ನವದೆಹಲಿ: ರಾಜ್ಯದ ಎಲ್ಲ ರಾಜ್ಯಪಾಲರು ಹಾಗೂ ಕೇಂದ್ರಾಡಳಿತ ಪ್ರದೇಶದ ಲೆಫ್ಟಿನೆಂಟ್ ಗವರ್ನರ್ಗಳ ರಾಷ್ಟ್ರಮಟ್ಟದ ಅಧಿವೇಶನ ಇಂದು ಹಾಗೂ ನಾಳೆ ನಡೆಯಲಿದೆ.
ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ಅಧಿವೇಶನ ನಡೆಯಲಿದ್ದು, ಇದು ಕೋವಿಂದ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಎರಡನೆಯ ಅಧಿವೇಶನವಾಗಿದೆ.
ಈ ಮೊದಲು 1949ರಲ್ಲಿ ರಾಷ್ಟ್ರಪತಿ ಭವನದಲ್ಲಿ ಅಂದಿನ ರಾಜ್ಯಪಾಲ ಸಿ. ರಾಜಗೋಪಾಲಾಚಾರಿ ಅವರ ನೇತೃತ್ವದಲ್ಲಿ ರಾಜ್ಯಪಾಲರ ಅಧಿವೇಶನ ನಡೆದಿತ್ತು. ಅದಾದ ನಂತರ ಇದು ಎರಡನೆಯ ಬಾರಿ ರಾಷ್ಟ್ರಪತಿ ಭವನದಲ್ಲಿ ನಡೆಯುತ್ತಿದೆ.
ಎರಡು ದಿನ ನಡೆಯಲಿರುವ ಅಧಿವೇಶನದಲ್ಲಿ ರಾಷ್ಟ್ರದ ಹಲವಾರು ವಿಚಾರಗಳು ಚರ್ಚೆಗೆ ಬರಲಿವೆ. ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ, ನೀತಿ ಆಯೋಗದ ಸಿಇಒ, ರಾಷ್ಟ್ರೀಯ ಭದ್ರತಾ ಸಲಹೆಗಾರರು ಸಹ ಪಾಲ್ಗೊಂಡು ಮಾತನಾಡಲಿದ್ದಾರೆ.
Discussion about this post