No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Thursday, February 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಕ್ರೀಡೆ

ಪ್ರಶಾಂತ್ ಸಂಬರಗಿ ಪ್ರಯತ್ನದ ಫಲ: ರಾಜ್ಯಕ್ಕೆ ಪ್ಯಾಡಲ್ ಟೆನ್ನಿಸ್ ಲಗ್ಗೆ

ಯುರೋಪ್, ಅಮೆರಿಕಾ ಕೆನಡಾ, ದುಬೈ ಹಾಗೂ ಜಪಾನ್ ದೇಶಗಳ ಆಟ ನಮ್ಮ ಗಾರ್ಡನ್ ಸಿಟಿಯಲ್ಲಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 25, 2019
in ಕ್ರೀಡೆ
0
ಪ್ರಶಾಂತ್ ಸಂಬರಗಿ ಪ್ರಯತ್ನದ ಫಲ: ರಾಜ್ಯಕ್ಕೆ ಪ್ಯಾಡಲ್ ಟೆನ್ನಿಸ್ ಲಗ್ಗೆ
Share on FacebookShare on TwitterShare on WhatsApp

ಬೆಂಗಳೂರು: ಸಿನಿಮಾ ವಲಯದಲ್ಲಿ ಅತ್ಯಂತ ಜನಪ್ರಿಯ ಹೆಸರು ಗಳಿಸಿರುವ ಪ್ರಶಾಂತ್ ಸಂಬರಗಿ ಈಗ ರಾಜ್ಯ ಕ್ರೀಡಾ ಲೋಕಕ್ಕೂ ಐತಿಹಾಸಿಕ ಎನ್ನುವಂತಹ ಮಹತ್ವದ ಮೈಲಿಗಲ್ಲಿಗೆ ಕಾರಣೀಬೂತರಾಗಿದ್ದಾರೆ. ಏನು ಆ ಸಾಧನೆ? ಮುಂದೆ ಓದಿ…

ವಿಶ್ವದಾದ್ಯಂತ ಸುಮಾರು ಮೂರು ಕೋಟಿಗೂ ಅಧಿಕ ಕ್ರೀಡಾಪಟುಗಳ ಜೀವನವೇ ಆಗಿರುವ ಪ್ಯಾಡಲ್ ಟೆನ್ನಿಸ್ ಯುರೋಪ್, ಅಮೆರಿಕಾ ಕೆನಡಾ, ದುಬೈ ಹಾಗೂ ಜಪಾನ್ ದೇಶಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಕ್ರೀಡೆಯಾಗಿದ್ದು, ಕೋಟ್ಯಂತರ ಮಂದಿಯನ್ನು ತನ್ನತ್ತ ಸೆಳೆದಿದೆ. ರಾಜ್ಯದ ಮಟ್ಟಿಗೆ ನೋಡುವುದಾದರೆ ಈ ಕ್ರೀಡೆ ನಮ್ಮಲ್ಲಿ ಕಾಲಿಟ್ಟಿರುವುದು ಇದೇ ಮೊದಲು.

ಸದ್ಯ ಕರ್ನಾಟಕ ರಾಜ್ಯ ಪ್ಯಾಡಲ್ ಟೆನ್ನಿಟ್ ಸಂಸ್ಥೆಯ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಶಾಂತ್ ಸಂಬರಗಿಯವರು ಯುರೋಪ್ ಪ್ರವಾಸದಲ್ಲಿದ್ದ ವೇಳೆ ಈ ಕ್ರೀಡೆ ಬಗ್ಗೆ ತಿಳಿದು ಆಸಕ್ತಿಗೊಂಡರು. ಇಂತಹ ಕ್ರೀಡೆಯನ್ನು ನಮ್ಮ ರಾಜ್ಯಕ್ಕೂ ತಂದು, ಜನಪ್ರಿಯಗೊಳಿಸಬೇಕು ಎಂದು ನಿರ್ಧರಿಸಿದರು.

ಬೆಂಗಳೂರಿಗೆ ಹಿಂತಿರುಗಿದ ತತಕ್ಷಣ ಬಿಬಿಎಂಪಿ ಜೊತೆಯಲ್ಲಿ ಸಹಯೋಗ ಮಾಡಿಕೊಂಡು ಸದಾಶಿವ ನಗರದ ವೀರೇಂದ್ರ ಪಾಟೀಲ್ ಪಾರ್ಕ್’ನಲ್ಲಿ ಪೂರ್ವ ಪ್ರಜ್ಞಾ ಲೇಔಟ್ ಎದುರಿನ ಜಾಗದಲ್ಲಿ ಪ್ಯಾಡಲ್ ಟೆನ್ನಿಸ್ ಕೋರ್ಟ್ ಅನ್ನು ನಿರ್ಮಿಸುವಲ್ಲಿ ಯಶಸ್ವಿಯಾದರು. ಈ ಮೂಲಕ ವಿಶ್ವದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಪಾಡಲ್ ಟೆನ್ನಿಸ್ ಕ್ರೀಡೆ ಈಗ ಭಾರತಕ್ಕೂ ಕಾಲಿಟ್ಟು ತನ್ನ ಅಲೆಯನ್ನು ಬೀಸಲು ಪ್ರಾರಂಭಿಸಿದೆ.


ಭಾರತದಲ್ಲೇ ಮೊದಲ ಕೋರ್ಟ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಸದಾಶಿವನಗರದ ಪ್ಯಾಡಲ್ ಟೆನ್ನಿಸ್ ಕೋರ್ಟನ್ನು ಉಪಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಹಾಗೂ ಮಲ್ಲೇಶ್ವರಂ ಕ್ಷೇತ್ರದ ಶಾಸಕರಾದ ಡಾ. ಅಶ್ವತ್ಥ್ ನಾರಾಯಣ್ ಅವರು ಇತ್ತೀಚೆಗೆ ಉದ್ಘಾಟಿಸಿದರು.

ಈ ಕುರಿತಂತೆ ಮಾತನಾಡಿರುವ ಸಂಘದ ಅಧ್ಯಕ್ಷೆ ಸ್ನೇಹ ಅಬ್ರಹಾಂ ಸೆಹಗಲ್, ಹೊಸ ಕ್ರೀಡೆಯನ್ನು ಕಲಿಯುವಲ್ಲಿ ಜನರ ಆಸಕ್ತಿಯನ್ನು ನೋಡಿ ನಮಗೆ ಆಶ್ಚರ್ಯವಾಗಿದೆ. ಕರ್ನಾಟಕದಲ್ಲಿ ಪ್ಯಾಡಲ್ ಟೆನ್ನಿಸನ್ನು ಜನಪ್ರಿಯಗೊಳಿಸುವುದು ನಮ್ಮ ಮುಖ್ಯ ಉದ್ದೇಶ ಎಂದರು.

ವಿಶ್ವ ಪ್ಯಾಡಲ್ ಟೆನ್ನಿಸ್ ಪಂದ್ಯಾವಳಿಗೆ ಬಾಲ್ ಪೂರೈಕೆದಾರರಾದ ಬಾಬೊಲಾಟ್ ಕಂಪನಿ ಇಂಡಿಯನ್ ಪೆಡಲ್ ಫೆಡರೇಶನ್ ಜೊತೆಗೆ ಪಾಲುದಾರರಾಗಿ ತನ್ನ ಕೈ ಜೋಡಿಸಿದೆ.


ಕೋರ್ಟ್ ನಿರ್ಮಾಣವಾದ ಹಿನ್ನೆಲೆಯಲ್ಲಿ ಈಗ ಜನವರಿ 26 ಹಾಗೂ 27 ರಂದು ರಾಷ್ಟಮಟ್ಟದ ಪಾಡಲ್ ಕ್ರೀಡೆ ಆಯೋಜಿಸಲಾಗಿದೆ. ಈಗಾಗಲೇ ಸಂಘದ ವೆಬ್’ಸೈಟಲ್ಲಿ ನೊಂದಣಿ ಆರಂಭವಾಗಿದೆ. ಆಸಕ್ತ ಕ್ರೀಡಾಪಟುಗಳು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದ್ದು, ಈ ಪಂದ್ಯಾವಳಿಯ ವಿಜೇತರು ಅಂತಾರಾಷ್ಟಿಯ ಮಟ್ಟದಲ್ಲಿ ನಡೆಯುವ ಪಂದ್ಯಕ್ಕೆ ಅರ್ಹರಾಗಿರುತ್ತಾರೆ.

ಇನ್ನು, ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಜನರಿಗೆ ಪ್ಯಾಡಲ್ ಟೆನಿಸನ್ನು ಪರಿಚಯಿಸುವ ಉದ್ದೇಶವನ್ನು ಸಂಸ್ಥೆ ಹೊಂದಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆ ಏರ್ಪಡಿಸುವುದು, ಆಟೋಟೋದ ನಿಯಮಗಳ ಬಗ್ಗೆ ಪ್ರತಿಯೊಂದು ಕ್ಲಬ್’ಗಳಿಗೆ ಮಾಹಿತಿ ನೀಡುವ ಉದ್ದೇಶ ಹೊಂದಿದೆ.

ಪ್ಯಾಡಲ್ ಟೆನ್ನಿಸ್ ಕ್ರೀಡೆಯ ಪರಿಚಯ
“ಟೆನ್ನಿಸ್ ವಿತ್ ವಾಲ್ಸ್” ಹಾಗೂ “ಸ್ಕ್ವಾಷ್ ಇನ್ ದಿ ಸನ್” ಎಂಬ ಹೆಸರಿನಿಂದಲೂ ಕರೆಯಲ್ಪಡುವ ಈ ಕ್ರೀಡೆಯನ್ನು ಮಹಿಳೆ ಪುರುಷ ಎಂಬ ಬೇಧಭಾವವಿಲ್ಲದೆ ಎಲ್ಲ ವಯೋವರ್ಗದವರೂ ಆಡಬಹುದಾಗಿದೆ. ಸುಲಭವಾಗಿ ಕಲಿಯಬಹುದಾದ ಈ ಕ್ರೀಡೆಯನ್ನು ಗಾಜಿನ ಕೋರ್ಟ್ ಒಳಗೆ ಆಡುತ್ತಾರೆ.

66 ಅಡಿ 33 ಅಡಿಯಷ್ಟು ವಿಸ್ತೀರ್ಣ ಹೊಂದಿರುವ ಪಾಡಲ್ ಟೆನ್ನಿಸ್ ಕೋರ್ಟ್ ಟೆನ್ನಿಸ್ ಕೋರ್ಟ್’ಗಿಂತ ಚಿಕ್ಕದಾಗಿದೆ. ಬಹುಬೇಗನೆ ಕಲಿಯಬಹುದಾದ ಈ ಕ್ರೀಡೆಯನ್ನು ಜಗತ್ತಿನಾದ್ಯಂತ 3 ಕೋಟಿ ಜನರು ಆಡುತ್ತಾರೆ.


ಪ್ಯಾಡಲ್ ಟೆನ್ನಿಸ್ ಆಟದ ನಿಯಮಗಳು:
1. ಪ್ಯಾಡಲ್ ಟೆನ್ನಿಸನ್ನು ಯಾವಾಗಲೂ ಡಬಲ್ಸ್ ಮಾದರಿಯಲ್ಲಿ ಆಡುತ್ತಾರೆ
2. ಕ್ರೀಡೆಯು ಅಂಡರ್ಹ್ಯಾಂಡ್ ಸರ್ವಿಸ್ ಮೂಲಕ ಶುರುವಾಗುತ್ತದೆ ಹಾಗೂ ಎರಡು ಪ್ರಯತ್ನಗಳನ್ನು ಒಳಗೊಂಡಿರುತ್ತದೆ.
3. ಟೆನ್ನಿಸ್ ಆಟದ ಹಾಗೆಯೇ ಇದರಲ್ಲಿ ಬಾಲನ್ನು ಒಮ್ಮೆ ಮಾತ್ರ ಹಿಟ್ ಹಾಗೂ ಬೌನ್ಸ್ ಮಾಡಬಹುದು
4. ಎದುರಾಳಿಯು ಬಾಲನ್ನು ಡೈರೆಕ್ಟ್ ಹಿಟ್ ಮಾಡದೆ ನೆಲದಮೇಲೆ ಬೌನ್ಸ್ ಆದ ಮೇಲಷ್ಟೇ ಹೊಡೆಯಬೇಕು

ಅಂಕಗಳು
1. ಪ್ಯಾಡಲ್ ಟೆನ್ನಿಸ್ಸಿನ ಅಂಕಗಳು ಟೆನ್ನಿಸ್ ಅಂಕಗಳ ಹಾಗೆಯೇ ಇರುತ್ತದೆ (ಉದಾಹರಣೆ: 15/0, 30/0, 40/0, ಅಡ್ವಾಂಟೇಜ್, ಡ್ಯೂಸ್ ಇತ್ಯಾದಿ )
2. ಪ್ಯಾಡಲ್ ಟೆನ್ನಿಸ್ ಗೆಲ್ಲಲು 2 ಸೆಟ್ಟಲ್ಲಿ ಜಯಗಳಿಸಬೇಕು (ಒಂದು ಸೆಟ್ 6 ಪಂದ್ಯಗಳನ್ನು ಒಳಗೊಂಡಿರುತ್ತದೆ )

ಕರ್ನಾಟಕ ರಾಜ್ಯ ಪೆಡಲ್ ಸಂಘ ಸಂಸ್ಥೆ
ಪ್ಯಾಡಲ್ ಟೆನ್ನಿಸನ್ನು ಕರ್ನಾಟಕ ರಾಜ್ಯದಲ್ಲಿ ಖ್ಯಾತಗೊಳಿಸುವುದೇ ಸಂಸ್ಥೆಯ ಮುಖ್ಯ ಗುರಿಯಾಗಿದೆ. ಇದಕ್ಕಾಗಿ ಕರ್ನಾಟಕದ ಪ್ರತಿ ಜಿಲ್ಲೆಯಲ್ಲಿ ಪ್ಯಾಡಲ್ ಟೆನ್ನಿಸ್ ಸ್ಪೋರ್ಟ್ಸ್ ಕ್ಲಬ್ ಸ್ಥಾಪಿಸಲು ಉದ್ದೇಶಿಸಿದೆ.


ಪ್ಯಾಡಲ್ ಟೆನ್ನಿಸ್ ಕರ್ನಾಟಕದಲ್ಲಿ ಯಾಕೆ ಬೇಕು?
1. ಪ್ಯಾಡಲ್ ಕ್ರೀಡೆಯು ಯೂರೋಪ್, ಅಮೆರಿಕ ಕೆನಡಾ, ದುಬೈ ಹಾಗೂ ಜಪಾನ್ ದೇಶಗಳಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿದೆ ಹಾಗೂ ಈ ಶತಮಾನದ ಕ್ರೀಡೆ ಎಂದು ಖ್ಯಾತಿಗೊಂಡಿದೆ.

2. ಪ್ಯಾಡಲ್ ಟೆನ್ನಿಸ್ ಎಲ್ಲರೂ ಆಡಬಹುದಾದಂತಹ ಅತ್ಯಂತ ಸುಲಭದ ಕ್ರೀಡೆ ಹಾಗೂ ಈ ಕ್ರೀಡೆಯನ್ನು ಆಡುವುದರಿಂದ ಇನ್ನಷ್ಟು ಬಲಾಢ್ಯರಾಗಬಹುದು.

3. ಭಾರತ ದೇಶದಲ್ಲಿ ಕರ್ನಾಟಕ ಅತ್ಯಂತ ಅಭಿವೃದ್ಧಿ ಹೊಂದುತ್ತಿರುವ ರಾಜ್ಯ. ಐಟಿ ಸಿಟಿ, ಗಾರ್ಡೆನ್ ಸಿಟಿ ಎಂದೇ ಖ್ಯಾತಿಪಡೆದ ಬೆಂಗಳೂರಿನ ಜನಸಂಖ್ಯೆ ದಿನೇ ದಿನೇ ಏರುತ್ತಿದೆ. ಕೆಲಸದ ಒತ್ತಡದಿಂದ ತತ್ತರಿಸಿ ಹೋಗಿರುವ ಜನರಿಗೆ ಇಂತಹ ಕ್ರೀಡೆಯ ಅಗತ್ಯವಿದೆ.

4. ಈಗಿನ ತಾಂತ್ರಿಕಯುಗದಲ್ಲಿ ಜನರಿಗೆ ಯಾವುದಕ್ಕೂ ಸಮಯವಿಲ್ಲ. ಅವರು ಕೆಲಸದ ಒತ್ತಡದಲ್ಲಿ ತಮ್ಮ ಆರೋಗ್ಯದ ಕಡೆ ಕಾಳಜಿ ವಹಿಸುವುದಿಲ್ಲ, ಮನೆಯವರ ಜೊತೆ ಹಾಗೂ ಸ್ನೇಹಿತರೊಡನೆ ಮಾತನಾಡಲೂ ಅವರಿಗೆ ಸಮಯವವಿಲ್ಲ. ಪ್ಯಾಡಲ್ ಟೆನ್ನಿಸ್ ಆಡುವುದರಿಂದ ಗಂಟೆಗೆ 500 ಕ್ಯಾಲೊರಿಸ್ ಇಳಿಸಬಹುದು, ಮನೆಯವರ ಹಾಗೂ ಸ್ನೇಹಿತರ ಜೊತೆ ಇದನ್ನು ಆಡಬಹುದರಿಂದ ಅವರ ಜೊತೆ ಬಾಂಧವ್ಯವು ಚೆನ್ನಾಗಿರುತ್ತದೆ ಹಾಗೂ ಹೊಸಜನರ ಸಂಪರ್ಕವೂ ಆಗುತ್ತದೆ.

Tags: AmericaBBMPBENGALURUCanadaDubaiKannada NewsPaddle TennisPrashanth SambargiSportsSports in IndiaTennisಅಮೆರಿಕಾಕರ್ನಾಟಕಪ್ಯಾಡಲ್ ಟೆನ್ನಿಸ್ಪ್ರಶಾಂತ್ ಸಂಬರಗಿಬೆಂಗಳೂರು
Share196Tweet123Send
Previous Post

ಗುರುಗ್ರಾಮದಲ್ಲಿ ಏಳಂತಸ್ತಿನ ಕಟ್ಟಡ ಕುಸಿತ: ಏಳು ಸಾವು

Next Post

ಚುನಾವಣೆಯಲ್ಲಿ ಮೋದಿ ಕೊಡುವ CHECK MATEಗೆ ಯುಪಿಎ ಅಡ್ಡಡ್ಡ ಮಲಗುವುದು ನಿಶ್ಚಿತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚುನಾವಣೆಯಲ್ಲಿ ಮೋದಿ ಕೊಡುವ CHECK MATEಗೆ ಯುಪಿಎ ಅಡ್ಡಡ್ಡ ಮಲಗುವುದು ನಿಶ್ಚಿತ

ಚುನಾವಣೆಯಲ್ಲಿ ಮೋದಿ ಕೊಡುವ CHECK MATEಗೆ ಯುಪಿಎ ಅಡ್ಡಡ್ಡ ಮಲಗುವುದು ನಿಶ್ಚಿತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

ಸಂಚಾರ ದಟ್ಟಣೆ ನಿಯಂತ್ರಿಸಲು ರೈಲ್ವೆ ಕೆಳ ಸೇತುವೆಗಳು ಸಹಕಾರಿ: ಸಚಿವ ಸೋಮಣ್ಣ

February 26, 2026
ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

ಪತ್ರಕರ್ತರ ಹಿತ ಕಾಯಲು ಬದ್ಧ: ಕೇಂದ್ರ ಸಚಿವರ ಭರವಸೆ

February 26, 2026
ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

ಮನೆ ನಿರ್ಮಾಣ ಸಾಮಗ್ರಿ ಕಳ್ಳತನ | ಓರ್ವನ ಬಂಧನ

February 26, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

ಟಿಕೆಟ್ ಟು ಹಾಲಿವುಡ್ | ಬೆಂಗಳೂರಿನ 2026ರ ಅತಿದೊಡ್ಡ ಹೋಳಿ ಸಂಭ್ರಮದ ಟಿಕೆಟ್‌ಗಳು ಈಗ ಬುಕ್‌ಮೈಶೋನಲ್ಲಿ!

February 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL