No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Editorial

ಸ್ವತಂತ್ರ್ಯ ಭಾರತದಲ್ಲಿ ಜನರ ಸ್ವಾತಂತ್ರ್ಯ ಕಸಿದಿದ್ದ ಸರ್ವಾಧಿಕಾರಿ ಮನಃಸ್ಥಿತಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 24, 2018
in Editorial
0
Share on FacebookShare on TwitterShare on WhatsApp

ದೇಶದ ಇತಿಹಾಸದಲ್ಲೇ ಕರಾಳ ವರ್ಷಗಳಾದ ತುರ್ತು ಪರಿಸ್ಥಿತಿಗೆ ಈಗ 43 ವರ್ಷ

ಅದು ಸ್ವತಂತ್ರ ಭಾರತದ ಕರಾಳ ದಿನಗಳು… ದೇಶಕ್ಕೆ ಸ್ವತಂತ್ರ ತಂದೊಕೊಟ್ಟೆವು ಎಂದು ಹೆಮ್ಮೆಯಿಂದ ಬೀಗುವ ಕಾಂಗ್ರೆಸ್ ಪಕ್ಷ ಇಂದಿರಾಗಾಂಧಿಯೇ ದೇಶದ ಸ್ವಾತಂತ್ರ್ಯ ಕಸಿದಿದ್ದರು.

ಹೌದು, ಅದು 21 ತಿಂಗಳ ಕಾಲ ದೇಶವನ್ನು ಕಾಡಿದ್ದ ಸ್ವಾರ್ಥದ ನಿರ್ಧಾರ 1975ರ ಜೂನ್ 25ರ ಮಧ್ಯರಾತ್ರಿಗೂ ಕೆಲವು ನಿಮಷಗಳ ಮೊದಲು ಹೊರಬಿದ್ದಿತ್ತು. ಅಂದಿನ ಪ್ರಧಾನಿ ಇಂದಿರಾಗಾಂಧಿ ಕೈಗೊಂಡ ಕಠಿಣ ನಿರ್ಧಾರ ಸ್ವತಂತ್ರ ಭಾರತದಲ್ಲಿ ಜನರ ಹಲವು ರೀತಿಯ ಸ್ವಾತಂತ್ರ್ಯವನ್ನು ಕಸಿದಿತ್ತು.

ಇಂದಿರಾಗಾಂಧಿ ಕೈಗೊಂಡಿದ್ದ ಸರ್ವಾಧಿಕಾರಿಯಂತಹ ನಿರ್ಧಾರಗಳು ಹೇಗಿದ್ದವು ಗೊತ್ತಾ?

ಬಾಂಗ್ಲಾದೇಶದ ವಿಮೋಚನಾ ಯುದ್ದ ಇಂದಿರಾಗಾಂಧಿ ಪ್ರೊಫೈಲನ್ನು ಬೆಳೆಸಿತ್ತು. ಬಾಂಗ್ಲಾದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಗಣನೀಯ ರಾಜತಾಂತ್ರಿಕ, ಆರ್ಥಿಕ ಮತ್ತು ಮಿಲಿಟರಿ ಬೆಂಬಲವನ್ನು ಒದಗಿಸಲು ವಿಶ್ವದಾದ್ಯಂತ ಮಾನ್ಯತೆ ಪಡೆಯಿತು. ಪಾಕಿಸ್ಥಾನದ ವಿರುದ್ಧದ ವಿಜಯದ ಉತ್ಸಾಹದಲ್ಲಿ ಕಾಂಗ್ರೆಸ್ 1971 ರಲ್ಲಿ ಜಯಗಳಿಸಿತು. ಇಂದಿರಾಗಾಂಧಿ ಮರಳಿ ಅಧಿಕಾರಕ್ಕೆ ಬಂದು ಅಬ್ಬರಿಸಿದರು. ಆ ವೇಳೆ ಆಕೆಯನ್ನು ದೇವಿ ದುರ್ಗೆಗೆ ಹೋಲಿಕೆ ಮಾಡಿದ್ದೂ ಇದೆ.

ಅಂದು ಚುನಾವಣೆಯಲ್ಲಿ ಜನತಾ ಪಕ್ಷದ ಅಭ್ಯರ್ಥಿಯಾಗಿದ್ದ ಲೋಕ ಬಂಧು ರಾಜ್ ನಾರಾಯಣ್ ಸೋತಿದ್ದೇ ಎಲ್ಲ ಅನಿಷ್ಠಗಳಿಗೂ ಕಾರಣವಾಗಿತ್ತು. ಅಂದು ನಿಜಕ್ಕೂ ತಮ್ಮ ಅಧಿಕಾರ ದುರುಪಯೋಗ ಮಾಡಿಕೊಂಡು ಜಯಗಳಿಸಿದ್ದ ಇಂದಿರಾ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲಾಯಿತು. ರಾಜಮನೆತನಕ್ಕೆ ಸೇರಿದ್ದ ಸಭ್ಯ ರಾಜ್ ನಾರಾಯಣ್ ಅವರು, ಇಂದಿರಾ ವಿರುದ್ಧ ಅಲಹಾಬಾದ್ ಹೈಕೋರ್ಟಿನಲ್ಲಿ ಪ್ರಕರಣ ದಾಖಲಿಸಿದರು.

ಅಂದಿನ ಖಡಕ್ ನ್ಯಾಯಾಧೀಶ ಜಗಮೋಹನ್ ಸಿನ್ಹಾ ತೆಗೆದುಕೊಂಡ ನಿರ್ಧಾರ ಮಾತ್ರ ಐತಿಹಾಸಿಕ. ಜಯಗಳಿಸಿದ ಅಭ್ಯರ್ಥಿ ಇಂದಿರಾ ಗಾಂಧಿ ಚುನಾವಣೆ ಅಕ್ರಮವೆಸಗಿದ್ದು, ಅವರ ಆಯ್ಕೆ ಅಸಿಂಧು. ಬದಲಿಗೆ, ಚುನಾವಣೆ ಗೆದ್ದಿರುವುದು ರಾಜ್ ನಾರಾಯಣ್ ಅವರೇ ಎಂದು ಸಿನ್ಹಾ ತೀರ್ಪು ನೀಡಿಬಿಟ್ಟರು. ಅಷ್ಟೇ ಅಲ್ಲ ಇಂದಿರಾ ಇನ್ನು ಆರು ವರ್ಷ ಚುನಾವಣೆ ಕಣಕ್ಕಿಳಿಯುವಂತಿಲ್ಲ ಎಂದು 1974ರ ಜೂನ್ 25ರಂದು ಸಾರಿಬಿಟ್ಟಿತು ಇಂದಿರಾ ಅವರನ್ನು ಕೆರಳಿಸಿತ್ತು.

ಇದರಿಂದ ವ್ಯಘ್ರಗೊಂಡಿದ್ದ ಇಂದಿರಾ ಗಾಂಧಿ ಅದಾಗತಾನೆ ಮುಗಿದಿದ್ದ ಪಾಕಿಸ್ಥಾನ ವಿರುದ್ಧದ ಯುದ್ಧದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭದ್ರತೆಗೆ ಅಪಾಯ ಇದೆ, ಭೀಕರ ಕ್ಷಾಮ ಇದೆ, 1973ರ ತೈಲ ಸಂಕಷ್ಟದ ಭೀಕರ ಪರಿಣಾಮ ಎದುರಾಗಿದೆ, ದೇಶದ ಆರ್ಥಿಕ ಪರಿಸ್ಥಿತಿ ಬಿಗಡಾಯಿಸಿದೆ ಎಂಬ ನೆಪವನ್ನು ಮುಂದಿಟ್ಟುಕೊಂಡು ದೇಶದ ಮೇಲೆ ತುರ್ತು ಪರಿಸ್ಥಿತಿ ಹೇರಿಬಿಟ್ಟರು. ಅಂದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರಜೆಗಳಿಗಾಗಿ ಅಧಿಕಾರಕ್ಕೆ ಬಂದ ಇಂದಿರಾಗಾಂಧಿಯ ಸರ್ವಾಧಿಕಾರಿ ಮನಃಸ್ಥಿತಿ ಬಯಲಾಗುತ್ತಾ ಹೋಯಿತು.

ಸರ್ಕಾರದ ಮಟ್ಟದಲ್ಲಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸಿದ್ಧಾರ್ಥ ಶಂಕರ ರಾಯ್ ಆಂತರಿಕ ತುರ್ತು ಪರಿಸ್ಥಿತಿ ಘೋಷಣೆ ಪ್ರಸ್ತಾಪವನ್ನು ಪ್ರಧಾನಿ ಇಂದಿರಾ ಮುಂದೆ ಹಿಡಿದು ನಿಂತರು. ರಬ್ಬರ್ ಸ್ಟಾಂಪ್ ರಾಷ್ಟ್ರಪತಿಯೆನಿಸಿದ ಫಕ್ರುದ್ದೀನ್ ಅಲಿ ಅಹಮದ್ ಪ್ರಧಾನಿ ಪ್ರಸ್ತಾವನೆಗೆ ಅಂಕಿತ ಹಾಕಿದ್ದರು.

ಈ ನಡುವೇ ಸಂವಿಧಾನದ ಪರಿಚ್ಚೇದ 352ರ ಅನುಸಾರ ತಮಗೆ ವಿಶೇಷಾಧಿಕಾರಿ ದಕ್ಕಿಸಿಕೊಂಡ ಇಂದಿರಾ, ಪೌರಹಕ್ಕುಗಳನ್ನು ಕಸಿದುಕೊಂಡು ತಮ್ಮ ವಿರೋಧಿಪಾಳಯದ ನಾಯಕರ ಧ್ವನಿ ಅಡಗಿಸಲು ಇನ್ನಿಲ್ಲದ ಶ್ರಮ ಹಾಕಿದರು.

ಇನ್ನೊಂದೆಡೆ ಮಾಧ್ಯಮದ ಧ್ವನಿಯನ್ನು ಅಡಗಿಸಿದ ಇಂದಿರಾ, ರಾಷ್ಟ್ರೀಯ ಸ್ವಯಂ ಸೇವಕ ಸಂಘ ಸೇರಿದಂತೆ ಅನೇಕ ಸಂಘಟನೆಗಳಿಗೆ ನಿಷೇಧ ಹೇರಿದರು. ಪ್ರಧಾನಿ ಇಂದಿರಾ ತಮಗೆ ನ್ಯಾಯಾಂಗದ ಸಂರಕ್ಷಣೆ ಕಲ್ಪಿಸಿಕೊಳ್ಳುವುದರ ಜತೆಗೆ ನಾಗರಿಕರು ಯಾವುದೇ ಕೋರ್ಟ್‌ಗಳಲ್ಲಿ ಸರ್ಕಾರವನ್ನು ಪ್ರಶ್ನಿಸುವಂತಿಲ್ಲ ಎಂದೂ ಸಂವಿಧಾನಕ್ಕೆ ತಿದ್ದುಪಡಿ ತಂದು, ಸ್ವಾತಂತ್ರ್ಯವನ್ನು ಕಸಿದರು.

ಮೀಸಾ ಕಾಯಿದೆಯನ್ನು ದುರುಪಯೋಗ ಮಾಡಿಕೊಂಡು ಪ್ರಮುಖ ಹೋರಾಟಗಾರರನ್ನು ಜೈಲಿಗೆ ಅಟ್ಟಲಾಯಿತು. ಇಂದಿರಾಗಾಂಧಿಯವರು ಆಟಾಟೋಪವನ್ನು ಕಂಡು ಕಿಡಿ ಕಾರಿದ ಸುಪ್ರೀಂ ಕೋರ್ಟ್ ಅಧಿಕಾರದಲ್ಲಿರುವ ರಾಜಕಾರಣಿಗಳ ಅನುಕೂಲಕ್ಕೆ ತಕ್ಕಂತೆ ಕೇವಲ ಸಂಸತ್ತಿನ ಅನುಮೋದನೆ ಪಡೆದು ಕರಾಳ ಶಾಸನಗಳನ್ನು ರೂಪಿಸುವಂತಿಲ್ಲ ಅಥವಾ ತಿದ್ದುಪಡಿ ತರುವಂತಿಲ್ಲ ಎಂದು ಆದೇಶಿಸಿದರು.

ಜನಸಂಖ್ಯೆ ದೇಶದಲ್ಲಿ ಮಿತಿಮೀರುತ್ತಿದೆ ಎಂದು ಬುದ್ದಿ ಇಲ್ಲದ ಸಂಜಯ್ ಗಾಂಧಿ ತಮ್ಮ ಪಕ್ಷದ ಕಾರ್ಯಕರ್ತರಿಗೆ ಟಾರ್ಗೆಟ್ ನೀಡುತ್ತಾ ಕೈಗೆ ಸಿಕ್ಕಿದವರಿಗೆಲ್ಲಾ ಬಲವಂತದ ಫ್ಯಾಮಿಲಿ ಪ್ಲಾನಿಂಗ್ ಆಪರೇಶನ್ ಮಾಡಿಸಿದ್ದು ದೇಶದ ಮತ್ತೊಂದು ದುರಂತ.

ಈ ಆದೇಶ ನೀಡಿದ್ದ ನ್ಯಾಯಮೂರ್ತಿ ಖನ್ನಾ ಅವರು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಬೇಕಿತ್ತು. ಆದರೆ, ಅವರ ಮೇಲಿನ ಸಿಟ್ಟಿಗೆ ಇಂದಿರಾ ಅವರ ಅವಕಾಶವನ್ನು ಕಿತ್ತುಕೊಂಡಿದ್ದರು.

ಇಷ್ಟೆಲ್ಲಾ ಆದ ನಂತರ ಜನವರಿ 23, 1977ದಂದು ಚುನಾವಣೆ ಪ್ರಸ್ತಾವನೆಯನ್ನು ರಾಷ್ಟ್ರದ ಮುಂದಿಟ್ಟ ಇಂದಿರಾ ಮಾರ್ಚ್ ತಿಂಗಳಿನಲ್ಲಿ ಚುನಾವಣೆ ನಡೆಸುವುದಾಗಿ ಘೋಷಿಸಿ, ಅದೇ ವೇಳೆ ಬಂಧಿತ ನಾಯಕರನ್ನು ಬಿಡುಗಡೆಗೊಳಿಸಿದರು. ಇದರ ಬೆನ್ನಲ್ಲೇ ಮಾರ್ಚ್ 23, 1977ರಂದು ತುರ್ತು ಪರಿಸ್ಥಿತಿ ಅಧಿಕೃತವಾಗಿ ಅಂತ್ಯವಾಯಿತು.

ಆನಂತರ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಜನತಾ ಪಕ್ಷ 298 ಸ್ಥಾನಗಳನ್ನು ಗಳಿಸಿ, ಮೊರಾರ್ಜಿ ದೇಸಾಯಿ ದೇಶದ ಮೊಟ್ಟ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡರು.

ಒಟ್ಟಿನಲ್ಲಿ ಸರ್ವಾಧಿಕಾರಿ ಮನಃಸ್ಥಿತಿಯ ಇಂದಿರಾ ಗಾಂಧಿ ತಮ್ಮ ಸ್ವಾರ್ಥಕ್ಕಾಗಿ ಕೈಗೊಂಡ ನಿರ್ಧಾರ ಇಡಿಯ ದೇಶಕ್ಕೇ ಒಂದು ಕಪ್ಪು ಚುಕ್ಕೆಯಾಗಿ ಪರಿಣಮಿಸಿತ್ತು.

-ಎಸ್.ಆರ್. ಅನಿರುದ್ಧ ವಸಿಷ್ಠ
  9008761663

Tags: Bharatiya Lok Dal PartyEmergency in IndiaIndira GandhiJustice Jagmohan SinhaRaj NarayanSupreme Court
Share196Tweet123Send
Previous Post

ಸೌದಿ ಮಹಿಳೆಯರಿಗೆ ಇಂದು ಲ್ಯಾಂಡ್ ಮಾರ್ಕ್ ಡೇ: ಯಾಕೆ ಗೊತ್ತಾ?

Next Post

ಮೈಸೂರು: ವಿದ್ಯಾಸ್ಪಂದನ ಸಂಸ್ಥೆಯ ಸಮಾಜ ಸೇವೆಗೆ 5 ವರ್ಷ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೈಸೂರು: ವಿದ್ಯಾಸ್ಪಂದನ ಸಂಸ್ಥೆಯ ಸಮಾಜ ಸೇವೆಗೆ 5 ವರ್ಷ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL