ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಲದ ಬಾಧೆಯಿಂದ ಮನನೊಂದ ಲಗೇಜ್ ಆಟೋ ಚಾಲಕ ಮಂಜುನಾಥ್ (35) ಅವರು ಶಿವಮೊಗ್ಗದ (Shivamogga) ಶರಾವತಿ ನಗರ ಬಡಾವಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಲಭ್ಯವಿರುವ ಮಾಹಿತಿಯ ಪ್ರಕಾರ, ಮಂಜುನಾಥ್ ಅವರು ತಮ್ಮ ಆಟೋ ಮೇಲೆ ಸುಮಾರು ₹30,000 ಸಾಲ ಮಾಡಿಕೊಂಡಿದ್ದರು. ಕಾರಣಾಂತರಗಳಿಂದ ಸಾಲವನ್ನು ಸಕಾಲದಲ್ಲಿ ತೀರಿಸಲು ಸಾಧ್ಯವಾಗದ ಕಾರಣ, ಸಾಲ ನೀಡಿದವರು ಅವರ ಆಟೋವನ್ನು ವಶಪಡಿಸಿಕೊಂಡಿದ್ದರು ಎನ್ನಲಾಗಿದೆ.

Also read: Indian Railway | Danapur and Bengaluru Special Trains Extension
Shivamogga | ದೊಡ್ಡಪೇಟೆ ಠಾಣೆಯಲ್ಲಿ ದೂರು
ಈ ಸಂಬಂಧ ಮಂಜುನಾಥ್ ಅವರ ಪತ್ನಿ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಇಬ್ಬರು ವ್ಯಕ್ತಿಗಳು ತಮ್ಮ ಪತಿಯನ್ನು ಆತ್ಮಹತ್ಯೆಗೆ ಪ್ರಚೋದಿಸಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.
ಈ ಘಟನೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಸತ್ಯಾಸತ್ಯತೆ ಪೊಲೀಸ್ ತನಿಖೆಯ ಬಳಿಕವೇ ಸ್ಪಷ್ಟವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









