ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಕ್ರೀದ್ ಹಬ್ಬದ Bakrid festival ಸಂದರ್ಭದಲ್ಲಿ ಗೋವುಗಳ ಅಕ್ರಮ ಸಾಗಾಣೆ ಮತ್ತು ಹತ್ಯೆಯನ್ನು ತಡೆಗಟ್ಟಬೇಕು ಎಂದು ವಿಶ್ವಹಿಂದೂ ಪರಿಷತ್ ಹಾಗೂ ಬಜರಂಗದಳ VHP and Bajarangadal ಆಗ್ರಹಿಸಿದೆ.
ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಬಜರಂಗದ ಪ್ರಾಂತ್ಯ ಸುರಕ್ಷಾ ಪ್ರಮುಖ್ ರಾಜೇಶ್ಗೌಡ ಮಾತನಾಡಿ, ಬಕ್ರೀದ್ ಹಬ್ಬದ ಹಿನ್ನಲೆಯಲ್ಲಿ ಶಿವಮೊಗ್ಗವೂ ಸೇರಿದಂತೆ ರಾಜ್ಯಾದ್ಯಂತ ಕಾನೂನುಬಾಹಿರವಾಗಿ ಗೋವಂಶದ ಸಾಗಾಣಿಕೆ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋವಂಶ ಬಲಿ ನಡೆಯುವ ಸಾಧ್ಯತೆಯಿದ್ದು, ಇದನ್ನು ತಡೆಗಟ್ಟಲು ಪೊಲೀಸರು ಕಠಿಣ ಕಾನೂನುಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಅಕ್ರಮ ಕಸಾಯಿಖಾನೆಗಳನ್ನು ಗುರುತಿಸಿ, ದಾಳಿ ಮಾಡಿ ಶಾಶ್ವತವಾಗಿ ನಿಲ್ಲಿಸಬೇಕು. ಜಾನುವಾರು ಹತ್ಯೆ ನಡೆದ ಮನೆ ಕಟ್ಟಡ, ಖಾಲಿ ಜಮೀನುಗಳನ್ನು ಜಪ್ತಿ ಮಾಡಬೇಕು. ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಬೇಕು. ಆರೋಪಿಗಳಿಗೆ 7 ವರ್ಷ ಶಿಕ್ಷೆ ಹಾಗೂ ಪ್ರತಿ ಜಾನುವಾರಿಗೆ 1 ಲಕ್ಷ ರೂ. ದಂಡ ವಿಧಿಸಬೇಕು. ಬೀಟ್ ಪೊಲೀಸರು ಈ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಒತ್ತಾಯಿಸಿದರು.
ಈ ಅಕ್ರಮ ಕಸಾಯಿಖಾನೆಗಳಲ್ಲಿ ಮಾಂಸ ಖರೀದಿಸುವವರನ್ನು ಅಪರಾಧಿ ಎಂದು ಪರಿಗಣಿಸಿ ಶಿಕ್ಷೆ ನೀಡಬೇಕು. ಮಾಂಸವನ್ನು ವಶಪಡಿಸಿಕೊಂಡು ತನಿಖೆ ನಡೆಸಬೇಕು ಗೋವಧೆ ಮಾಡಿದ ಪ್ರಕರಣಗಳಲ್ಲಿ ಜಾಮೀನು ಪಡೆದು ಹೊರಗಿರುವ ಆರೋಪಿಗಳನ್ನು ಕರೆಯಿಸಿ ಎಚ್ಚರಿಕೆ ನೀಡಬೇಕು, ಬಕ್ರೀದ್ ಸಂದರ್ಭದಲ್ಲಿ ಪ್ರಾಣಿಗಳ ವಧೆಯಾಗದಂತೆ ನಿಷೇಧ ಇರುವ ಬಗ್ಗೆ ಪೊಲೀಸ್ ಇಲಾಖೆ ವ್ಯಾಪಾಕ ಪ್ರಚಾರ ಮಾಡಬೇಕು ಎಂದರು.
Also read: ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?
ಅಲ್ಲದೆ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಕಾಯ್ದೆ, ಪ್ರಾಣಿಗಳ ಮೇಲಿನ ಕ್ರೌರ್ಯತಡೆ ಕಾಯ್ದೆ ಮತ್ತು ಆಹಾರ ಸುರಕ್ಷತೆ, ಗುಣಮಟ್ಟ ಕಾಯ್ದೆ, ಕಸಾಯಿಖಾನೆ ನಿಯಮಾವಳಿ, ಪ್ರಾಣಿಗಳ ಸಾಗಾಟ ನಿಯಮಾವಳಿ ಮುಂತಾದ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ನೋಡಿಕೊಳ್ಳಬೇಕು. ಹಿಂದೂಗಳಿಗೆ ಪೂಜನೀಯವಾಗಿರುವ ಗೋವಂಶವನ್ನು ಸಂವಿಧಾನದ ಚೌಕಿಟ್ಟಿನಲ್ಲಿ ರಕ್ಷಿಸಲು ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಬದ್ಧವಾಗಿದೆ ಎಂದರು.
ವಿಶ್ವ ಹಿಂದೂ ಪರಿಷತ್ ಪ್ರಾಂತ್ಯ ಸಾಮರಸ್ಯ ಪ್ರಮುಖ್ ರಮೇಶ್ ಬಾಬು ಮಾತನಾಡಿ, ಶಾಲಾ-ಕಾಲೇಜುಗಳಲ್ಲಿ ವಸ್ತ್ರಸಂಹಿತೆ ಬಗ್ಗೆ ನೂತನ ಆದೇಶ ಹೊರಡಿಸಿ ಮತ್ತೆ ವಿದ್ಯಾರ್ಥಿಗಳಲ್ಲಿ ಸರ್ಕಾರ ಗೊಂದಲ ಮೂಡಿಸಿದೆ. ಮತ್ತೆ ಹಿಜಾಬ್ ವಿವಾದ ಪ್ರಾರಂಭವಾಗಿದೆ. ಗುರುಕುಲ ಪದ್ಧತಿಯಿಂದಲೂ ಸಮಾನತೆಯ ದೃಷ್ಟಿಯಿಂದ ವಸ್ತ್ರಸಂಹಿತೆ ಇದ್ದು, ಈಗ ಹೊಸದಾಗಿ ಹಿಜಾಬ್ಗೆ ಅನುಮತಿ ನೀಡಿದ್ದು ಸರಿಯಲ್ಲ, ಇದೇ ರೀತಿ ವಿದ್ಯಾರ್ಥಿಗಳಲ್ಲಿ ತಾರತಮ್ಯ ಮತ್ತು ಅಸಾಮಾನ್ಯತೆ ಹುಟ್ಟಿಸುವ ಕೆಲಸ ಸರ್ಕಾರ ಮುಂದುವರಿಸಿದ್ದಲ್ಲಿ ನಾವು ಕೇಸರಿ ಅಭಿಯಾನವನ್ನು ಆರಂಭಿಸುತ್ತೇವೆ. ತ್ರಿಶೂಲಧಾರಿಯಾಗಿಯೂ ಬರುತ್ತೇವೆ. ನಾವು ಮೊದಲಿನಿಂದಲೂ ಸಂಸ್ಕಾರ-ಸಂಸ್ಕøತಿಯನ್ನು ಗೌರವಿಸುವವರು. ಮಕ್ಕಳಲ್ಲಿ ವಿಷಬೀಜ ಬಿತ್ತುವ ಸರ್ಕಾರದ ಈ ಕ್ರಮ ಸರಿಯಲ್ಲ, ಇತ್ತೀಚೆಗೆ ಪರೀಕ್ಷಾ ಕೇಂದ್ರಕ್ಕೆ ತೆರಳುವಾಗ ಜನಿವಾರ, ಮಂಗಳಸೂತ್ರ ಕಿತ್ತಿದ್ದನ್ನು ನೋಡಿದ್ದೇವೆ. ಸರ್ಕಾರದ ದ್ವಂದ್ವ ನೀತಿಯನ್ನು ವಿರೋಧಿಸುತ್ತೇವೆ ಎಂದರು.
ಸುರೇಶ್ಬಾಬು ಮಾತನಾಡಿ, ಸರ್ಕಾರದ ದ್ವಂದ್ವನೀತಿಯಿಂದ ವಿದ್ಯಾರ್ಥಿಗಳಲ್ಲಿ ಸಾಮರಸ್ಯ ಭಾವನೆ ಕದಡುತ್ತಿದೆ. ರಾಜ್ಯದಲ್ಲಿ ಅಶಾಂತಿ, ಮಕ್ಕಳಲ್ಲಿ ವೈಷಮ್ಯ ಬಿತ್ತುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಈಗಾಗಲೇ ಹೈಕೋರ್ಟ್ ಸ್ಪಷ್ಟವಾಗಿ ಹಿಜಾಬ್ ನಿಷೇಧಿಸಿ, ತೀರ್ಪುನೀಡಿದೆ. ಹೈಕೋರ್ಟ್ಗಿಂತ ಸರ್ಕಾರ ದೊಡ್ಡದಾ…? ಎಂದು ಪ್ರಶ್ನಿಸಿದ ಅವರು, ಸರ್ವೋಚ್ಛ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿ ಇರುವಾಗ ಸರ್ಕಾರದ ಈ ಆದೇಶ ನ್ಯಾಯಾಲಯದ ಆದೇಶ ಉಲ್ಲಂಘನೆಯಾಗಿದೆ ಎಂದರು.
ಈ ಸಂದರ್ಭದಲ್ಲಿ ಪ್ರಮುಖರಾದ ವಡಿವೇಲು ರಾಘವನ್, ಅಂಕುಶ್, ಶಕುಂತಲಾ, ಯೋಗೀಶ್ ನಾಯಕ್ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















