No Result
View All Result
IBM and Yotta Announce Plans to Deliver Agentic AI Platform for Indian Enterprises
English Articles

IBM and Yotta Announce Plans to Deliver Agentic AI Platform for Indian Enterprises

by ಕಲ್ಪ ನ್ಯೂಸ್
May 9, 2026
0

Kalpa Media House  |  Bengaluru | IBM (NYSE: IBM) and Yotta Data Services Private Limited ("Yotta") today announced plans to...

Read moreDetails
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

Pure Gold Within the Uniform: Jayakara Airody, The Great Voice of Humanity

May 9, 2026
Kotak Mahindra Bank Announces Results

Kotak Mahindra Bank Announces Results

May 4, 2026
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
  • Advertise With Us
  • Grievances
  • About Us
  • Contact Us
Sunday, May 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಮಸೀದಿ ಗಾಜು ಒಡೆದಿದ್ದರೆ, ಚರ್ಚ್ ಪ್ರತಿಮೆ ಒಡೆದಿದ್ದರೆ, ನಟನ ಮದುವೆಯಾಗಿದ್ದರೆ…!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 20, 2019
in Special Articles
0
ಮಸೀದಿ ಗಾಜು ಒಡೆದಿದ್ದರೆ, ಚರ್ಚ್ ಪ್ರತಿಮೆ ಒಡೆದಿದ್ದರೆ, ನಟನ ಮದುವೆಯಾಗಿದ್ದರೆ…!
Share on FacebookShare on TwitterShare on WhatsApp

ದೇಶ ಕೊಳ್ಳೆ ಹೋದ್ರು ನಮ್ಗೆ TRP ನೇ ಮುಖ್ಯ…
ಯಾವುದಾದ್ರು ಮಸೀದಿಯ ಹಿಂಬದಿಯ ಗಾಜು ಒಡೆದಿದ್ದರೆ…
ಯಾವುದಾದರೂ ಚರ್ಚಿನ ಬಿದ್ದುಹೋಗಲಿದ್ದ ಕಂಪೌಂಡಿನ ಪ್ರತಿಮೆ ಮುರಿದು ಬಿದ್ದಿದ್ದರೆ…
ಯಾರೋ ನಟನೋ ಕ್ರಿಕೆಟ್ ಪಟುವೋ ಮದುವೆ ಆಗುತ್ತಿದ್ದಿದ್ದರೆ…
ಯಾವುದೋ ನಟಿ ತಾಯಾಗಲಿರುವುದರ ಊದುಹೊಟ್ಟೆಯನ್ನು ಫೋಟೋಶೂಟ್ ಮಾಡುವುದರಲ್ಲಿದ್ದಿದ್ದರೆ….
ಹೊಲಸು, ಕೊಚ್ಚೆ, ಕಚ್ಚೆಹರುಕ ಮಸಾಲೆ ಸುದ್ದಿಯಾಗಿದ್ದಿದ್ದರೆ…

ಈ ಮಾಧ್ಯಮಗಳು ರಸವಿಲ್ಲದ ಚೂಯಿಂಗ್ ಗಮ್ ಜಗಿಯುವಂತೆ, ನಾಯಿ ಮೂಳೆಯನ್ನೆ ಪಂಚಭಕ್ಷ್ಯ ಪರಮಾನ್ನವೆಂದು ತಿಳಿದು ಮೆಲ್ಲುವಂತೆ ಕಚ್ಚುತ್ತಿರುತ್ತದ್ದವು..

ಇವತ್ತಂತು ಹೆಚ್ಚಿನ ಎಲ್ಲ ಕನ್ನಡ ಮಾಧ್ಯಮಗಳು ತಿಂಗಳಿನಿಂದ ತನ್ನ ವಾಂತಿಯನ್ನೆ ತಾನೆ ತಿನ್ನುತ್ತಿರುವ ರಾಜಕೀಯ ದೊಂಬರಾಟ ಮೇಲಾಟಗಳ ಮೇಳವನ್ನೆ ತೋರುತ್ತಿದ್ದವು ನಮ್ಮಲ್ಲಿ ಮಾತ್ರ ಎಂಬ ತಲೆಬರಹದೊಂದಿಗೆ.

ಹಿಮಾದಾಸ್ ಎಂಬ ಮಿಂಚುಳ್ಳಿ ಹದಿನೈದು ದಿನಗಳ ಅಂತರದಲ್ಲಿ ನಾಲ್ಕು ಚಿನ್ನ ಗೆದ್ದ ಸಂಗತಿ ಯಾರಿಗು ಬೇಡವಾಗಿದೆ.

ಕರ್ನಾಟಕದ ಹೆಮ್ಮೆಯ ವಿಜಯನಗರದ ಅರಸೊತ್ತಿಗೆಯ ರಾಜಗುರುಗಳಾಗಿದ್ದ, ಮತೀಯ ವೈರುಧ್ಯಗಳ ನಡುವೆಯೂ ಸಾಮರಸ್ಯದ ಮಳೆಗರೆದು ರಾಜ್ಯದ ಸುಭಿಕ್ಷೆಗೆ ಕಾರಣರಾಗಿದ್ದ ವ್ಯಾಸರಾಜ ಗುರುಗಳ ವೃಂದಾವನವನ್ನು ಬಗೆದು ಹಾಳುಗೈದ ಹೀನಕೃತ್ಯದ ಬಗ್ಗೆ ಯಾವೊಬ್ಬ ಮಂತ್ರಿನಾಯಕರೂ, ಯಾವೊಂದು ಮಾಧ್ಯಮವೂ ಮಾತಾಡದಿರುವುದು ಖಂಡಿಸದಿರುವುದು ತೀವ್ರ ಆಕ್ಷೇಪಣೀಯವೆನಿಸಿದೆ.

ಈ ವಿಷಯವನ್ನು ಚಿಲ್ರೆ ವ್ಯಾಪಾರಕ್ಕೆ ಬಳಸಿಕೊಂಡ #ಬೊಗಳೆ ಠೀವಿಗಳು ಅಲ್ಲು ಹುಳುಕು ಹುಡುಕಿ ಹುಳಬಿಡುವ #ಮಂಗಣ್ಣಗಳ ಕೆಲಸ ಮಾಡಿ ಛೆ… ಛೀ… ಎನ್ನಿಸುವ ಸಿಟ್ಟು ತರಿಸಿದೆ.

ರಾಷ್ಟ್ರಿಯ ಚಾನೆಲ್ಲಗಳು ತೆಗೆದುಕೊಂಡಷ್ಟು ಕಾಳಜಿ ನಮ್ಮವರಿಗೆ ಇಲ್ಲವಾಯಿತಲ್ಲ ಅಂತ ಖೇದವೆನಿಸಿತು.
ಶ್ರೀಶಂಕರರ ಅನುಯಾಯಿ ಸೋಮನಾಥ ಕವಿಯ #ವ್ಯಾಸಯೋಗಿಚರಿತಂ ವ್ಯಾಸಗುರುಗಳ ಬಯಾಗ್ರಫಿ. ಇದು ಸಾಮರಸ್ಯದ ಕನ್ನಡಿ.

ಅವರಿಂದ ದಾಸಪಂಥ ಉಪಕೃತಗೊಂಡಿದೆ. ಶಾಸ್ತ್ರ ಸಾಹಿತ್ಯ ಮೇರುವಿನ ತುದಿ ಕಂಡಿದೆ. ಭಕ್ತರ ಮನೋಭಿಷ್ಟಗಳ ಈಡೇರಿಸುತ್ತದ್ದಾರೆ. ನೂರಾರು ಹನುಮನ ಸನ್ನಿಧಿಗಳ ಸ್ಥಾಪಿಸಿ ಆ ಕಾಲದ ಹಿಂದುತ್ವದ ಜಾಗೃತಿಗೆ ಬುನಾದಿ ಹಾಕಿದ್ದಾರೆ. ವಿಜಯನಗರ ರಾಜ್ಯದ ಪಾಲಿಗೊದಗಿದ್ದ ರಾಜನನ್ನು ಕಳಕೊಳ್ಳುವ ಯೋಗವನ್ನು ತಪ್ಪಿಸಿ ರಾಜಗುರುವಿನ ಮಹತ್ವವನ್ನು ಸಾರಿದ್ದಾರೆ.

ವಿಜಯನಗರ ಸಾಮ್ರಾಜ್ಯದ ಸ್ಥಾಪನೆಗೆ ಕಾರಣರು ವಿದ್ಯಾರಣ್ಯರಾದರೆ ಅದರ ಸಂಪೂರ್ಣ ಅಭಿವೃದ್ಧಿ ಗೆ ಬೆಂಗಾವಲಾಗಿ ನಿಂತವರು ವ್ಯಾಸರಾಜರು.

ಹಿಂದೊಮ್ಮೆ ಕೃಷ್ಣದೇವರಾಯನಿಗೆ ಕುಹೂಯೋಗ ಬಂದಿತ್ತು. ಪ್ರಾಣಕ್ಕೆ ಕುತ್ತನ್ನೆ ತರಬಲ್ಲ ಒಂದು ಕಂಟಕ ಕರ್ನಾಟಕ ರತ್ನಸಿಂಹಾಸನಕ್ಕೆ ಬಂದಿತ್ತು. ತಮ್ಮ ತಪಃಶಕ್ತಿಯಿಂದ ತಾವೇ ಸಿಂಹಾಸನ ಅಲಂಕರಿಸಿ ಅದನ್ನು ಕೇವಲ ದೇವರ ಅನುಗ್ರಹದಿಂದ ನಿವಾರಿಸಿದರು. ಇದಾದ ನಂತರ ಕೃಷ್ಣದೇವರಾಯ ತಾವೇ ಸಿಂಹಾಸನದಲ್ಲಿ ಮುಂದುವರೆಯಿರಿ ಎಂದರೂ ಅದು ನನ್ನ ಕೆಲಸ ಅಲ್ಲ ಕ್ಷಾತ್ರವೇ ರಾಜ್ಯವಾಳಬೇಕೆಂದು ಅನುಗ್ರಹಿಸಿದ ನಿಸ್ವಾರ್ಥ ಶಿರೋಮಣಿಗಳು ವ್ಯಾಸರಾಜರು.

ಕರ್ನಾಟಕದ ಹೆಮ್ಮೆ ಆಚಾರ್ಯಮಧ್ವರಿಂದ ಚಿಗುರೊಡೆದ ಕರ್ನಾಟಕಸಂಗೀತದ ಪಿತಾಮಹ ಪುರಂದರ ದಾಸರನ್ನು ಪ್ರೊತ್ಸಾಹಿಸಿದರು. ಭಕ್ತಾಗ್ರೇಸರ ಕನಕ ದಾಸರಂತಹ ಮಹಾನುಭಾವರಿಗೆ ದೀಕ್ಷೆ ಕೊಟ್ಟವರು.
ಲೌಕಿಕ-ಅಲೌಕಿಕ ಭಾವನೆಗಳಿಗೆ ಸಮಾನ ನೀರೆರೆದವರು ಇದೆ ವ್ಯಾಸಗುರುಗಳು.

ನಿಸ್ಪೃಹತೆಯ ಪರಮಾವಧಿ ಎಂದರೆ ಇದು. ತಿರುಪತಿಯ ಅರ್ಚಕರ ಸಂತತಿ ರಾಜನ ಅಚಾತುರ್ಯದಿಂದ ನಡೆದು ಹೋಗಿ ಪೂಜೆ ನಿಂತಿತು. ಆ ಹೊತ್ತು ತಾವೇ ಹನ್ನೆರಡು ವರ್ಷ ವೆಂಕಟರಮಣನನ್ನು ಅರ್ಚಿಸಿದರು. ಅದೆ ಮನೆತನದ ಹುಡುಗನಿಗೆ ಉಪನಯನ ಸಂಸ್ಕಾರವಾದೊಡನೆ ಪೂಜೆಯ ವಿಧಿವಿಧಾನಗಳ ಅರಿವು ಮೂಡಿಸಿ ಅವನಿಗೆ ಪೂಜಾಧಿಕಾರವನ್ನು ಮರಳಿ ಒಪ್ಪಿಸಿದರು. ಹೀಗೆ ಮತ್ತೊಮ್ಮೆ ನಿಸ್ವಾರ್ಥತೆಯ ಸಾಕಾರರೆನಿಸಿದವರು ಈ ಮಹಾನುಭಾವರು. ಇವತ್ತು ಭಾರತೀಯರಪವಿತ್ರ ಕ್ಷೇತ್ರ ತಿರುಪತಿಯ ತಿಮ್ಮಪ್ಪನ ದರ್ಶನ ನಮಗಾಗುತ್ತಿರುವುದರ ಹಿಂದಿನ ಹಿರಿಮೆ ವ್ಯಾಸರಾಜರದ್ದು.

ಇಡೀ ದೇಶ ಮೊಘಲರ ಕ್ರೂರ ಆಡಳಿತಕ್ಕೊಳಗಾಗಿ ಮತಾಂತರಕ್ಕೊಳಗಾಗುವ ಸಂದರ್ಭ. ಯುವ ಜನತೆಯ ಧರ್ಮಪ್ರಜ್ಞೆಯನ್ನು ಎಚ್ಚರಗೊಳಿಸಲು ಇಡೀ ದೇಶದಲ್ಲಿ ೭೦೦ ಕ್ಕೂ ಹೆಚ್ಚು ಮಾರುತಿ ಮೂರ್ತಿ ಪ್ರತಿಷ್ಠಾಪಿಸಿದರು. ಹಿಂದೂಗಳೆಲ್ಲ ಒಂದು ಎಂಬ ಭಾವನೆಯನ್ನು ಜಾಗೃತಿಗೊಳಿಸಿದ ಕ್ರಾಂತಿಕಾರಿ ವೀರ ಸಂನ್ಯಾಸಿ ವ್ಯಾಸರಾಜರು.

ಇಡೀ ಹಿಂದೂ ಸಮಾಜದ ಶ್ರೇಯಸ್ಸಿಗೆ ಶ್ರಮಿಸಿದ ಮುನಿಯೊಬ್ಬರ ಸನ್ನಿಧಿ ಇವತ್ತು ಸಂಪತ್ತಿನ ನೆಪದಲ್ಲಿ ದಾಳಿಗೊಳಗಾಗಿದೆ.

ವ್ಯಾಸತ್ರಯವೆಂದೆ ಪ್ರಸಿದ್ಧವಾದ ಕಬ್ಬಿಣದ ಕಡಲೆಯಂತಿರುವ ಶಾಸ್ತ್ರಗ್ರಂಥಗಳ ರಚಿಸಿದ ವ್ಯಾಸರಾಜರು ಬರೀ ಮಧ್ವಾನುಯಾಯಿಗಳ ಆಸ್ತಿಯಲ್ಲ. ವಿಪ್ರರ ಸೊತ್ತಲ್ಲ. ಕನ್ನಡದ ಸರಳ ಮಾತಿನಲ್ಲಿ ಪ್ರಮೇಯಗಳನ್ನೊದಗಿಸಿದ ಆಸ್ತಿಕರ ಉಸಿರು. ಶಾಸ್ತ್ರಜ್ಞರ ಕೊರಳು.

ಇಂದು ವಿಜಯನಗರದ ಸಿರಿತನದ ಬಗ್ಗೆ ಹೆಮ್ಮೆ ಪಡುವ ಭಾರತೀಯರು ನಾವಾಗಿದ್ದರೆ ಅದನ್ನು ಉಳಿಸಿದ ರಾಜಗುರು ವ್ಯಾಸರಾಜರ ಋಣ ನಮ್ಮ ಮೇಲಿದೆ.

ದೇಶದ ಕಿವಿಯನ್ನು ನೆಟ್ಟಗಾಗಿಸುವ ಕರ್ನಾಟಕ ಸಂಗೀತವನ್ನು ಕಲಿಯುತ್ತೇವೆ ಅಥವಾ ಮೆಚ್ಚುವವರಾದರೆ ಅಸಂಖ್ಯ ಕೃತಿಗಳಿಂದ ಕನ್ನಡವನ್ನು ಶ್ರೀಮಂತಗೊಳಿಸಿದ ಪುರಂದರ ದಾಸರ ಗುರುಗಳಾದ ವ್ಯಾಸತೀರ್ಥರ ಋಣ ನಮ್ಮ ಮೇಲಿದೆ.

ದಿಕ್ಕು ದಿಕ್ಕಿನಲ್ಲಿ ವ್ಯಾಸರಾಜರು ಸ್ಥಾಪಿಸಿದ ಗಂಟೆ ಹನುಮನ ಭಕ್ತರು ನಾವು ಹೌದಾದರೆ ವ್ಯಾಸರಾಜರಿಗೆ ಕೃತಜ್ಞತೆ ಒದಗಿಸುವ ಕಾಲ ಬಂದಿದೆ.

ಕನಕ ಜಯಂತಿ ಮಾಡಿ ಜಾತಿರಾಜಕಾರಣ ಮಾಡುವ ಮಹಾನುಭಾವರೇ…. ಕನಕದಾಸರ ಗುರುಗಳ ಋಣ ನಿಮ್ಮ ಮೇಲಿದೆ.

ತಿರುಪತಿ ವೇಂಕಟೇಶನನ್ನು ಭಕ್ತಿಯಿಂದ ನೆನೆಯುವ ಕೋಟ್ಯಂತರ ಭಕ್ತರೇ… ವ್ಯಾಸರಾಜರ ಋಣ ನಮ್ಮ ಮೇಲಿದೆ.

ಬಗೆಯ ಬೇಗೆ ಕೇಳಬೇಕಾದ ಸರ್ಕಾರ ಮೂರ್ಛೆಹೋಗಿದೆ . ಊರು ಕೊಳ್ಳೆ ಹೋದರೂ ಕುರ್ಚಿ ಬಿಡೆವು ಎನ್ನುವವರ ನಿಂತ-ಕೂತ-ಎದ್ದ ವಿಷಯಗಳನ್ನೆ ವಾರ್ತೆಗಳಾಗಿಸುವ ಸುದ್ದಿವಾಹಿನಿಗಳು ಸದನದ ನೇರಪ್ರಸಾರದಲ್ಲಿ ವ್ಯಸ್ತವಾಗಿವೆ. ನೋವು ಕೇಳಲು ಯಾರೂ ಇಲ್ಲದ ಅನಾಥಪ್ರಜ್ಞೆ ಕಾಡುತ್ತಿದೆ.

ಅಸಹಾಯಕರ ಎತ್ತಿಹಿಡಿವ ವ್ಯಾಸರಾಜರೇ .. ನಮ್ಮನ್ನು ಮನ್ನಿಸಿ..

ಸಮಾಜಕ್ಕಾಗಿ ಭೋಗ ತೊರೆದು ತ್ಯಾಗಜೀವನ ನಡೆಸಿದ ತಮ್ಮ ನೆನಪಾದ ವೃಂದಾವನ ಉಳಿಸಿಕೊಳ್ಳಲು ದನಿಯಾಗದ ಮಾಧ್ಯಮ ನಾಯಕರ ಸಮಾಜ ನಮ್ಮದಾಗಿದೆ.

ಆದರೂ ದೂರದಲ್ಲಿ ಕಾಣುವ ದೀಪದ ಬೆಳಕು ನಮಗೆ ದಾರಿ ತೋರೀತು ಎಂಬ ಆಶಾಭಾವ ಜೊತೆಗಿದೆ. ಲೋಕಸಭೆಯಲ್ಲಿ ನಮ್ಮ ಬೆಂಗಳುರು ದಕ್ಷಿಣ ಭಾಗದ ಎಂಪಿ ಶ್ರೀ #ತೇಜಸ್ವಿಸೂರ್ಯ ಅವರು ಇಂದು ಈ ವಿಚಾರವನ್ನು ಸದನದ ಗಮನಕ್ಕೆ ತಂದಿದ್ದಾರೆ.

ಎಲ್ಲ ಯತಿವರೇಣ್ಯರೂ ಸೇರಲು ಕಾರಣವಾದ ಈ ಘಟನೆ ಒಳಕುದಿಗಳ ಪಕ್ಕಕ್ಕಿಟ್ಟು ಮನಸ್ಸುಗಳ ಶ್ರೀಮಂತಗೊಳಿಸಲಿ.

ಪಕ್ಕವಾದ್ಯಗಳ ನಾದಕ್ಕೆ ಹಿತ್ತಾಳೆ ಕಿವಿಯಾಗದೆ ಹಿಂದು ಸಮಾಜವನ್ನು ಹೆಗಲು ಕೊಟ್ಟು ಮುನ್ನಡೆಸುವ ಕೈಂಕರ್ಯಕ್ಕೆ ನಾಂದಿಯಾಗಲಿ..

ಇದು ಸಮಸ್ತ ಆಸ್ತಿಕ ಬಂಧುಗಳ ಒಕ್ಕೊರಲ ಪ್ರಾರ್ಥನೆ….

✍ ಕೃಷ್ಣರಾಜ ಕುತ್ಪಾಡಿ

Tags: Kannada ArticleKrishnaraja KutpadiMediaNava BrindavanaSri Vyasaraja Thirtharuಕೃಷ್ಣದೇವರಾಯಕೃಷ್ಣರಾಜ ಕುತ್ಪಾಡಿತೇಜಸ್ವಿಸೂರ್ಯವಿಜಯನಗರವಿಜಯನಗರ ಸಾಮ್ರಾಜ್ಯವೃಂದಾವನವ್ಯಾಸರಾಜ ಗುರುಗಳು
Share196Tweet123Send
Previous Post

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

Next Post

ಬೆಂಗಳೂರು: ಜುಲೈ 20ರಂದು ಸಂಧ್ಯಾವಂದನೆ-ಅನುಷ್ಠಾನ, ಮಂತ್ರಾರ್ಥ ಚಿಂತನೆ ಕಾರ್ಯಕ್ರಮ, ತಪ್ಪದೇ ಪಾಲ್ಗೊಳ್ಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು: ಜುಲೈ 20ರಂದು ಸಂಧ್ಯಾವಂದನೆ-ಅನುಷ್ಠಾನ, ಮಂತ್ರಾರ್ಥ ಚಿಂತನೆ ಕಾರ್ಯಕ್ರಮ, ತಪ್ಪದೇ ಪಾಲ್ಗೊಳ್ಳಿ

ಬೆಂಗಳೂರು: ಜುಲೈ 20ರಂದು ಸಂಧ್ಯಾವಂದನೆ-ಅನುಷ್ಠಾನ, ಮಂತ್ರಾರ್ಥ ಚಿಂತನೆ ಕಾರ್ಯಕ್ರಮ, ತಪ್ಪದೇ ಪಾಲ್ಗೊಳ್ಳಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

ದಳಪತಿ ಯುಗಾರಂಭ | ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ | ತ್ರಿಶಾ ಮಿಂಚಿಂಗ್

May 10, 2026
ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

ಹಿರಿಯ ರಾಜಕಾರಣಿ, ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಸುಧಾಕರ್ ವಿಧಿವಶ

May 10, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಿದ್ಧಾರ್ಥಗೆ ಉತ್ತಮ ಅಂಕ | ಮಾಜಿ ಡಿಸಿಎಂ ಈಶ್ವರಪ್ಪ ಅಭಿನಂದನೆ

May 9, 2026
ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

ನೈರುತ್ಯ ರೈಲ್ವೆ | ಮೂರು ಜೋಡಿ ಡೆಮು ವಿಶೇಷ ರೈಲುಗಳ ಸಂಚಾರ ಕಾಯಂ

May 9, 2026
ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

ತೆರೆ ಮೇಲೆ ರಾಜ್‌ಕುಮಾರ್‌, ಅಂತರಂಗದಲ್ಲಿ ಮುತ್ತುರಾಜ್‌ ಇದ್ದರು: ಮಂಜುನಾಥ್‌ ಚವಾಣ್‌

May 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL