ಕಲ್ಪ ಮೀಡಿಯಾ ಹೌಸ್ | ವಯನಾಡು |
ಕೇರಳದ ವಯನಾಡು ಜಿಲ್ಲೆಯಲ್ಲಿ ಮಂಗಳವಾರ ಸಂಭವಿಸಿದ ಭಾರೀ ಭೂಕುಸಿತವು ಭೀತಿ ಮೂಡಿಸಿದ್ದು, ಒಬ್ಬರು ಸಾವನ್ನಪ್ಪಿ ಹಲವರು ಗಾಯಗೊಂಡಿರುವ ಘಟನೆ ವರದಿಯಾಗಿದೆ.
A landslide at the Kalladi tunnel work site in #Wayanad blocked the road and injured 5 people. They have been taken to the hospital. No deaths have been reported. Work at the site had already been stopped because of heavy rain. The area received 265 mm of rain in the last 24… pic.twitter.com/3LrpPhR0gM
— Ashish (@KP_Aashish) July 7, 2026
ಮೆಪ್ಪಾಡಿ ಸಮೀಪದ ಕಾಲಡಿ ಪ್ರದೇಶದಲ್ಲಿ ಸಂಭವಿಸಿದ ಈ ದುರಂತದಲ್ಲಿ ಇನ್ನೂ ಹಲವರು ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ರಕ್ಷಣಾ ಹಾಗೂ ಶೋಧ ಕಾರ್ಯ ಭರದಿಂದ ಮುಂದುವರಿದಿದೆ.
ಮೀನಾಕ್ಷಿ ಸೇತುವೆ ಬಳಿಯಲ್ಲಿ ನಡೆಯುತ್ತಿದ್ದ ವಯನಾಡು–ಮಲ್ಲಾಪುರಂ ಸುರಂಗ ರಸ್ತೆ ಯೋಜನೆ ಪ್ರದೇಶದಲ್ಲಿ ಏಕಾಏಕಿ ಮಣ್ಣು ಮಿಶ್ರಿತ ಕೆಸರು ಸುನಾಮಿಯಂತೆ ಹರಿದುಬಂದು ಭೂಕುಸಿತ ಉಂಟಾಗಿದೆ. ಭೂಕುಸಿತದ ರಭಸಕ್ಕೆ ಟ್ಯಾಂಕರ್ವೊಂದು ಕೊಚ್ಚಿಕೊಂಡು ಬಂದಿದ್ದು, ಸ್ಥಳದಲ್ಲಿದ್ದ ಜನರು ಪ್ರಾಣಭೀತಿಯಿಂದ ದಿಕ್ಕಾಪಾಲಾಗಿ ಓಡಿಹೋದರು. ಈ ಭೀಕರ ದೃಶ್ಯಗಳ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.
Also read: ಶಿವಮೊಗ್ಗ | ಜಯನಗರ ಪೊಲೀಸ್ ಠಾಣೆಗೆ ಐಜಿಪಿ ರವಿಕಾಂತೇಗೌಡ ಭೇಟಿ
ಭೂಕುಸಿತದ ಪರಿಣಾಮವಾಗಿ ಖಾಸಗಿ ಬಸ್ವೊಂದು ಮೀನಾಕ್ಷಿ ನದಿಗೆ ಉರುಳಿದ್ದು, ಅದರ ಅರ್ಧಭಾಗ ನೀರಿನಲ್ಲಿ ಮುಳುಗಿದೆ. ಬಸ್ನಲ್ಲಿದ್ದವರನ್ನು ರಕ್ಷಿಸಲು ತುರ್ತು ಕ್ರಮ ಕೈಗೊಳ್ಳಲಾಗಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳ, ಪೊಲೀಸರು ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಆರಂಭಿಸಿವೆ. ನಾಪತ್ತೆಯಾದವರಿಗಾಗಿ ವ್ಯಾಪಕ ಶೋಧ ಕಾರ್ಯ ನಡೆಯುತ್ತಿದೆ.
ಸುರಂಗ ನಿರ್ಮಾಣ ಕಾರ್ಯ ನಡೆಯುತ್ತಿದ್ದ ಪ್ರದೇಶದಲ್ಲಿ ಭೂಕುಸಿತದ ಅವಶೇಷಗಳಡಿ ಸಿಲುಕಿದ್ದ ಮೂವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಘಟನೆಯಲ್ಲಿ ಕನಿಷ್ಠ ಐವರು ಗಾಯಗೊಂಡಿದ್ದು, ಅವರಿಗೆ ಸಮೀಪದ ಆಸ್ಪತ್ರೆಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.
ಗಮನಾರ್ಹವಾಗಿ, 2024ರಲ್ಲಿ ವಯನಾಡುನಲ್ಲಿ ಸಂಭವಿಸಿದ್ದ ಭೀಕರ ಭೂಕುಸಿತದಲ್ಲಿ 250ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಇದೀಗ ಮತ್ತೆ ಅದೇ ಪ್ರದೇಶದಲ್ಲಿ ಇಂತಹ ದುರಂತ ಸಂಭವಿಸಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ವಯನಾಡು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದ್ದು, ಜನರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









