ಅಮೃತಸರ: ವಿಜಯದಶಮಿ ಹಿನ್ನೆಲೆಯಲ್ಲಿ ರಾವಣ ದಹನದ ವೇಳೆ ರೈಲು ಹಳಿ ಮೇಲೆ ನಿಂತು ನೋಡುತ್ತಿದ್ದವರ ಮೇಲೆ ರೈಲು ಹರಿದ ಪರಿಣಾಮ ಬಲಿಯಾದವರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ.
ಪಂಜಾಬ್ನ ಅಮೃತಸರದಲ್ಲಿ ನಿನ್ನೆ ರಾತ್ರಿ 8 ಗಂಟೆ ವೇಳೆಗೆ ಈ ದುರ್ಘಟನೆ ನಡೆದಿದ್ದು, ಜಲಂಧರ್ನಿಂದ ಅಮೃ ತಸರಕ್ಕೆ ಬರುತ್ತಿದ್ದ ಡೆಮು ರೈಲು ಹಳಿಯ ಮೇಲೆ ನಿಂತಿದ್ದ ಜನರ ಮೇಲೆಯೇ ಸಂಚರಿಸಿದ್ದು, ಇದಕ್ಕೆ ಬಲಿಯಾದವರ ಸಂಖ್ಯೆ ಇಂದು ಬೆಳಗ್ಗೆ 62ಕ್ಕೆ ಏರಿದೆ. ಅಲ್ಲದೇ ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಆತಂಕವಿದೆ ಎಂದು ವರದಿಯಾಗಿದೆ.
ರೈಲ್ವೆ ಹಳಿ ಸಮೀಪದ ಮೈದಾನದಲ್ಲಿ ದಸರಾ ಪ್ರಯುಕ್ತ ರಾವಣ ದಹನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ರಾವಣನಿಗೆ ಬೆಂಕಿ ಹಚ್ಚಿ ಪಟಾಕಿ ಸಿಡಿಯಲು ಆರಂಭಿಸಿದಾಗ ದೂರದಲ್ಲಿ ನಿಂತಿದ್ದ ಜನ ರೈಲ್ವೆ ಹಳಿ ಬಳಿ ಬಂದಿದ್ದರು. ಈ ವೇಳೆ ಎರಡೂ ದಿಕ್ಕಿನಿಂದಲೂ ರೈಲೂ ವೇಗವಾಗಿ ಆಗಮಿಸಿದೆ. ಆದರೆ, ಪಟಾಕಿ ಸದ್ದಿನಿಂದ ರೈಲು ಬಂದಿದ್ದು, ಜನರಿಗೆ ತಿಳಿದೇ ಇಲ್ಲ. ಹಳಿ ಮೇಲೆ ನಿಂತಿದ್ದ ಜನರ ಎರಡೂ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ.
ಇನ್ನು, ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ರೂ. 2 ಲಕ್ಷ ಆರ್ಥಿಕ ಪರಿಹಾರ ನೀಡಲು ಪ್ರಧಾನಿ ನರೇಂದ್ರ ಮೋದಿ ಸಮ್ಮತಿಸಿದ್ದಾರೆ. ಪ್ರಧಾನಿ ಮೋದಿ ಘಟನೆಗೆ ಶೋಕ ವ್ಯಕ್ತಪಡಿಸಿದ್ದು, ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆ ಬಗ್ಗೆ ಸೂಚಿಸಿದ್ದೇನೆ ಎಂದಿದ್ದಾರೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಘಟನೆ ಕುರಿತಾಗಿ ಆಘಾತ ವ್ಯಕ್ತಪಡಿಸಿದ್ದಾರೆ.
The train accident in Punjab in which over 50 people have died is shocking. I urge the state government & Congress workers to provide immediate relief at the accident site. My condolences to the families of those who have died. I pray that the injured make a speedy recovery.
— Rahul Gandhi (@RahulGandhi) October 19, 2018
ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಘಟನೆಗೆ ಆಘಾತ ವ್ಯಕ್ತಪಡಿಸಿದ್ದು, ಅಸುನೀಗಿದ ವ್ಯಕ್ತಿಗಳ ಪ್ರತಿ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.
Discussion about this post