ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಪ್ರಧಾನಿ ನರೇಂದ್ರ ಮೋದಿ #PM Narendra Modi ನೇತೃತ್ವದ ಭಾರತ ಸರ್ಕಾರಕ್ಕೆ ರಾಜತಾಂತ್ರಿಕವಾಗಿ ದೊಡ್ಡ ಜಯ ದೊರೆತಿದ್ದು, ಹರ್ಮುಜ್ ಜಲಸಂಧಿ #Strait of Hormuz ಮೂಲಕ ಭಾರತದ ತೈಲ ಟ್ಯಾಂಕರ್ ಮತ್ತು ಕಂಟೇನರ್ ಹಡಗು ಸಂಚರಿಸಲು ಅನುಮತಿ ನೀಡಲಾಗಿದೆ.
ಭಾರತದ ವಿದೇಶಾಂಗ ಸಚಿವ ಜೈಶಂಕರ್ #Minister Jaishankar ಹಾಗೂ ಇರಾನ್ ವಿದೇಶಾಂಗ ಸಚಿವ ಸೈಯ್ಯದ್ ಅಬ್ಬಾಸ್ ನಡುವೆ ನಡೆದ ಮಹತ್ವದ ಮಾತುಕತೆ ಯಶಸ್ವಿಯಾಗಿದ್ದು, ಇದರ ಪರಿಣಾಮವಾಗಿ ಹರ್ಮುಜ್ ಜಲಸಂಧಿ ಮೂಲಕ ಭಾರತೀಯ ತೈಲ ಟ್ಯಾಂಕರ್’ಗಳು ಮತ್ತು ಕಂಟೈನರ್ ಹಡಗುಗಳು ಸಂಚರಿಸಲು ಅನುಮತಿ ನೀಡಿದೆ. ಈ ನಿರ್ಧಾರವು ಜಾಗತಿಕ ಇಂಧನ ಸರಬರಾಜಿನ ಹಿನ್ನೆಲೆಯಲ್ಲಿ ಭಾರತಕ್ಕೆ ದೊಡ್ಡ ನಿರಾಳತೆಯನ್ನು ತಂದಿದೆ.
ಇತ್ತೀಚೆಗೆ ನಡೆದ ಸಂಘರ್ಷದ ಹಿನ್ನೆಲೆಯಲ್ಲಿ ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿ, ಅಮೆರಿಕಾ, ಇಸ್ರೇಲ್ ಹಾಗೂ ಅದರ ಮಿತ್ರ ರಾಷ್ಟ್ರಗಳ ಹಡಗುಗಳು ಪ್ರವೇಶಿಸಿದರೆ ದಾಳಿ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿತ್ತು.
ಈಗ ನಡೆದ ಮಾತುಕತೆಯ ಬಳಿಕ ಪರಿಸ್ಥಿತಿ ಬದಲಾಗಿದೆ. ಇದಾದ ಬಳಿಕ ಭಾರತೀಯ ಟ್ಯಾಂಕರ್’ಗಳಾದ ಪುಷ್ಪಕ್ ಮತ್ತು ಪರಿಮಲ್ ಹಾರ್ಮುಜ್ ಜಲಸಂಧಿಯ ಮೂಲಕ ಸುರಕ್ಷಿತವಾಗಿ ಸಂಚರಿಸುತ್ತಿವೆ ಎಂದು ವರದಿಯಾಗಿದೆ.
ಹರ್ಮುಜ್ ಜಲಸಂಧಿ ಭಾರತಕ್ಕೆ ಏಕೆ ಮಹತ್ವದ್ದು?
ಭಾರತ ತನ್ನ ಎಲ್ಎನ್’ಜಿ ಆಮದುಗಳಲ್ಲಿ ಸುಮಾರು ಶೇ.50ರಷ್ಟನ್ನು ವಿದೇಶಗಳಿಂದ ಪಡೆದುಕೊಳ್ಳುತ್ತದೆ. ಆ ಆಮದುಗಳಲ್ಲಿ ಸುಮಾರು ಶೇ.90ರಷ್ಟು ಸರಕುಗಳು ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗುತ್ತವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















