ಕಲ್ಪ ಮೀಡಿಯಾ ಹೌಸ್ | ಉಡುಪಿ |
ಶ್ರೀ ಭಂಡಾರಕೇರಿ ಮಠದ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶತೀರ್ಥ ಶ್ರೀಪಾದರ 2026ರ ಚಾತುರ್ಮಾಸ್ಯದ (Chaturmasya) ಅಂಗವಾಗಿ ಬಾರಕೂರಿನ ಮೂಲ ಮಠದಲ್ಲಿ ಆಗಸ್ಟ್ 6ರಂದು ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
Chaturmasya | ಸಾಂಸ್ಕೃತಿಕ ಕಾರ್ಯಕ್ರಮ
ಸಂಜೆ 4ರಿಂದ 5 ಗಂಟೆಯವರೆಗೆ ಕಾಂತೇಶ್ವರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಂಜೆ 5ರಿಂದ 6.20ರವರೆಗೆ ವಿದ್ವಾನ್ ಶ್ರೀ ವಿಜಯಸಿಂಹಾಚಾರ್ಯ ಅವರು ‘ಮಹಾಭಾರತ ಉಪಾಖ್ಯಾನ’ ಕುರಿತು ಪ್ರವಚನ ನೀಡಲಿದ್ದಾರೆ.
Also Read>> Railway Board | 5 Goup ‘A’ ಅಧಿಕಾರಿಗಳಿಗೆ ರೈಲ್ವೆ ಕಠಿಣ ಕ್ರಮ | ಕಾರಣವೇನು?
ಸಂಜೆ 6.20ರಿಂದ 6.30ರವರೆಗೆ ಪರಮಪೂಜ್ಯ ಶ್ರೀ ಶ್ರೀ ವಿದ್ಯೇಶತೀರ್ಥ ಶ್ರೀಪಾದರು ‘ಕೃಷ್ಣನಾಮ ವ್ಯಾಖ್ಯಾನ’ ನಡೆಸಲಿದ್ದಾರೆ. ನಂತರ ಸಂಜೆ 6.30ರಿಂದ ರಾತ್ರಿ 8 ಗಂಟೆಯವರೆಗೆ ಶ್ರೀ ಶ್ರೀಧರ ಹೆಬ್ಬಾರ್ ಮತ್ತು ತಂಡದಿಂದ ತಾಳಮದ್ದಳೆ ಪ್ರದರ್ಶನ ಏರ್ಪಡಿಸಲಾಗಿದೆ.
ಬಾರಕೂರಿನ ಭಂಡಾರಕೇರಿಯಲ್ಲಿರುವ ಶ್ರೀ ಭಂಡಾರಕೇರಿ ಮಠದಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಕಾರ್ಯಕ್ರಮದ ಬಳಿಕ ಆಗಮಿಸುವ ಎಲ್ಲ ಭಕ್ತಾದಿಗಳಿಗೆ ಪ್ರಸಾದ ವಿತರಿಸಲಾಗುವುದು ಎಂದು ಮಠದ ಪ್ರಕಟಣೆ ತಿಳಿಸಿದೆ.
ಎಲ್ಲ ಭಕ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮಠದ ಆಡಳಿತ ಮಂಡಳಿ ಮನವಿ ಮಾಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










