No Result
View All Result
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp
English Articles

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

by ಕಲ್ಪ ನ್ಯೂಸ್
March 18, 2026
0

Kalpa Media House  |  Manipal | Manipal Institute of Technology (MIT), Manipal, a constituent unit of Manipal Academy of Higher...

Read moreDetails
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
  • Advertise With Us
  • Grievances
  • About Us
  • Contact Us
Wednesday, March 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಹಿಂದೂಗಳ ಹೊಸ ವರ್ಷಾರಂಭ ಯುಗಾದಿಯಂದು ಧರ್ಮಧ್ವಜವನ್ನೇಕೆ ನಿಲ್ಲಿಸಬೇಕು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 6, 2019
in Special Articles
0
ಹಿಂದೂಗಳ ಹೊಸ ವರ್ಷಾರಂಭ ಯುಗಾದಿಯಂದು ಧರ್ಮಧ್ವಜವನ್ನೇಕೆ ನಿಲ್ಲಿಸಬೇಕು?
Share on FacebookShare on TwitterShare on WhatsApp

ಯಾವುದೇ ಕೃತಿಯನ್ನು ಮಾಡುವ ಮೊದಲು ಅದನ್ನು ಏಕೆ ಮಾಡಬೇಕು? ಅದರ ಹಿಂದಿನ ಶಾಸ್ತ್ರ, ಇತಿಹಾಸ ಏನು ಎಂದು ನಾವು ನೋಡುತ್ತೇವೆ. ಹಾಗಿದ್ದರೆ ಈಗ ಎಲ್ಲರೂ ಡಿಸೆಂಬರ್ 31 ರಂದು ಯಾಕೆ ಹೊಸ ವರ್ಷ ಆಚರಿಸುತ್ತಾರೆ? ಇದರ ಹಿಂದಿನ ಶಾಸ್ತ್ರ ಅಥವಾ ಇತಿಹಾಸವೇನು ಎಂದು ನಿಮಗೆ ಅನಿಸಿಲ್ಲವೇ? ಸರಿಯಾದ ಕಾರಣಗಳಿಲ್ಲದಿದ್ದರೂ ನಾವು ಪಾಶ್ಚಾತ್ಯರ ಅಂಧಾನುಕರಣೆ ಮಾಡುತ್ತಾ ಡಿಸೆಂಬರ್ 31 ರಂದು ಹೊಸವರ್ಷ ಎಂದು ಆಚರಿಸುತ್ತೇವೆ. ರಾತ್ರಿ 12 ಗಂಟೆಗೆ ಡಿಸ್ಕೋ, ಪಬ್ಬುಗಳ ಕರ್ಕಶ ಸದ್ದು, ಕುಡಿದು ಕುಣಿಯುವ ಹುಡುಗರೊಂದಿಗೆ ಹೊಸವರ್ಷವನ್ನು ಆಚರಿಸುವುದು ನಿಮಗೆ ಸರಿ ಅನಿಸುತ್ತದೆಯೇ? ಅದನ್ನು ನೋಡಿ ನಿಜವಾಗಲೂ ಹೊಸವರ್ಷವೆಂದು ನಮಗೆ ಅನಿಸುತ್ತದೆಯೇ? ನೀವೇ ಇದರ ಕುರಿತು ವಿಚಾರ ಮಾಡಿ. ನಮ್ಮ ದಿನದ ಆರಂಭವು ಕತ್ತಲು, ದುಃಖದಿಂದ ಆಗಬೇಕೆಂದು ನಿಮಗೆ ಅನಿಸುತ್ತದೆಯೇ? ಹಿಂದೂ ಸಂಸ್ಕೃತಿಯನುಸಾರ ದಿನದ ಆರಂಭವು ಬೆಳಗ್ಗೆ ಸೂರ್ಯೋದಯದೊಂದಿಗೆ ಆಗುತ್ತದೆ.

ನಮ್ಮ ಹಿಂದೂ ಸಂಸ್ಕೃತಿಯನುಸಾರ ನಾವು ಯುಗಾದಿಯಂದು ಏಕೆ ಹೊಸವರ್ಷ ಆಚರಿಸುತ್ತೇವೆ ಎಂದು ನಿಮಗೆ ತಿಳಿದಿದೆಯೇ?

ಯುಗಾದಿ ಹಬ್ಬವನ್ನು ಆಚರಿಸುವುದರ ಮಹತ್ವ ಮತ್ತು ಕಾರಣಗಳು
ಎಲ್ಲ ವರ್ಷಾರಂಭಗಳಲ್ಲಿ ಅತ್ಯಂತ ಯೋಗ್ಯ ವರ್ಷಾರಂಭದ ದಿನವೆಂದರೆ `ಚೈತ್ರ ಶುಕ್ಲ ಪ್ರತಿಪದೆ. ‘ಜನವರಿ 1 ರಂದು ವರ್ಷಾರಂಭವನ್ನು ಏಕೆ ಮಾಡಬೇಕು ಎನ್ನುವುದಕ್ಕೆ ಯಾವುದೇ ಕಾರಣ ಇಲ್ಲ. ಯಾರೋ ಒಬ್ಬರು ನಿರ್ಧರಿಸಿದರು ಮತ್ತು ಅದು ಪ್ರಾರಂಭವಾಯಿತು. ತದ್ವಿರುದ್ಧ ಚೈತ್ರ ಶುಕ್ಲ ಪ್ರತಿಪದೆಯಂದು ವರ್ಷಾರಂಭವನ್ನು ಮಾಡಲು ನೈಸರ್ಗಿಕ, ಐತಿಹಾಸಿಕ ಮತ್ತು ಆಧ್ಯಾತ್ಮಿಕ ಕಾರಣಗಳಿವೆ.

ನೈಸಗಿಕ ಕಾರಣಗಳು:
ಸರಿಸುಮಾರು ಪ್ರತಿಪದೆಯ ಸಮಯದಲ್ಲಿ ಸೂರ್ಯನು ವಸಂತ ? ಸಂಪಾತದ ಮೇಲೆ ಬರುತ್ತಾನೆ (ಸಂಪಾತ ಬಿಂದು ಎಂದರೆ (ಮಕರ) ಕ್ರಾಂತಿವೃತ್ತ ಮತ್ತು ವಿಷುವವೃತ್ತ (ಕರ್ಕಾಟಕ) ಈ ಎರಡು ವೃತ್ತಗಳು ಯಾವ ಬಿಂದುವಿನಲ್ಲಿ ಪರಸ್ಪರ ಭೇದಿಸುತ್ತವೆಯೋ ಆ ಬಿಂದು) ಮತ್ತು ವಸಂತ ಋತುವು ಪ್ರಾರಂಭವಾಗುತ್ತದೆ. ಎಲ್ಲ ಋತುಗಳಲ್ಲಿ `ಕುಸುಮಾಕರಿ ವಸಂತ ಋತುವು ನನ್ನ ವಿಭೂತಿಯಾಗಿದೆ’ ಎಂದು ಭಗವಂತನು ಶ್ರೀಮದ್ಭಗವದ್ಗೀತೆಯಲ್ಲಿ (10:35) ಹೇಳಿದ್ದಾನೆ. ಈ ಸಮಯದಲ್ಲಿ ಸಮಶೀತೋಷ್ಣ, ಉತ್ಸಾಹವರ್ಧಕ ಮತ್ತು ಆಹ್ಲಾದಕರ ವಾತಾವರಣವಿರುತ್ತದೆ. ಶಿಶಿರ ಋತುವಿನಲ್ಲಿ ಗಿಡಮರಗಳ ಎಲೆಗಳು ಉದುರಿ ಹೋಗಿರುತ್ತವೆ ಮತ್ತು ಪ್ರತಿಪದೆಯ ಸಮಯದಲ್ಲಿ ಅವುಗಳಿಗೆ ಹೊಸ ಚಿಗುರು ಬರುತ್ತಿರುತ್ತವೆ. ಗಿಡಮರಗಳು ಚೆನ್ನಾಗಿ ಕಾಣುತ್ತವೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಉತ್ಪತ್ತಿಯ ಕಾಲಚಕ್ರಕ್ಕೆ ಸಂಬಂಧಿಸಿದೆ. ಆದುದರಿಂದ ಸೃಷ್ಟಿಯು ನವಚೇತನದಿಂದ ತುಂಬಿರುತ್ತದೆ. ತದ್ವಿರುದ್ಧವಾಗಿ ಡಿಸೆಂಬರ್ 31 ರಂದು ರಾತ್ರಿ 12 ಗಂಟೆಗೆ ಪ್ರಾರಂಭವಾಗುವ ಹೊಸವರ್ಷದ ಕಾಲಚಕ್ರವು ವಿಶ್ವದ ಲಯಕಾಲಕ್ಕೆ ಸಂಬಂಧಿಸಿದೆ. ಯುಗಾದಿ ಪಾಡ್ಯದಂದು ಪ್ರಾರಂಭವಾಗುವ ಹೊಸವರ್ಷದ ತುಲನೆಯನ್ನು ಸೂರ್ಯೋದಯಕ್ಕೆ ಉದಯವಾಗುವ ತೇಜೋಮಯ ದಿನದೊಂದಿಗೆ ಮಾಡಬಹುದು.

ನಿಸರ್ಗದ ನಿಯಮವನ್ನು ಅನುಸರಿಸಿ ಮಾಡಿದ ವಿಷಯಗಳು ಮನುಷ್ಯರಿಗೆ ಪೂರಕವಾಗಿರುತ್ತವೆ ಮತ್ತು ಅದಕ್ಕೆ ವಿರುದ್ಧವಾಗಿ ಮಾಡಿರುವ ವಿಷಯಗಳು ಮನುಷ್ಯರಿಗೆ ಹಾನಿಕಾರಿಯಾಗಿರುತ್ತವೆ. ಆದುದರಿಂದ ಪಾಶ್ಚಾತ್ಯ ಸಂಸ್ಕೃತಿಗನುಸಾರ ಜನವರಿ ಒಂದರಂದು ಹೊಸವರ್ಷಾರಂಭವನ್ನು ಮಾಡದೇ, ಯುಗಾದಿ ಪಾಡ್ಯದಂದೇ ಹೊಸವರ್ಷವನ್ನು ಆಚರಿಸುವುದರಲ್ಲಿ ನಮ್ಮ ನಿಜವಾದ ಹಿತವಿದೆ.

ಐತಿಹಾಸಿಕ ಕಾರಣಗಳು:
ಈ ದಿನದಂದು ರಾಮನು ವಾಲಿಯನ್ನು ವಧಿಸಿದನು. ವಿಜಯದ ಪ್ರತೀಕವು ಎತ್ತರದಲ್ಲಿರುತ್ತದೆ. ಹಾಗಾಗಿ ಬ್ರಹ್ಮಧ್ವಜ ಎತ್ತರದಲ್ಲಿರುತ್ತದೆ. ಈ ದಿನದಿಂದಲೇ `ಶಾಲಿವಾಹನ ಶಕೆ’ ಪ್ರಾರಂಭವಾಯಿತು, ಏಕೆಂದರೆ ಈ ದಿನ ಶಾಲಿವಾಹನನು ಶತ್ರುಗಳ ಮೇಲೆ ವಿಜಯವನ್ನು ಪಡೆದನು.

ಆಧ್ಯಾತ್ಮಿಕ ಕಾರಣಗಳು:
ಬ್ರಹ್ಮದೇವನು ಇದೇ ದಿನದಿಂದು ಸೃಷ್ಟಿಯನ್ನು ನಿರ್ಮಿಸಿದನು. ಅರ್ಥಾತ್ ಈ ದಿನ ಸತ್ಯಯುಗವು ಪ್ರಾರಂಭವಾಯಿತು. ಆದುದರಿಂದಲೇ ಈ ದಿನದಂದು ವರ್ಷಾರಂಭವನ್ನು ಮಾಡುತ್ತಾರೆ. ಯುಗಾದಿಯಂದು ತೇಜ ಮತ್ತು ಪ್ರಜಾಪತಿ ಲಹರಿಗಳು ಹೆಚ್ಚಿನ ಪ್ರಮಾಣದಲ್ಲಿ ಕಾರ್ಯನಿರತವಾಗಿರುತ್ತವೆ. ಸೂರ್ಯೋದಯದ ಸಮಯದಲ್ಲಿ ಈ ಲಹರಿಗಳಿಂದ ಪ್ರಕ್ಷೇಪಿತವಾಗುವ ಚೈತನ್ಯವು ಹೆಚ್ಚಿನ ಸಮಯದವರೆಗೆ ಉಳಿಯುತ್ತದೆ. ಅದು ಜೀವದ ಜೀವಕೋಶಗಳಲ್ಲಿ ಸಂಗ್ರಹವಾಗುತ್ತದೆ ಹಾಗೂ ಅವಶ್ಯಕತೆಗನುಸಾರ ಆ ಜೀವದಿಂದ ಉಪಯೋಗಿಸಲ್ಪಡುತ್ತದೆ.

ಯುಗಾದಿ ಪಾಡ್ಯದಂದು ಮಾಡಬೇಕಾದ ಧಾರ್ಮಿಕ ಕೃತಿಗಳು
ಯಾವುದೇ ಹಬ್ಬ ಬಂದರೆ ಆ ಹಬ್ಬದ ವೈಶಿಷ್ಟ್ಯದಂತೆ ಮತ್ತು ನಮ್ಮ ಪದ್ಧತಿಯಂತೆ ನಾವು ಏನಾದರೂ ಮಾಡುತ್ತಿರುತ್ತೇವೆ, ಆದರೆ ಧರ್ಮದಲ್ಲಿ ಹೇಳಿದಂತಹ ಇಂತಹ ಪಾರಂಪರಿಕ ಕೃತಿಯ ಹಿಂದಿನ ಅಧ್ಯಾತ್ಮಶಾಸ್ತ್ರವನ್ನು ಗಮನದಲ್ಲಿಟ್ಟುಕೊಂಡರೆ ಅದರ ಮಹತ್ವವು ನಮಗೆ ಹಿಡಿಸುತ್ತದೆ. ಇಲ್ಲಿ ನಾವು ಯುಗಾದಿಯಂದು ಮಾಡಬೇಕಾದ ಧಾರ್ಮಿಕ ಕೃತಿಗಳ ಮಾಹಿತಿಯನ್ನು ಪಡೆಯೋಣ.

ಅಭ್ಯಂಗಸ್ನಾನ
ಯುಗಾದಿ ಪಾಡ್ಯದ ದಿನ ಬೆಳಗ್ಗೆ ಬೇಗನೆ ಎದ್ದು ಮೊದಲು ಅಭ್ಯಂಗಸ್ನಾನ ಮಾಡಬೇಕು. ಅಭ್ಯಂಗಸ್ನಾನವನ್ನು ಮಾಡುವಾಗ `ದೇಶಕಾಲಕಥನ’ ಮಾಡಬೇಕು.` ದೇಶಕಾಲಕಥನ’ ದಿಂದ ಅಹಂ ಕಡಿಮೆಯಾಗಲು ಸಹಾಯವಾಗುತ್ತದೆ.

ತೋರಣವನ್ನು ಕಟ್ಟುವುದು
ಸ್ನಾನದ ಬಳಿಕ ಮಾವಿನ ಎಲೆಯ ತೋರಣವನ್ನು ತಯಾರಿಸಿ ಕೆಂಪು ಹೂವುಗಳೊಂದಿಗೆ ಎಲ್ಲ ಬಾಗಿಲುಗಳಿಗೆ ಕಟ್ಟಬೇಕು. ಏಕೆಂದರೆ ಕೆಂಪು ಬಣ್ಣ ಶುಭಸೂಚಕವಾಗಿದೆ. ಸಾತ್ತ್ವಿಕ ತೋರಣದಿಂದ ಚೈತನ್ಯ ಪ್ರಕ್ಷೇಪಿತವಾಗಿ ಸಂರಕ್ಷಣಾಕವಚ ನಿರ್ಮಾಣವಾಗುತ್ತದೆ.

ಪೂಜೆ
ಮೊದಲು ನಿತ್ಯಕರ್ಮ ದೇವರ ಪೂಜೆಯನ್ನು ಮಾಡಬೇಕು. `ವರ್ಷದ ಪಾಡ್ಯದಂದು ಮಹಾಶಾಂತಿ ಮಾಡಬೇಕು. ಶಾಂತಿಯ ಪ್ರಾರಂಭದಲ್ಲಿ ಬ್ರಹ್ಮದೇವನ ಪೂಜೆಯನ್ನು ಮಾಡಬೇಕು, ಏಕೆಂದರೆ ಬ್ರಹ್ಮದೇವನು ವಿಶ್ವವನ್ನು ಈ ದಿನವೇ ನಿರ್ಮಿಸಿದನು. ಪೂಜೆಯಲ್ಲಿ ಅವನಿಗೆ ದವನವನ್ನು (ಸುವಾಸನೆಯ ಎಲೆಗಳನ್ನು) ಅರ್ಪಿಸಬೇಕು. ಅನಂತರ ಹೋಮಹವನ ಮತ್ತು ಬ್ರಾಹ್ಮಣಸಂತರ್ಪಣೆ ಮಾಡಬೇಕು. ತರುವಾಯ ಅನಂತ ರೂಪಗಳಲ್ಲಿ ಅವತರಿಸುವ ಶ್ರೀವಿಷ್ಣುವಿನ ಪೂಜೆಯನ್ನು ಮಾಡಬೇಕು. `ನಮಸ್ತೆ ಬಹುರೂಪಾಯ ವಿಷ್ಣವೇ ನಮಃ|’ ಎನ್ನುವ ಮಂತ್ರವನ್ನು ಹೇಳಿ ಅವನಿಗೆ ನಮಸ್ಕರಿಸಬೇಕು. ಅನಂತರ ಬ್ರಾಹ್ಮಣರಿಗೆ ದಕ್ಷಿಣೆಯನ್ನು ನೀಡಬೇಕು, ಸಾಧ್ಯವಾದರೆ ಇತಿಹಾಸ, ಪುರಾಣ ಮುಂತಾದ ಗ್ರಂಥಗಳನ್ನು ಬ್ರಾಹ್ಮಣರಿಗೆ ದಾನವೆಂದು ನೀಡಬೇಕು. ಈ ಶಾಂತಿಯನ್ನು ಮಾಡುವುದರಿಂದ ಎಲ್ಲ ಪಾಪಗಳು ನಾಶವಾಗುತ್ತವೆ, ಸಂಕಟಗಳು ಬರುವುದಿಲ್ಲ,ಆಯುಷ್ಯವೃದ್ಧಿಯಾಗುತ್ತದೆ ಮತ್ತು ಧನಧಾನ್ಯಗಳ ಸಮೃದ್ಧಿಯಾಗುತ್ತದೆ.’ ಈ ದಿನ ಯಾವ ವಾರವಿರುತ್ತದೆಯೋ, ಆ ವಾರದೇವತೆಯ ಪೂಜೆಯನ್ನೂ ಮಾಡಬೇಕು.

ಬ್ರಹ್ಮಧ್ವಜವನ್ನು ಏರಿಸುವುದು
ದೊಡ್ಡ ಕೋಲಿನ ತುದಿಗೆ ಹಸಿರು ಅಥವಾ ಹಳದಿ ಬಣ್ಣದ ಜರಿಯ ಖಣವನ್ನು ಕಟ್ಟುತ್ತಾರೆ. ಅದರ ಮೇಲೆ ಸಕ್ಕರೆಯ ಗಂಟು, ಬೇವಿನ ಚಿಗುರೆಲೆ, ಮಾವಿನ ಎಲೆ ಮತ್ತು ಕೆಂಪು ಹೂವುಗಳ ಹಾರವನ್ನು ಕಟ್ಟಿ ಮೇಲೆ ಬೆಳ್ಳಿಯ ಅಥವಾ ತಾಮ್ರದ ಕಲಶದಿಂದ ಶೃಂಗರಿಸಿ ಧ್ವಜವನ್ನು ನಿಲ್ಲಿಸುತ್ತಾರೆ. ಅದರ ಮುಂದೆ ಸುಂದರವಾದ ರಂಗೋಲಿ ಹಾಕುತ್ತಾರೆ. ಇದಕ್ಕೆ `ಬ್ರಹ್ಮಧ್ವಜಾಯ ನಮಃ|’ ಎಂದು ಹೇಳಿ ಸಂಕಲ್ಪಪೂರ್ವಕವಾಗಿ ಪೂಜೆ ಮಾಡಬೇಕು. ಎರಡನೆಯ ದಿನದಿಂದ ಈ ಕಲಶವನ್ನು ನೀರು ಕುಡಿಯಲು ಉಪಯೋಗಿಸಬೇಕು, ಸೂರ್ಯಾಸ್ತದ ಸಮಯದಲ್ಲಿ ಬೆಲ್ಲದ ನೈವೇದ್ಯವನ್ನು ತೋರಿಸಿ ಧ್ವಜವನ್ನು ಕೆಳಗಿಳಿಸುತ್ತಾರೆ.

ಧರ್ಮಧ್ವಜವನ್ನು ನಿಲ್ಲಿಸುವ ಪದ್ಧತಿ
1. ಧರ್ಮಧ್ವಜದ ಸ್ಥಾನ : ಧರ್ಮಧ್ವಜವನ್ನು ಬಾಗಿಲ ಹೊರಗೆ; ಅದರೆ ಹೊಸ್ತಿಲಿನ ಹತ್ತಿರ (ಮನೆಯೊಳಗಿಂದ ನೋಡಿದರೆ) ಬಲಗಡೆಯಲ್ಲಿ ನಿಲ್ಲಿಸಬೇಕು.
2. ಪದ್ಧತಿ :
ಅ. ಧರ್ಮಧ್ವಜವನ್ನು ನಿಲ್ಲಿಸುವಾಗ ಎಲ್ಲಕ್ಕಿಂತ ಮೊದಲು ಸೆಗಣಿಯಿಂದ ನೆಲಸಾರಿಸಿ ಅಂಗಳವನ್ನು ರಂಗೋಲಿಯಿಂದ ಸುಶೋಭಿತಗೊಳಿಸಬೇಕು. ಧರ್ಮಧ್ವಜವನ್ನು ನಿಲ್ಲಿಸುವ ಜಾಗದಲ್ಲಿ ರಂಗೋಲಿಯಿಂದ ಸ್ವಸ್ತಿಕವನ್ನು ಬಿಡಿಸಿ ಅದರ ಮಧ್ಯಬಿಂದುವಿನಲ್ಲಿ ಅರಿಷಿಣ ಕುಂಕುಮವನ್ನು ಹಾಕಬೇಕು.
ಆ. ಧರ್ಮಧ್ವಜವನ್ನು ನಿಲ್ಲಿಸುವಾಗ ಬ್ರಹ್ಮಾಂಡದಲ್ಲಿನ ಶಿವ ಶಕ್ತಿಯ ಲಹರಿಗಳ ಆವಾಹನ ಮಾಡಿ ಅವುಗಳನ್ನು ಸ್ವಸ್ತಿಕದ ಮೇಲೆ ಸ್ಥಾಪಿಸಬೇಕು. ಇದರಿಂದ ಧರ್ಮಧ್ವಜದ ತುದಿಯಲ್ಲಿ ಇರುವ ಎಲ್ಲ ಘಟಕಗಳಿಗೆ ದೇವತ್ವವು ಪ್ರಾಪ್ತವಾಗುತ್ತದೆ.
ಇ. ಧರ್ಮಧ್ವಜವನ್ನು ನೆಲದ ಮೇಲೆ ಹೊಸ್ತಿಲಿನ ಹತ್ತಿರ; ಆದರೆ ಸ್ವಲ್ಪ ಬಾಗಿದ ಸ್ಥಿತಿಯಲ್ಲಿ ನಿಲ್ಲಿಸಬೇಕು.

ಪಂಚಾಂಗ ಶ್ರವಣ ಎಂದರೇನು ಮತ್ತು ಅದರ ಮಹತ್ವ ಏನು?
ಜ್ಯೋತಿಷಿಯ ಪೂಜೆಯನ್ನು ಮಾಡಿ ಅವರಿಂದ ಅಥವಾ ಉಪಾಧ್ಯಾಯರಿಂದ ಹೊಸ ವರ್ಷದ ಪಂಚಾಂಗವನ್ನು ಅರ್ಥಾತ್ ವರ್ಷಫಲದ ಶ್ರವಣವನ್ನು ಮಾಡಬೇಕು. ಈ ವರ್ಷಫಲದ ಶ್ರವಣದ ಫಲ ಹೇಳಲಾಗಿದೆ, ಅದು ಮುಂದಿನಂತಿದೆ. ತಿಥಿಯ ಶ್ರವಣದಿಂದ ಲಕ್ಷ್ಮೀಯು ಲಭಿಸುತ್ತಾಳೆ, ವಾರದ ಶ್ರವಣದಿಂದ ಆಯುಷ್ಯವು ವೃದ್ಧಿಯಾಗುತ್ತದೆ, ನಕ್ಷತ್ರಶ್ರವಣದಿಂದ ಪಾಪನಾಶ ವಾಗುತ್ತದೆ, ಯೋಗಶ್ರವಣದಿಂದ ರೋಗಗಳ ನಿವಾರಣೆಯಾಗುತ್ತದೆ, ಕರಣ ಶ್ರವಣದಿಂದ ಇಚ್ಛಿತ ಕಾರ್ಯವು ಸಾಧ್ಯವಾಗುತ್ತದೆ. ಇವು ಪಂಚಾಂಗ ಶ್ರವಣದ ಉತ್ತಮ ಫಲಗಳಾಗಿವೆ. ಇದರ ನಿತ್ಯಶ್ರವಣದಿಂದ ಗಂಗಾಸ್ನಾನದ ಫಲವು ಲಭಿಸುತ್ತದೆ.’

ಬೇವಿನ ಪ್ರಸಾದ
ಪಂಚಾಂಗಶ್ರವಣದ ನಂತರ ಕಹಿ ಬೇವಿನ ಪ್ರಸಾದ ಹಂಚಬೇಕು. ಈ ಪ್ರಸಾದವನ್ನು ಬೇವಿನ ಹೂವು,ಚಿಗುರೆಲೆಗಳು, ನೆನೆಸಿದ ಕಡಲೆಕಾಳು ಅಥವಾ ಬೇಳೆ, ಜೇನು, ಜೀರಿಗೆ ಮತ್ತು ಸ್ವಲ್ಪ ಇಂಗು ಇವೆಲ್ಲವನ್ನು ಬೆರೆಸಿ ತಯಾರಿಸುತ್ತಾರೆ.

ಭೂಮಿಯನ್ನು ಊಳುವುದು
ಯುಗಾದಿಯಂದು ಭೂಮಿಯನ್ನು ಊಳಬೇಕು. ಭೂಮಿಯನ್ನು ಊಳುವಾಗ ಕೆಳಗಿನ ಮಣ್ಣು ಮೇಲೆ ಬರುತ್ತದೆ. ಮಣ್ಣಿನ ಸೂಕ್ಷ್ಮ-ಕಣಗಳ ಮೇಲೆ ಪ್ರಜಾಪತಿ ಲಹರಿಗಳ ಸಂಸ್ಕಾರವಾಗಿ ಬೀಜ ಮೊಳಕೆಯೊಡೆಯುವ ಭೂಮಿಯ ಸಾಮಥ್ರ್ಯವು ಅನೇಕ ಪಟ್ಟು ಹೆಚ್ಚಾಗುತ್ತದೆ. ಭೂಮಿಗೆ ಉಪಯೋಗಿಸಲ್ಪಡುವ ಸಲಕರಣೆ ಮತ್ತು ಎತ್ತುಗಳ ಮೇಲೆ ಪ್ರಜಾಪತಿ ಲಹರಿಗಳನ್ನು ಉತ್ಪನ್ನ ಮಾಡುವ ಮಂತ್ರಸಹಿತ ಅಕ್ಷತೆಗಳನ್ನು ಹಾಕಬೇಕು. ಹೊಲದಲ್ಲಿ (ಗದ್ದೆಯಲ್ಲಿ) ಕೆಲಸ ಮಾಡುವವರಿಗೆ ಹೊಸ ಬಟ್ಟೆಗಳನ್ನು ಕೊಡಬೇಕು. ಈ ದಿನ ಹೊಲದಲ್ಲಿ ಕೆಲಸ ಮಾಡುವ ಜನರ ಮತ್ತು ಎತ್ತುಗಳ ಭೋಜನದಲ್ಲಿ ಕುಂಬಳಕಾಯಿ, ಹೆಸರುಬೇಳೆ, ಅಕ್ಕಿ, ಹೂರಣ ಮುಂತಾದ ಪದಾರ್ಥಗಳಿರಬೇಕು.

ದಾನ
ಯಾಚಕರಿಗೆ ಅನೇಕ ವಿಧದ ದಾನವನ್ನು ಕೊಡಬೇಕು, ಉದಾ. ಅರವಟ್ಟಿಗೆಯನ್ನು (ಜಲ ಮಂದಿರ) ನಿರ್ಮಿಸಿ ನೀರಿನ ದಾನವನ್ನು ಮಾಡಬೇಕು. ಇದರಿಂದ ಪಿತೃಗಳು ಸಂತುಷ್ಟರಾಗುತ್ತಾರೆ.

ಈ ದಿನ ಅನೇಕ ವಿಧದ ಮಂಗಲ ಹಾಡುಗಳನ್ನು ಮತ್ತು ಪುಣ್ಯಪುರುಷರ ಕಥೆಗಳನ್ನು ಕೇಳುತ್ತಾ ಈ ದಿನವನ್ನು ಆನಂದದಿಂದ ಕಳೆಯಬೇಕು. ಈಗಿನ ಕಾಲದ ಹಬ್ಬವೆಂದರೆ ಮೋಜು ಮಜಾ ಮಾಡುವ ದಿನವೆಂಬ ಸಂಕಲ್ಪನೆ ಬರುವಂತಾಗಿದೆ, ಆದರೆ ಹಿಂದೂ ಧರ್ಮದ ಶಾಸ್ತ್ರೀಯ ಪದ್ಧತಿಯ ಹಬ್ಬವೆಂದರೆ `ಹೆಚ್ಚೆಚ್ಚು ಚೈತನ್ಯ ಪಡೆಯುವ ದಿನ’ವಾಗಿರುತ್ತದೆ. ಆದ್ದರಿಂದ ಹಬ್ಬದಂದು ಸಾತ್ತ್ವಿಕ ಆಹಾರ, ಸಾತ್ತ್ವಿಕ ಬಟ್ಟೆ ಹಾಗೂ ಇತರ ಧಾರ್ಮಿಕ ಕೃತಿ ಇತ್ಯಾದಿಗಳನ್ನು ಮಾಡುವುದರೊಂದಿಗೆ ಸಾತ್ತ್ವಿಕವಾದ ಸುಖದಾಯಕ ಕೃತಿಗಳನ್ನು ಮಾಡಲು ಶಾಸ್ತ್ರವು ಹೇಳಿದೆ. ಈ ರೀತಿ ಯುಗಾದಿಯನ್ನು ಆಚರಿಸುವುದರಿಂದ ಆರೋಗ್ಯ, ಕೃಷಿ ಮುಂತಾದವು ಹೆಚ್ಚಾಗುತ್ತದೆ.

Tags: Hindu Festivalhindu ritualsKannada ArticleUgadiUgadi Festivalಧರ್ಮ ಧ್ವಜಯುಗಾದಿ ಪಾಡ್ಯಯುಗಾದಿ ಹಬ್ಬ
Share196Tweet123Send
Previous Post

ರಾಘವೇಶ್ವರ ಶ್ರೀ ವಿರುದ್ಧ ನಕಲಿ ಅಶ್ಲೀಲ ಸಿಡಿ ಕೇಸ್-ಚಾರ್ಜ್’ಶೀಟ್ ರದ್ಧತಿಗೆ ನಕಾರ

Next Post

ಯುಪಿಎಸ್’ಸಿ ಫಲಿತಾಂಶ ಪ್ರಕಟ: ರಾಜ್ಯದ 24 ಅಭ್ಯರ್ಥಿಗಳು ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುಪಿಎಸ್’ಸಿ ಫಲಿತಾಂಶ ಪ್ರಕಟ: ರಾಜ್ಯದ 24 ಅಭ್ಯರ್ಥಿಗಳು ಆಯ್ಕೆ

ಯುಪಿಎಸ್’ಸಿ ಫಲಿತಾಂಶ ಪ್ರಕಟ: ರಾಜ್ಯದ 24 ಅಭ್ಯರ್ಥಿಗಳು ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
National Safety Week 2026 Observed at Carriage Repair Workshop, Hubballi

National Safety Week 2026 Observed at Carriage Repair Workshop, Hubballi

March 18, 2026
7 ತಿಂಗಳಲ್ಲಿ 355 ವಿಶೇಷ ರೈಲುಗಳ ಸಂಚಾರದಿಂದ ನೈಋತ್ಯ ರೈಲ್ವೆ ಗಳಿಸಿದ್ದು ಎಷ್ಟು ಕೋಟಿ ಆದಾಯ?

ಹುಬ್ಬಳ್ಳಿ | ರೈಲ್ವೆ ಇಲಾಖೆ ಪರೀಕ್ಷೆ ಮುಂದೂಡಿಕೆ

March 18, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಯುಗಾದಿ ಹಬ್ಬ ಹಿನ್ನೆಲೆ: ಯಶವಂತಪುರ ಮತ್ತು ಹೊಸಪೇಟೆ ನಡುವೆ ವಿಶೇಷ ರೈಲು ಸೇವೆ

March 18, 2026
ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

ನವೋದಯ ಪ್ರವೇಶ ಪರೀಕ್ಷೆ | ಅಪೂರ್ವಗೆ ಉತ್ತಮ ಅಂಕ

March 18, 2026
ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

ಬಡವರ ಆರೋಗ್ಯದ ಜೊತೆ ಸರ್ಕಾರದ ಚೆಲ್ಲಾಟ | ಉಗ್ರಾಣಗಳಲ್ಲಿ 7 ತಿಂಗಳಾದರೂ ಔಷಧಿ ಪೂರೈಕೆಯಿಲ್ಲ: ಶಾಸಕ ಡಾ. ಧನಂಜಯ ಸರ್ಜಿ

March 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL