No Result
View All Result
International Yoga Day in SWR Bengaluru
English Articles

SWR | Celebrates International Yoga Day with Enthusiastic Participation

by ಕಲ್ಪ ನ್ಯೂಸ್
June 23, 2026
0

Kalpa Media House  |  Bengaluru  | The South Western Railway Bengaluru Division celebrated the 12th International Yoga Day with a...

Read moreDetails
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Periodicity of Bhubaneswar–Yesvantpur Special Train Extended

June 19, 2026
  • Advertise With Us
  • Grievances
  • About Us
  • Contact Us
Tuesday, June 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಸಿನೆಮಾ

ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಕಂಬಾರರ ಗೀತೆಗೆ ಹೊಸ ಜೀವ

“ಮಾಯಾದ ಮನದ ಭಾರ” ಹಾಡು ಬಿಡುಗಡೆ; AI ತಂತ್ರಜ್ಞಾನ ಬಳಕೆಯ ವಿಶೇಷತೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 23, 2026
in ಸಿನೆಮಾ
0
Veera Kathakara Sambhrama
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನಟಿ, ನಿರ್ಮಾಪಕಿ ಹಾಗೂ ನಿರ್ದೇಶಕಿ ಸುಷ್ಮಾ ವೀರ್ ರಂಗಗೀತೆ ಪರಂಪರೆಗೆ ಹೊಸ ಚೈತನ್ಯ ತುಂಬುವ ನಿಟ್ಟಿನಲ್ಲಿ “ವೀರ ಕಥಾಕರ” ಸಂಸ್ಥೆಯ ಮೂಲಕ “ವೀರ ರಂಗ ಸಂಭ್ರಮ K5” ಎಂಬ ಸಮಾರಂಭವನ್ನು ಆಯೋಜಿಸಿದರು. ಈ ಸಂದರ್ಭದಲ್ಲಿ ಡಾ. ಚಂದ್ರಶೇಖರ್ ಕಂಬಾರ ಅವರ ಪ್ರಸಿದ್ಧ “ಮಾಯಾದ ಮನದ ಭಾರ” ಗೀತೆಯನ್ನು ಲೋಕಾರ್ಪಣೆ ಮಾಡಲಾಯಿತು.

ಹಾಡನ್ನು ವರನಟ ಡಾ. ರಾಜಕುಮಾರ್ ಪುತ್ರಿ ಲಕ್ಷ್ಮೀ ಗೋವಿಂದರಾಜು ಹಾಗೂ ಎಸ್.ಎ. ಗೋವಿಂದರಾಜು ಅನಾವರಣಗೊಳಿಸಿದರು. ಸಮಾರಂಭದಲ್ಲಿ ನಿರ್ದೇಶಕ ಪಿ. ಶೇಷಾದ್ರಿ, ನಟ ಸುಚೇಂದ್ರ ಪ್ರಸಾದ್, ಡಾ. ಸಿ. ಸೋಮಶೇಖರ್, ನಟ ಸುಂದರರಾಜ್, ಕೊಂಡಜ್ಜಿ ಮೋಹನ್, ಪ್ರಕಾಶ್ ರಾಘವಾಚಾರ್ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಜೊತೆಗೆ ಗುಬ್ಬಿ ವೀರಣ್ಣ ಅವರ ಕುಟುಂಬದ ಸದಸ್ಯರು ಸಹ ಭಾಗವಹಿಸಿದ್ದರು.

Also Read>> ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

ಈ ರಂಗಗೀತೆ ದಕ್ಷಿಣ ಭಾರತದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನ ಬಳಸಿಕೊಂಡು ರೂಪುಗೊಂಡಿರುವುದು ವಿಶೇಷವಾಗಿದ್ದು, ಪ್ರೇಕ್ಷಕರ ಗಮನ ಸೆಳೆಯಿತು.

ಕಾರ್ಯಕ್ರಮದಲ್ಲಿ ಮಾತನಾಡಿದ ಲಕ್ಷ್ಮೀ ಗೋವಿಂದರಾಜು, “ಸುಷ್ಮಾ ನಮ್ಮ ಕುಟುಂಬದವರಂತೆ. ಅವರ ಹೊಸ ಪ್ರಯತ್ನ ಯಶಸ್ವಿಯಾಗಲಿ” ಎಂದು ಹಾರೈಸಿದರು. ನಿರ್ದೇಶಕ ಪಿ. ಶೇಷಾದ್ರಿ ಅವರು ಸುಷ್ಮಾ ಅವರ ಪರಿಶ್ರಮವನ್ನು ಮೆಚ್ಚಿ, “ಅವರು ಸಕಲಕಲಾವಲ್ಲಭೆ” ಎಂದು ಹೇಳಿದರು.PES Public School Shivamoggaನಟ ಸುಚೇಂದ್ರ ಪ್ರಸಾದ್ ಮಾತನಾಡಿ, “ಕಾಲಗರ್ಭದಲ್ಲಿ ಕಳೆದುಹೋಗುತ್ತಿದ್ದ ರಂಗಗೀತೆಗಳನ್ನು ಸುಷ್ಮಾ ಮತ್ತೆ ಜನರಿಗೆ ತಲುಪಿಸುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟರು. ಡಾ. ಸಿ. ಸೋಮಶೇಖರ್ ಅವರು ಸುಷ್ಮಾ ಅವರ ಧ್ವನಿಯನ್ನು ಉಷಾ ಉತ್ತಪ್ಪ ಅವರ ಧ್ವನಿಗೆ ಹೋಲಿಕೆ ಮಾಡಿದರು.

ಸುಷ್ಮಾ ವೀರ್ ಮಾತನಾಡಿ, “K5 ಎಂದರೆ ಕರ್ನಾಟಕ, ಕನ್ನಡ, ಕಾರಂತ, ಕಾರ್ನಾಡ್ ಹಾಗೂ ಕಂಬಾರ. ಶಿವರಾಮ ಕಾರಂತ, ಗಿರೀಶ್ ಕಾರ್ನಾಡ್ ಹಾಗೂ ಚಂದ್ರಶೇಖರ್ ಕಂಬಾರರ ಕೃತಿಗಳನ್ನು ವಿಶೇಷವಾಗಿ ಯುವಜನತೆಗೆ ಪರಿಚಯಿಸುವುದು ನಮ್ಮ ಉದ್ದೇಶ” ಎಂದರು. ಮುಂದಿನ ದಿನಗಳಲ್ಲಿ ಈ ದಿಗ್ಗಜರ ಕುರಿತಾಗಿ ದೊಡ್ಡ ಮಟ್ಟದ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯೂ ಇದೆ ಎಂದು ತಿಳಿಸಿದರು.

Also Read>> ನೈರುತ್ಯ ರೈಲ್ವೆ ಪ್ರಯಾಣಿಕರ ಜಾಗೃತಿ ಅಭಿಯಾನ: ಓಡಿಹೋದ ಇಬ್ಬರು ಮಕ್ಕಳನ್ನು ರಕ್ಷಿಸಿದ RPF

ಈ ಗೀತೆಯನ್ನು ಮೂಲತಃ ಟಿ.ಎಸ್. ನಾಗಾಭರಣ ನಿರ್ದೇಶನದ “ನಾಗಮಂಡಲ” ಚಿತ್ರದಲ್ಲಿ ಬಳಸಲಾಗಿದ್ದು, ಮೂಲ ಸಂಗೀತ ಸಂಯೋಜನೆ ಸಿ. ಅಶ್ವಥ್ ಅವರದು. ಇದೀಗ ಅದೇ ಗೀತೆಯನ್ನು ಸುಷ್ಮಾ ವೀರ್ ತಮ್ಮದೇ ಕಂಠದಲ್ಲಿ ಹಾಡಿರುವುದು ವಿಶೇಷವಾಗಿದ್ದು, ಕಾರ್ಯಕ್ರಮದ ಆರಂಭದಲ್ಲೇ ತಮ್ಮ ಗಾಯನದಿಂದ ಮೆಚ್ಚುಗೆ ಪಡೆದರು.

ಯುವ ಗಾಯಕಿಯರಾದ ಕಾವ್ಯ ಮತ್ತು ಕವನ ಸಹ ಗಾಯನದಲ್ಲಿ ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಸುಷ್ಮಾ ಅವರ ಕಂಠವನ್ನು “ಕಂಚಿನ ಕಂಠ” ಎಂದು ಕೊಂಡಾಡಿದ ಗಣ್ಯರು, ರಂಗಗೀತೆಗಳಿಗೆ ಅವರು ಅತ್ಯಂತ ಸೂಕ್ತ ಧ್ವನಿ ಹೊಂದಿದ್ದಾರೆ ಎಂದು ಶ್ಲಾಘಿಸಿದರು.ನಮ್ಮ ವೀರ ಕಥಾಕರ ಸಂಸ್ಥೆಯಿಂದ “ವೀರ ಸಂಭ್ರಮ K5” ಎಂಬ ಸಮಾರಂಭ ಆಯೋಜಿಸಿದ್ದೇವೆ. ಇದು ರಂಗಗೀತೆಗಳ ಹೊಸ ಅಲೆ ಅನಾವರಣ. ಈಗಿನ ಯುವಜನತೆಗೆ ರಂಗಗೀತೆಗಳನ್ನು‌ ಪರಿಚಯಿಸುವುದೇ “ವೀರ ಸಂಭ್ರಮ”ದ ಮೂಲ ಉದ್ದೇಶ. ಇನ್ನೂ, K5 ಅಂದರೆ, ಕರ್ನಾಟಕ, ಕನ್ನಡ, ಕಾರಂತ, ಕಾರ್ನಾಡ್ ಹಾಗೂ ಕಂಬಾರ ಎಂದು.  ಶಿವರಾಮ ಕಾರಂತ, ಗಿರೀಶ್ ಕಾರ್ನಾಡ್ ಹಾಗೂ ಚಂದ್ರಶೇಖರ್ ಕಂಬಾರರ ಹಾಡುಗಳನ್ನು ಜನರಿಗೆ ತಲುಪಿಸುವ,  ವಿಶೇಷವಾಗಿ ಯುವಜನತೆಗೆ ಮಟ್ಟಿಸುವ ಉದ್ದೇಶ. ಮುಂದಿನ ದಿನಗಳಲ್ಲಿ ಈ ಮೂವರು ದಿಗ್ಗಜರ ಕುರಿತು ದೊಡ್ದ ಸಮಾರಂಭ ಮಾಡುವ ಯೋಜನೆ ಕೂಡ ಇದೆ. ಇಂದು “ವೀರ ಸಂಭ್ರಮ”ದ ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬರರ ” ಮಾಯಾದ ಮನದ ಭಾರ” ಹಾಡನ್ನು ಬಿಡುಗಡೆ ಮಾಡಿದ್ದೇವೆ. ಜಂಕಾರ್ ಮ್ಯೂಸಿಕ್ ಮೂಲಕ ಈ ಹಾಡು ಬಿಡುಗಡೆಯಾಗಿದೆ.Veera Kathakara Sambhrama

ಈ ಹಾಡನ್ನು ಟಿ.ಎಸ್ ನಾಗಾಭರಣ ನಿರ್ದೇಶನದ  “ನಾಗ ಮಂಡಲ” ಚಿತ್ರದಲ್ಲಿ ಬಳಸಿಕೊಳ್ಳಲಾಗಿತ್ತು. ಮೂಲ ಸ್ವರ ಸಂಯೋಜನೆ ಮಾಡಿದ್ದು ಸಿ.ಅಶ್ವಥ್ ಅವರು. ಈಗ ಈ‌ ಹಾಡನ್ನು ನಾನು ಹಾಡುವ ಪ್ರಯತ್ನ ಮಾಡಿದ್ದೇನೆ. ನಿರ್ದೇಶಕ ನಾಗಾಭರಣ ಅವರು ಕೂಡ ನನ್ನ ಗಾಯನದ ಬಗ್ಗೆ ಮೆಚ್ಚುಗೆ ಸೂಚಿಸಿರುವುದು ಸಂತೋಷವಾಗಿದೆ. ಮುಂದೆ ಕೂಡ ಅನೇಕ ರಂಗಗೀತೆಗಳು ನಮ್ಮ ಸಂಸ್ಥೆಯ ಮೂಲಕ ಲೋಕಾರ್ಪಣೆಯಾಗಲಿದೆ.

Also Read>> ಕೊಲ್ಲಂ | ಬಸ್ ನಿಲ್ದಾಣಕ್ಕೆ ಟಿಪ್ಪರ್ ಲಾರಿ ಡಿಕ್ಕಿ, ಮಗು ಸೇರಿ ಮೂವರು ಸಾವು

ಸಮಾರಂಭಕ್ಕೆ ಆಗಮಿಸಿದ ಗಣ್ಯರಿಗೆ ಹಾಗೂ ಕುಟುಂಬ ಸದಸ್ಯರಿಗೆ ಧನ್ಯವಾದ ಎಂದರು ವೀರ ಕಥಾಕರ ಸಂಸ್ಥೆ ಸ್ಥಾಪಕಿ ಹಾಗೂ “ವೀರ ಸಂಭ್ರಮ K5” ಸಮಾರಂಭದ ಆಯೋಜಕಿ ಸುಷ್ಮಾ ವೀರ್.  ತಮ್ಮದೇ ಕಂಠಸಿರಿಯಲ್ಲಿ  ರಂಗಗೀತೆ ಹಾಡುವ ಮೂಲಕ ಸುಷ್ಮ ವೀರ್ ಸಮಾರಂಭಕ್ಕೆ ಚಾಲನೆ ನೀಡಿದ್ದು ವಿಶೇಷವಾಗಿತ್ತು. ಯುವ ಗಾಯಕಿಯರಾದ ಕಾವ್ಯ ಹಾಗೂ ಕವನ ಸಹ ಸುಷ್ಮಾ ಅವರ ಜೊತೆಗೆ ಗಾಯನಕ್ಕೆ ಜೊತೆಯಾದರು.

ಗುಬ್ಬಿ ವೀರಣ್ಣ ಅವರ ಕುಟುಂಬ ಕಂಚಿನ ಕಂಠಕ್ಕೆ ಹೆಸರುವಾಸಿ. ಅದೇ  ಕಂಚಿನ ಕಂಠ ನಮ್ಮ ಸುಷ್ಮಾ ಅವರದು. ರಂಗಗೀತೆಗಳಿಗೆ ಹೇಳಿ ಮಾಡಿಸಿದ ಕಂಠ ಅವರದು ಎಂದು ಸಮಾರಂಭಕ್ಕೆ ಆಗಮಿಸಿದ್ದ ಎಲ್ಲಾ ಗಣ್ಯರು ಒಕ್ಕೊರಲ ಅಭಿಪ್ರಾಯ ಪಟ್ಟು, ಸುಷ್ಮಾ ಅವರ ಗಾಯನವನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

(ಮಾಹಿತಿ: ರಾಘವೇಂದ್ರ ಅಡಿಗ)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited

Tags: AI TechnologyAI ತಂತ್ರಜ್ಞಾನHeroic Ranga Sambraham K5Kannada MoviesKannada News WebsiteLatest News KannadaMayada Manada Bharasandalwoodಬೆಂಗಳೂರುವೀರ ಕಥಾಕರವೀರ ರಂಗ ಸಂಭ್ರಮ K5
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

Next Post

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

ಶಿವಮೊಗ್ಗ | ಕೊಡಚಾದ್ರಿ ಚಿಟ್ಸ್ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಪರಶುರಾಮ್

June 23, 2026
Shivamogga MLC Inspection

ಶಿವಮೊಗ್ಗ | ಖಾಸಗಿ ಬಸ್ ನಿಲ್ದಾಣದ ಅವ್ಯವಸ್ಥೆಗೆ ಕಿಡಿಕಾರಿದ ಶಾಸಕ ಚನ್ನಬಸಪ್ಪ

June 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಜೂನ್ 25 ರಂದು ಭುವನೇಶ್ವರದಿಂದ ಬೆಂಗಳೂರಿಗೆ ವಿಶೇಷ ರೈಲು

June 23, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಮನೆಯಲ್ಲಿ ಮಲಗಿದ್ದಾಗಲೇ ಕಳ್ಳತನಕ್ಕೆ ಯತ್ನ | ಸಿಸಿಟಿವಿ ಒಡೆದು ಬಾಗಿಲು ಮುರಿಯಲು ಯತ್ನ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL