No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ದೃಢ ಸಂಕಲ್ಪದಿಂದ ಹಸಿವನ್ನು ಗೆಲ್ಲಲು ಸಾಧ್ಯ: ರಾಮಚಂದ್ರಾಪುರ ಶ್ರೀ

kalpa News by kalpa News
August 11, 2026
in ಉತ್ತರ ಕನ್ನಡ
0
Hunger - conquered through firm resolve-Raghaveshwara Shri
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಸಾಮಾನ್ಯ ವ್ಯಕ್ತಿಯು ಉಸಿರು ಕಟ್ಟಿ ಕುಳಿತಾಗ ಮರಣ ಸಂಭವಿಸಬಹುದು. ಆದರೆ ಯೋಗಿ ಉಸಿರನ್ನು ಕಟ್ಟಿದಾಗ ಆತ ಸಮಾಧಿ ಸ್ಥಿತಿಗೆ ಏರುತ್ತನೆ. ಭಗವದಾನಂದವನ್ನು ಹೊಂದುತ್ತಾನೆ. ಉಸಿರನ್ನು ನಮ್ಮ ಅಧೀನವಾಗಿಸುವ ಕಲೆ ನಮಗೆ ಕರಗತವಾಗಬೇಕು. ಹಾಗೆಯೇ ಜಠರಾಗ್ನಿಯನ್ನು ನಿಯಂತ್ರಣಕ್ಕೆ ಪಡೆದರೆ ಸಹಜ ಉಪವಾಸ ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು ತಿಳಿಸಿದರು.

ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ‘ಉಪವಾಸ’ದ ಕುರಿತಾಗಿ ಶ್ರೀಗಳು ಆಶೀರ್ವಚನ ನೀಡಿದರು.

ಪ್ರವಚನ ಅನುಗ್ರಹಿಸಿದ , ಶರೀರದಲ್ಲಿ ಎಲ್ಲವೂ ಕೂಡ ನಮ್ಮ ಇಚ್ಛೆಗೆ ಸಹಕಾರಿಯಾಗುವಂತೆ ಭಗವಂತ ರಚಿಸಿದ್ದಾನೆ. ಆದರೆ ಶರೀರಕ್ಕೆ ಹೇಗೆ ಸಂವಹನ ಮಾಡಬೇಕು ಎಂಬ ವಿಷಯ ನಮಗೆ ತಿಳಿದಿರಬೇಕು. ಜಠರಾಗ್ನಿಗೆ ಹಿತ – ಮಿತ – ಮೇಧ್ಯಾಶನವನ್ನು ನೀಡುತ್ತಿದ್ದಾಗ ಅಗ್ನಿಯು ನಮ್ಮ ವಶವಾಗುತ್ತದೆ. ನಾವು ಹೇಳಿದಂತೆ ಕೇಳಲು ಆರಂಭಿಸುತ್ತದೆ. ನಾವು ಅದಕ್ಕೆ ಬೇಕಾಗಿರುವುದನ್ನು ಕೊಟ್ಟಾಗ ಅದು ನಾವು ಹೇಳಿದಂತೆ ಕೇಳುತ್ತದೆ. ಇದನ್ನು ಪ್ರಾಣಿ ಹಾಗೂ ಮನುಷ್ಯರಲ್ಲೂ ಕಾಣಬಹುದಾಗಿದ್ದು, ಇದು ದೇವತೆಗಳಿಗೂ ಅನ್ವಯವಾಗುತ್ತದೆ. ನಾಳೆ ಹಸಿವಾಗಬಾರದು ಎಂದು ವೈಶ್ವಾನರರೂಪಿ ಜಠರಾಗ್ನಿಗೆ ಸಮರ್ಪವಾದ ರೀತಿಯಲ್ಲಿ ಸಂದೇಶವನ್ನು ನೀಡಿದಾಗ ನಮಗೆ ಹಸಿವಿನ ಅರಿವು ಆಗುವುದಿಲ್ಲ ಎಂದು ಅಭಿಪ್ರಾಯಪಟ್ಟರು.

http://kalpa.news/wp-content/uploads/2026/08/WhatsApp-Video-2026-08-09-at-12.57.11-PM.mp4

ಉಪ್ಪಿಟ್ಟಿನ ಕುರಿತಾಗಿ ಆಲೋಚಿಸುತ್ತಾ ಉಪವಾಸವನ್ನು ಮಾಡುವುದು ಸರಿಯಾದ ಕ್ರಮವಲ್ಲ. ದೇವರು ಕೊಟ್ಟಿರುವ ಮನಸ್ಸಿಗೆ ಅಪಾರವಾದ ಶಕ್ತಿಯಿದ್ದು, ನಾವು ಸರಿಯಾಗಿ ಸಂಕಲ್ಪಿಸಿದಾಗ ಆ ಕಾರ್ಯ ನೆರವೇರುತ್ತದೆ. ಸಂಕಲ್ಪ ಗಟ್ಟಿಯಿದ್ದಾಗ ಪ್ರಪಂಚವನ್ನೇ ಬದಲಾಯಿಸಬಹುದು. ದೃಢ ಸಂಕಲ್ಪ ಮಾಡಿದರೆ ಹಸಿವಾಗುವುದಿಲ್ಲ. ಮನಸ್ಸಿಗೆ ಆ ಶಕ್ತಿಯಿದ್ದು, ಇವೆಲ್ಲವೂ ಯಾವುದೋ ಕಾಲದ ಮಾತಲ್ಲ. ಇಂದಿಗೂ ಸಾಧಕರ ಅನುಭವದಲ್ಲಿ ಇರುವ ಸಂಗತಿಗಳು. ಯಾರು ಬೇಕಾದರೂ ಇದನ್ನು ಅನುಭವಿಸಿ ಪರೀಕ್ಷಿಸಬಹುದು. ಮನಸ್ಸಿಗೂ ಜಠರಾಗ್ನಿಗೆ ಗಾಢವಾದ ಸಂಬಂಧವಿದ್ದು, ಮನಸ್ಸಿಗೆ ದುಃಖವಾದರೆ ಹಸಿವಾಗುವುದಿಲ್ಲ. ಇದು ಅಗ್ನಿಯ ಮೇಲೆ ಮನಸ್ಸಿನ ಪರಿಣಾಮವನ್ನು ಸೂಚಿಸುತ್ತದೆ. ಇದನ್ನು ಆಧುನಿಕ ವಿಜ್ಞಾನವೂ ಒಪ್ಪಿದ್ದು, ರಷ್ಯಾದ ವಿಜ್ಞಾನಿ ಇವಾನ್ ಪಾವ್ಲೋವ್ ಈ ಬಗ್ಗೆ ಸುಧೀರ್ಘ ಸಂಶೋಧನೆಯನ್ನು ನಡೆಸಿದ್ದು, ಈ ಸಂಶೋಧನೆಗೆ ನೋಬೆಲ್ ಪುರಸ್ಕಾರವೂ ದೊರೆತಿದೆ.

Also read>> Mysuru to Host Hindustani Classical Vocal Concert on August 16

ಆಹಾರ ದೇಹದಲ್ಲಿದಾಗ ಮನಸ್ಸಿನಲ್ಲಿ ಆಲೋಚನೆಗಳ ಅಲೆ ಏಳುವುದು ಸಾಮಾನ್ಯ. ಏಕೆಂದರೆ ಆಹಾರಕ್ಕೆ ತಾಮಸ ಗುಣವಿದೆ. ಉಪವಾಸವು ತಾಮಸವನ್ನು ದೂರವಿಡುವ ಪ್ರಕ್ರಿಯೆಯಾಗಿದ್ದು, ಖಾಲೆ ಹೊಟ್ಟೆಯು ಧ್ಯಾನಾದಿಗಳಿಗೆ ಪ್ರಶಸ್ತವಾಗಿದೆ. ಧ್ಯಾನ -ಉಪಾಸನೆಗಳನ್ನು ಬ್ರಾಹ್ಮೀ ಮುಹೂರ್ತ ಹಾಗೂ ಸಂಧ್ಯಾಕಾಲದ ಸಮಯದಲ್ಲಿ ಮಾಡಲು ಭಾರತೀಯ ಪರಂಪರೆ ಸೂಚಿಸುತ್ತದೆ. ಸರಿಯಾದ ಆಹಾರ ಕ್ರಮವನ್ನು ಅಳವಡಿಸಿಕೊಂಡರೆ ಈ ಸಮಯದಲ್ಲಿ ಖಾಲಿ ಹೊಟ್ಟೆ ಇರುತ್ತದೆ. ಇದು ಏಕಾಗ್ರತೆಗೆ ಸಹಕಾರಿ ಎಂದ ಶ್ರೀಗಳು, ಉಪವಾಸವು ಸಾಧಕನಿಗೆ ಮುಕ್ತಿಯನ್ನು, ಸಾಮಾನ್ಯ ಮನುಷ್ಯನಿಗೆ ಜೀರ್ಣಶಕ್ತಿಯನ್ನು ಸರಿಪಡಿಸಿ ಸಹಕರಿಸುತ್ತದೆ ಎಂದು ವಿವರಿಸಿದರು.Kumadvathi College Shikariura

15 ದಿನಗಳಿಗೊಮ್ಮೆ ಮಾಡುವ ಉಪವಾಸದಿಂದ ರೋಗಗಳು ಬರುವುದಿಲ್ಲ ಎಂದು ಆಧುನಿಕ ಸಂಶೋಧನೆಯೊಂದು ಹೇಳುತ್ತಿದೆ. ಆದರೆ ಇದು ನಮ್ಮಲ್ಲಿ ಪರಂಪರಾಗತವಾಗಿ ಏಕಾದಶಿ ಎಂಬ ಹೆಸರಿನಲ್ಲಿ ಸಹಸ್ರಾರು ವರ್ಷಗಳಿಂದ ಚಾಲ್ತಿಯಲ್ಲಿದೆ. ಇದು ಭಾರತೀಯ ಪರಂಪರೆಯ ಹೆಚ್ಚುಗಾರಿಕೆಯನ್ನು ತೋರಿಸುತ್ತದೆ ಎಂದರು.

‘ಇಂಟರ್ಮಿಟೆಂಟ್ ಫಾಸ್ಟಿಂಗ್’ (Intermittent Fasting) – ‘ಬ್ರಂಚ್’ (Brunch) ಹೊಸ ಸಂಶೋಧನೆಯಲ್ಲ

ಮಹಾಭಾರತದಲ್ಲಿ ಭೀಷ್ಮರು ಮಧ್ಯಾಹ್ನದ ಸಮಯದಲ್ಲಿ ಹಾಗೂ ಸಂಜೆಯ ನಂತರ ಊಟ ಮಾಡುವುದನ್ನು ಸೂಚಿಸಿದ್ದು, ಇವೆರಡನ್ನು ಹೊರತು ಪಡಿಸಿ ಬೇರೆ ಏನನ್ನೂ ತಿನ್ನಬಾರದು. ಇದನ್ನು ನಿತ್ಯ ಜೀವನದ ಕ್ರಮವಾಗಿಸಿಕೊಂಡರೆ ಅವನನ್ನು ‘ನಿತ್ಯೋಪವಾಸಿ’ ಎನ್ನಲಾಗುತ್ತದೆ ಎಂದಿದ್ದಾರೆ. ಹಾಗಾಗಿ ಇಂದು ಜನಪ್ರಿಯವಾಗುತ್ತಿರುವ ‘ಇಂಟರ್ಮಿಟೆಂಟ್ ಫಾಸ್ಟಿಂಗ್’ ಹೊಸ ಸಂಶೋಧನೆಯಲ್ಲ. ಭೀಷ್ಮರು ಸುಮಾರು ಐದು ಸಾವಿರ ವರ್ಷಗಳ ಮೊದಲೇ ಇದನ್ನು ಹೇಳಿದ್ದಾರೆ. ಹಾಗೆಯೇ ಇಂದು ಜನಪ್ರಿಯವಾಗಿರುವ ಆಧುನಿಕರ ‘ಬ್ರಂಚ್’ ಕೂಡ ಸರಿಯಾದ ಕ್ರಮವಾಗಿದೆ. ಆದರೆ ಇವುಗಳ ಜೊತೆಗೆ ಗಂಟೆಗಂಟೆಗೆ ಬೇರೆ ಆಹಾರ ಸ್ವೀಕರಿಸುವುದು ಸರಿಯಲ್ಲ. ಅದು ದೇಹಕ್ಕೆ ಮಾರಕ ಎಂದು ಅಭಿಪ್ರಾಯಪಟ್ಟರು.

ಸಿದ್ದಾಪುರ ಹವ್ಯಕ ಮಂಡಲದ ಅಂಬಾಗಿರಿ,ಹರೀಶಿಮಂಗಳೂರು, ಹಾರ್ಸಿಕಟ್ಟ, ಬಿದ್ರಕಾನ, ಸಿದ್ದಾಪುರ ವಲಯಗಳ ಪರವಾಗಿ ಸುರೇಶ ವೆಂಕಟ್ರಮಣ ಹೆಗಡೆ ದಂಪತಿಗಳು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ಸಿದ್ದಾಪುರ ಹವ್ಯಕ ಮಂಡಲದ ಸತೀಶ ಹೆಗಡೆ ಆಲ್ಮನೆ, ರಾಮಮೂರ್ತಿ ಹೆಗಡೆ ಗೋಳಗೋಡು, ಸೀತಾರಾಮ ಹೆಗಡೆ ಸುಳಗಾರು, ಕಲ್ಪನಾ ತಲವಾಟ, ಚಿದಂಬರ ಗೊಳಿಕೈ, ವೀಣಾ ಭಟ್ ಶಿರಸಿ, ಮನು ಪಟೇಲ್, ಪ್ರತಿಭಾ ಅಂಗಡಿ, ನವೀನ ಯಾಣ, ದರ್ಶನ ಹೆಗಡೆ ಕಂತನಳ್ಳಿ, ದಿನ ಪ್ರಧಾನರಾದ ರಾಮ ಬಾಲಕೃಷ್ಣ ಹೆಗಡೆ ಬಡಗಣಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      PES ShivamoggaKalpa News Advertising DisclaimerKalahamsa Infotech private limited

Tags: GokarnaKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaRaghaveshwara shriShri Ramachandrapura MuttUttara Kannada Newsಗೋಕರ್ಣ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

Mysuru to Host Hindustani Classical Vocal Concert on August 16

Next Post

ಸಚಿವ ನಾಗೇಂದ್ರನ ಕೈ ಬಿಡಿ: ಶಾಸಕ ಚನ್ನಬಸಪ್ಪ ಪುನರುಚ್ಚಾರ

kalpa News

kalpa News

Next Post
drop-minister-nagendra-mla-channabasappa

ಸಚಿವ ನಾಗೇಂದ್ರನ ಕೈ ಬಿಡಿ: ಶಾಸಕ ಚನ್ನಬಸಪ್ಪ ಪುನರುಚ್ಚಾರ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL