Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಕರಾವಳಿಗರ ಕನಸಿನ ಕಲೆ ಯಕ್ಷಗಾನದ ಕೂಸು ‘ಶ್ವೇತಾ ಪೂಜಾರಿ’

June 17, 2019
in Special Articles
0 0
0
Share on facebookShare on TwitterWhatsapp
Read - 3 minutes

ಕರಾವಳಿಯಲ್ಲಿ ಮನೆಮಾತಾಗಿರುವ ಕಲಾವಿದೆ ಶ್ವೇತಾ ಪೂಜಾರಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು ಎಂದು ಆರಂಭದಲ್ಲಿಯೇ ಶುಭ ಕೋರುವ ಮೂಲಕ ಇವರ ಹುಟ್ಟು ಹಬ್ಬದ ಈ ಶುಭದಿನದಂದು, ಯಕ್ಷಗಾನ ಲೋಕದ ಯುವ ಮಹಿಳಾ ಪ್ರತಿಭೆಯಾದ ಇವರ ಕಿರು ಪರಿಚಯ ಮಾಡಲು ಬಯಸುತ್ತೇನೆ.


ಯಕ್ಷಗಾನ ಕರಾವಳಿ ಕನ್ನಡಿಗರ ಕನಸಿನ ಕಲೆ. ಯಕ್ಷಗಾನ ಕಡಲ ಮಕ್ಕಳ ಕಲ್ಪನೆಯ ಕೂಸು. ಕನ್ನಡದ ಕಂಪು ಇಂಪುಗಳನ್ನು ಕಡಲಾಚೆಗೆ ಪಸರಿಸಿದ ಪರಮ ಶ್ರೇಷ್ಟ ಕಲೆ ಯಕ್ಷಗಾನ. ಕರಾವಳಿ ಭಾಗದಲ್ಲಿ ಯಕ್ಷಗಾನ ಕಲೆ ಜನ ಮಾನಸದಲ್ಲಿ ಒಂದು ಮನೋರಂಜನಾ ಕಲೆಯಾಗದೆ ಜೀವನ ಸಂದೇಶವನ್ನು ತಿಳಿಸುವ ಮಹೋನ್ನತ ಕಲೆ ಎಂದರೆ ತಪ್ಪಾಗಲಾರದು.


ಪುರುಷ ಪ್ರಧಾನ ಸಮಾಜ ವ್ಯವಸ್ಥೆಯಲ್ಲಿ ತಲಾ ತಲಾಂತರಗಳಿಂದಲು ಯಕ್ಷಗಾನ ಗಂಡುಕಲೆಯೆಂದು ಪ್ರಸಿದ್ಧಿ ಗಳಿಸಿದೆ. ಆದರೆ ಈಗ ಪುರುಷರಷ್ಟೇ ಮಹಿಳೆಯರು ಕೂಡ ಯಕ್ಷಗಾನದಲ್ಲಿ ಭಾಗವಹಿಸಿ ಸಾಧನೆ ಮಾಡುತ್ತಿರುವುದು ಗಮನಾರ್ಹ ವಿಷಯ. ಮಂಗಳೂರಿನ ಸಮೀಪದ ಮಲ್ಲೂರಿನ ನಿವಾಸಿಗಳಾದ ಶೀನಾ ಪೂಜಾರಿ ಮತ್ತು ಶಾಂತ ದಂಪತಿಗಳ ಪುತ್ರಿ ಶ್ವೇತಾ ಪೂಜಾರಿ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆ ಮಾಡಬೇಕು ಎನ್ನುವ ಹಂಬಲ ಹೊತ್ತ ಯುವ ಕಲಾವಿದೆ. ಶ್ವೇತಾ ತಾವು 10ನೆಯ ತರಗತಿ ಇರುವಾಗ ಮೊದಲ ಬಾರಿ ಯಕ್ಷಗಾನದಲ್ಲಿ ಗೆಜ್ಜೆಕಟ್ಟಿ ರಂಗಪ್ರವೇಶ ಮಾಡಿದರು.


ದೇವದಾಸ್ ಅರ್ಕುಲ ಎನ್ನುವವರಿಂದ ಯಕ್ಷಗಾನದ ಹೆಜ್ಜೆ ಕಲಿತು, ಸತೀಶ್ ಮಡಿವಾಳ ಕಾರ್ಕಳ ಇವರಿಂದ ಅಭಿನಯ ನಾಟ್ಯವನ್ನು ಅಭ್ಯಾಸ ಮಾಡಿ, ರಕ್ಷಿತ್ ಶೆಟ್ಟಿ ಪಡ್ರೆ ಇವರ ಮಾರ್ಗದರ್ಶನದಲ್ಲಿ ರೂಪುಗೊಂಡ ಕಲಾವಿದೆ ಶ್ವೇತಾ ಪೂಜಾರಿ. ಯಕ್ಷಗಾನ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಬೇಕು ಯಕ್ಷಾಗಾನಕ್ಕೆ ಏನಾದರೂ ಕೊಡುಗೆ ಕೊಡಬೇಕು ಎನ್ನುವ ಉದ್ದೇಶವನ್ನು ಹೊತ್ತು ಬೆಳೆಯುತ್ತಿರುವ ಮಹಿಳಾ ಪ್ರತಿಭೆ ಶ್ವೇತಾ ಪೂಜಾರಿ.


ಒಂದು ಸಂಸ್ಥೆಯಲ್ಲಿ ಉದ್ಯೋಗಿಯಾಗಿರುವ ಶ್ವೇತಾ ತಮ್ಮ ವೃತ್ತಿಯ ಜೊತೆಗೆ ಶ್ರೀ ಸುಬ್ರಹ್ಮಣ್ಯ ಯಕ್ಷನಾಟ್ಯ ಕಲಾ ಕೇಂದ್ರ ತಕಧಿಮಿ ತಂಡ ಗುರುಪುರ ಕೈಕಂಬ ಇದರ ಸದಸ್ಯೆಯಾಗಿ ಯಕ್ಷಗಾನ ಪ್ರದರ್ಶನಗಳಲ್ಲಿ ಭಾಗವಹಿಸುತ್ತಿದ್ದಾರೆ. ಲಕ್ಷ್ಮೀ, ದೇವಿ, ವಿಷ್ಣು, ದೇವೇಂದ್ರ, ಈಶ್ವರ ಹೀಗೆ ಹಲವಾರು ಪಾತ್ರಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಶ್ವೇತಾ ಅವರಿಗೆ ಸುದರ್ಶನ ವಿಜಯ ಪ್ರಸಂಗದಲ್ಲಿ ನಿರ್ವಹಿಸದ ಲಕ್ಷ್ಮಿಯ ಪಾತ್ರ ಅತೀ ಹೆಚ್ಚು ಜನಪ್ರಿಯತೆಯನ್ನು ತಂದು ಕೊಟ್ಟಿತು.


ಪ್ರಾರಂಭದಲ್ಲಿ ಶ್ವೇತಾ ಅವರಿಗೆ ಅವರ ತಂದೆ ತಾಯಿ ಯಕ್ಷಗಾನಕ್ಕೆ ಹೋಗುವುದಕ್ಕೆ ಬೆಂಬಲವನ್ನು ನೀಡಲಿಲ್ಲ. ಆದರೆ ಶ್ವೇತಾ ಒಂದೆರಡು ಪ್ರದರ್ಶನದಲ್ಲೇ ತಮ್ಮ ನೃತ್ಯ ಹಾಗೂ ಅಭಿನಯದ ಮೂಲಕ ಜನರನ್ನು ಆಕರ್ಷಿಸತೊಡಗಿದರು. ಮಗಳ ಕಲಾ ಪ್ರೇಮದ ಬಗ್ಗೆ ಊರಿನ ಜನರು ಹೆಮ್ಮೆಯಿಂದ ಮಾತನಾಡುವುದನ್ನು ನೋಡಿ ಶ್ವೇತಾ ಅವರ ತಂದೆ ಮಗಳ ಯಕ್ಷಗಾನ ಹವ್ಯಾಸಕ್ಕೆ ಬೆಂಬಲವನ್ನು ನೀಡುತ್ತಾರೆ. ಶ್ವೇತಾ ತಮ್ಮ ಮನೆಯ ಸಮೀಪದಲ್ಲಿ ಎಲ್ಲೇ ಯಕ್ಷಗಾನ ಕಾರ್ಯಕ್ರಮ ನಡೆಯುತ್ತಿದ್ದರೂ ಇಡೀ ರಾತ್ರಿ ನಿದ್ದೆಬಿಟ್ಟು ಯಕ್ಷಗಾನವನ್ನು ವೀಕ್ಷಿಸಿ ನಾನು ಕೂಡ ಅವರಂತೆ ನಟಿಸಬೇಕು ಎಂದು ಕನಸು ಕಾಣುತ್ತಾ ಪರಿಶ್ರಮ ಪಟ್ಟು ಬೆಳೆದ ಹುಡುಗಿ.


ಹೀಗೆ ಯಕ್ಷಗಾನ ಕ್ಷೇತ್ರದಲ್ಲಿ ಸಾಧನೆಯ ಅಂಬೆಗಾಲಿಡುತ್ತಿರುವ ಕುಮಾರಿ ಶ್ವೇತಾ ಪೂಜಾರಿ ಇವರಿಗೆ ಅನೇಕ ಸಂಘ ಸಂಸ್ಥೆಗಳಿಂದ ಸನ್ಮಾನ ಮಾಡಿ ಗೌರವಿಸಲಾಗಿದೆ. ಯಕ್ಷಗಾನದಲ್ಲಿ ನಾನು ಮಾಡಿರುವ ಸಾಧನೆ ಕೇವಲ ಹತ್ತು ಶೇಕಡಾ ಅಷ್ಟೇ, ಇನ್ನು ತೊಂಬತ್ತು ಶೇಕಡಾ ಸಾಧನೆ ಮಾಡಲು ಬಾಕಿಯಿದೆ ಎನ್ನುವುದು ಶ್ವೇತಾ ಅವರ ಮನದಾಳದ ಮಾತುಗಳು.


ಯಕ್ಷಗಾನ ಕ್ಷೇತ್ರದಲ್ಲಿ ಬೆಳೆಯುತ್ತಿರುವ ಯುವ ಮಹಿಳಾ ಪ್ರತಿಭೆ ಶ್ವೇತಾ ಪೂಜಾರಿ ಅವರು ಇವತ್ತು ತಮ್ಮ ಹುಟ್ಟು ಹಬ್ಬವನ್ನು ಆಚರಿಕೊಳ್ಳುತ್ತಿದ್ದಾರೆ. ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ತಿಳಿಸುವುದರೊಂದಿಗೆ ನಿಮ್ಮ ಮುಂದಿನ ಜೀವನ ಸುಖವಾಗಿರಲಿ ಎಂದು ಆಶಿಸುತ್ತೇನೆ.


ಯುವ ಜನತೆ ಯಕ್ಷಗಾನ ಕ್ಷೇತ್ರದಿಂದ ವಿಮುಖರಾಗುತ್ತಿರುವ ಹೊತ್ತಿನಲ್ಲಿ ಯಕ್ಷಗಾನ ರಂಗಕ್ಕೆ ಸ್ವಇಚ್ಛೆಯಿಂದ ಬಂದು ಯಕ್ಷರಂಗದಲ್ಲಿ ಏನಾದರೂ ಸಾಧನೆ ಮಾಡಬೇಕು ಎನ್ನುವ ನಿಮ್ಮ ಮೇಲೆ ಯಕ್ಷಮಾತೆಯ ಆಶೀರ್ವಾದ ಸದಾ ಇರಲಿ ಎಂದು ಕಲಾಭಿಮಾನಿಗಳ ಪರವಾಗಿ ವಿನಂತಿಸುತ್ತೇನೆ.

ಲೇಖನ: ಗೌರೀಷ್ ಆವರ್ಸೆ
ಚಿತ್ರಕೃಪೆ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: birthdayCoastal ArticleKannada ArticleShweta PoojarySpecial Articlewoman's talentYakshaganaಕರಾವಳಿಮಹಿಳಾ ಪ್ರತಿಭೆಯಕ್ಷಗಾನಯಕ್ಷನಾಟ್ಯಯಕ್ಷಮಾತೆಶ್ವೇತಾ ಪೂಜಾರಿ
Previous Post

ಭದ್ರಾವತಿ: ಬಿಎಸ್‌ವೈ-ಬಿವೈಆರ್ ಕ್ಷೇತ್ರಕ್ಕೆ ಬಾರದಂತೆ ನಿರ್ಬಂಧಕ್ಕೆ ಅಪ್ಪಾಜಿ ನಿರ್ಧಾರ

Next Post

ಪಾಕ್ ವಿರುದ್ಧ ಟೀಂ ಇಂಡಿಯಾ ಐತಿಹಾಸಿಕ ಜಯಕ್ಕೆ ದೇಶದಲ್ಲಿ ಸಂಭ್ರಮ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪಾಕ್ ವಿರುದ್ಧ ಟೀಂ ಇಂಡಿಯಾ ಐತಿಹಾಸಿಕ ಜಯಕ್ಕೆ ದೇಶದಲ್ಲಿ ಸಂಭ್ರಮ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!