ಭಕ್ತಿ ರಸದಲ್ಲಿ ಮಿಂದೇಳುವ ಅಪರೂಪದ ಸಂಗೀತ ಸಂಜೆಯಾಗಿದೆ. ಆದ್ದರಿಂದ ಸಂಗೀತಾಸಕ್ತರು, ಸಾಹಿತ್ಯಪ್ರಿಯರು ಹಾಗೂ ಸಾರ್ವಜನಿಕರು ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು.  ಕಲಾವಿದರಿಗೆ ಹೊಸ ಉತ್ಸಾಹವನ್ನು ತುಂಬುವುದು ಎಲ್ಲ ಆಸಕ್ತರ ಉಪಸ್ಥಿತಿ.

ಭಕ್ತಿಯ ಮಧುರ ರಾಗಗಳು ಮನಸ್ಸನ್ನು ಮುಟ್ಟುವ ಆ ಅಮೂಲ್ಯ ಕ್ಷಣಗಳನ್ನು ತಪ್ಪಿಸಿಕೊಳ್ಳಬೇಡಿ.

ಬನ್ನಿ… ಸಂಗೀತದ ಭಕ್ತಿ ರಸದಲ್ಲಿ ತೇಲೋಣ. ಈ ಬೇಸಿಗೆಯ ಬಿಸಿಲ ಝಳಕ್ಕೆ ಐಸ್ ಕ್ರೀಮ್ ತಂಪು ನೀಡುವಂತೆ ಮನಸಿಗೆ ತಂಪು ನೀಡುವ ಕಾರ್ಯಕ್ರಮ ಇದಾಗಿರುತ್ತದೆ ಎನ್ನುವುದರಲ್ಲಿ ಸಂಶಯ ಇಲ್ಲ. ಬನ್ನಿ ಆನಂದಿಸಿ…

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Kalahamsa Infotech private limited

http://kalpa.news/wp-content/uploads/2024/04/VID-20240426-WA0008.mp4

Tags: Kannada News WebsiteLatest News KannadaLocal NewsMalnad NewsShimogaShishira RutuShivamoggaShivamogga NewsSpecial Articleಯುಗಾದಿವಿಶೇಷ ಲೇಖನಶಿಶಿರ ಋತುಶ್ರೀರಾಮನವಮಿಸಂಗೀತ ವೈಭವ
Share197Tweet123Send
Previous Post

“Rasamum Rasayanamum- Artistry meets Chemistry”

Next Post

ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ | ಸುರೇಖ ಮುರಳೀಧರ್'ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

ಮೋದಿ ರಾಜತಾಂತ್ರಿಕತೆಗೆ ಬಿಗ್ ಸಕ್ಸಸ್ | ಭಾರತದ ತೈಲ ಹಡಗುಗಳಿಗೆ ಹರ್ಮುಜ್ ಜಲಸಂಧಿ ಓಪನ್

March 12, 2026
ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

ಹದಿನೈದಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿಢೀರ್‌ ಅಸ್ವಸ್ಥ, ಆಸ್ಪತ್ರೆಗೆ ದಾಖಲು..!

March 12, 2026
ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

ದಿನನಿತ್ಯ ವಸ್ತುವಿನ ಬಳಕೆಯಲ್ಲಿ ರಾಸಾಯನಶಾಸ್ತ್ರ ಪ್ರಮುಖ ಪಾತ್ರ ವಹಿಸುತ್ತದೆ: ಡಾ.ರವೀಂದ್ರ ಅಭಿಮತ

March 12, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

‘ಟ್ರೂಜೋನ್ ಸೋಲಾರ್’ | T20 ವಿಶ್ವಕಪ್ ತಾರೆಗಳಾದ ಸೂರ್ಯಕುಮಾರ್ ಯಾದವ್ & ತಿಲಕ್ ವರ್ಮಾ ಹೂಡಿಕೆ

March 12, 2026
ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

ಶಿವಮೊಗ್ಗ | ಸುರೇಖ ಮುರಳೀಧರ್’ಗೆ ಅತ್ಯುತ್ತಮ ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಸ್ತಿ

March 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL