No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

Koppal | ಕಿರ್ಲೋಸ್ಕರ್’ನಲ್ಲಿ ನಿವೃತ್ತಿ ಹೊಂದಿದ ಇಬ್ಬರು ಹಿರಿಯ ಸಿಬ್ಬಂದಿಗೆ ಸನ್ಮಾನ

kalpa News by kalpa News
July 29, 2026
in ಕೊಪ್ಪಳ
0
kirloskar koppal retirement honour sudheendra nagaraj
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  |

ಕೊಪ್ಪಳದ (Koppal) ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ (KFIL) ಎರಕ (Foundry) ವಿಭಾಗದಲ್ಲಿ ಸುಮಾರು 31 ವರ್ಷಗಳ ಕಾಲ ನಿಷ್ಠೆಯಿಂದ ಸೇವೆ ಸಲ್ಲಿಸಿದ ಇಬ್ಬರು ಹಿರಿಯ ಸಿಬ್ಬಂದಿ — ಎಂ.ಕೆ. ಸುಧೀಂದ್ರರಾವ್ ಹಾಗೂ ಎಂ.ಜಿ. ನಾಗರಾಜ್ — ಅವರು ಜುಲೈ 27 ಗೌರವಯುತವಾಗಿ ನಿವೃತ್ತಿ ಹೊಂದಿದ್ದು, ಈ ಅಂಗವಾಗಿ ಸಂಸ್ಥೆಯ ವತಿಯಿಂದ ಭಾವಪೂರ್ಣ ಬೀಳ್ಕೊಡುಗೆ ಹಾಗೂ ನೀಡಿ, ಆತ್ಮೀಯವಾಗಿ ಸನ್ಮಾನ ಮಾಡಲಾಯಿತು.

ಕಾರ್ಯಕ್ರಮದಲ್ಲಿ ನಿವೃತ್ತರಾಗುತ್ತಿರುವ ಸಿಬ್ಬಂದಿಗೆ ಪುಷ್ಪಗುಚ್ಛ, ಸ್ಮರಣಿಕೆ ಮತ್ತು ಶಾಲು ಹೊದಿಸಿ ಗೌರವ ಸಲ್ಲಿಸಲಾಯಿತು. ಮೂರು ದಶಕಗಳಿಗೂ ಅಧಿಕ ಕಾಲ ಸಂಸ್ಥೆಯ ಬೆಳವಣಿಗೆಯಲ್ಲಿ ಅವರು ನೀಡಿದ ಅಮೂಲ್ಯ ಕೊಡುಗೆಯನ್ನು ಗಣ್ಯರು ಸ್ಮರಿಸಿದರು. ಅವರ ಕರ್ತವ್ಯನಿಷ್ಠೆ, ಸಮಯಪಾಲನೆ, ಶಿಸ್ತು ಹಾಗೂ ತಂಡದ ಮನೋಭಾವವನ್ನು ವಿಶೇಷವಾಗಿ ಕೊಂಡಾಡಲಾಯಿತು.

ಸಮಾರಂಭದಲ್ಲಿ ಎರಕ ವಿಭಾಗದ ಹಿರಿಯ ಉಪಾಧ್ಯಕ್ಷರಾದ ಜಿ.ಎಸ್. ಕೃಷ್ಣಮೂರ್ತಿ, ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಉಪಾಧ್ಯಕ್ಷರಾದ ಶಿವಯ್ಯ ಬಿ. ಸ್ವಾಮಿ, ಕಾರ್ಮಿಕ ಸಂಘದ ಮುಖಂಡರಾದ ಕಂಠಿ ಬಸವರಾಜ್ ಸೇರಿದಂತೆ ವಿವಿಧ ವಿಭಾಗಗಳ ಹಿರಿಯ ಅಧಿಕಾರಿಗಳು, ಮೇಲ್ವಿಚಾರಕರು, ಸಹೋದ್ಯೋಗಿಗಳು ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಉಪಸ್ಥಿತರಿದ್ದರು.Kumadvathi College Shikariuraಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಜಿ.ಎಸ್. ಕೃಷ್ಣಮೂರ್ತಿ ಅವರು, “ಸಂಸ್ಥೆಯ ಬೆಳವಣಿಗೆಯಲ್ಲಿ ಪ್ರತಿಯೊಬ್ಬ ಉದ್ಯೋಗಿಯ ಪಾತ್ರ ಮಹತ್ವದ್ದಾಗಿದೆ. 31 ವರ್ಷಗಳ ಕಾಲ ನಿರಂತರ ಸೇವೆ ಸಲ್ಲಿಸಿರುವ ಸುಧೀಂದ್ರರಾವ್ ಹಾಗೂ ನಾಗರಾಜ್ ಅವರ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ. ಅವರ ಅನುಭವ ಮತ್ತು ಶಿಸ್ತು ಯುವ ಉದ್ಯೋಗಿಗಳಿಗೆ ಆದರ್ಶವಾಗಿದೆ,” ಎಂದು ಹೇಳಿದರು.

ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಉಪಾಧ್ಯಕ್ಷರಾದ ಶಿವಯ್ಯ ಬಿ. ಸ್ವಾಮಿ ಅವರು, “ಸಂಸ್ಥೆಯೊಂದಿಗಿನ ದೀರ್ಘಕಾಲದ ಬಾಂಧವ್ಯವು ಕೇವಲ ಉದ್ಯೋಗವಲ್ಲ, ಅದು ಬದ್ಧತೆಯ ಪ್ರತೀಕವಾಗಿದೆ. ಇಂತಹ ಸಮರ್ಪಿತ ಸಿಬ್ಬಂದಿಯನ್ನು ಗೌರವಿಸುವುದು ಸಂಸ್ಥೆಗೆ ಹೆಮ್ಮೆಯ ವಿಷಯ. ನಿವೃತ್ತ ಜೀವನದಲ್ಲಿಯೂ ಅವರು ಉತ್ತಮ ಆರೋಗ್ಯ, ಸಂತೋಷ ಮತ್ತು ನೆಮ್ಮದಿಯನ್ನು ಹೊಂದಿರಲಿ,” ಎಂದು ಶುಭ ಹಾರೈಸಿದರು.

ಕಾರ್ಮಿಕ ಸಂಘದ ಮುಖಂಡರಾದ ಕಂಠಿ ಬಸವರಾಜ್ ಅವರು ನಿವೃತ್ತ ಸಿಬ್ಬಂದಿಯೊಂದಿಗೆ ಕಳೆದ ವರ್ಷಗಳ ಒಡನಾಟವನ್ನು ಸ್ಮರಿಸಿ, ಅವರ ಸರಳತೆ, ಸಹಕಾರ ಮನೋಭಾವ ಮತ್ತು ಉತ್ತಮ ಬಾಂಧವ್ಯವನ್ನು ಮೆಚ್ಚುಗೆ ವ್ಯಕ್ತಪಡಿಸಿದರು.

Also Read>> ವ್ಯಾಸ ಪೂರ್ಣಿಮಾ – ಗುರು ಪೂರ್ಣಿಮೆಯ ಮಹತ್ವ

ನಿವೃತ್ತರಾದ ಎಂ.ಕೆ. ಸುಧೀಂದ್ರರಾವ್ ಮತ್ತು ಎಂ.ಜಿ. ನಾಗರಾಜ್ ಅವರು ತಮ್ಮ ಸೇವಾ ಪಯಣದ ಅನುಭವಗಳನ್ನು ಹಂಚಿಕೊಂಡು, ಸಂಸ್ಥೆಯ ಆಡಳಿತ ಮಂಡಳಿ, ಹಿರಿಯ ಅಧಿಕಾರಿಗಳು, ಸಹೋದ್ಯೋಗಿಗಳು ಹಾಗೂ ಕಾರ್ಮಿಕ ಸಂಘದ ಸದಸ್ಯರು ನೀಡಿದ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದರು.

ಸಮಾರಂಭದ ಅಂತ್ಯದಲ್ಲಿ ಉಪಸ್ಥಿತರಿದ್ದ ಎಲ್ಲರೂ ನಿವೃತ್ತರಾದ ಸಿಬ್ಬಂದಿಗೆ ಉತ್ತಮ ಆರೋಗ್ಯ, ಸುಖ, ಸಮೃದ್ಧಿ ಹಾಗೂ ಸಂತೋಷಕರ ಜೀವನಕ್ಕಾಗಿ ಹಾರೈಸಿ ಗೌರವಪೂರ್ವಕವಾಗಿ ಬೀಳ್ಕೊಟ್ಟರು. ಭಾವನಾತ್ಮಕ ಹಾಗೂ ಆತ್ಮೀಯ ವಾತಾವರಣದಲ್ಲಿ ನಡೆದ ಈ ಕಾರ್ಯಕ್ರಮವು ಎಲ್ಲರ ಮನಸ್ಸಿನಲ್ಲಿ ಉಳಿಯುವಂತಾಯಿತು.

Koppal | Emotional Farewell to Two Senior Employees at Kirloskar Ferrous Industries

Two senior employees of Kirloskar Ferrous Industries Limited (KFIL), Mr. M.K. Sudheendra Rao and Mr. M.G. Nagaraj, who served in the Foundry Division for around 31 years with dedication, integrity, and commitment, retired with honour on July 27, 2026. On this occasion, the company organised a heartfelt farewell and felicitation ceremony.

During the programme, the retiring employees were honoured with bouquets, mementoes, and shawls as a mark of respect. Dignitaries recalled their invaluable contribution to the organisation’s growth over three decades and appreciated their discipline, punctuality, dedication, and team spirit.

The event was attended by Senior Vice President of the Foundry Division Mr. G.S. Krishnamurthy, Vice President of Human Resources and Administration Mr. Shivayya B. Swamy, labour union leader Mr. Kanthi Basavaraj, along with senior officials, supervisors, colleagues, and a large number of workers.Addressing the gathering, Mr. G.S. Krishnamurthy said, “Every employee plays a vital role in the growth of an organisation. The contribution of Mr. Sudheendra Rao and Mr. Nagaraj, who have served continuously for 31 years, will always be remembered. Their experience, discipline, and work ethic serve as an inspiration to younger employees.”

Vice President of Human Resources and Administration, Mr. Shivayya B. Swamy, stated, “A long association with an organisation is not just a job, but a symbol of commitment. Honouring such dedicated employees is a matter of pride for the organisation. We wish them good health, happiness, and a peaceful life in their retirement.”

Labour union leader Mr. Kanthi Basavaraj fondly recalled his long association with the retiring employees and appreciated their simplicity, cooperative nature, and strong rapport with colleagues.

Speaking on the occasion, Mr. M.K. Sudheendra Rao and Mr. M.G. Nagaraj shared their experiences and expressed heartfelt gratitude to the management, senior officials, colleagues, and union members for their constant support and encouragement throughout their careers.

At the end of the ceremony, all those present extended their best wishes for a healthy, happy, and prosperous retired life to the two employees and bid them a respectful farewell. The event concluded in an emotional and warm atmosphere, leaving lasting memories for everyone present.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limitedKalpa News Advertising Disclaimer

Tags: Bayalu Seeme NewsFoundryKannada News Websitekirloskar ferrous industries limitedKoppalLatest News Kannadaಎರಕಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕೊಪ್ಪಳಬೀಳ್ಕೊಡುಗೆಸನ್ಮಾನ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ವ್ಯಾಸ ಪೂರ್ಣಿಮಾ – ಗುರು ಪೂರ್ಣಿಮೆಯ ಮಹತ್ವ

Next Post

Mandya | ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ | ವಿಜಯೇಂದ್ರ ಘೋಷಣೆ | ಕಾರಣವೇನು?

kalpa News

kalpa News

Next Post
BJP Protest in Mandya on July 31 Vijayendra Announces

Mandya | ಜು.31ರಂದು ಮಂಡ್ಯದಲ್ಲಿ ಬಿಜೆಪಿ ಪ್ರತಿಭಟನೆ | ವಿಜಯೇಂದ್ರ ಘೋಷಣೆ | ಕಾರಣವೇನು?

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL