ಶ್ರೀನಗರ: ಗಡಿ ಪ್ರದೇಶದಲ್ಲಿ ಉಗ್ರರು ದೇಶದೊಳಕ್ಕೆ ನುಸುಳಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿಯ ಹಿನ್ನೆಲೆಯಲ್ಲಿ ಸೇನೆ ಕಾರ್ಯಾಚರಣೆ ಆರಂಭಿಸಿದ್ದು, ಈ ವೇಳೆ ಭಾರೀ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆದಿದೆ.
ಪುಲ್ವಾಮಾ ಜಿಲ್ಲೆಯ ಏರಿಪಲ್ ತಂತ್ರಿ ಮೊಹಲ್ಲಾ ಪ್ರದೇಶದಲ್ಲಿ ಸೇನೆ ಕಾರ್ಯಾಚರಣೆ ನಡೆಸುತ್ತಿದ್ದು, 180 ಬಿಎನ್ ಸಿಆರ್’ಪಿಎಫ್ ಬೆಟಾಲಿಯನ್, ಆರ್ ಆರ್ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಪಾಲ್ಗೊಂಡಿದ್ದಾರೆ.
ಈ ವೇಳೆ ಹಲವು ಉಗ್ರರನ್ನು ಎನ್’ಕೌಂಟರ್ ಮಾಡಲಾಗಿದೆ ಎಂದು ಹೇಳಲಾಗಿದ್ದು, ಖಚಿತ ಮಾಹಿತಿ ತಿಳಿದುಬರಬೇಕಿದೆ. ಇನ್ನು, ಈ ವೇಳೆ ಸಿಆರ್’ಪಿಎಫ್’ನ ಕೆಲವು ಯೋಧರಿಗೂ ಗಾಯಗಳಾಗಿವೆ ಎಂದು ವರದಿಯಾಗಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
Discussion about this post