ಕಲ್ಪ ಮೀಡಿಯಾ ಹೌಸ್ | ಹೊನ್ನಾವರ/ಸಾಗರ |
ಪ್ರಧಾನಮಂತ್ರಿ #NarendraModi ನರೇಂದ್ರ ಮೋದಿಯವರಿಗೆ ರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು #RaghaveshwaraSwamiji ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಭಾರತದಂತಹ ಬೃಹತ್ ಪ್ರಜಾಪ್ರಭುತ್ವ ದೇಶದಲ್ಲಿ ಪ್ರಧಾನಿಯಾಗುವುದೇ ಒಂದು ಮಹತ್ತರ ಸಾಧನೆಯಾಗಿದ್ದು, ಅದರಲ್ಲೂ ದೀರ್ಘಾವಧಿಗೆ ಪ್ರಧಾನಿಯಾಗಿ ಸೇವೆ ಸಲ್ಲಿಸಿ ದಾಖಲೆಯನ್ನೇ ನಿರ್ಮಿಸಿರುವುದು ಅಪೂರ್ವ ಸಾಧನೆ ಎಂದು ಶ್ರೀಗಳು ತಿಳಿಸಿದ್ದಾರೆ.
Also Read>> ಬಾಯಿ ತೆರೆಯಲಾಗದೆ 14 ತಿಂಗಳು ಹೋರಾಟ | ಶಸ್ತ್ರಚಿಕಿತ್ಸೆಯಿಂದ ಶಿವಮೊಗ್ಗ ಮಹಿಳೆಗೆ ಹೊಸ ಜೀವನ
ಮೋದಿಯವರ ನೇತೃತ್ವದಲ್ಲಿ ಅನೇಕ ಜನಪರ ಕಾರ್ಯಕ್ರಮಗಳು ಜಾರಿಗೆ ಬಂದಿದ್ದು, ದೇಶವನ್ನು ಸರಿಯಾದ ದಿಕ್ಕಿನೆಡೆಗೆ ಮುನ್ನಡೆಸುತ್ತಿರುವುದು ಶ್ಲಾಘನೀಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು. ದೇಶಕ್ಕೆ ಇನ್ನಷ್ಟು ಕಾಲ ಹೆಚ್ಚಿನ ಸೇವೆ ಸಲ್ಲಿಸುವ ಶಕ್ತಿ ಅವರಿಗೆ ದೊರಕಲಿ ಎಂದು ಶ್ರೀಕರಾರ್ಚಿತ ದೇವತಾ ಸಾನ್ನಿಧ್ಯದಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ಹೇಳಿದರು.
ಇದೇ ಸಂದರ್ಭದಲ್ಲಿ, ಭವಿಷ್ಯದಲ್ಲಿಯೂ ದೇಶವನ್ನು ಮುನ್ನಡೆಸುವ ನಾಯಕರಾಗಿ ಮೋದಿಯವರಂತಹ ನಾಯಕರು ಉದಯಿಸಲಿ ಎಂಬ ಆಶಯವನ್ನೂ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















