ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕರ್ನಾಟಕದ ಮಾಜಿ ಶಿಕ್ಷಣ ಸಚಿವ ಹಾಗೂ (Tiptur) ತಿಪಟೂರು ಕ್ಷೇತ್ರದ ಮಾಜಿ ಶಾಸಕ ಬಿ.ಸಿ. ನಾಗೇಶ್(67) (B.C. Nagesh) ಅವರು ಮಂಗಳವಾರ ಬೆಂಗಳೂರಿನಲ್ಲಿ (Bangalore) ನಿಧನರಾಗಿದ್ದಾರೆ.
ಕಳೆದ ಸುಮಾರು ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಬಿ.ಸಿ. ನಾಗೇಶ್ ಅವರಿಗೆ ಮೆದುಳಿನ ಗೆಡ್ಡೆ (Brain Tumour) ಸಮಸ್ಯೆ ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಎರಡು ಬಾರಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು. ಇತ್ತೀಚಿನ ದಿನಗಳಲ್ಲಿ ಬೆಂಗಳೂರಿನಲ್ಲಿರುವ ತಮ್ಮ ಮಗಳ ಮನೆಯಲ್ಲಿ ಚಿಕಿತ್ಸೆ ಹಾಗೂ ವಿಶ್ರಾಂತಿ ಪಡೆಯುತ್ತಿದ್ದ ಅವರು, ಮಂಗಳವಾರ ಕೊನೆಯುಸಿರೆಳೆದಿದ್ದಾರೆ.
ಬಿ.ಸಿ. ನಾಗೇಶ್ ಅವರ ನಿಧನದ ಸುದ್ದಿ ಅವರ ಕುಟುಂಬಸ್ಥರು, ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಬೆಂಬಲಿಗರಲ್ಲಿ ದುಃಖ ಮೂಡಿಸಿದೆ.
ಸಂಘದ ಪೂರ್ಣಕಾಲಿಕ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನಕ್ಕೆ ಪ್ರವೇಶ
ಬಿ.ಸಿ. ನಾಗೇಶ್ ಅವರು ಹಲವು ವರ್ಷಗಳ ಕಾಲ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಪೂರ್ಣಕಾಲಿಕ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿದ್ದರು. ನಂತರ ಸಕ್ರಿಯ ರಾಜಕೀಯಕ್ಕೆ ಪ್ರವೇಶಿಸಿದ ಅವರು ತಿಪಟೂರು ವಿಧಾನಸಭಾ ಕ್ಷೇತ್ರದಿಂದ ಚುನಾವಣಾ ರಾಜಕೀಯ ಆರಂಭಿಸಿದರು.
2008ರಲ್ಲಿ ತಿಪಟೂರು ಕ್ಷೇತ್ರದಿಂದ ಮೊದಲ ಬಾರಿಗೆ ವಿಧಾನಸಭೆಗೆ ಆಯ್ಕೆಯಾದ ಅವರು, ಬಳಿಕ 2018ರ ಚುನಾವಣೆಯಲ್ಲೂ ಗೆಲುವು ಸಾಧಿಸಿ ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು.
Also Read>> ರಾಜ್ಯ ಸರ್ಕಾರದ ವಿರುದ್ಧ ಎಂಪಿ ರಾಘವೇಂದ್ರ ವಾಗ್ದಾಳಿ | ಏನೆಲ್ಲಾ ಉಲ್ಲೇಖಿಸಿದರು?
2023ರ ವಿಧಾನಸಭಾ ಚುನಾವಣೆಯಲ್ಲಿ ಅವರು ತಿಪಟೂರು ಕ್ಷೇತ್ರದಿಂದ ಸ್ಪರ್ಧಿಸಿದ್ದರೂ ಸೋಲನುಭವಿಸಿದ್ದರು.
B.C. Nagesh : ಬೊಮ್ಮಾಯಿ ಸರ್ಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ನಾಗೇಶ್
ಬಿ.ಸಿ. ನಾಗೇಶ್ ಅವರು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರದಲ್ಲಿ 2021ರಿಂದ 2023ರವರೆಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
ಶಿಕ್ಷಣ ಸಚಿವರಾಗಿದ್ದ ಅವಧಿಯಲ್ಲಿ ರಾಜ್ಯದ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಚಾರಗಳು ಮತ್ತು ಸುಧಾರಣಾ ಕ್ರಮಗಳ ಕುರಿತು ಅವರು ಸಾರ್ವಜನಿಕವಾಗಿ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿದ್ದರು.
ಸಾಗರದ ಅಳಿಯ
ಬಿ.ಸಿ. ನಾಗೇಶ್ ಅವರು ಶಿವಮೊಗ್ಗ ಜಿಲ್ಲೆಯ ಸಾಗರದ ಅಳಿಯ ಆಗಿದ್ದರು. ಸಾಗರ ಹಾಗೂ ತಿಪಟೂರು ಭಾಗದಲ್ಲಿಯೂ ಅವರ ನಿಧನಕ್ಕೆ ಸಂತಾಪ ವ್ಯಕ್ತವಾಗಿದೆ.
ತಿಪಟೂರಿನಲ್ಲಿ ಅಂತ್ಯಕ್ರಿಯೆ
ಬಿ.ಸಿ. ನಾಗೇಶ್ ಅವರು ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಅವರ ಅಂತ್ಯಕ್ರಿಯೆಯನ್ನು ಆಗಸ್ಟ್ 19ರಂದು ತಿಪಟೂರಿನ ಅವರ ಹುಟ್ಟೂರಿನಲ್ಲಿ ನೆರವೇರಿಸಲು ಕುಟುಂಬಸ್ಥರು ನಿರ್ಧರಿಸಿದ್ದಾರೆ.
ಮಾಜಿ ಸಚಿವ ಹಾಗೂ ಎರಡು ಬಾರಿ ಶಾಸಕರಾಗಿ ಸಾರ್ವಜನಿಕ ಜೀವನದಲ್ಲಿ ಸೇವೆ ಸಲ್ಲಿಸಿದ್ದ ಬಿ.ಸಿ. ನಾಗೇಶ್ ಅವರ ನಿಧನಕ್ಕೆ ರಾಜಕೀಯ ಮುಖಂಡರು, ಸಂಘದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.
BC Nagesh, Former Karnataka Education Minister Dies
Former Tiptur MLA Succumbs to Prolonged Illness; Had Served as Education Minister from 2021 to 2023
Last Rites in Tipatur on August 19
Bengaluru: Former Karnataka Education Minister and former Tiptur MLA BC Nagesh passed away on Tuesday following prolonged illness. He was 67.
Nagesh had been suffering from a brain tumour for nearly a year and had undergone two surgeries in Bengaluru. He was staying at his daughter’s residence in Bengaluru while undergoing treatment and recovering. He breathed his last on Tuesday.
His demise has left family members, supporters, party workers and well-wishers deeply saddened.
Full-Time RSS Worker Before Entering Politics
BC Nagesh had worked for several years as a full-time worker of the Rashtriya Swayamsevak Sangh (RSS) before entering active politics. He later made his electoral debut from the Tiptur Assembly constituency.
He was elected as an MLA from Tiptur for the first time in 2008 and returned to the Assembly after winning the constituency again in 2018. He thus served as an MLA for two terms.
Nagesh contested the 2023 Karnataka Assembly election from Tiptur but was defeated.
Served as Education Minister in Bommai Government
Nagesh served as the Primary and Secondary Education Minister of Karnataka in the government headed by former Chief Minister Basavaraj Bommai from 2021 to 2023.
During his tenure as Education Minister, he was associated with several issues and policy decisions concerning school education in the state and regularly articulated his views on education reforms.
Connection with Sagara
BC Nagesh was also known as the son-in-law of Sagara in Shivamogga district, giving him a strong personal and social connection with the region. His demise has also evoked condolences among people in Sagara and Tiptur.
Last Rites in Tiptur on August 19
BC Nagesh is survived by his wife, a son and a daughter. His last rites will be performed in Tiptur, his native place, on August 19, according to the family.
Political leaders, RSS workers, supporters and people from various walks of life have expressed condolences over the death of the former minister and two-term MLA, remembering his contribution to public life and politics in Karnataka.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
