No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಕೈಕೊಟ್ಟ ಮಳೆ, ವಿದ್ಯುತ್ ಕಣ್ಣಮುಚ್ಚಾಲೆ: ರೈತರ ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹ

ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ | ಮೆಸ್ಕಾಂ ಹೇಳುವುದೇನು?

kalpa News by kalpa News
September 15, 2026
in ಸೊರಬ
0
Soraba Rain Power Cuts Farmers Problems
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |  ವರದಿ: ಮಧುರಾಮ್  | 

ಮಳೆ ಕೊರತೆಯಿಂದ (Rainfall deficit) ಬೆಳೆಗಳು ಒಣಗುತ್ತಿರುವ ಸಂದರ್ಭದಲ್ಲೇ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯ ಉಂಟಾಗಿರುವುದು ಸೊರಬ (Soraba) ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಸಮರ್ಪಕ ವಿದ್ಯುತ್ ಪೂರೈಕೆ ಹಾಗೂ ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಂತೆ ಡಾ. ಜ್ಞಾನೇಶ್ ಅಭಿಮಾನಿ ಬಳಗ ಆಗ್ರಹಿಸಿದೆ.

ಬಳಗದ ಅಧ್ಯಕ್ಷ ವಿಶ್ವನಾಥ್ ತುಮರಿಕೊಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಡಾ. ಜ್ಞಾನೇಶ್, ತಾಲೂಕಿನಲ್ಲಿ ಯಾವುದೇ ಪ್ರಮುಖ ನೀರಾವರಿ ವ್ಯವಸ್ಥೆ ಇಲ್ಲ. ಹಳ್ಳ-ಹೊಳೆ ಹಾಗೂ ಅಂತರ್ಜಲವನ್ನೇ ನಂಬಿ ರೈತರು ಕೃಷಿ ಮಾಡುತ್ತಿದ್ದಾರೆ. ಮಳೆ ಕೈಕೊಟ್ಟಿರುವುದರಿಂದ ಈಗಾಗಲೇ ಗದ್ದೆಗಳು ಬಿರುಕು ಬಿಡುತ್ತಿದ್ದು, ಬೆಳೆಗಳು ಕುಗ್ಗುತ್ತಿವೆ. ಇಂತಹ ಸಂದರ್ಭದಲ್ಲಿ ವಿದ್ಯುತ್ ಪೂರೈಕೆಯಲ್ಲೂ ವ್ಯತ್ಯಯವಾಗಿರುವುದು ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ ಎಂದರು.

dk shivakumar led karnataka government 100 days celebration

ಹಿಂದೆ ರೈತರಿಗೆ ಸುಮಾರು ಎಂಟು ಗಂಟೆ ವಿದ್ಯುತ್ ಪೂರೈಕೆಯಾಗುತ್ತಿತ್ತು. ಇದೀಗ ಎರಡು ಗಂಟೆಯಷ್ಟೇ ವಿದ್ಯುತ್ ನೀಡಲಾಗುತ್ತಿದೆ. ಮಧ್ಯರಾತ್ರಿ ವಿದ್ಯುತ್ ಪೂರೈಕೆ ಮಾಡುವುದರಿಂದ ರೈತರಿಗೆ ನೀರು ಹಾಯಿಸುವುದು ಸೇರಿದಂತೆ ಕೃಷಿ ಚಟುವಟಿಕೆಗಳನ್ನು ನಿರ್ವಹಿಸುವುದು ಕಷ್ಟವಾಗಿದೆ. ಮಳೆ ಕೊರತೆಯಿಂದ ಎದುರಾಗಬಹುದಾದ ಬರ ಪರಿಸ್ಥಿತಿಯ ಮುನ್ಸೂಚನೆ ಇದ್ದರೂ ಸರ್ಕಾರ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿತ್ತು ಎಂದು ಹೇಳಿದರು.

Also Read>> ಗಣೇಶೋತ್ಸವ ರಾಷ್ಟ್ರೀಯತೆ, ಸಾಮಾಜಿಕ ಏಕತೆಗೆ ಶಕ್ತಿ ನೀಡಿದ ಪರಂಪರೆ: ಸುರೇಶ್ ಋಗ್ವೇದಿ

ಸದ್ಯದಲ್ಲೇ ಸಮಸ್ಯೆ ಪರಿಹಾರ: ಮೆಸ್ಕಾಂ

ಎರಡು-ಮೂರು ದಿನಗಳ ಹಿಂದೆ ಶರಾವತಿ ವಿದ್ಯುತ್ಗಾರದಲ್ಲಿ ಸಮಸ್ಯೆ ಉಂಟಾಗಿತ್ತು. ಸದ್ಯ ಆ ಸಮಸ್ಯೆ ಬಗೆಹರಿದಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲೂ ವ್ಯತ್ಯಯ ಉಂಟಾಗಿದೆ. ರಾಯಚೂರು ಹಾಗೂ ಬಳ್ಳಾರಿ ಭಾಗದಲ್ಲಿ ವಿದ್ಯುತ್ ವಾಹಕಗಳಲ್ಲಿ ದೋಷ ಉಂಟಾಗಿದ್ದು, ಅವುಗಳನ್ನು ಸರಿಪಡಿಸುವ ಕಾರ್ಯ ನಡೆಯುತ್ತಿದೆ. ದುರಸ್ತಿ ಪೂರ್ಣಗೊಳ್ಳುವವರೆಗೆ ಪೂರೈಕೆಯಲ್ಲಿ ಸ್ವಲ್ಪ ವ್ಯತ್ಯಯವಾಗಬಹುದು. ಸಮಸ್ಯೆ ಪರಿಹರಿಸುವ ಕುರಿತು ಮೇಲ್ಮಟ್ಟದ ಅಧಿಕಾರಿಗಳು ಸಭೆ ನಡೆಸಿ ಚರ್ಚಿಸಿದ್ದಾರೆ. ಸದ್ಯದಲ್ಲೇ ವಿದ್ಯುತ್ ಪೂರೈಕೆ ಸಹಜ ಸ್ಥಿತಿಗೆ ಬರಲಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ.
-ಸತ್ಯಪ್ರಕಾಶ್, ಮೆಸ್ಕಾಂ ಸಹಾಯಕ ಕಾರ್ಯಪಾಲಕ ಎಂಜಿನಿಯರ್

ತಾಲೂಕಿನ ಜನರು ಶಾಸಕ ಹಾಗೂ ಸಚಿವ ಮಧು ಬಂಗಾರಪ್ಪ ಅವರು ಎರಡನೇ ಬಾರಿ ಸಚಿವರಾಗಿರುವುದರಿಂದ ಕ್ಷೇತ್ರದ ಅಭಿವೃದ್ಧಿಯ ಬಗ್ಗೆ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ರೈತರ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ದೊರೆಯುತ್ತಿಲ್ಲ. ರಸ್ತೆ, ಚರಂಡಿಯಂತಹ ಸಮಸ್ಯೆಗಳನ್ನು ಜನರು ಸಹಿಸಿಕೊಂಡು ಹೋಗಬಹುದು. ಆದರೆ ಕೃಷಿ, ಅನ್ನ ಮತ್ತು ಬದುಕಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನಿರ್ಲಕ್ಷಿಸಲು ಸಾಧ್ಯವಿಲ್ಲ ಎಂದರು.

PES Shivamoggaಗೃಹಜ್ಯೋತಿ ಯೋಜನೆಯಡಿ ಉಚಿತ ವಿದ್ಯುತ್ ನೀಡುವ ಭರವಸೆ ಇದ್ದರೂ, ರೈತರಿಗೆ ಅಗತ್ಯ ಸಂದರ್ಭದಲ್ಲಿ ಸಮರ್ಪಕ ವಿದ್ಯುತ್ ದೊರೆಯದಿದ್ದರೆ ಯೋಜನೆಯ ಪ್ರಯೋಜನವೇನು ಎಂಬ ಪ್ರಶ್ನೆ ಮೂಡುತ್ತದೆ. ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸದಿದ್ದರೆ ರೈತರನ್ನು ಸಂಘಟಿಸಿ ಹೋರಾಟ ನಡೆಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

Soraba : ಮಳೆ ಆಧಾರಿತ ಕೃಷಿಯನ್ನೇ ಅವಲಂಬನೆ

ತಾಲೂಕಿನಲ್ಲಿ ದೀರ್ಘಕಾಲದಿಂದ ನೀರಾವರಿ ಯೋಜನೆ ಇಲ್ಲದಿರುವುದರಿಂದ ಪ್ರತಿವರ್ಷ ಮಳೆ ಆಧಾರಿತ ಕೃಷಿಯನ್ನೇ ಅವಲಂಬಿಸಬೇಕಾಗಿದೆ. ಮಳೆ ಕೊರತೆ ಮತ್ತು ವಿದ್ಯುತ್ ವ್ಯತ್ಯಯ ಎರಡೂ ಒಟ್ಟಾಗಿ ರೈತರ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.

ಸಭೆಯಲ್ಲಿ ಅಭಿಮಾನಿ ಬಳಗದ ಸ್ವರೂಪ್, ಪುನೀತ್, ರಮೇಶ್ ಹಸ್ವಿ, ನಿತಿನ್, ಕೈಫ್ ಹಾಗೂ ಮುಖಂಡರಾದ ಪಾಣಿ ರಾಜಪ್ಪ, ರಾಜು ಕೆಂಚಿಕೊಪ್ಪ, ಗುರು ಗೌಡ ಹೆಸರಿ, ವಿನಯ ಶೇವಿರ್, ರಾಜು ಮಾವಿನಬಳ್ಳಿಕೊಪ್ಪ, ಯಶವಂತ್ ನೆಲ್ಲಿಕೊಪ್ಪ, ಮಣ್ಣತ್ತಿ ಪರಮೇಶ್, ಯಶೋಧರ, ಶಿವಾನಂದ, ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalpa News Advertising Disclaimer

Tags: ShivamoggaSorabaಅಂತರ್ಜಲನೀರಾವರಿಮಳೆ ಕೊರತೆವಿದ್ಯುತ್ ಪೂರೈಕೆಸೊರಬ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಗಣೇಶೋತ್ಸವ ರಾಷ್ಟ್ರೀಯತೆ, ಸಾಮಾಜಿಕ ಏಕತೆಗೆ ಶಕ್ತಿ ನೀಡಿದ ಪರಂಪರೆ: ಸುರೇಶ್ ಋಗ್ವೇದಿ

Next Post

ಕರಾವಳಿ ಜನರಿಗೆ ಗುಡ್ ನ್ಯೂಸ್: ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

kalpa News

kalpa News

Next Post
mangaluru-cabinet-meeting-sep 18-coastal-karnataka

ಕರಾವಳಿ ಜನರಿಗೆ ಗುಡ್ ನ್ಯೂಸ್: ಸೆ.18ರಂದು ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ ಸಭೆ

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL