No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Wednesday, February 11, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ-4.9 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಮಧು ಬಂಗಾರಪ್ಪ ವಿಶ್ವಾಸ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 19, 2019
in Small Bytes, ಭದ್ರಾವತಿ
0
ಭದ್ರಾವತಿ-4.9 ಲಕ್ಷ ಮತಗಳ ಅಂತರದಿಂದ ಗೆಲುವು ನಿಶ್ಚಿತ: ಮಧು ಬಂಗಾರಪ್ಪ ವಿಶ್ವಾಸ
Share on FacebookShare on TwitterShare on WhatsApp

ಭದ್ರಾವತಿ: ಕಳೆದ ಲೋಕಸಭಾ ಉಪ ಚುನಾವಣೆಯಲ್ಲಿ ಸೋಲು ಕಂಡಿರುವುದು ನಿಜ. ತಮ್ಮ ಸೋಲಿಗೆ ಯಾರು ಹೊಣೆ ಅಲ್ಲ. ಕಾಲಾವಕಾಶ, ಗೊಂದಲ ಸೇರಿ ಹಲವಾರು ಕಾರಣಗಳಿಂದ ಸೋಲು ಕಾಣಬೇಕಾಯಿತು. ಈ ಭಾರಿ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಮೈತ್ರಿ ಒಕ್ಕೂಟದ ಲೋಕಸಭಾ ಅಭ್ಯರ್ಥಿ ಎಸ್. ಮಧು ಬಂಗಾರಪ್ಪ ಹೇಳಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಈ ಭಾರಿ ಸಮಿಶ್ರ ಸರಕಾರದ ಒಮ್ಮತದ ಅಭ್ಯರ್ಥಿಯಾಗಿಸಿದ್ದಾರೆ. ಎರಡು ಪಕ್ಷಗಳ ಕಾರ್ಯಕರ್ತರೆಲ್ಲರು ಮನಸ್ಸು ಮಾಡಿದ್ದಲ್ಲಿ ಈ ಭಾರಿ 4.9 ಲಕ್ಷ ಮತಗಳಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದರು.

ಸಮ್ಮಿಶ್ರ ಸರಕಾರ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ರೂ. 491 ಕೋಟಿ ನೆರವು ನೀಡಿದೆ. ಜಿಲ್ಲೆಯಲ್ಲಿ ಹಲವು ದಶಕದಿಂದ ನೆನೆಗುದಿಯಲ್ಲಿದ್ದ ನೀರಾವರಿ ಯೋಜನೆಗಳಿಗೆ ಭರಪೂರ ಹಣದ ನೆರವನ್ನು ನೀಡುವಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ, ನೀರಾವರಿ ಸಚಿವ ಡಿ.ಕೆ. ಶಿವಕುಮಾರ್ ಅವರ ಪಾತ್ರ ಹಿರಿದು. ಹಿಂದಿನ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಅವಧಿಯಲ್ಲಿ ಈ ಪ್ರಮಾಣದ ನೆರವನ್ನು ನೀರಾವರಿ ಯೋಜನೆಗೆ ಬಿಡುಗಡೆ ಮಾಡಿರಲಿಲ್ಲ, ಇದನ್ನು ಪೂರೈಸಿದ ಕೀರ್ತಿ ಸಮ್ಮಿಶ್ರ ಸರಕಾರದ್ದಾಗಿದೆ.

ಇಲ್ಲಿ ತನಕ ನಾನಾ ಯೋಜನೆಯಲ್ಲಿ ಸುಮಾರು ರೂ. 1,142 ಕೋಟಿ ರೂಪಾಯಿಗಳನ್ನು ಅನೇಕ ಅಭಿವೃದ್ಧಿ ಯೋಜನೆಗಳಿಗೆ ಬಿಡುಗಡೆ ಮಾಡಿದೆ, ಆದರೆ ಜಿಲ್ಲೆಗೆ ಕೇಂದ್ರದ ಕೊಡುಗೆ ಏನು ಎಂಬುದನ್ನು ಬಹಿರಂಗ ಮಾಡಲಿ ಎಂದು ಸವಾಲು ಹಾಕಿದರು.

ಕೆಲಸದ ಸಾಧನೆ ಮಾಡದ ಬಿ.ವೈ. ರಾಘವೇಂದ್ರ ಅವರಿಗೆ ತಕ್ಕಪಾಠ ಕಲಿಸುವ ಚುನಾವಣೆ ಇದಾಗಿ ಬಿಜೆಪಿ ರಾಜಕೀಯ ದುಸ್ಥಿತಿಯತ್ತ ಸಾಗಿದೆ. ಹಾಲಿ ಸಂಸದರು ತಮ್ಮ ಹಕ್ಕುಗಳಿಗಾಗಿ ಕಾರ್ಮಿಕರು ಹೋರಾಟ ಮಾಡುತ್ತಿರುವ ಸ್ಥಳಗಳಲ್ಲಿ ಕೇವಲ ಪೋಟೋಗಳಿಗೆ ಪೋಸ್ ನೀಡಿ ಹೋಗುವುದು ಬಿಟ್ಟರೆ ಸಾಧನೆ ಕೇವಲ ಶೂನ್ಯ. ಈ ಕ್ಷೇತ್ರದಲ್ಲಿ ಅಪ್ಪಾಜಿಗೌಡರ ನೆರವು ಸಹಕಾರದಿಂದ ಮತ್ತಷ್ಟು ಹೆಚ್ಚಿನ ಅಂತರವನ್ನು ನಾನು ನಿರೀಕ್ಷೆ ಮಾಡಿದ್ದೇನೆ ಎಂದರು.
ನಮ್ಮ ತಂದೆ ದಿವಂಗತ ಬಂಗಾರಪ್ಪನವರ ಕೊಡುಗೆ, ಎಂ.ಜೆ.ಅಪ್ಪಾಜಿ, ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಪೂರ್ಯನಾಯ್ಕ ಅವರ ಶಕ್ತಿ ಹಾಗೂ ವಿಶೇಷವಾಗಿ ಈ ಕ್ಷೇತ್ರದ ಜನರು ನನಗೆ ಕಳೆದ ಬಾರಿ ನೀಡಿದ್ದಕ್ಕಿಂತ ಹೆಚ್ಚಿನ ಅಂತರವನ್ನು ಈಬಾರಿ ಕೊಡಿಸುತ್ತಾರೆ ಎಂಬ ನಿರೀಕ್ಷೆ ನನಗಿದ್ದು, ಅದರ ಋಣವನ್ನು ತೀರಿಸಲು ನಾನು ಸಿದ್ದನಾಗಿದ್ದೇನೆ. ಮುಂದಿನ 30 ದಿನ ನನ್ನನ್ನು ಬೆಂಬಲಿಸಿ ಸಹಕಾರ ಕೊಡಿ ಮುಂದಿನ ಐದು ವರ್ಷ ಈ ಜಿಲ್ಲೆಯ ಮಗನಾಗಿ ನಿಮ್ಮೊಂದಿಗೆ ಕೆಲಸ ಮಾಡುವ ಮೂಲಕ ನೆನೆಗುದಿಯ ಬೇಡಿಕೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಅಧಿಕಾರ ಎಂಬುದು ತಮ್ಮಲ್ಲೆ ಅಲ್ಲ ನಮ್ಮವರಲ್ಲಿ ಇರಬೇಕು ಎಂದ ಅವರು ಏ: 3 ರಂದು ನಾಮಪತ್ರ ಸಲ್ಲಿಸುವುದಾಗಿ ತಿಳಿಸಿದರು.

ಹಾಲಿ ಮಾಜಿ ಸಂಸದರು ಹತ್ತು ವರ್ಷಗಳ ಮಾಡಿರುವ ಕೆಲಸ ಶೂನ್ಯ: ಅಪ್ಪಾಜಿ
ಕಳೆದ ಹತ್ತು ವರ್ಷದಿಂದ ಲೋಕಸಭಾ ಸದಸ್ಯರಾಗಿ ಕೆಲಸ ಮಾಡಿರುವ ಬಿ.ಎಸ್.ಯಡಿಯೂರಪ್ಪ ಹಾಗು ಬಿ.ವೈ.ರಾಘವೇಂದ್ರ ಅವರ ಕೊಡುಗೆ ಏನು ಎಂಬುದನ್ನು ಬಹಿರಂಗ ಮಾಡಲಿ ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಸವಾಲು ಹಾಕಿದರು.

ರಾಜ್ಯದಲ್ಲಿ ಮುಖ್ಯಮಂತ್ರಿ ಆಗಿದ್ದಾಗ ಬಿ.ಎಸ್. ಯಡಿಯೂರಪ್ಪ ಇಲ್ಲಿನ ವಿಐಎಸ್‍ಎಲ್ ಕಾರ್ಖಾನೆಗೆ 150 ಹೆಕ್ಟೇರ್ ಗಣಿ ಮಂಜೂರು ಮಾಡಲು ಸಾದ್ಯವಾಗಿಲ್ಲ. ಎಂಪಿಎಂ ಕಾರ್ಖಾನೆಗೆ ಕೇಳಿದ್ದ 300 ಕೋಟಿ ಬ್ಯಾಂಕ್ ಗ್ಯಾರಂಟಿ ಕಡತಕ್ಕೆ ಒಪ್ಪಿಗೆ ನೀಡಲಿಲ್ಲ, ಆಗ ಅವರಿಗೆ ಸಿಕ್ಕ ಅಧಿಕಾರವನ್ನು ಈ ಕ್ಷೇತ್ರಕ್ಕೆ ವಿನಿಯೋಗ ಮಾಡಿದ್ದಾರೆ ನಗರದಲ್ಲಿನ ಅವಳಿ ಕಾರ್ಖಾನೆಗಳು ಉತ್ತುಂಗದಲ್ಲಿ ಇರುತ್ತಿತ್ತು, ಆಗ ಮಾಡದ ಕೆಲಸವನ್ನು ಈಗ ಮಾಡುತ್ತೇವೆ ಎಂದು ಹೇಳಿಕೊಂಡು ಚುನಾವಣೆ ಗಿಮಿಕ್ ಮಾಡುತ್ತಿರುವುದು ಎಷ್ಟು ಸಮಂಜಸ ಎಂದು ಕಿಡಿಕಾರಿದರು.

ಕಾರ್ಖಾನೆಗಳು ಅವನತಿಯತ್ತ ಸಾಗಿ ಕಾರ್ಮಿಕರು ಕ್ಷೇತ್ರ ತೊರೆದು ಗುಳೆ ಹೋಗುವಂತಾಗಿದೆ. ರೈತರು, ಆಟೋಚಾಲಕರು, ವರ್ತಕರು ವ್ಯವಸ್ಥೆಯಲ್ಲಿ ಉತ್ತಮ ಸ್ಥಿತಿಕಾಣದಂತಾಗಿದೆ. ನಾಲ್ಕುವರೆ ವರ್ಷಗಳ ಕಾಲ ಲೋಕಸಭೆಯಲ್ಲಿ ಏನು ಮಾತನಾಡದೆ ಚುನಾವಣೆ ಸಂದರ್ಭದಲ್ಲಿ ಎಲ್ಲವನ್ನು ತಾವೇ ಮಾಡಿದ್ದೇವೆ ಎಂದು ಬೊಬ್ಬೆ ಹೊಡೆಯುವ ಇಚ್ಛಾಶಕ್ತಿ ಇಲ್ಲದ ನಾಯಕರ ಆಯ್ಕೆಯಿಂದ ಏನೂ ಪ್ರಯೋಜನವಿಲ್ಲ, ಆದರೆ ದೇವೇಗೌಡರು ಅಧಿಕಾರದಿಂದ ಇಳಿಯುವ ಸಂದರ್ಭದಲ್ಲಿ ವಿಐಎಸ್‍ಎಲ್ ಕಾರ್ಖಾನೆಯನ್ನು ಕೇಂದ್ರ ಉಕ್ಕು ಪ್ರಾಧಿಕಾರಕ್ಕೆ ಸೇರ್ಪಡೆ ಮಾಡುವ ಕಡತಕ್ಕೆ ಸಹಿ ಹಾಕಿ ಜನರ ಇಚ್ಚೆ ಪೂರೈಸಿದ್ದರು, ಆದರೆ ಮುಖ್ಯಮಂತ್ರಿ ಅಧಿಕಾರ ಇದ್ದಾಗ ಬಿ.ಎಸ್.ಯಡಿಯೂರಪ್ಪ ಕಾರ್ಖಾನೆಗಳಿಗೆ ಏನೂ ಕೊಡುಗೆ ನೀಡದೆ ನಾಟಕ ಮಾಡಿದರು ಎಂದು ಟೀಕಿಸಿದರು.

ನಾಲ್ಕು ವರ್ಷ ಹನ್ನೊಂದು ತಿಂಗಳು ಆಯ್ಕೆಯಾದ ವ್ಯಕ್ತಿಗಳನ್ನು ಬೈಯುವ ಜನರು ಕೇವಲ ಒಂದು ತಿಂಗಳ ಚುನಾವಣೆ ಹೊಸ್ತಿಲಲ್ಲಿ ರಾಜಕೀಯ ದೊಂಬರಾಟ ವ್ಯಕ್ತಿಗೆ ಜೈ ಎನ್ನುವ ಮತದಾರರ ಮನಸ್ಸನ್ನು ನನ್ನ 40 ವರ್ಷದ ರಾಜಕೀಯ ಬದುಕಿನಲ್ಲಿ ಇನ್ನು ಅರ್ಥ ಮಾಡಿಕೊಳ್ಳಲು ಸಾಧ್ಯವಾಗಿಲ್ಲ. ಮತದಾರರು ಮೋದಿ, ದೇವೇಗೌಡರನ್ನು ನೋಡಿ ಮತ ನೀಡದೆ ಯೋಚಿಸಿ ಮತ ನೀಡುವಂತೆ ಮನವಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ ಪಕ್ಷದ ಅಧ್ಯಕ್ಷ ಆರ್. ಕರುಣಾಮೂರ್ತಿ, ಜಿಪಂ ಸದಸ್ಯರಾದ ಜೆ.ಪಿ. ಯೋಗೇಶ್, ಎಸ್. ಕುಮಾರ್, ಮಣಿಶೇಖರ್, ನಗರಸಭಾಧ್ಯಕ್ಷೆ ಎಸ್.ಹಾಲಮ್ಮ ಸದಸ್ಯರಾದ ಎಸ್. ಸುಧಾಮಣಿ, ವಿಶಾಲಾಕ್ಷಿ, ಎಚ್.ಬಿ. ರವಿಕುಮಾರ್ ಪಕ್ಷದ ಮುಖಂಡರಾದ ಸುಕನ್ಯ, ಎಚ್.ಆರ್. ಲೋಕೇಶರಾವ್, ಧರ್ಮೇಗೌಡ, ಧರ್ಮಣ್ಣ, ಸಮೀವುಲ್ಲಾ, ಪೀರ್ ಷರೀಫ್, ಸುಜಾತ, ಡಿ.ಟಿ. ಶ್ರೀಧರ್ ಮತ್ತಿತರರು ಉಪಸ್ಥಿತರಿದ್ದರು.

(ವರದಿ: ಆರ್.ವಿ. ಕೃಷ್ಣ, ಭದ್ರಾವತಿ)

Tags: BhadravathiKannada NewsLoksabha election 2019M J AppajiMadhu BangarappaMalnad Newsಎಸ್.ಮಧು ಬಂಗಾರಪ್ಪಬಿ.ವೈ. ರಾಘವೇಂದ್ರಭದ್ರಾವತಿಲೋಕಸಭಾ ಚುನಾವಣೆ-2019
Share196Tweet123Send
Previous Post

ಹೋಳಿ ಹಬ್ಬಕ್ಕೆ ಬಲವಂತವಾಗಿ ಬಣ್ಣ ಹಚ್ಚೀರಿ ಜೋಕೆ: ಶಿವಮೊಗ್ಗ ಜಿಲ್ಲಾ ಪೊಲೀಸ್ ಎಚ್ಚರಿಕೆ

Next Post

ದೇಶದ ಮೊದಲ ಲೋಕಪಾಲ್ ಆಗಿ ಜ. ಪಿನಾಕಿಚಂದ್ರ ಘೋಸ್ ನೇಮಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೇಶದ ಮೊದಲ ಲೋಕಪಾಲ್ ಆಗಿ ಜ. ಪಿನಾಕಿಚಂದ್ರ ಘೋಸ್ ನೇಮಕ

ದೇಶದ ಮೊದಲ ಲೋಕಪಾಲ್ ಆಗಿ ಜ. ಪಿನಾಕಿಚಂದ್ರ ಘೋಸ್ ನೇಮಕ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

February 11, 2026
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

February 11, 2026
ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

February 11, 2026
ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

February 11, 2026
ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL