No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಐಎಎಸ್ ಅಧಿಕಾರಿಗಳ ಮಕ್ಕಳಿಗೆ ಏಕೆ ಮೀಸಲು ಕೊಡಬೇಕು: ಸುಪ್ರೀಂ ಕೋರ್ಟ್ ಖಡಕ್ ಪ್ರಶ್ನೆ

kalpa News by kalpa News
May 23, 2026
in ರಾಷ್ಟ್ರೀಯ
1
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ನವದೆಹಲಿ |

ಹಿಂದುಳಿದ ವರ್ಗಗಳಲ್ಲಿ ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಮುಂದುವರಿದ ಕುಟುಂಬಗಳ ಮಕ್ಕಳಿಗೆ ಮೀಸಲಾತಿ ಸೌಲಭ್ಯಗಳನ್ನು ನಿರಂತರವಾಗಿ ವಿಸ್ತರಿಸುವುದರ ಕುರಿತು ಸುಪ್ರೀಂ ಕೋರ್ಟ್ Supreme Court ಶುಕ್ರವಾರ ತೀವ್ರ ಕಳವಳ ವ್ಯಕ್ತಪಡಿಸಿದೆ.

ಮೀಸಲಾತಿಯ ಮೂಲಕ ಸಮಾಜದಲ್ಲಿ ಉನ್ನತ ಸ್ಥಾನಮಾನ ಅಥವಾ ಸಾಮಾಜಿಕ ಪ್ರಗತಿಯನ್ನು ಸಾಧಿಸಿದ ಕುಟುಂಬಗಳು ಅಂತಿಮವಾಗಿ ಮೀಸಲಾತಿ ವ್ಯವಸ್ಥೆಯಿಂದ ಹೊರಬರಬೇಕು. ಆಗ ಮಾತ್ರ ಅರ್ಹರಿಗೆ ನ್ಯಾಯ ಸಿಗುತ್ತದೆ ಎಂದು ದೇಶದ ಅತ್ಯುನ್ನತ ನ್ಯಾಯಾಲಯವು ಮೌಖಿಕವಾಗಿ ಅಭಿಪ್ರಾಯಪಟ್ಟಿದೆ.
ಹಿಂದುಳಿದ ವರ್ಗಗಳಲ್ಲಿನ ಕೆನೆಪದರ ವರ್ಗಕ್ಕೆ ಮೀಸಲಾತಿ ಸೌಲಭ್ಯಗಳನ್ನು ಮುಂದುವರಿಸುವ ಕುರಿತಾದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಮತ್ತು ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರನ್ನೊಳಗೊಂಡ ದ್ವಿಪೀಠವು, ತಂದೆ-ತಾಯಿ ಇಬ್ಬರೂ ಐಎಎಸ್ (IAS) ಅಧಿಕಾರಿಗಳಾಗಿದ್ದಲ್ಲಿ, ಅಂತಹ ಉನ್ನತವಿಚಾರಣೆ ವೇಳೆ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರು, ತಂದೆ ಮತ್ತು ತಾಯಿ ಇಬ್ಬರೂ ಐಎಎಸ್ ಅಧಿಕಾರಿಗಳಾಗಿದ್ದರೆ, ಇಬ್ಬರೂ ಸರ್ಕಾರಿ ಸೇವೆಯಲ್ಲಿದ್ದಾರೆ ಮತ್ತು ಸಮಾಜದಲ್ಲಿ ಅತ್ಯಂತ ಸುಭದ್ರ ಹಾಗೂ ಉನ್ನತ ಸ್ಥಾನದಲ್ಲಿದ್ದಾರೆ ಎಂದರ್ಥ. ಅಲ್ಲಿ ಸಾಮಾಜಿಕ ಪ್ರಗತಿ ಈಗಾಗಲೇ ಸಾಧಿಸಲ್ಪಟ್ಟಿದೆ. ಈಗ ಅಂತಹ ಶ್ರೀಮಂತ ಹಾಗೂ ಪ್ರಭಾವಿ ಜನರನ್ನು ಮೀಸಲಾತಿಯಿಂದ ಹೊರಗಿಡಲು ಸರ್ಕಾರಿ ಆದೇಶಗಳಿವೆ. ಆದರೆ, ಅವರು ಆ ಹೊರಗಿಡುವಿಕೆಯನ್ನು ಪ್ರಶ್ನಿಸಿ ಕೋರ್ಟ್‌ಗೆ ಬರುತ್ತಿದ್ದಾರೆ. ಈ ಅಂಶವನ್ನು ನಾವು ಗಂಭೀರವಾಗಿ ಗಮನದಲ್ಲಿಟ್ಟುಕೊಳ್ಳಬೇಕು ಎಂದರು.

ಶೈಕ್ಷಣಿಕ ಮತ್ತು ಆರ್ಥಿಕ ಸಬಲೀಕರಣದೊಂದಿಗೆ ಸಮಾಜದಲ್ಲಿ ಉನ್ನತ ಸ್ಥಾನಮಾನ ತಾನಾಗಿಯೇ ಸಿಗುತ್ತದೆ. ಅದರ ನಂತರವೂ ಅವರ ಮುಂದಿನ ಪೀಳಿಗೆಯ ಮಕ್ಕಳಿಗೆ ಮೀಸಲಾತಿಯನ್ನು ಬಯಸುತ್ತಾ ಹೋದರೆ, ನಾವು ಈ ಮೀಸಲಾತಿ ವ್ಯವಸ್ಥೆಯಿಂದ ಎಂದಿಗೂ ಹೊರಬರಲು ಸಾಧ್ಯವೇ ಇಲ್ಲ. ಇದು ನಾವು ಅತ್ಯಂತ ಗಂಭೀರವಾಗಿ ಯೋಚಿಸಬೇಕಾದ ಮತ್ತು ಆತಂಕಪಡಬೇಕಾದ ವಿಷಯವಾಗಿದೆ ಎಂದು ಪೀಠ ಎಚ್ಚರಿಸಿದೆ.
ಅರ್ಜಿದಾರರ ಪರ ಹಾಜರಾಗಿದ್ದ ವಕೀಲ ಶಶಾಂಕ್ ರತ್ನ ಅವರು ವಾದ ಮಂಡಿಸಿ, ಇಲ್ಲಿ ಸಂಬಂಧಪಟ್ಟ ವ್ಯಕ್ತಿಗಳನ್ನು ಅವರ ಸಂಬಳದ ಆಧಾರದ ಮೇಲೆ ಹೊರಗಿಡಲಾಗಿಲ್ಲ, ಬದಲಿಗೆ ಅವರ ಪೋಷಕರ ಹುದ್ದೆಯ ಸ್ಥಾನಮಾನದ (Status) ಆಧಾರದ ಮೇಲೆ ಹೊರಗಿಡಲಾಗಿದೆ. ಹೀಗಾಗಿ ಈ ವಿಷಯವನ್ನು ಇನ್ನಷ್ಟು ಆಳವಾಗಿ ಪರಿಶೀಲಿಸಬೇಕಾಗಿದೆ. ಆರ್ಥಿಕವಾಗಿ ಹಿಂದುಳಿದ ವರ್ಗ (EWS) ಮತ್ತು ಹಿಂದುಳಿದ ವರ್ಗಗಳ ಕೆನೆಪದರ ನಡುವೆ ಸ್ಪಷ್ಟ ವ್ಯತ್ಯಾಸವಿರಬೇಕು ಎಂದು ಕೋರಿದರು. ಕೆನೆಪದರ ಮಾನದಂಡಗಳುಇಡಬ್ಲ್ಯುಎಸ್ (EWS) ಗಿಂತ ಹೆಚ್ಚು ಉದಾರವಾಗಿರಬೇಕು ಎಂದು ವಾದಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಮೂರ್ತಿ ನಾಗರತ್ನ ಅವರು, ಇಡಬ್ಲ್ಯೂಎಸ್ (EWS) ವರ್ಗದಲ್ಲಿ ಯಾವುದೇ ಸಾಮಾಜಿಕ ಹಿಂದುಳಿದಿಡುವಿಕೆ ಇರುವುದಿಲ್ಲ, ಅಲ್ಲಿ ಕೇವಲ ಆರ್ಥಿಕ ಹಿಂದುಳಿದಿಡುವಿಕೆ ಮಾತ್ರ ಇರುತ್ತದೆ. ಆದರೆ ಇಲ್ಲಿ ಸಮತೋಲನ ಅತ್ಯಗತ್ಯ. ಒಬ್ಬ ವ್ಯಕ್ತಿಯು ಮೂಲತಃ ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದಿರಬಹುದು, ಆದರೆ ಅವರ ಪೋಷಕರು ಮೀಸಲಾತಿಯ ಸೌಲಭ್ಯವನ್ನು ಪಡೆದುಕೊಂಡು ಸಮಾಜದಲ್ಲಿ ಒಂದು ನಿರ್ದಿಷ್ಟ ಉನ್ನತ ಮಟ್ಟವನ್ನು ತಲುಪಿದ ತಕ್ಷಣ, ಅವರ ಸಾಮಾಜಿಕ ಸ್ಥಿತಿಗತಿ ಸಂಪೂರ್ಣವಾಗಿ ಬದಲಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ನೋಟಿಸ್‌ ಜಾರಿ ಮಾಡಿದ ಸುಪ್ರೀಂ ಕೋರ್ಟ್

ಉಭಯ ಕಡೆಯ ಸುದೀರ್ಘ ವಾದ-ಪ್ರತಿವಾದಗಳನ್ನು ಆಲಿಸಿದ ಸುಪ್ರೀಂ ಕೋರ್ಟ್ ಪೀಠವು, ಸಲ್ಲಿಕೆಯಾಗಿರುವ ಅರ್ಜಿಯ ಮೇರೆಗೆ ಸಂಬಂಧಪಟ್ಟ ಎಲ್ಲಾ ಪಕ್ಷಕಾರರಿಗೆ ತುರ್ತು ನೋಟಿಸ್‌ ಜಾರಿ ಮಾಡಿದ್ದು, ಲಿಖಿತ ಪ್ರತಿಕ್ರಿಯೆ ನೀಡುವಂತೆ ಆದೇಶಿಸಿದೆ. ಜಾತಿ ಆಧಾರಿತ ಸಾಮಾಜಿಕ ಹಿಂದುಳಿದಿಡುವಿಕೆಯನ್ನು ವ್ಯಕ್ತಿಯ ಆರ್ಥಿಕ ಮತ್ತು ಉದ್ಯೋಗದ ಸ್ಥಾನಮಾನವು ಮೀರಿಸಬಹುದೇ ಎಂಬ ಸಾಂವಿಧಾನಿಕ ಪ್ರಶ್ನೆಯನ್ನು ಕೋರ್ಟ್ ಈಗ ಪರಿಶೀಲಿಸುತ್ತಿದೆ.

ಇಂದ್ರಾ ಸಾಹಿ ತೀರ್ಪು (1992): ಇತಿಹಾಸ ಪ್ರಸಿದ್ಧ ‘ಮಂಡಲ್‌ಕೇಸ್’ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಒಬಿಸಿ (OBC) ವರ್ಗಕ್ಕೆ ಶೇ. 27 ರಷ್ಟು ಮೀಸಲಾತಿಯನ್ನು ಎತ್ತಿಹಿಡಿದಿತ್ತಾದರೂ, ಅವರಲ್ಲಿನ ‘ಕ್ರೀಮಿ ಲೇಯ‌ರ್’ (ಶ್ರೀಮಂತರು/ಮುಂದುವರಿದವರು) ಜನರನ್ನು ಕಡ್ಡಾಯವಾಗಿ ಕೋಟಾದಿಂದ ಹೊರಗಿಡಬೇಕು ಎಂದು ಆದೇಶಿಸಿತ್ತು.
ಈಗಿನ ನಿಯಮ:

ಸದ್ಯ ಒಬಿಸಿ ಕುಟುಂಬಗಳ ವಾರ್ಷಿಕ ಆದಾಯ 8 ಲಕ್ಷ ರೂಪಾಯಿಗಳಿಗಿಂತ ಹೆಚ್ಚಿದ್ದರೆ ಅವರನ್ನು ಕ್ರೀಮಿ ಲೇಯರ್ ಎಂದು ಪರಿಗಣಿಸಲಾಗುತ್ತದೆ. ಆದಾಯದ ಮಿತಿಯ ಹೊರತಾಗಿಯೂ, ಉನ್ನತ ಸಾಂವಿಧಾನಿಕ ಹುದ್ದೆಗಳಲ್ಲಿರುವವರು, ಹಿರಿಯ ಅಧಿಕಾರಿಗಳು (IAS/IPS) ಅಥವಾ ಮಿಲಿಟರಿಯ ಉನ್ನತ ಅಧಿಕಾರಿಗಳ ಮಕ್ಕಳನ್ನು ಸ್ವಯಂಚಾಲಿತವಾಗಿ ಮೀಸಲಾತಿಯಿಂದ ಹೊರಗಿಡಲಾಗುತ್ತದೆ.

ಮಾರ್ಚ್ ತಿಂಗಳ ಪ್ರಮುಖ ತೀರ್ಪು:

ಇತ್ತೀಚೆಗೆ ಮಾರ್ಚ್‌ ತಿಂಗಳಲ್ಲಿ ಮಹತ್ವದ ತೀರ್ಪು ನೀಡಿದ್ದ ಸುಪ್ರೀಂ ಕೋರ್ಟ್, ಕೇವಲ ಪೋಷಕರ ಆದಾಯವನ್ನೇ ಮಾನದಂಡವಾಗಿಟ್ಟುಕೊಂಡು ಕ್ರೀಮಿ ಲೇಯ‌ರ್ ನಿರ್ಧರಿಸಬಾರದು, ಬದಲಿಗೆ ಅವರ ಉದ್ಯೋಗದ ಸ್ವರೂಪ ಮತ್ತು ಸ್ಥಾನಮಾನವನ್ನು ಪರಿಗಣಿಸುವುದು ಕಡ್ಡಾಯ ಎಂದು ಸ್ಪಷ್ಟಪಡಿಸಿತ್ತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaNew DelhiNews in KannadaNews KannadaSupreme Courtನವದೆಹಲಿ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಹುಲಿ ದಾಳಿಗೆ ನಾಲ್ವರು ಮಹಿಳೆಯರು ಬಲಿ

Next Post

ಬೀರೂರು – ತಾಳಗುಪ್ಪ ರೈಲ್ವೆ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ | ಇಲ್ಲಿದೆ ಡೀಟೇಲ್ಸ್

kalpa News

kalpa News

Next Post
SWR talguppa Mysore 4 trains updates

ಬೀರೂರು - ತಾಳಗುಪ್ಪ ರೈಲ್ವೆ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ | ಇಲ್ಲಿದೆ ಡೀಟೇಲ್ಸ್

Comments 1

  1. Pingback: ಬೀರೂರು - ತಾಳಗುಪ್ಪ ರೈಲ್ವೆ ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್ | ಇಲ್ಲಿದೆ ಡೀಟೇಲ್ಸ್ » kalpa.news

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL