Sunday, June 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸಾವಿರ ಸಂವತ್ಸರಕ್ಕೂ ಒಬ್ಬರೇ ಸರ್.ಎಂ.ವಿ.

September 15, 2018
in Special Articles
0 0
0
Share on facebookShare on TwitterWhatsapp
Read - 3 minutes

ವ್ಯಕ್ತಿಗಳಿಗಿಂತ ವಿಚಾರ ಶ್ರೇಷ್ಠ, ವಿಚಾರಗಳಿಗಿಂತ ವ್ಯಕ್ತಿ ಮಾಡಿದ ಸಕರ್ಮ ಶ್ರೇಷ್ಠ ಎಂಬ ಮಾತು ಬಹುಶಃ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯನವರಂತವರನ್ನೇ ನೆನೆದು ಹೇಳಿದಂತಿದೆ. ಇಂದು ಎರಡು ರಾಜ್ಯಗಳ ಬಹುಪಾಲು ಮಡಿಲಿಗೆ ಕುಡಿಯಲು ಶುದ್ದ ನೀರು ಸಿಗುತ್ತಿದೆ ಎಂದರೆ ಅದು ಸರ್.ಎಂ.ವಿ.ರವರ ನಿಸ್ವಾರ್ಥ ಕೊಡುಗೆಯೇ. ಈ ಕಾರಣದಿಂದಾಗಿ ಅವರ ಪ್ರತಿ ಕಾರ್ಯವೂ ಶ್ಲಾಘನೀಯ ಮತ್ತು ಸ್ಮರಣೀಯ.

ಮೂಲತಃ ಚಿಕ್ಕಬಳ್ಳಾಪುರದ ಮುದ್ದೇನಹಳ್ಳಿಯವರಾದ ಇವರು ಜನಿಸಿದ್ದು 1861ರ ಸೆಪ್ಟೆಂಬರ್ 15ರಂದು. ತಂದೆ ಮೋಕ್ಷಗುಂಡಂ ಶ್ರೀನಿವಾಸ ಶಾಸ್ತ್ರಿ, ವೃತ್ತಿಯಲ್ಲಿ ಸಂಸ್ಕೃತ ವಿದ್ವಾಂಸರು. ತಾಯಿ ವೆಂಕಟಲಕ್ಷಮ್ಮ, ಗೃಹಿಣಿ. ಇವರಿಬ್ಬರೂ ಸಹ ಸರಳತೆ, ಸಜ್ಜನಿಕೆಗೆ ಹೆಸರಾದವರು.

ಆರ್ಥಿಕವಾಗಿ ಬಡವರಾಗಿದ್ದರೂ ಅವರು ಮೈಗೂಡಿಸಿಕೊಂಡಿದ್ದ ಸಂಸ್ಕಾರ ಶ್ರೀಮಂತವಾಗಿತ್ತು. ಸರ್.ಎಂ.ವಿ. ತಮ್ಮ ಹನ್ನೆರಡರ ಪ್ರಾಯದಲ್ಲಿ ತಂದೆಯನ್ನು ಕಳೆದುಕೊಂಡರು. ಆದರೂ ಎದೆಗುಂದದೇ ಬದುಕು ಎಸೆದ ಸವಾಲುಗಳನ್ನು ಧೈರ್ಯದಿಂದ ಎದುರಿಸಿದರು.

ತಮ್ಮ ಪ್ರಾಥಮಿಕ ಶಿಕ್ಷಣವನ್ನು ಚಿಕ್ಕಬಳ್ಳಾಪುರದಲ್ಲಿ ಪೂರೈಸಿ, ಹೈಸ್ಕೂಲ್ ಶಿಕ್ಷಣವನ್ನು ಬೆಂಗಳೂರಿನಲ್ಲಿ ಪೂರ್ಣಗೊಳಿಸಿದರು. 1881ರಲ್ಲಿ ತಮ್ಮ ಬಿ.ಎ. ಹಾನರ್ರ್‌ಸ್ ಪದವಿಯನ್ನು ಪಡೆದ ನಂತರ 1884ರಲ್ಲಿ ಪುಣೆಯ ತಾಂತ್ರಿಕ ವಿಶ್ವವಿದ್ಯಾಲಯದಿಂದ ಸಿವಿಲ್ ಇಂಜಿನೀಯರ್ ಪದವಿ ಪಡೆದರು.

ನಂತರ ಮುಂಬಯಿಯ ಪಿಡಬ್ಲ್ಯೂಡಿಯಲ್ಲಿ ಸಹ ತಂತ್ರಜ್ಞರಾಗಿ ಕೆಲಸಕ್ಕೆ ಸೇರಿಕೊಂಡರು. ಇದೇ ಸಂದರ್ಭದಲ್ಲಿ ನಾಸಿಕ್, ಖಾಂಡೇಶ್, ಪುಣೆ ಸೇರಿದಂತೆ ಹಲವಾರು ಕಡೆಗಳಲ್ಲಿ ತಮ್ಮ ಸೇವೆ ಸಲ್ಲಿಸಿದರು.

ಭಾರತೀಯ ನೀರಾವರಿ ಆಯೋಗಕ್ಕೆ ಸೇರಿದ ನಂತರ ಇವರಿಗೆ ದಕ್ಷಿಣ ಪ್ರಾಂತ್ಯ ನೀರಾವರಿ ವ್ಯವಸ್ಥೆಯನ್ನು ಸುಧಾರಿಸುವ ಯೋಜನೆಗಳನ್ನು ಜಾರಿಗೆ ತರುವಂತೆ ಕೇಳಿಕೊಳ್ಳಲಾಯಿತು. ನಂತರ ಸಿಂಧು ನದಿಯಿಂದ ಸುಕ್ಕೂರು ಎಂಬ ಹಳ್ಳಿಗೆ ನೀಡಿದ್ದ ಜಲಮಾರ್ಗದಲ್ಲಿ ನೀರು ಪೋಲಾಗದಂತಹ ವ್ಯವಸ್ಥೆ ಮಾಡಿದರು. ಇವರ ಈ ಕಾರ್ಯವನ್ನು ಇಡಿಯ ಭಾರತ ಹಾಡಿ ಹೊಗಳಿತ್ತು.

ನಂತರದ ದಿನಗಳಲ್ಲಿ ವಿಶಾಖಪಟ್ಟಣಂ ಸೇರಿದಂತೆ ದೇಶದ ಹಲವು ಕಡೆಗಳಲ್ಲಿ ಕಾರ್ಯ ನಿರ್ವಹಿಸಿದ ಇವರು 1909ರಲ್ಲಿ ಮೈಸೂರು ಸಂಸ್ಥಾನದ ಮುಖ್ಯ ತಂತ್ರಜ್ಞರಾಗಿ, 1912ರಲ್ಲಿ ಮೈಸೂರು ಪ್ರಾಂತ್ಯದ ದಿವಾನರಾಗಿ ಸೇರ್ಪಡೆಗೊಂಡರು. ಸುಮಾರು ಏಳು ವರ್ಷಗಳ ಕಾಲ ದಿವಾನರಾಗಿದ್ದ ಇವರ ಅವಧಿಯ ಕೈಗೊಂಡ ಎಲ್ಲ ಕಾರ್ಯಕ್ರಗಳು ಸಹ ಸ್ಮರಿಸುವಂತಹದ್ದು ಮಾತ್ರವಲ್ಲಿ ಇಡಿಯ ಭಾರತ ಎಂದೆಂದಿಗೂ ನೆನಪಿಟ್ಟುಕೊಳ್ಳಬೇಕಾದ್ದು.

1924ರಲ್ಲಿ ಮಂಡ್ಯ ಜಿಲ್ಲೆಯಲ್ಲಿ ಕೃಷ್ಣರಾಜ ಸಾಗರ ಅಣೆಕಟ್ಟು ಕಟ್ಟುವ ಮೂಲಕ ಲಕ್ಷಾಂತರ ಜನರ ದಾಹ ತೀರಿಸಿದ ಆಧುನಿಕ ಭಗೀರಥ ಸರ್.ಎಂ.ವಿ.
ಇಂದು ಅಂದು ಕಟ್ಟಿದ ಕಟ್ಟಡ ನಾಳೆಯವರೆಗೂ ಗಟ್ಟಿಯಾಗಿ ನಿಲ್ಲುತ್ತದೋ ಇಲ್ಲವೇ ಎಂಬಂತಹ ತಂತ್ರಜ್ಞರಿರುವ ಕಾಲವಿದು. ತಂತ್ರಜ್ಞಾನ ಮುಂದುವರೆದರೂ ಈಗಿನ ತಂತ್ರಜ್ಞರ ಕಾರ್ಯವೈಖರಿ ಅಷ್ಟಕ್ಕಷ್ಟೆ. ಇಂತಹುದರಲ್ಲಿ ಬರಿಯ ಮಾನವಶಕ್ತಿಯ ಸಹಯೋಗದಲ್ಲಿ ಕಟ್ಟಿರುವ ಕೃಷ್ಣರಾಜ ಸಾಗರ ಅಣೆಕಟ್ಟು 94 ವರ್ಷವಾದರು ಒಂದಿಂಚೂ ಅಲುಗಾಡದೇ ಸ್ಥಿರವಾಗಿದೆಯೆಂದರೇ ಸರ್.ಎಂ.ವಿ. ಅವರ ಬುದ್ದಿಮತ್ತೆ, ಕಾರ್ಯವೈಖರಿ ಎಂತಹುದೆಂದು ತಿಳಿಯುತ್ತದೆ.

ಇಡಿಯ ರಾಷ್ಟ್ರವು ಮತ್ತೆ ಮತ್ತೆ ನೆನಪಿಸಿಕೊಳ್ಳುವಂತಹ ವ್ಯಕ್ತಿತ್ವದವರು. ಪ್ರಾಮಾಣಿಕತೆಗೆ ಮತ್ತೊಂದು ಹೆಸರೇ ಸರ್.ಎಂ.ವಿ ತಮ್ಮದೇ ಆದ ತತ್ವಗಳನ್ನು, ಮೌಲ್ಯಗಳನ್ನು ಇರಿಸಿಕೊಂಡು, ಉಸಿರಿರುವ ತನಕವೂ ತಾಯಿ ಭಾರತಿ, ತಾಯಿ ಭುವನೇಶ್ವರಿಯ ಸೇವೆ ಮಾಡಿದವರು.

ಇವರ ಪರಿಶ್ರಮದ ಫಲವಾಗಿ 1917ರಲ್ಲಿ ಬೆಂಗಳೂರಿನಲ್ಲಿ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯವೊಂದು ಜನ್ಮತಾಳಿತು. ಇವರ ಸ್ಮರಣಾರ್ಥ ಆ ಮಹಾವಿದ್ಯಾಲಯಕ್ಕೆ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯ ಎಂದು ಮರುನಾಮಕರಣ ಮಾಡಲಾಯಿತು. ಪುಣೆ ತಾಂತ್ರಿಕ ಮಹಾವಿದ್ಯಾಲಯವೂ ಗೌರವಾರ್ಥ ಇವರ ವಿಗ್ರಹವೊಂದನ್ನು ಪ್ರತಿಷ್ಟಾಪನೆ ಮಾಡಿತು.

ಪೂಜ್ಯರ ನಿಸ್ವಾರ್ಥ ಸೇವೆಗಾಗಿ ಭಾರತ ಸರ್ಕಾರವು ದೇಶದ ಸರ್ವೋಚ್ಛ ಗೌರವ ಭಾರತರತ್ನವನ್ನು ಮರಣೋತ್ತರವಾಗಿ ನೀಡಿ ಗೌರವಿಸಿದೆ. ಇದರಿಂದಾಗಿ ಬಹುಶಃ ಆ ಗೌರವವೇ ಹೆಮ್ಮೆಪಟ್ಟಿರಬೇಕು. ಇಂತಹ ಅಪ್ರತಿಮ ವ್ಯಕ್ತಿತ್ವ ಮುಕುಟಕ್ಕೆ ಗರಿಯಾಗಲು.

ಇಷ್ಟೆಲ್ಲಾ ಮಹೋನ್ನತ ಕಾರ್ಯಗಳನ್ನು ಮಾಡಿದವರು 102 ವರ್ಷಗಳ ಕಾಲ ಸುದೀರ್ಘ, ಶ್ರೇಷ್ಠ ತುಂಬು ಜೀವನವನ್ನು ನಡೆಸಿ 1962ರ ಎಪ್ರಿಲ್ 14ರಂದು ಇಹಲೋಕ ತ್ಯಜಿಸಿದರು. ಸಮಾಜಕ್ಕಾಗಿ ತಮ್ಮ ಸರ್ವಸ್ವವನ್ನೂ ಸಮರ್ಪಿಸಿದ ಸರ್.ಎಂ.ವಿ. ಸಾವಿರ ಸಂವತ್ಸರಕ್ಕೆ ಒಬ್ಬರು. ಇಂತಹ ಶ್ರೇಷ್ಠ ವ್ಯಕ್ತಿತ್ವ ಧರೆಗಿಳಿದ ಪುಣ್ಯದಿನವಿಂದು. ಮತ್ತೆ ಮತ್ತೆ ಅವರ ಕಾರ್ಯಗಳನ್ನು ನೆನಪಿಸಿಕೊಳ್ಳುತ್ತ ಇವರಂತೆಯೇ ಬಾಳಲು ಪ್ರಯತ್ನಿಸೋಣ.

-ತೇಜಶ್ರೀ ವೆಂಕಟೇಶ್,
 ಪುತ್ತೂರು

 

Tags: Bharat RatnaKRS DamM. VisvesvarayamysoreSir M Vಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯಸರ್.ಎಂ.ವಿ.
Previous Post

ನಾಯಿಯಂತೆ ಅಲ್ಲ, ಕಜ್ಜಿ ನಾಯಿಯಂತೆ ಎಳೆಯಬೇಕಿತ್ತು ಉಗ್ರನ ಹೆಣವನ್ನು

Next Post

ಕುರಲ್‌ ಪರ್ಬ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕುರಲ್‌ ಪರ್ಬ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!