ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತಿರುಮಲ ತಿರುಪತಿ ದೇವಸ್ಥಾನಗಳು Tirumala Tirupathi Temple ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಸುಬ್ರಹ್ಮಣ್ಯನಗರದ ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಏಪ್ರಿಲ್ 7 ರಿಂದ 10ರ ವರೆಗೆ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು ಅವುಗಳ ವಿವರಗಳು ಈ ರೀತಿ ಇವೆ :
ಭಜನಾ ಕಾರ್ಯಕ್ರಮ (ಪ್ರತಿದಿನ ಸಂಜೆ 6 ರಿಂದ 7) : ಏಪ್ರಿಲ್ 7-ಜಾನ್ಹವಿ ಭಜನಾ ಮಂಡಳಿ, ಏಪ್ರಿಲ್ 8-ಸುರಭಿ ಗಾನ ಭಜನಾ ಮಂಡಳಿ, ಏಪ್ರಿಲ್ 9-ಪವಿತ್ರ ಗಾನ ವೃಂದ ಭಜನಾ ಮಂಡಳಿ.
ಪ್ರವಚನ ಕಾರ್ಯಕ್ರಮ (ಪ್ರತಿದಿನ ಸಂಜೆ 7 ರಿಂದ 8) : ಪ್ರವಚನಕಾರರು : ಶ್ರೀ ರಾಮವಿಠಲಾಚಾರ್, ವಿಷಯ : ಭಾವೀಸಮೀರ ಶ್ರೀ ವಾದಿರಾಜರ ವಿರಚಿತ “ಹರಿಸರ್ವೋತ್ತಮ ಸಾರ”.
ಗಾಯನ ಕಾರ್ಯಕ್ರಮ : ಏಪ್ರಿಲ್ 10, ಶುಕ್ರವಾರ ಸಂಜೆ 6-30 ರಿಂದ 8-00ರ ವರೆಗೆ ಯುವ ಗಾಯಕ ಶ್ರೀ ಕೆ.ಪಿ. ಶಿಶಿರ್ ಅವರು “ಹರಿನಾಮ ಸಂಕೀರ್ತನೆ” ನಡೆಸಿಕೊಡಲಿದ್ದು, ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ವಿ|| ಶ್ರೀ ಎಂ.ಎಸ್. ಗೋವಿಂದಸ್ವಾಮಿ ಮತ್ತು ತಬಲಾ ವಾದನದಲ್ಲಿ ಶ್ರೀ ಧ್ರುವ ಆಚಾರ್ಯ ಸಾಥ್ ನೀಡಲಿದ್ದಾರೆ ಎಂದು ಟಿಟಿಡಿ ಹೆಚ್.ಡಿ.ಪಿ.ಪಿ ಸಂಚಾಲಕರಾದ ಡಾ|| ಪಿ. ಭುಜಂಗರಾವ್ ತಿಳಿಸಿದ್ದಾರೆ.
ಕಾರ್ಯಕ್ರಮ ನಡೆಯುವ ಸ್ಥಳ : ಶ್ರೀ ವ್ಯಾಸರಾಜ ಮಠ (ಸೋಸಲೆ), 5ನೇ ಮುಖ್ಯರಸ್ತೆ, ‘ಎ’ ಬ್ಲಾಕ್, ರಾಜಾಜಿನಗರ 2ನೇ ಹಂತ ಸುಬ್ರಹ್ಮಣ್ಯನಗರ, ಬೆಂಗಳೂರು-560010.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















