ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಮ್ಮೊಳಗಿರುವ ಶಕ್ತಿಯನ್ನು ಸಮಾಜಕ್ಕೆ ಹೇಗೆ ಅರ್ಪಿಸಬೇಕು ಎಂಬ ಹೊಣೆಗಾರಿಕೆ ಎಲ್ಲರಲ್ಲೂ ಮುಖ್ಯ ಎಂದು ಸಿಂಗಾಪುರದ ಯುನಿವರ್ಸಲ್ ಟೆಕ್ನಾಲಜಿ ಸೊಲ್ಯುಶನ್ ಕಂಪನಿ ಸಮೂಹ ವ್ಯವಸ್ಥಾಪಕ ನಿರ್ದೇಶಕ ಬ್ರಜೇಶ್ ಸಿಂಗ್ ಹೇಳಿದರು.
ನಗರದ ಜೆ.ಎನ್.ಎನ್ ಇಂಜಿನಿಯರಿಂಗ್ ಕಾಲೇಜಿನ #JNNCE ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ವತಿಯಿಂದ ಹಿರಿಯ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಶನಿವಾರ ಏರ್ಪಡಿಸಿದ್ದ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’ #PowerMeet ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
Also Read>> ಅಡಿಕೆ ಸಸಿ ಸಾಗಿಸುತ್ತಿದ್ದ ಲಾರಿ ಪಲ್ಟಿ: ತಪ್ಪಿದ ಭಾರೀ ಅನಾಹುತ
ಕನೆಕ್ಟಿಂಗ್ ಡಾಟ್ಸ್ ಎಂಬ ಎನ್ಜಿಒ #NGO ಮೂಲಕ ನೂರಾರು ಕುಟುಂಬಗಳಿಗೆ ನಿರಂತರ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಜನರ ಸಮಸ್ಯೆ ಬಗ್ಗೆ ಸ್ಥಳೀಯ ಆಡಳಿತದ ಗಮನಕ್ಕೆ ತಂದಾಗ, ಎಲ್ಲವೂ ದಾಖಲೆಗಳಲ್ಲಿ ಸರಿಯಾಗಿದೆ ಎಂಬ ಉತ್ತರಗಳು ಬಂದವು. ಆದರೆ ವಾಸ್ತವದಲ್ಲಿ ಏನೂ ಸರಿಯಾಗಿರಲಿಲ್ಲ. ನೀತಿಗಳು ಉತ್ತಮವಾಗಿದ್ದರೂ, ಅವುಗಳ ಅನುಷ್ಠಾನದಲ್ಲಿ ಕೊರತೆ ಇಂದಿನ ಸಮಾಜದಲ್ಲಿ ಎದ್ದು ಕಾಣುತ್ತಿದೆ. ಈ ಹಿನ್ನಲೆಯಲ್ಲಿ ಸಮಾಜದತ್ತ ನಮ್ಮ ಬದ್ಧತೆಯನ್ನು ತೋರಿಸಬೇಕಿದೆ ಎಂದು ಹೇಳಿದರು.
ನವದೆಹಲಿಯ ಇನ್ನೊಗ್ರೆಸ್ ಕಂಪನಿ ಸ್ಥಾಪಕ ಸುಮಂತ್ ಪರಿಮಳ್ ಮಾತನಾಡಿ, ವಿದ್ಯಾರ್ಥಿ ದೆಸೆಯಲ್ಲಿ ಅಧ್ಯಯನಕ್ಕೆ ಸೀಮಿತವಾಗದೆ, ನಮ್ಮದೇ ಕನಸುಗಳನ್ನು ನಿರ್ಮಿಸಿಕೊಳ್ಳಿ. ಇಂದಿನ ಜಾಗತಿಕ ಪರಿಸ್ಥಿತಿಯಲ್ಲಿ ದೊಡ್ಡ ಬದಲಾವಣೆಗಳು ನಡೆಯುತ್ತಿವೆ. ಭಾರತವು ಜಾಗತಿಕ ವೇದಿಕೆಯಲ್ಲಿ ಮಹತ್ವದ ಪಾತ್ರವಹಿಸುತ್ತಿದೆ.
ನಮ್ಮ ಬುದ್ಧಿಶಕ್ತಿಯು #Robotics ರೋಬೋಟಿಕ್ಸ್ ಮತ್ತು ಎಐ ವ್ಯವಸ್ಥೆಗಳೊಂದಿಗೆ ಒಂದಾಗುತ್ತಿದೆ. ಅವುಗಳು ನಮ್ಮ ಪರವಾಗಿ ಕೆಲಸ ಮಾಡುವ ಮಟ್ಟಕ್ಕೆ ತಂತ್ರಜ್ಞಾನ ಬೆಳೆಯುತ್ತಿದೆ. ಎಐ ಎಂಬುದು ಬುದ್ದಿ ಮತ್ತು ವಿದ್ಯುತ್ ಶಕ್ತಿಯ ಮೇಲೆ ಅವಲಂಬಿತವಾಗಿದೆ. ವಾಸ್ತವದಲ್ಲಿ ಕೇವಲ ಕಂಪ್ಯೂಟ್ ಪವರ್ ಬಗ್ಗೆ ಮಾತ್ರವಲ್ಲ, ನಿಜವಾದ ವಿದ್ಯುತ್ ಶಕ್ತಿಯನ್ನು ಎಲ್ಲಿಂದ ಪಡೆಯುವುದು ಎಂಬುದರ ಬಗ್ಗೆಯು ಚಿಂತಿಸಬೇಕಿದೆ.
ಅದಕ್ಕಾಗಿ ಹಸಿರು ಶಕ್ತಿಯ ಮೂಲಗಳಿಂದ ವಿದ್ಯುತ್ ಪಡೆಯುವಂತೆ ‘ಗ್ರೀನ್ ಡೇಟಾ ಸೆಂಟರ್ಗಳು’ #GreenDataCenter ಸ್ಥಾಪಿಸಲು ಯೋಜನೆಗಳು ಸಿದ್ಧವಾಗುತ್ತಿವೆ. ಸೌರಶಕ್ತಿ ಮತ್ತು ಹೈಡ್ರೋಜನ್ ಆಧಾರಿತ ಶಕ್ತಿ ವ್ಯವಸ್ಥೆಗಳಲ್ಲಿ ಭಾರಿ ಹೂಡಿಕೆಗಳು ನಡೆಯುತ್ತಿವೆ. ಭವಿಷ್ಯದ ಸಂಪೂರ್ಣ ತಂತ್ರಜ್ಞಾನವು ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಶಕ್ತಿಯ ಮೇಲೆ ಅವಲಂಬಿತವಾಗಿದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣ ರಾವ್ ಮಾತನಾಡಿ, ವಿಭಾಗ ಮಟ್ಟದಲ್ಲಿ ಹಿರಿಯ ಕಿರಿಯ ವಿದ್ಯಾರ್ಥಿಗಳು ಒಂದೆಡೆ ಸೇರಿಸುವ ಎನ್ಇಎಸ್ ಸಂಸ್ಥೆಯ ಆಶಯ ಯಶಸ್ವಿಯಾಗಿದ್ದು, ಜ್ಞಾನ ಹಂಚಿಕೆಯ ಪ್ರಕ್ರಿಯೆ ಸಫಲಗೊಂಡಿದೆ. ಮನಸ್ಸಿನೊಂದಿಗೆ ಹುಟ್ಟಿದ ಸಂಬಂಧ ನಮ್ಮಲ್ಲಿ ಸದಾ ಕಾಲ ಉಳಿಯುತ್ತದೆ. ಸಂಸ್ಕಾರಯುತ ಶಿಕ್ಷಣಕ್ಕೆ ಎನ್ಇಎಸ್ ಸದಾ ಒತ್ತು ನೀಡುತ್ತಿದೆ ಎಂದು ಹೇಳಿದರು.
Also Read>> ಜೋಕಾಲಿ ಆಡುವಾಗ ಕುಣಿಕೆ ಬಿಗಿದು ಬಾಲಕಿ ಸಾವು
ಪ್ರೇರಣೆ ನೀಡಿದ ಹಿರಿಯ ವಿದ್ಯಾರ್ಥಿಗಳ ಯಶೋಗಾಥೆ
ಪ್ರತಿಷ್ಠಿತ ಉದ್ಯಮಿಗಳಾಗಿ, ಕಲಾವಿದರಾಗಿ, ಅಭಿಯಂತರರಾಗಿ, ಮೆಸ್ಕಾಂ ಬೆಸ್ಕಾಂ ಸೇರಿದಂತೆ, ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿವಿಧ ಉನ್ನತ ಅಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ನೂರಾರು ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ವಿಭಾಗದ ಹಿರಿಯ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಹಾದಿಯ ದುರ್ಗಮತೆಯನ್ನು ಕಿರಿಯ ವಿದ್ಯಾರ್ಥಿಗಳ ಮುಂದೆ ಹಂಚಿಕೊಂಡರು.
ಅನೇಕ ಉದ್ಯೋಗವಕಾಶ ಕೋರಿದ ಅರ್ಜಿಗಳು, ಸಂವಹನ ಮತ್ತು ಸೃಜನಾತ್ಮಕ ಕೌಶಲ್ಯಗಳ ಕೊರತೆಯಿಂದ ತಿರಸ್ಕೃತವಾಗುತ್ತವೆ. ಉದ್ಯೋಗ ನೀಡುವ ಸಂಸ್ಥೆ ಕೇವಲ ಅಂಕಗಳನ್ನು ಮಾತ್ರ ಪರಿಗಣಿಸುವುದಿಲ್ಲ; ಒಟ್ಟಾರೆ ಸಾಮರ್ಥ್ಯವನ್ನು ಗಮನಿಸುತ್ತವೆ. ಸಂವಹನ ಕೌಶಲ್ಯತೆ ಎಂಬುದು ದೊಡ್ಡ ಮಟ್ಟದ ಪ್ರಭಾವ ಬೀರುತ್ತದೆ. ಜೊತೆಯಲ್ಲಿ ಪ್ರಾದೇಶಿಕ ಭಾಷೆಗಳ ಪ್ರೌಢಿಮೆಯು ಅತ್ಯಂತ ಅಗತ್ಯವಾಗಿದೆ ಎಂದು ಸಲಹೆ ನೀಡಿದರು.
ಎನ್ಇಎಸ್ ನಿರ್ದೇಶಕರಾದ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ, ಪ್ರಾಂಶುಪಾಲರಾದ ಡಾ.ವೈ.ವಿಜಯಕುಮಾರ್, ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಎಚ್.ಬಿ.ಸುರೇಶ್, ಕಾಲೇಜಿನ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ಡಾ.ಕೆ.ಎಂ.ಬಸಪ್ಪಾಜಿ ವೇದಿಕೆ ಮೇಲೆ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















