No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home News

ಮಿತಿಮೀರಿದ ಆಹಾರ ಸೇವನೆಯೇ ಮಾನವ ಜನಾಂಗದ ಮೊದಲ ತಪ್ಪು ಹೆಜ್ಜೆ: ರಾಘವೇಶ್ವರ ಶ್ರೀ

kalpa News by kalpa News
September 2, 2026
in News, ಉತ್ತರ ಕನ್ನಡ
0
Raghaveshwara Shri Says Excessive Food Consumption Was Humanity’s First Wrong Step
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ (ಉತ್ತರ ಕನ್ನಡ)  |

ಮಾನವ ಜನಾಂಗದ ಅಧಃಪತನಕ್ಕೆ ಆಹಾರ ಸೇವನೆಯಲ್ಲಿನ ಅತಿರೇಕವೇ ಮೊದಲ ಕಾರಣವಾಗಿದ್ದು, ಅಗತ್ಯಕ್ಕಿಂತ ಹೆಚ್ಚಿನ ಆಹಾರ ಸೇವನೆಯ ಪರಿಣಾಮವಾಗಿ ಮನುಷ್ಯನ ದೇಹ, ಮನಸ್ಸು ಹಾಗೂ ಜೀವನಶೈಲಿಯಲ್ಲಿ ಹಲವು ಬದಲಾವಣೆಗಳು ಉಂಟಾದವು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು (Shree Raghaveshwara Bharathi Swamiji) ಹೇಳಿದರು.

ಗೋಕರ್ಣದ (Gokarna) ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಅಂಗವಾಗಿ ಆಯೋಜಿಸಿದ್ದ ಧರ್ಮಸಭೆಯಲ್ಲಿ ‘ಅನ್ನಂ ಬ್ರಹ್ಮ’ ಮಾಲಿಕೆಯಡಿ ಪ್ರವಚನ ಅನುಗ್ರಹಿಸಿ ಅವರು ಮಾತನಾಡಿದರು.

ಭಾರತೀಯ ಪರಂಪರೆ ಮತ್ತು ಆಧುನಿಕ ದೃಷ್ಟಿಕೋನದಲ್ಲಿ ವ್ಯತ್ಯಾಸ

ಮಾನವರ ಮೂಲದ ಕುರಿತು ಭಾರತೀಯ ಪರಂಪರೆ ಮತ್ತು ಆಧುನಿಕ ಚಿಂತನೆಗಳ ನಡುವೆ ಸಾಕಷ್ಟು ವ್ಯತ್ಯಾಸವಿದೆ. ಆಧುನಿಕರ ದೃಷ್ಟಿಯಲ್ಲಿ ಸೃಷ್ಟಿಯ ಆದಿಯಲ್ಲಿ ಮಾನವನು ಸಂಸ್ಕೃತಿಹೀನನಾಗಿದ್ದು, ಕಾಡು ಮನುಷ್ಯನಂತೆ ಬದುಕುತ್ತಿದ್ದ ಎಂಬ ಕಲ್ಪನೆಗಳನ್ನು ಮುಂದಿಡಲಾಗಿದೆ. ಅಲ್ಲದೆ, ಮಂಗನಿಂದ ಮಾನವ ವಿಕಾಸ ಹೊಂದಿದ್ದಾನೆ ಎಂಬ ಸಿದ್ಧಾಂತವೂ ಇದೆ. ಇಂತಹ ಕಲ್ಪನೆಗಳು ನಮ್ಮ ಪೂರ್ವಜರ ಕುರಿತು ಜುಗುಪ್ಸೆ ಮೂಡಿಸುವಂತಿವೆ ಎಂದು ಶ್ರೀಗಳು ಅಭಿಪ್ರಾಯಪಟ್ಟರು.

ಭಾರತೀಯ ಪರಂಪರೆಯ ಪ್ರಕಾರ ಕೃತಯುಗದಲ್ಲಿ ದೇವರು ಜಗತ್ತನ್ನು ಅತ್ಯಂತ ಸುಂದರವಾಗಿ ಸೃಷ್ಟಿಸಿದ್ದನು. ದೇವರು ಸೃಷ್ಟಿಸಿದ ರೀತಿಯಲ್ಲಿಯೇ ಜಗತ್ತು ಇದ್ದ ಕಾಲವೇ ಕೃತಯುಗ. ಒಳಿತಿನ ಒಳಿತೆಂದರೆ ಕೃತಯುಗವಾದರೆ, ಕೆಡುಕಿನ ಕೆಡುಕು ಎನ್ನಬಹುದಾದ ಕಾಲ ಕಲಿಯುಗವಾಗಿದೆ ಎಂದು ಅವರು ವಿಶ್ಲೇಷಿಸಿದರು.CM D.K. Shivakumar Speech On Gruhalakshmi

Shree Raghaveshwara Bharathi Swamiji : ಕೃತಯುಗದಲ್ಲಿ ಪರಿಪೂರ್ಣ ಆರೋಗ್ಯ

ಕೃತಯುಗದಲ್ಲಿ ಜನರು ಪರಿಪೂರ್ಣ ಆರೋಗ್ಯ ಹೊಂದಿದ್ದರು. ಆ ಕಾಲದ ವರ್ಣನೆಯನ್ನು ಕೇಳಿದಾಗ ಇಂದಿನ ಮನುಷ್ಯನಿಗೆ ಅದು ಅತಿಶಯೋಕ್ತಿಯಂತೆ ಕಾಣಬಹುದು. ಏಕೆಂದರೆ ಅಂತಹ ವಾತಾವರಣವನ್ನು ನಾವು ಪ್ರತ್ಯಕ್ಷವಾಗಿ ಕಂಡಿಲ್ಲ. ಹೀಗಾಗಿ ಅದು ನಿಜವಲ್ಲ ಎಂದು ಭಾವಿಸುವ ಸಾಧ್ಯತೆಯೂ ಇದೆ ಎಂದು ಶ್ರೀಗಳು ಹೇಳಿದರು.

ಚರಕ ಸಂಹಿತೆಯ ಉಲ್ಲೇಖವನ್ನು ನೀಡಿದ ಅವರು, ಸೃಷ್ಟಿಯ ಆದಿಯಲ್ಲಿ ಮನುಷ್ಯರು ದೇವರಿಗೆ ಸರಿಸಮಾನವಾದ ಓಜಸ್ಸನ್ನು ಹೊಂದಿದ್ದರು. ಗಟ್ಟಿಮುಟ್ಟಾದ ಶರೀರ, ಪ್ರಸನ್ನವಾದ ಇಂದ್ರಿಯಗಳು ಹಾಗೂ ಪರಿಪೂರ್ಣ ಆರೋಗ್ಯ ಅವರಲ್ಲಿತ್ತು. ಆ ಸಂದರ್ಭದಲ್ಲಿ ರೋಗಗಳೇ ಇರಲಿಲ್ಲ. ರೋಗಗಳಿಲ್ಲದ ಕಾರಣ ವೈದ್ಯರೂ ಇರಲಿಲ್ಲ, ವೈದ್ಯಶಾಸ್ತ್ರವೂ ಇರಲಿಲ್ಲ ಹಾಗೂ ಔಷಧದ ಅಂಗಡಿಗಳ ಅಗತ್ಯವೂ ಇರಲಿಲ್ಲ ಎಂದು ವಿವರಿಸಿದರು.

ಆಹಾರದಿಂದಲೇ ಆರಂಭವಾಯಿತು ಮೊದಲ ತಪ್ಪು ಹೆಜ್ಜೆ

ಕೃತಯುಗದಲ್ಲಿಯೇ ಅಗ್ನಿ ಹಾಗೂ ಆಹಾರದ ವಿಚಾರದಲ್ಲಿ ಮಾನವ ಜನಾಂಗದ ಮೊದಲ ತಪ್ಪು ಹೆಜ್ಜೆ ಆರಂಭವಾಯಿತು. ಕೆಲವರು ಅಗತ್ಯಕ್ಕಿಂತ ಹೆಚ್ಚಿನ ಆಹಾರ ಸೇವಿಸಲು ಆರಂಭಿಸಿದರು. ಇದರ ಪರಿಣಾಮವಾಗಿ ಮಾನವನ ದೇಹ ಸ್ಥೂಲವಾಗತೊಡಗಿತು. ಬಳಿಕ ಆಲಸ್ಯ, ಕೂಡಿಡುವ ಬುದ್ಧಿ, ಲೋಭ, ದ್ರೋಹ, ಸುಳ್ಳು, ಕಾಮ, ಕ್ರೋಧ ಸೇರಿದಂತೆ ಒಂದರ ಹಿಂದೆ ಒಂದರಂತೆ ಹಲವು ದುರ್ಗುಣಗಳು ಬೆಳೆಯತೊಡಗಿದವು. ಇದರಿಂದ ಮನುಷ್ಯನ ವ್ಯಕ್ತಿತ್ವ ಪತನದ ದಾರಿಯನ್ನು ಹಿಡಿಯಿತು ಎಂದು ಶ್ರೀಗಳು ಹೇಳಿದರು.

ಅಗ್ನಿಯಲ್ಲಿನ ವ್ಯತ್ಯಾಸದಿಂದ ವಾತದಲ್ಲಿ ಬದಲಾವಣೆ ಉಂಟಾಗಿ, ಅದರ ಪರಿಣಾಮವಾಗಿ ರೋಗಗಳು ಮನುಷ್ಯನನ್ನು ಆಕ್ರಮಿಸಲು ಆರಂಭಿಸಿದವು ಎಂಬುದನ್ನು ಚರಕ ಸಂಹಿತೆಯ ಆಧಾರದಲ್ಲಿ ಅವರು ವಿವರಿಸಿದರು.

Also read>> AUMOVIO ಇಂಡಿಯಾದಿಂದ ದುಂತೂರು ಕೆರೆ ಪುನಶ್ಚೇತನ: 8 ಗ್ರಾಮಗಳ 1,700 ಕುಟುಂಬಗಳಿಗೆ ಜಲ ಭದ್ರತೆPES Shivamogga

ಆಹಾರದ ಕುರಿತು ಪ್ರತಿಯೊಬ್ಬರೂ ಅರಿವು ಹೊಂದಬೇಕು

ಹುಟ್ಟಿದ ಪ್ರತಿಯೊಂದು ಜೀವಿಯೂ ಆಹಾರದ ಒಳಹೊರಗನ್ನು ತಿಳಿದುಕೊಳ್ಳಬೇಕಿದೆ. ಆಹಾರದ ವಿಚಾರವನ್ನು ತಿಳಿದುಕೊಳ್ಳದೆ ಬದುಕುವುದು ಮನುಷ್ಯನಾಗಿ ಜೀವಿಸುವ ಹಕ್ಕನ್ನೇ ಕಳೆದುಕೊಂಡಂತಾಗುತ್ತದೆ. ಹೀಗಾಗಿ ನಾವು ಆಹಾರದ ಕುರಿತು ಗಂಭೀರವಾಗಿ ವಿಮರ್ಶೆ ಮಾಡಬೇಕು. ಏನು ತಿನ್ನಬೇಕು, ಎಷ್ಟು ತಿನ್ನಬೇಕು ಹಾಗೂ ಆಹಾರವು ದೇಹದ ಮೇಲೆ ಯಾವ ರೀತಿಯ ಪರಿಣಾಮ ಬೀರುತ್ತದೆ ಎಂಬುದರ ಕುರಿತು ಅರಿವು ಬೆಳೆಸಿಕೊಳ್ಳಬೇಕು ಎಂದು ಶ್ರೀಗಳು ಕರೆ ನೀಡಿದರು.

“ಎಲ್ಲಿ ತಪ್ಪಿದ್ದೇವೋ ಅಲ್ಲೇ ಸರಿಪಡಿಸಿಕೊಳ್ಳಬೇಕು ಎಂಬಂತೆ, ಅಂದಿನ ನಮ್ಮ ಪೂರ್ವಜರ ತಪ್ಪನ್ನು ಇಂದು ನಾವು ಸರಿಪಡಿಸಿಕೊಳ್ಳಬೇಕು. ಅಂದು ನಮ್ಮ ಪೂರ್ವಜರ ಅಧಃಪತನ ಊಟದ ವಿಷಯದಿಂದಲೇ ಆರಂಭವಾಯಿತು. ಇಂದು ನಾವು ಅದನ್ನು ಸರಿಪಡಿಸಿಕೊಳ್ಳುವ ಮೂಲಕ ಅಗ್ನಿಯನ್ನು ಸರಿಪಡಿಸಿಕೊಳ್ಳಬೇಕು. ನಮ್ಮನ್ನು ಸರಿಪಡಿಸಿಕೊಂಡರೆ, ಕಲಿಯುಗದಲ್ಲೂ ನಮ್ಮಲ್ಲಿ ನಾವು ಕೃತಯುಗವನ್ನು ತಂದುಕೊಳ್ಳಬಹುದು.”
— ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು

Kalahamsa Infotech private limitedಸಂಸದ ಕಾಗೇರಿ ಸೇರಿದಂತೆ ಗಣ್ಯರ ಉಪಸ್ಥಿತಿ

ಕಾರ್ಯಕ್ರಮದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂಜುನಾಥ ಜನ್ನು, ಮಹೇಶ ಶೆಟ್ಟಿ, ಹನುಮಂತ ಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಿ ಶ್ರೀಗಳ ಆಶೀರ್ವಾದ ಪಡೆದರು.

ಈ ಸಂದರ್ಭದಲ್ಲಿ ಉಪ್ಪಿನಂಗಡಿ ಹವ್ಯಕ ಮಂಡಲದ ಮಾಣಿ, ಕಬಕ, ಉಜಿರೆ, ಉಪ್ಪಿನಂಗಡಿ, ಉರುವಾಲು ಹಾಗೂ ವೇಣೂರು ಹವ್ಯಕ ವಲಯಗಳ ಪರವಾಗಿ ವೈ. ಗಣರಾಜ ಕೊಣಮ್ಮೆ ಕುಟುಂಬದವರು ಗುರುಭಿಕ್ಷಾ ಸೇವೆಯನ್ನು ಸಮರ್ಪಿಸಿದರು.

ನಾರಾಯಣ ಭಟ್ ಹಾರೆಕೆರೆ, ಅರವಿಂದ ದರ್ಬೆ, ಗಣಪತಿ ಜಟ್ಟಿಮನೆ, ಮಹೇಶ ಕುದಪುಲಾ, ಪರಮೇಶ್ವರ ಭಟ್ ವೇಣೂರು, ಶಿವಪ್ರಸಾದ ವೇಣೂರು ಹಾಗೂ ದಿನಪ್ರಧಾನರಾಗಿ ವೆಂಕಟಗಿರಿ ಎಂ.ಆರ್. ದಂಪತಿಗಳು ಉಪಸ್ಥಿತರಿದ್ದರು.

ಆಹಾರ ಪದ್ಧತಿ, ದೇಹಾರೋಗ್ಯ ಮತ್ತು ಜೀವನಶೈಲಿಯ ನಡುವಿನ ಸಂಬಂಧವನ್ನು ಭಾರತೀಯ ಪರಂಪರೆಯ ದೃಷ್ಟಿಕೋನದಲ್ಲಿ ವಿವರಿಸಿದ ಶ್ರೀಗಳ ಪ್ರವಚನವು ಧರ್ಮಸಭೆಯಲ್ಲಿ ನೆರೆದಿದ್ದ ಭಕ್ತರ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Kumadvathi College ShikariuraKalpa News Advertising Disclaimer

Tags: GokarnaShri Raghaveshwara Bharathi Swamijiಅನ್ನಬ್ರಹ್ಮ ಚಾತುರ್ಮಾಸ್ಯಗೋಕರ್ಣಶ್ರೀ ರಾಘವೇಶ್ವರ ಭಾರತೀ ಮಹಾ ಸ್ವಾಮೀಜಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

AUMOVIO ಇಂಡಿಯಾದಿಂದ ದುಂತೂರು ಕೆರೆ ಪುನಶ್ಚೇತನ: 8 ಗ್ರಾಮಗಳ 1,700 ಕುಟುಂಬಗಳಿಗೆ ಜಲ ಭದ್ರತೆ

Next Post

ಬೈಕ್ ಪ್ರಿಯರಿಗೆ ಯಮಹಾ ಸರ್ಪ್ರೈಸ್; ಭಾರತದಲ್ಲಿ YZF-R2 ಜಾಗತಿಕ ಪಾದಾರ್ಪಣೆ : ಬೆಲೆ ಎಷ್ಟು?

kalpa News

kalpa News

Next Post
India Yamaha launches yzf r2 global debut rs 2.30 lakh

ಬೈಕ್ ಪ್ರಿಯರಿಗೆ ಯಮಹಾ ಸರ್ಪ್ರೈಸ್; ಭಾರತದಲ್ಲಿ YZF-R2 ಜಾಗತಿಕ ಪಾದಾರ್ಪಣೆ : ಬೆಲೆ ಎಷ್ಟು?

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL