ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ, ಹಿಂದುಳಿದ ವರ್ಗಗಳ ಪ್ರಭಾವಿ ನಾಯಕ ಹಾಗೂ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ #KSEshwarppa ಅವರ 78ನೇ ಜನ್ಮದಿನವನ್ನು ಜೂನ್ 10 ರಂದು ಶಿವಮೊಗ್ಗದಲ್ಲಿ ಧಾರ್ಮಿಕ, ಸಾಂಸ್ಕೃತಿಕ ಮತ್ತು ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆಚರಿಸಲಾಗುತ್ತಿದೆ.
ಈ ಆಚರಣೆಯನ್ನು ಕೆ.ಎಸ್. ಈಶ್ವರಪ್ಪ ಅಭಿಮಾನಿಗಳ ಬಳಗ, ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ ಹಾಗೂ ಶ್ರೀ ಮಾರಿಕಾಂಬ ಮೈಕ್ರೋ ಫೈನಾನ್ಸ್ #MarikambaMicroFinance ಸಂಸ್ಥೆಗಳು ಸಂಯುಕ್ತವಾಗಿ ಆಯೋಜಿಸಿವೆ.
Also Read>> ವೈಜಾಗ್ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ | ಕರಗಿದ ಕಬ್ಬಿಣ ಸೋರಿಕೆ, 8 ಕಾರ್ಮಿಕರ ದುರ್ಮರಣ
ಧಾರ್ಮಿಕ ಕಾರ್ಯಕ್ರಮಗಳಿಗೆ ಭವ್ಯ ಚಾಲನೆ
ನಗರದ ಮಲ್ಲೇಶ್ವರ ನಗರದಲ್ಲಿರುವ ಗುಂಡಪ್ಪ ಶೆಡ್ನಲ್ಲಿನ ಈಶ್ವರಪ್ಪ ಅವರ ನಿವಾಸದ ಆವರಣದಲ್ಲಿ ಬೆಳಿಗ್ಗೆ ಕಾರ್ಯಕ್ರಮಗಳು ಆರಂಭವಾಗಲಿವೆ.
ಸುಮಾರು 400ಕ್ಕೂ ಹೆಚ್ಚು ಪುರೋಹಿತರಿಂದ ರುದ್ರಪಠಣ ನಡೆಯಲಿದ್ದು, 2000ಕ್ಕೂ ಹೆಚ್ಚು ದಂಪತಿಗಳು ಸಾಮೂಹಿಕ ಶ್ರೀ ಸತ್ಯನಾರಾಯಣ ಸ್ವಾಮಿ ಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಇದೇ ವೇಳೆ, 600ಕ್ಕೂ ಹೆಚ್ಚು ಮಹಿಳೆಯರು ಭಕ್ತಿ ಗೀತೆ ಹಾಗೂ ದೇಶಭಕ್ತಿ ಗೀತೆಗಳನ್ನು ಗಾಯನ ಮಾಡುವ ಕಾರ್ಯಕ್ರಮ ನಡೆಯಲಿದೆ. “ಮಂಗಳ ನಿಧಿ ಸಮರ್ಪಣೆ” ಕಾರ್ಯಕ್ರಮವೂ ಈ ಸಂದರ್ಭದಲ್ಲಿ ಆಯೋಜಿಸಲಾಗಿದೆ.
ಈ ಧಾರ್ಮಿಕ ಕಾರ್ಯಕ್ರಮಗಳಿಗೆ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಬೆಕ್ಕಿನಕಲ್ಲಕ ಶ್ರೀಗಳಾದ ಶ್ರೀ ಮಲ್ಲಿಕಾರ್ಜುನ ಮುರುಘ ರಾಜೇಂದ್ರ ಸ್ವಾಮಿಗಳು, ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ, ಮಾದಾರ ಚನ್ನಯ್ಯ ಸ್ವಾಮಿಗಳು, ಆದಿಚುಂ ಚನಗಿರಿಶಾಖಾ ಮತದನಾದಮಯಾನಂದನಾಥ ಸ್ವಾಮೀಜಿ, ಬೆಳಕೆಯ ರಾಚೋಟೇಶ್ವರ ಶಿವಾಚಾರ್ಯ ಸ್ವಾಮಿಗಳು ವಹಿಸಲಿದ್ದಾರೆ.
Also Read>> ವೈಜಾಗ್ ಉಕ್ಕಿನ ಕಾರ್ಖಾನೆಯಲ್ಲಿ ಭೀಕರ ಸ್ಫೋಟ | ಕರಗಿದ ಕಬ್ಬಿಣ ಸೋರಿಕೆ, 8 ಕಾರ್ಮಿಕರ ದುರ್ಮರಣ
ಸಮಾಜಮುಖಿ ಕಾರ್ಯಕ್ರಮಗಳಿಗೆ ಆದ್ಯತೆ
ಸಮಾಜಮುಖಿ ಕಾರ್ಯಕ್ರಮಗಳ ಅಂಗವಾಗಿ, 4ನೇ ವಾರ್ಡಿನ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಜೋಡಿಯಾಕ್ ಪ್ರಕಾಶ್ ಅವರ ನೇತೃತ್ವದಲ್ಲಿ ತರಳಬಾಳು ಬಡಾವಣೆಯ ಸಾರ್ವಜನಿಕ ಉದ್ಯಾನವನದಲ್ಲಿ 78 ಗಿಡಗಳನ್ನು ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಲಿದ್ದಾರೆ.
ಇದೇ ಸಂದರ್ಭದಲ್ಲಿ, ವಿನೋಬನಗರದಲ್ಲಿ ಶ್ರೀಕಾಂತ್ ಜಿ.ಪಿ. ಅವರು 100 ವಿದ್ಯಾರ್ಥಿಗಳಿಗೆ ಉಚಿತ ನೋಟ್ಬುಕ್ ಹಾಗೂ ಹಣ್ಣುಗಳನ್ನು ವಿತರಿಸಲಿದ್ದಾರೆ.
ಸಾರ್ವಜನಿಕರಿಗೆ ಆಹ್ವಾನ
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಶಿವಮೊಗ್ಗದ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕೆ.ಎಸ್. ಈಶ್ವರಪ್ಪ ಅವರಿಗೆ ಶುಭಾಶಯಗಳನ್ನು ತಿಳಿಸಿ ಆಶೀರ್ವಾದ ಪಡೆಯಬೇಕೆಂದು ಆಯೋಜಕರು ಮನವಿ ಮಾಡಿದ್ದಾರೆ.
ಈ ಕುರಿತು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಯೋಜಕರು ಕಾರ್ಯಕ್ರಮಗಳ ವಿವರಗಳನ್ನು ಹಂಚಿಕೊಂಡರು. ಅಭಿಮಾನಿ ಬಳಗದ ಪ್ರಮುಖರಾದ ಬಾಲು, ಸುವರ್ಣ ಶಂಕರ್, ಶಿವಾಟಿ, ನವುಲೆ ಈಶ್ವರಪ್ಪ, ಚಂದನ್, ಶ್ರೀಕಾಂತ್, ಆಶಾ ಚನ್ನಬಸಪ್ಪ, ಲಕ್ಷ್ಮೀಮೇಶಂಕರ್ ನಾಯಕ್, ವೆಂಕಟೇಶ್, ರಾಜು, ಕುಬೇರಪ್ಪ ಹಾಗೂ ಸೂರ್ಯನಾರಾಯಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿಸಂಪರ್ಕಿಸಿ: Whatsapp: 9008761663, 9481252093 – info@kalpa.news




















