Read - < 1 minute
ಬೆಂಗಳೂರು: ಪ್ರೆಸ್ ಕ್ಲಬ್ ಮಾಜಿ ಅಧ್ಯಕ್ಷ ಹಾಗೂ ಮಾಧ್ಯಮ ಅಕಾಡೆಮಿ ಹಾಲಿ ಅಧ್ಯಕ್ಷ ಪಿಟಿಐ ಸಿದ್ದರಾಜು ಅವರಿಗೆ ನಾಳೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಅ.13ರ ನಾಳೆ ಬೆಂಗಳೂರಿನ ದೇವರಾಜ ಅರಸು ಭವನದಲ್ಲಿ ಬೆಳಿಗ್ಗೆ 10.30 ಕ್ಕೆ ಸಮಾರಂಭ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ.
ಈ ಅಪರೂಪದ ಕಾರ್ಯಕ್ರಮದಲ್ಲಿ ರಾಜ್ಯದ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕಮಿಟಿ ಸದಸ್ಯ ಎಸ್.ಕೆ. ನಾಗರಾಜ್ ಕೋರಿದ್ದಾರೆ.
Discussion about this post