ಭದ್ರಾವತಿ: ಲೋಕಸಭೆ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ರೌಡಿ ಶೀಟರ್’ಗಳ ಪೆರೇಡ್ ನಡೆಸಿರುವ ಪೊಲೀಸ್ ಇಲಾಖೆ ಬಾಲ ಬಿಚ್ಚದಂತೆ ಎಚ್ಚರಿಕೆ ನೀಡಿದೆ.
ಡಿವೈಎಸ್ಪಿ ಓಂಕಾರನಾಯ್ಕ ನೇತೃತ್ವದಲ್ಲಿ ನಗರದ 80 ಕ್ಕೂ ಹೆಚ್ಚು ರೌಡಿಶೀಟರ್ಗಳನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಎಚ್ಚರಿಸಿದ್ದಾರೆ. ಅಲ್ಲದೇ, ಚುನಾವಣೆಯ ಸಂದರ್ಭದಲ್ಲಿ ಯಾವುದೇ ರೀತಿಯ ಸಮಾಜಘಾತುಕ ಕೆಲಸಗಳಲ್ಲಿ ತೊಡಗಿದರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ತಹಸೀಲ್ದಾರ್ ಸೋಮಶೇಖರ್, ನಗರ ವೃತ್ತ ಪೊಲೀಸ್ ಇನ್ಸ್ಪೆಕ್ಟರ್ ಮಧುಸುದನ್, ಹಳೇನಗರ ಪೊಲೀಸ್ ಠಾಣಾ ಸಬ್ಇನ್ಸ್ಪೆಕ್ಟರ್ ಭರತ್ ಕುಮಾರ್, ನ್ಯೂಟೌನ್ ಸಬ್ಇನ್ಸ್ಪೆಕ್ಟರ್ ಸುರೇಶ್, ಹೊಸಮನೆ ಶಿವಾಜಿ ವೃತ್ತ ಠಾಣೆಯ ಪ್ರೋಬೊಷನರಿ ಡಿವೈಎಸ್ಪಿ ಭರತ್ ಕುಮಾರ್ ರೆಡ್ಡಿ ಸೇರಿದಂತೆ ಸಿಬ್ಬಂದಿ ಉಪಸ್ಥಿತರಿದ್ದರು.
(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)
Discussion about this post