ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 10ನೆಯ ತರಗತಿ ವಿದ್ಯಾರ್ಥಿನಿಯೊಬ್ಬಳನ್ನು ಅಮಾನವೀಯವಾಗಿ ಎಳೆದುಕೊಂಡು ಹೋಗಿ, ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ.
ಇಲ್ಲಿನ ವಿನೋದ್ ನಗರದಲ್ಲಿ ಶನಿವಾರ ಈ ಘಟನೆ ನಡೆದಿದ್ದು, ನಿನ್ನೆ ರಾತ್ರಿ ಬೆಳಕಿಗೆ ಬಂದಿದೆ.
ನಾಲ್ವರು ದುರುಳರು ಈ ಹೀನ ಕೃತ್ಯ ಎಸಗಿದ್ದು, ಇದರಲ್ಲಿ ಅಮಿತ್ ಕುಮಾರ್ ಎಂಬ ಆರೋಪಿ ಬಾಲಕಿಯ ಹತ್ತಿರದ ಸಂಬಂಧಿಯೇ ಎಂದು ವರದಿಯಾಗಿದೆ.
ನಾಲ್ವರು ಆರೋಪಿಗಳು ಬಾಲಕಿಯನ್ನು ಆಕೆಯ ಫ್ಲಾಟ್ ಬಳಿಯಿಂದ ನಿರ್ಜನ ಪ್ರದೇಶಕ್ಕೆ ಅಮಾನವೀಯವಾಗಿ ಎಳೆದುಕೊಂಡು ಹೋಗಿ, ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.
ಕಲ್ಯಾಣಪುರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಬಾಲಕಿ ನೀಡಿದ ಮಾಹಿತಿ ಆಧಾರದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
Discussion about this post