ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ವಿಶ್ವ ಪರಿಸರ ದಿನದ #WorldEnvironmentDay ಅಂಗವಾಗಿ ಕುಮದ್ವತಿ ರೆಸಿಡೆನ್ಷಿಯಲ್ ಸೆಂಟ್ರಲ್ ಸ್ಕೂಲಿನಲ್ಲಿ ವಿದ್ಯಾರ್ಥಿಗಳಿಗೆ ಪರಿಸರ ಜಾಗೃತಿ ಮೂಡಿಸುವ ಕುರಿತಾಗಿನ ವಿವಿಧ ಸ್ಪರ್ಧೆ ಹಾಗೂ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.
ಶಾಲೆಯ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನವನ್ನು ಅತ್ಯಂತ ಉತ್ಸಾಹ ಮತ್ತು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವುದು ಮತ್ತು ಪರಿಸರ ಸ್ನೇಹಿ ಮನೋಭಾವ ಬೆಳೆಸುವುದು ಉದ್ದೇಶದಿಂದ ಶಾಲೆ ಈ ಕಾರ್ಯಕ್ರಮವನ್ನು ಆಯೋಜಿಸಿತ್ತು.
Also Read>> ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್
ಶಾಲಾ ಒಳಾಂಗಣದಲ್ಲಿ ವಿಶೇಷ ಸಭೆ ನಡೆಸಿ, ಪ್ರಾಂಶುಪಾಲರಾದ ಎಚ್.ಡಿ. ಪ್ರಶಾಂತ ಅವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಪರಿಸರ ಸಂರಕ್ಷಣಾ ಪ್ರತಿಜ್ಞೆ ಬೋಧಿಸಿದರು.
ಹೇಗೆಲ್ಲಾ ಜಾಗೃತಿ ಮೂಡಿಸಲಾಯಿತು?
ನನ್ನ ಭೂಮಿ, ನನ್ನ ಜವಾಬ್ದಾರಿ ಎಂಬ ಮುಖ್ಯ ವಿಷಯದ ಮೇಲೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಒಟ್ಟು 650 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಕಿರಿಯ ವಿಭಾಗದ 1 ರಿಂದ 3ನೇ ತರಗತಿಯ 250 ವಿದ್ಯಾರ್ಥಿಗಳಿಗೆ ಮರಗಳನ್ನು ಉಳಿಸಿ ಎಂಬ ವಿಷಯದ ಕುರಿತಾಗಿ ಚಿತ್ರಕಲಾ ಸ್ಪರ್ಧೆ, ಮಧ್ಯಮ ವಿಭಾಗ 4 ರಿಂದ 5ನೇ ತರಗತಿಯ 150 ವಿದ್ಯಾರ್ಥಿಗಳಿಗೆ ಹಸಿರು ಭೂಮಿ, ಸ್ವಚ್ಛ ಭೂಮಿ ವಿಷಯದ ಕುರಿತಾಗಿ ಚಿತ್ರಕಲಾ ಸ್ಪರ್ಧೆ ನಡೆಯಿತು.
Also Read>> ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ
ಇನ್ನು, ಹಿರಿಯ ವಿಭಾಗ 9 ರಿಂದ 10ನೇ ತರಗತಿಯ 150 ವಿದ್ಯಾರ್ಥಿಗಳಿಗೆ ಪ್ಲಾಸ್ಟಿಕ್ ಮುಕ್ತ ಭಾರತ ಎಂಬ ವಿಷಯದ ಕುರಿತಾಗಿ ಪ್ರಬಂಧ ಸ್ಪರ್ಧೆ ನಡೆಯಿತು.
ಅರಣ್ಯ ಇಲಾಖೆಯ ಮಾರ್ಗದರ್ಶನ ಮತ್ತು ಸಹಕಾರದಲ್ಲಿ ವಿದ್ಯಾರ್ಥಿಗಳು ಶಾಲಾ ಆವರಣದಲ್ಲಿ 40 ಬೇವು, ಹೊಂಗೆ, ತಪಸಿ ಸಸಿಗಳನ್ನು ನೆಟ್ಟು, ನೀರು ಹಾಕಿ ಪೋಷಿಸುವ ಜವಾಬ್ದಾರಿ ವಹಿಸಿಕೊಂಡಿದ್ದು ವಿಶೇಷವಾಗಿತ್ತು.
ಶಾಲೆಯ 7 ಮತ್ತು 8ನೇ ತರಗತಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಸಾಲುಮರದ ತಿಮ್ಮಕ್ಕ ವೃಕ್ಷೋದ್ಯಾನಕ್ಕೆ ಭೇಟಿ ನೀಡಿ, ಗಿಡ ನೆಡುವ ಮೂಲಕ ವಿಶಿಷ್ಟವಾಗಿ ಪರಿಸರ ದಿನಾಚರಣೆಯನ್ನು ಆಚರಿಸಿದರು.
ನಂತರ ಕುಮದ್ವತಿ ನರ್ಸರಿಗೆ ಭೇಟಿ ನೀಡಲಾಯಿತು. ಅಲ್ಲಿ ಶಿಕಾರಿಪುರದ ವಲಯ ಅರಣ್ಯಾಧಿಕಾರಿಗಳಾದ ಆರ್’ಎಫ್’ಒ ಪರಶುರಾಮ ಅವರು ಮಾತನಾಡಿ ಅರಣ್ಯಗಳ ಮಹತ್ವ ಮತ್ತು ವಿದ್ಯಾರ್ಥಿಗಳ ಪಾತ್ರ ಎಂಬ ವಿಷಯದ ಕುರಿತು ಅರ್ಥಪೂರ್ಣ ಉಪನ್ಯಾಸ ನೀಡಿದರು.
ಶಾಲಾ ಆಡಳಿತ ಮಂಡಳಿ ಸದಸ್ಯೆ ಉಮಾದೇವಿ, ಆಡಳಿತ ಪ್ರತಿನಿಧಿ ಜಿ.ಎಸ್. ಶಿವಕುಮಾರ್ ಹಾಗೂ ಆಡಳಿತ ಸಂಯೋಜಕರಾದ ಕುಬೇರಪ್ಪ ಅವರು ಪಾಲ್ಗೊಂಡಿದ್ದರು.
ಈ ಆಚರಣೆಯು ವಿದ್ಯಾರ್ಥಿಗಳಲ್ಲಿ ಪರಿಸರದ ಬಗ್ಗೆ ಅರಿವು, ಕಾಳಜಿ ಮತ್ತು ಜವಾಬ್ದಾರಿಯನ್ನು ಹೆಚ್ಚಿಸುವಲ್ಲಿ ಯಶಸ್ವಿಯಾಯಿತು. ಪ್ರಾಯೋಗಿಕ ಅನುಭವದ ಮೂಲಕ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಯ ಮಹತ್ವವನ್ನು ಮನಗಂಡರು ವಿಶೇಷವಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news



















