No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Sunday, September 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ. ಮೈತ್ರೇಯಿ ಆದಿತ್ಯಪ್ರಸಾದ್

ಸಮಾಜಮುಖಿ ಚಿಂತನೆಯ ಸಜ್ಜನ – ಅಶ್ವತ್ಥಣ್ಣ

kalpa News by kalpa News
June 13, 2026
in ಡಾ. ಮೈತ್ರೇಯಿ ಆದಿತ್ಯಪ್ರಸಾದ್
0
Ashwath Narayan Shetty
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |ಅಶ್ವತ್ಥನಾರಾಯಣ ಶೆಟ್ಟರ ಕುರಿತಾಗಿ ಬರೆಯಲೇ ಬೇಕೆಂದು ಅಂದುಕೊಂಡಾಗ ಮೊದಲು ನೆನಪಾಗಿದ್ದು, ಅವರ ಸರಳತೆ. ಮತ್ತು ಎಲ್ಲರೊಂದಿಗೂ ಅವರು ಇರುವ ರೀತಿ. ಅವರು ಎಷ್ಟೇ ಹಿರಿಯರಾದರೂ ಎಲ್ಲರಿಗೂ ಪ್ರೀತಿಯ ಅಶ್ವತ್ಥಣ್ಣನೇ ಆಗಿದ್ದಾರೆ.

ಉದ್ಯಮೇನ ಹಿ ಸಿಧ್ಯಂತಿ ಕಾರ್ಯಾಣಿ ನ ಮನೋರಥೈಃ |
ನ ಹಿ ಸುಪ್ತಸ್ಯ ಸಿಂಹಸ್ಯ ಪ್ರವಿಶಂತಿ ಮುಖೇ ಮೃಗಾಃ || ಎಂಬ ಸಂಸ್ಕೃತ ಸುಭಾಷಿತವು ಉದ್ಯಮ ಮತ್ತು ಪರಿಶ್ರಮದಿಂದಲೇ ಕಾರ್ಯಗಳು ಸಿದ್ಧಿಸುತ್ತವೆ; ನಿದ್ರಿಸುತ್ತಿರುವ ಸಿಂಹದ ಬಾಯಿಗೆ ಜಿಂಕೆಗಳು ತಾವಾಗಿಯೇ ಬರುವುದಿಲ್ಲ ಎಂದು ಹೇಳುತ್ತದೆ.

Also Read>> ದುರ್ವಾಸನೆ ಬಯಲಿಗೆ ತಂದ ದುರಂತ | ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಈ ಶ್ಲೋಕದ ಅರ್ಥವನ್ನು ತಮ್ಮ ಜೀವನದ ಮೂಲಕ ಸಾರ್ಥಕಗೊಳಿಸಿದ ವ್ಯಕ್ತಿಗಳಲ್ಲಿ ಟಿ. ಆರ್. ಅಶ್ವತ್ಥನಾರಾಯಣ ಶೆಟ್ರವರು ಪ್ರಮುಖರು. ಪರಿಶ್ರಮ, ಪ್ರಾಮಾಣಿಕತೆ ಮತ್ತು ಸಮಾಜದ ಬಗ್ಗೆ ಕಾಳಜಿಯನ್ನು ತಮ್ಮ ಬದುಕಿನ ಮೌಲ್ಯಗಳನ್ನಾಗಿ ಮಾಡಿಕೊಂಡಿರುವ ಅವರು ಕುಟುಂಬ ಹಾಗೂ ಸಮಾಜದ ವಲಯದಲ್ಲಿ ಅಪಾರ ಗೌರವವನ್ನು ಗಳಿಸಿದ್ದಾರೆ.

ಸರಳ ವ್ಯಕ್ತಿತ್ವದೊಂದಿಗೆ ಉನ್ನತ ಚಿಂತನೆಗಳನ್ನು ಹೊಂದಿರುವ ಶೆಟ್ರವರು ತಮ್ಮ ವೃತ್ತಿಜೀವನದಲ್ಲಿ ಯಶಸ್ಸನ್ನು ಗಳಿಸುವುದರ ಜೊತೆಗೆ ಸಮಾಜಮುಖಿ ಚಟುವಟಿಕೆಗಳಲ್ಲಿಯೂ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಎಲ್ಲರೊಂದಿಗೆ ಆತ್ಮೀಯವಾಗಿ ಬೆರೆಯುವ ಅವರ ಗುಣ ಹಾಗೂ ಸಹಾಯಹಸ್ತ ಚಾಚುವ ಮನೋಭಾವ ಅನೇಕರಿಗೆ ಪ್ರೇರಣೆಯಾಗಿದೆ.ಪರೋಪಕಾರಾಯ ಫಲಂತಿ ವೃಕ್ಷಾಃ
ಪರೋಪಕಾರಾಯ ವಹಂತಿ ನದ್ಯಃ |
ಪರೋಪಕಾರಾಯ ದುಹಂತಿ ಗಾವಃ
ಪರೋಪಕಾರಾರ್ಥಮಿದಂ ಶರೀರಮ್ ll ಎಂಬ ಶ್ಲೋಕವಂತೂ ಅಶ್ವತ್ಥಣ್ಣನಿಗೆ ಸರಿಯಾಗಿ ಹೊಂದುತ್ತದೆ. ಮರಗಳು, ನದಿಗಳು, ಗೋವುಗಳು ಇತರರ ಹಿತಕ್ಕಾಗಿ ಇರುವಂತೆ ಮಾನವ ದೇಹವೂ ಪರೋಪಕಾರಕ್ಕಾಗಿಯೇ ಇದೆ ಎಂಬ ಶ್ಲೋಕದ ಸಂದೇಶವನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿರುವ ಶೆಟ್ರವರು ಅನೇಕ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಗಳಿಗೆ ಪ್ರೋತ್ಸಾಹ ನೀಡಿ ಸಮಾಜದ ಪ್ರಗತಿಗೆ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ. ಹಿರಿಯರಿಗೆ ಗೌರವ, ಕಿರಿಯರಿಗೆ ಪ್ರೋತ್ಸಾಹ ಹಾಗೂ ಸಮಾನ ಮನಸ್ಕರೊಂದಿಗೆ ಸೌಹಾರ್ದಯುತ ಬಾಂಧವ್ಯವನ್ನು ಬೆಳೆಸಿಕೊಂಡಿರುವುದು ಅವರ ವ್ಯಕ್ತಿತ್ವದ ವಿಶೇಷತೆ.

Also Read>> 1ನೇ ಏಕದಿನ ಪಂದ್ಯ | ಅಫ್ಗಾನಿಸ್ತಾನ ವಿರುದ್ಧ ಭಾರತಕ್ಕೆ ಮಹತ್ವದ ಪರೀಕ್ಷೆ

ಅಲ್ಲದೇ ಸಾಮಾಜಿಕ ಕಳಕಳಿಯ ಒಂದು ಭಾಗವಾಗಿ ಅವರ ಶ್ರೀನಿಧಿ ಟೆಕ್ಸ್ಟ್ ಟೈಲ್ಸ್ ನಲ್ಲಿ ಅದೊಂದು ಪ್ರಖ್ಯಾತ ಬಟ್ಟೆಯ ಮಳಿಗೆಯಾಗಿದ್ದರೂ ಸಹ ಸಮಾಜದಲ್ಲಿ ಸಾಧನೆಗೈದವರನ್ನು ಗುರುತಿಸಿ ಗೌರವಿಸುವ ಒಂದು ವಿಶಿಷ್ಟ ಕಾರ್ಯ ಮಾಡುವುದು ಕೆರೆಯ ನೀರನು ಕೆರೆಗೆ ಚೆಲ್ಲಿ ವರವ ಪಡೆದವರಂತೆ ಕಾಣಿರೋ ಎಂಬ ದಾಸರ ಪದ ನೆನಪಿಸುವಂತಿದೆ. ಇದೆಲ್ಲದರ ಹಿಂದೆ ಆಧಾರ ಸ್ಥಂಭವಾಗಿ ಅಶ್ವತ್ಥಣ್ಣನೇ ಇದ್ದಾರೆ.

ಅಶ್ವತ್ಥಣ್ಣನವರು ಕುಟುಂಬದ ಹಿರಿಯರಾಗಿ ಮಾರ್ಗದರ್ಶನ ನೀಡುವ ಹಿರಿಯರು. ಅವರ ಅನುಭವ ಹಾಗೂ ಜೀವನ ಮೌಲ್ಯಗಳು ಮುಂದಿನ ಪೀಳಿಗೆಗೆ ದಾರಿದೀಪವಾಗಿವೆ. ಅವರ ಜೀವನ ಪಯಣವು ಕೇವಲ ವೈಯಕ್ತಿಕ ಸಾಧನೆಯ ಕಥೆಯಲ್ಲ; ಅದು ಮಾನವೀಯತೆ, ಸಂಸ್ಕಾರ ಮತ್ತು ಸಾಮಾಜಿಕ ಬದ್ಧತೆಯ ಪಾಠವಾಗಿದೆ.ಅಶ್ವತ್ಥನಾರಾಯಣ ಶೆಟ್ರವರ ಬದುಕಿನ ಯಶಸ್ಸಿನ ಹಿಂದಿರುವುದು ಅವರ ಶ್ರಮ ಮಾತ್ರವಲ್ಲ; ಮಾನವ ಸಂಬಂಧಗಳಿಗೆ ಅವರು ನೀಡಿರುವ ಮಹತ್ವವೂ ಆಗಿದೆ. ಆತ್ಮೀಯತೆ, ವಿಶ್ವಾಸ ಮತ್ತು ಸಹೃದಯತೆಯಿಂದ ಅವರು ಕಟ್ಟಿಕೊಂಡಿರುವ ಸಂಬಂಧಗಳು ಅವರ ವ್ಯಕ್ತಿತ್ವದ ನಿಜವಾದ ಸಂಪತ್ತಾಗಿವೆ. ಅವರ 84ನೇ ವಯಸ್ಸಿನಲ್ಲಿಯೂ ಉತ್ಸಾಹ, ಆತ್ಮವಿಶ್ವಾಸ ಮತ್ತು ಸಮಾಜದ ಬಗ್ಗೆ ಕಾಳಜಿಯನ್ನು ಉಳಿಸಿಕೊಂಡಿರುವ ಟಿ. ಆರ್. ಅಶ್ವತ್ಥನಾರಾಯಣ ಶೆಟ್ರವರು ಯುವಜನತೆಗೆ ಆದರ್ಶಪ್ರಾಯರು. ಅವರ ಜೀವನ ಇನ್ನೂ ಅನೇಕ ವರ್ಷಗಳ ಕಾಲ ಆರೋಗ್ಯ, ಸಂತೋಷ ಹಾಗೂ ಸಾರ್ಥಕತೆಯಿಂದ ಕೂಡಿರಲೆಂದು ಹಾರೈಸೋಣ.

ಶತಂ ಜೀವ ಶರದೋ ವರ್ಧಮಾನಃ
ಶತಂ ಪಶ್ಯ ಶರದೋ ಜೀವಮಾನಃ ll

ಅಶ್ವತ್ಥನಾರಾಯಣ ಶೆಟ್ರವರಂತಹ ವ್ಯಕ್ತಿತ್ವಗಳು ಸಮಾಜದ ನಿಜವಾದ ಸಂಪತ್ತು; ಅವರ ಬದುಕು ಅನೇಕರಿಗೆ ಸ್ಫೂರ್ತಿಯ ಬೆಳಕಾಗಿದೆ. ವ್ಯಕ್ತಿಯ ಮಹತ್ವವು ಅವನು ಹೊಂದಿರುವ ಸಂಪತ್ತಿನಿಂದಲ್ಲ, ಅವನು ಸಂಪಾದಿಸಿರುವ ಗೌರವ ಮತ್ತು ಮಾನವೀಯ ಮೌಲ್ಯಗಳಿಂದ ಅಳೆಯಲ್ಪಡುತ್ತದೆ. ಈ ಮಾತಿಗೆ ಜೀವಂತ ಉದಾಹರಣೆಯಾಗಿರುವವರು ಟಿ.ಆರ್. ಅಶ್ವತ್ಥನಾರಾಯಣ ಶೆಟ್ರವರು. ತಮ್ಮ ಸರಳತೆ, ಸೌಜನ್ಯ ಮತ್ತು ಸಮಾಜಮುಖಿ ಚಿಂತನೆಗಳಿಂದ ಅವರು ಅಸಂಖ್ಯಾತ ಜನರ ಪ್ರೀತಿ ಹಾಗೂ ಗೌರವವನ್ನು ಗಳಿಸಿದ್ದಾರೆ. ಇಂತಹ ಮಹನೀಯರು ನಮ್ಮ ಶಿವಮೊಗ್ಗದಲ್ಲಿ ಇರುವುದು ನಮಗೆ ಅತ್ಯಂತ ಹೆಮ್ಮೆಯ ವಿಷಯ.

ಇವರ ಈ ಸಮಾಜಮುಖಿ ಕಾರ್ಯಗಳು ಎಲ್ಲರಿಗೂ ಆದರ್ಶ ಹಾಗೂ ಅನುಕರಣೀಯ. ಹಾಗಾಗಿಯೇ ಇಂದು ಶಿವಮೊಗ್ಗ ಸಿಟಿಜನ್ ಫೋರಂ ನಾಗರೀಕ ಅಭಿನಂದನೆಯನ್ನು ಸಂಜೆ ಕುವೆಂಪು ರಂಗಮಂದಿರದಲ್ಲಿ ಸಲ್ಲಿಸುತ್ತಿದೆ. ನಾವೆಲ್ಲರೂ ಭಾಗವಹಿಸಿ ಕಾರ್ಯಕ್ರಮ ಚಂದಗಾಣಿಸೋಣ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: Ashwathnarayana ShettyLocal NewsMalnad NewsShimogaShivamoggaShivamogga NewsSimple personalityಅಶ್ವತ್ಥನಾರಾಯಣ ಶೆಟ್ಟಿವಿಶೇಷ ಲೇಖನಸರಳ ವ್ಯಕ್ತಿತ್ವ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

Elderly Woman Found Dead in Decomposed State in Shivamogga

Next Post

ರೌಡಿಶೀಟರ್ ನರಸಿಂಹನ ಹತ್ಯೆ: ಐವರ ಬಂಧನ

kalpa News

kalpa News

Next Post
Shikaripura Kidnap Four Arrest

ರೌಡಿಶೀಟರ್ ನರಸಿಂಹನ ಹತ್ಯೆ: ಐವರ ಬಂಧನ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL