ನವದೆಹಲಿ: ನಿನ್ನೆ ನಿಧನರಾದ ಬಿಜೆಪಿಯ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಅರುಣ್ ಜೇಟ್ಲಿ(66) ಅವರ ಅಂತ್ಯಸಂಸ್ಕಾರ ಇಂದು ನೆರವೇರಿದ್ದು, ಈ ಮೂಲಕ ಬಿಜೆಪಿಯ ಟ್ರಬಲ್ ಶೂಟರ್ ಪಂಚಭೂತಗಳಲ್ಲಿ ಲೀನರಾದರು.
ದೆಹಲಿಯ ನಿಗಂಬೋಧ್ ಘಾಟನ್’ನಲ್ಲಿ ಇಂದು ಸಕಲ ಸರ್ಕಾರಿ ಗೌರವಗಳೊಂದಿಗೆ ಜೇಟ್ಲಿ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.
ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕಾಗಿ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿತ್ತು. ಏಮ್ಸ್ ಆಸ್ಪತ್ರೆಯಿಂದ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಕೈಲಾಶ್ ಕಾಲೋನಿಯಲ್ಲಿರುವ ಅವರ ನಿವಾಸಕ್ಕೆ ತೆಗೆದುಕೊಂಡು ಹೋದ ಬಳಿಕ ಬಿಜೆಪಿಯ ಪ್ರಧಾನ ಕಚೇರಿಗೆ ತೆಗೆದುಕೊಂಡು ಹೋಗಲಾಯಿತು.
Delhi: Union Ministers Harsh Vardhan and Piyush Goyal and Jharkhand CM Raghubar Das pay last respects to Former Union Minister and BJP leader #ArunJaitley at BJP headquarters. pic.twitter.com/oaosUCLbG9
— ANI (@ANI) August 25, 2019
ರಾಜಕೀಯ, ಉದ್ಯಮ, ಕ್ರೀಡೆ ಸೇರಿದಂತೆ ಹಲವಾರು ಕ್ಷೇತ್ರಗಳ ಗಣ್ಯರು ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಪಡೆದರು.
ಅಲ್ಲಿಂದ ಪಾರ್ಥಿವ ಶರೀರವನ್ನು ನಿಗಂಬೋಧ್ ಘಾಟನ್ಗೆ ಮೆರವಣಿಗೆಯಲ್ಲಿ ಕೊಂಡೊಯ್ಯಲಾಯಿತು. ಈ ವೇಳೆ ಸಾವಿರಾರು ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪಾಲ್ಗೊಂಡಿದ್ದರು.
Delhi: Mortal remains of former Union Minister and BJP leader #ArunJaitley being taken to Nigambodh Ghat where the cremation will take place. pic.twitter.com/w9XFaC1dWt
— ANI (@ANI) August 25, 2019
ಹಿಂದೂ ಧಾರ್ಮಿಕ ವಿಧಿವಿಧಾನದಂತೆ ಜೇಟ್ಲಿ ಅವರ ಅಂತ್ಯಸಂಸ್ಕಾರ ನೆರವೇರಿಸಲಾಗಿದ್ದು, ಅವರ ಪುತ್ರ ರೋಹನ್ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
Delhi: Former Union Minister and BJP leader, #ArunJaitley cremated with full state honours at Nigambodh Ghat, today. pic.twitter.com/Nj2THkdnPv
— ANI (@ANI) August 25, 2019
ಬಿಜೆಪಿ ರಾಷ್ಟ್ರಾಧ್ಯಕ್ಷ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ಕಾರ್ಯಾಧ್ಯಕ್ಷ ಜೆಪಿ ನಡ್ಡಾ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಯೋಗ ಗುರು ಬಾಬಾ ರಾಮ್ ದೇವ್, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೇರಿದಂತೆ ಹಲವು ಕೇಂದ್ರ ಸಚಿವರು ಹಾಗೂ ರಾಜಕೀಯ ಪಕ್ಷಗಳ ಮುಖಂಡರು ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.
Discussion about this post