No Result
View All Result
ಪಶ್ಚಿಮ ಬಂಗಾಳದಲ್ಲಿ 200ರ ಗಡಿ ಮುಟ್ಟಿ ಇತಿಹಾಸ ನಿರ್ಮಿಸಿದ ಬಿಜೆಪಿ | ಟಿಎಂಸಿ ಧೂಳಿಪಟ
English Articles

Political Turmoil in Tamil Nadu: BJP Faces Wave of Resignations

by ಕಲ್ಪ ನ್ಯೂಸ್
June 6, 2026
0

Kalpa Media House  |  Chennai  | A major political development is unfolding in Tamil Nadu as a series of resignations...

Read moreDetails
ಶಿವಮೊಗ್ಗಕ್ಕೆ ಇಂಡಿಗೋ ಬೆನ್ನಲ್ಲೇ ಸ್ಪೈಸ್ ಜೆಟ್ ವಿಮಾನ ಸೇವೆಯೂ ಸ್ಥಗಿತ | ಕಾರಣವೇನು?

SpiceJet Flights to Shivamogga Suspended After IndiGo Exit | What’s the Reason?

June 6, 2026
ವಿಶ್ವ ಯೋಗಾಸನ ಚಾಂಪಿಯನ್‌ಶಿಪ್ 2026 | ಮೊದಲ ದಿನವೇ ಐದು ಚಿನ್ನದ ಪದಕ ಗೆದ್ದ ಭಾರತ!

India Dominates World Yogasana Championship 2026, Wins 5 Golds on Opening Day

June 6, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
  • Advertise With Us
  • Grievances
  • About Us
  • Contact Us
Saturday, June 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ: ಭಗವಂತನ ಧ್ಯಾನದ ಬಗೆಯನ್ನು ಹೇಗೆ ಕಲಿಯುವುದು?

ಭಾಗವತ ಚಿಂತನ: ಪರೀಕ್ಷಿತ್ ರಾಜ ಕೇಳುತ್ತಾನೆ ಭಗವಂತನ ಧ್ಯಾನದ ಬಗೆಯನ್ನು ಹೇಗೆ ಕಲಿಯುವುದು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 11, 2019
in Special Articles
0
ಶ್ರೀಮದ್ ಭಾಗವತ- ಭಕ್ತರ ಬದುಕಿನ ಸಂಜೀವಿನಿ: ಭಗವಂತನ ಧ್ಯಾನದ ಬಗೆಯನ್ನು ಹೇಗೆ ಕಲಿಯುವುದು?
Share on FacebookShare on TwitterShare on WhatsApp

ಶುಕಾಚಾರ್ಯರು ಹೇಳುತ್ತಾರೆ ಮೊದಲು ಆಸನ ಶುದ್ಧವಾದ ಪರಿಸರದಲ್ಲಿ ಕುಳಿತುಕೊಳ್ಳಬೇಕು, ಪ್ರಾಣಾಯಾಮದಿಂದ ಮತ್ತು ವಾಯುದೇವರ ಅನುಗ್ರಹದಿಂದ ಶ್ವಾಸವನ್ನು ಜಯಿಸಬೇಕು. ಉಸಿರಿನ ಹಿಡಿತದಿಂದ ಮನೋನಿಗ್ರಹ ಮಾಡಬಹುದು. ಇದಕ್ಕಾಗಿ ನಮ್ಮ ಹಿರಿಯರು ಎಲ್ಲರಿಗು ಸಂಧ್ಯಾವಂದನೆಯಲ್ಲಿ ಒಟ್ಟು ಮೂರುಬಾರಿ ಅಂದರೆ ಒಂಬತ್ತು ಬಾರಿ ಪ್ರಾಣಾಯಾಮವನ್ನು ಮಾಡಲು ಹೇಳಿದ್ದಾರೆ. ಒಂದು ಕ್ಷಣ ಉಸಿರನ್ನು ಹಿಡಿದಾಗ ನಮ್ಮ ಚಿಂತನೆಗಳು ಸ್ವಲ್ಪ ನಿಲ್ಲುತ್ತದೆ ಆ ಸಮಯದಲ್ಲಿ ಒಂದು ಕ್ಷಣ ಅಥವಾ ಸ್ವಲ್ಪ ಕ್ಷಣಗಳ ಭಗವಂತನ ರೂಪವನ್ನು ಚಿಂತಿಸಿದಾಗ ಅದು ಮನದಲ್ಲೇ ಉಳಿಯುತ್ತದೆ. ಇದು ಮಾಡಿನೋಡಿ ಹೇಗೆ ಒಂದು Photo Flash ಆದಾಗ ಆ ಚಿತ್ರ ಸೆರೆ ಹಿಡಿಯುತ್ತದೆ. ಹಾಗೆ ಮನಸ್ಸಿನಲ್ಲಿ ದೇವರ ಚಿಂತನೆ ಹಿಡಿಯುತ್ತದೆ.ಆನಂತರ ಇಂದ್ರಿಯಗಳನ್ನು ವಶಮಾಡಿಕೊಂಡು ಧ್ಯಾನ ಮಾಡುವ ಅಭ್ಯಾಸ ಮಾಡಬೇಕು ಎಂದು ಹೇಳುತ್ತಾರೆ.

ವಾದಿರಾಜರು ತಮ್ಮ ಒಂದು ಕೃತಿಯಲ್ಲಿ ಹೇಗೆ ಮುಮುಕ್ಷು ಆದವನು ಹೇಗೆಇರಬೇಕು ಎಂದು ಹೇಳಿದ್ದಾರೆ. ಮನುಷ್ಯ ಹುಟ್ಟಿದಾಗಿನಿಂದ ಸಾಯುವವರೆಗೂ ತಾಳವನ್ನು ಹಿಡಿದು ಭಜನೆ ಮಾಡಬೇಕು ಎಂದು ಎಲ್ಲೂ ಹೇಳಿಲ್ಲ, ಯಾಕೆಂದರೆ ಈ ಕಲಿಯುಗದಲ್ಲಿ ಹರಿಪೂಜೆ ಮತ್ತು ಹರಿದ್ಯಾನಕ್ಕೆ ಹಲವಾರು ಅಡೆತಡೆಗಳು ಬರುತ್ತವೆ. ವಾದಿರಾಜ ತೀರ್ಥರು ಹೇಳುವಹಾಗೆ ಮಾನವಜನ್ಮದಲ್ಲಿ ಪ್ರಮುಖವಾಗಿ ಮಾಡುವ ಕೆಲಸದಲ್ಲಿ ಭಗವಂತನ ಸ್ಮರಣೆಯು ಕೂಡ ಮುಖ್ಯವಾದ ಕೆಲಸ. ಮುಮುಕ್ಷುವಾದವನ ಕರ್ತವ್ಯವೆಂದರೆ “ದ್ವಾರಾವತಿಯ ಗೋಪಿ ಚಂದನದಿಂದ ಶ್ರೀ ರಮಣನ ತವನಾಮವ ನೆನೆನೆದೆರಡು ಊರ್ಧ್ವಪುಂಡ್ರಗಳ ಧರಿಸಿ ವೀರ ವೈಷ್ಣವ ಗುರುವ, ಸೇರಿ ಸಂತೃಪ್ತ ಸುದರ್ಶನ ಶಂಖವ ಧಾರಣವನು ಭುಜಯುಗದೊಳು ಮಾಡಿ ಮುರಾರಿಯಾ ಮಂತ್ರಗಳಿಂದ ಅವರಿಂದಲೇ ಕೇಳಿ ಓರಂತೆ ಜಪಿಸುತ್ತಿರು ಎಂದು ಹೇಳಿದ್ದಾರೆ”. ನಾರಾಯಣನ ನೆನೆ ಮನವೇ ನಾರಾಯಣನ ನೆನೆ.

ಇಲ್ಲಿ ಹೇಳಿದಹಾಗೆ ದ್ವಾರಾವತಿಯ ಗೋಪಿ ಚಂದನ ಧರಿಸಿ ಮುದ್ರಾಧಾರಣೆ ಮಾಡಿ ಗುರುಗಳಿಂದ ಉಪದೇಶ ಪಡೆಯುವುದು ಇದು ನಮ್ಮೆಲ್ಲರ ಕರ್ತವ್ಯ ಆದರೆ ಮೊದಲೇ ಹೇಳಿದಂತೆ ನಾರಾಯಣನ ನಿರಂತರ ನೆನೆ ಮನವೇ ಎಂದು ಹೇಳಿದ್ದಾರಲ್ಲ ಅದರಿಂದ ಮೊದಲು ನಾರಾಯಣನ ನೆನೆದರೆ ಜ್ಞಾನದಿಂದ ಕರ್ಮಆಚರಣೆ ಕೇವಲ ಕರ್ಮಾಚರಣೆಯಿಂದ ಜ್ಞಾನವಲ್ಲ. ಕೆಲವರು ಕೇವಲ ಕರ್ಮಾಚರಣೆಗೆ ಹೆಚ್ಚಿನ ಪ್ರಾಶಸ್ತ್ಯ ಕೊಡುತ್ತಾರೆ ಆದರೆ ಭಾಗವತ ಹೇಳುತ್ತದೆ ಮೊದಲು ಜ್ಞಾನ ನಂತರ ಕರ್ಮಾಚರಣೆ. ಇಲ್ಲೂ ವಾದಿರಾಜರು ಹೇಳಿದ್ದು ನಾರಾಯಣನ ನೆನೆ ನಂತರ ಗೋಪಿಚಂದನ ಧಾರಣ, ಮುದ್ರಾಧಾರಣ ಪೂಜೆ ಎಲ್ಲವು. ಇದನ್ನೇ ಶಾಸ್ತ್ರಗಳಲ್ಲಿ ತಿಳಿಸಿದ್ದು “ಆತ್ಮವಾರೇ ಸ್ರೋತವ್ಯಹ ದೃಷ್ಟವ್ಯಹ ಮಂತ್ರವ್ಯೋ ನಿಧಿಧಾಸಾವ್ಯಹ”.

ಭಗವಂತನ ಅಪರೋಕ್ಷ ಜ್ಞಾನ ಬಂದರೆ ಮಾತ್ರ ನಮಗೆ ಮೋಕ್ಷ ಅನ್ನುವುದು ನಿಷ್ಚಿತ, ಮೊದಲು ಶ್ರವಣ ಭಗವಂತನ ಕಥೆಗಳನ್ನೂ ಕೇಳುವುದು, ಮನನ – ಕೇಳಿದನ್ನು ಮನಸ್ಸಿನಲ್ಲೇ ಚಿಂತಿಸುವುದು, ನಿದಿಧ್ಯಾಸನ – ಭಗವಂತನನ್ನು ಅವನಬಗ್ಗೆ ಕೇಳಿ ಅದನ್ನು ತಿಳಿದು ನಂತರ ನಿರಂತರ ಧ್ಯಾನ ಮಾಡುವುದು. ಇದೆ ಮನುಷ್ಯ ಜನ್ಮದ ಪ್ರಮುಖ ಕೆಲಸ. ಅದೇ ರೀತಿ ವಾದಿರಾಜರು ಹೇಳುತ್ತಾರೆ ಅವನ ಶ್ರವಣ ಮನನ ನಿಧಿ ಧ್ಯಾಸನ ತಿಳಿದು ನಂತರ ಅವನ ಅರ್ಚನೆ ಮಾಡುವುದು ಹೆಚ್ಚಿನ ಸುಖ ಅಥವಾ ಪುಣ್ಯವನ್ನು ಕೊಡುತ್ತದೆ. ಈ ರೀತಿ ನೆನೆದರೆ ಮಾತ್ರ ಅಂತ್ಯಕಾಲದಲ್ಲಿ ಭಾಗವಂತನ ಚಿಂತನೆ ಬರಬಹುದು.

ಜಗದ್ಗುರು ಶ್ರೀಮದ್ವಾಚಾರ್ಯರು ದ್ವಾದಶ ಸ್ತೋತ್ರದಲ್ಲಿ ಇದನ್ನೇ ಉಲ್ಲೇಖ ಮಾಡಿದ್ದಾರೆ, ಸಂತತಂ ಚಿಂತಯೇ ಅನಂತಂ ಅಂತ್ಯಕಾಲೇ ವಿಶೇಷತಃ ಯಾವಾಗಲೂ ಭಗವಂತನ ಚಿಂತನೆಯನ್ನು ಮಾಡುತ್ತಿರಬೇಕು ಕಡೆಗಾಲದಲ್ಲಿ ಅದು ನೆನಪಿಗೆ ಬರುತ್ತದೆ. ಇದನ್ನು ಪುರಂದರದಾಸರು ತಮ್ಮ ಕೃತಿಗಳಲ್ಲಿ ಕೊಟ್ಟಿದ್ದಾರೆ ಅಂತ್ಯಕಾದಲ್ಲಿ ಸ್ಮರಿಸೋ ಹಾಗೆ ನಾರಾಯಣ ನಿನ್ನ ನಾಮದ ಸ್ಮರಣೆಯ ಸಾರಾಮೃತ ಎನ್ನ ನಾಲಿಗೆಗೆ ಬರಲಿ ಎಂದು ಹೇಳಿದ್ದಾರೆ.

ಪರೀಕ್ಷಿತ್ ರಾಜ ಕೇಳುತ್ತಾನೆ: ಈ ಮಾನವ ಜನ್ಮದ ಪರಮ ಲಾಭ ಯಾವುದು? ಶುಕಾಚಾರ್ಯರು ಹೇಳುತ್ತಾರೆ: ಅಂತ್ಯೆಚ ಹರಿಸ್ಮರಣಂ ಇದಕ್ಕೆ ಅನೇಕ ಉಪಯೋಗಗಳನ್ನು ನಮ್ಮ ಹಿರಿಯರು ಮಾಡಿದ್ದಾರೆ, ಅವುಗಳೆಂದರೆ ತಮ್ಮ ಮಕ್ಕಳಿಗೆ ಭಗವಂತನ ಹೆಸರುಗಳನ್ನೂ ಇಟ್ಟು ತಮ್ಮ ಅಂತ್ಯ ಕಾಲದಲ್ಲಿ ಅವರ ಹೆಸರು ಕೂಗಿದರೆ ಆಗಲಾದರೂ ಭಗವಂತನ ಚಿಂತನೆ ಬರಲಿ ಎಂದು ಹೆಸರಿಡುತ್ತಿದ್ದರು. ಶುಕಾಚಾರ್ಯರು ಮುಂದುವರೆಸುತ್ತ ಹೇಳುತ್ತಾರೆ ಈಗಾಗಲೇ ಮೋಕ್ಷದಲ್ಲಿ ಇರತಕ್ಕವರು ಕೂಡ ಭಗವಂತನ ನಾಮಗಳನ್ನು ಇನ್ನಷ್ಟು ಜಪಿಸುವುದರಿಂದ ಅಲ್ಲಿ ಇನ್ನು ಹೆಚ್ಚಿನ ಸುಖಗಳನ್ನೂ ಪಡೆಯುತ್ತಾರೆ ಎಂದು ಹೇಳುತ್ತಾರೆ. ಮುಕ್ತಿಯಲ್ಲಿ ಆನಂದ ರೂಪದಲ್ಲಿ ಭಗವಂತನ ಜಪ ಮಾಡುತ್ತಿರುತ್ತಾರೆ. ಹೀಗೆ ಧ್ಯಾನದ ಮಹತ್ವವನ್ನು ಹೇಳುತ್ತಾರೆ.

ಕಲಿಯುಗ!
ಒಮ್ಮೆ ನಾಲ್ಕು ಜನ ಪಾಂಡವರು ಯುಧಿಷ್ಠಿರನನ್ನು ಹೊರತುಪಡಿಸಿ (ಅವನಾಗ ಅಲ್ಲಿರಲಿಲ್ಲ) ಕೃಷ್ಣನನ್ನು ಪ್ರಶ್ನಿಸಿದರು, “ಕಲಿಯುಗವೆಂದರೇನು ಮತ್ತು ಕಲಿಯುಗದಲ್ಲಿ ಏನು ಜರುಗುತ್ತದೆ?”

ಕೃಷ್ಣನು ಮುಗುಳ್ನಕ್ಕು, “ನಾನು ನಿಮಗೆ ಕಲಿಯುಗದ ಪರಿಸ್ಥಿತಿ ಹೇಗಿರುತ್ತದೆಂದು ತೋರಿಸುತ್ತೇನೆ” ಎಂದು  ಹೇಳಿದ. ಶ್ರೀ ಕೃಷ್ಣನು ಬಿಲ್ಲು ಬಾಣಗಳನ್ನು ತೆಗೆದುಕೊಂಡು ನಾಲ್ಕು ಬಾಣಗಳನ್ನು ನಾಲ್ದೆಸೆಗಳಿಗೆ ಹೊಡೆದು ಆ ನಾಲ್ಕು ಜನ ಪಾಂಡವರಿಗೆ ಆ ಬಾಣಗಳನ್ನು ತೆಗೆದುಕೊಂಡು ಬರಲು ಹೇಳಿದ.  ಆ ನಾಲ್ವರೂ ಬಾಣಗಳನ್ನು ಹುಡುಕಲು ತಲಾ ಒಂದೊಂದು ದಿಕ್ಕಿಗೆ ತೆರಳಿದರು.

ಅರ್ಜುನನು ತನಗೆ ಸಿಕ್ಕ ಬಾಣವನ್ನು ಕೈಗೆತ್ತಿಕೊಳ್ಳುತ್ತಿದ್ದಾಗ ಅವನಿಗೆ ಒಂದು ಮಧುರವಾದ ಸ್ವರವು ಕೇಳಿಸಿತು. ಅವನು ತಿರುಗಿ ನೋಡಿದಾಗ ಒಂದು ಕೋಗಿಲೆಯು ಸಮ್ಮೋಹನಗೊಳಿಸುವ ಸ್ವರದಲ್ಲಿ ಹಾಡುತ್ತಿತ್ತು. ಅದರೊಂದಿಗೆ ಜೀವಂತವಿದ್ದ ಮತ್ತು ಯಾತನೆಯನ್ನು ಅನುಭವಿಸುತ್ತಿದ್ದ ಒಂದು ಮೊಲದ ಮಾಂಸವನ್ನು ಆ ಕೋಗಿಲೆಯು ಕುಕ್ಕಿ ಕುಕ್ಕಿ ತಿನ್ನುತ್ತಿತ್ತು. ಅಂತಹ ದಿವ್ಯ ಪಕ್ಷಿಯು ಮಾಡುತ್ತಿದ್ದ ಹೇಯವಾದ ಕಾರ್ಯವನ್ನು ನೋಡಿ ಅದನ್ನು ಭರಿಸಲಾಗದೆ ಅರ್ಜುನನು ಜಿಗುಪ್ಸೆಗೊಂಡು ಅಲ್ಲಿಂದ ತಕ್ಷಣವೇ ಹೊರಟುಹೋದ.

ಭೀಮನು ಐದು ಬಾವಿಗಳಿರುವಂತಹ ಒಂದು ಸ್ಥಳದಿಂದ ಬಾಣವನ್ನು ಎತ್ತಿಕೊಂಡ. ನಾಲ್ಕು ಬಾವಿಗಳು ಒಂದು ಬಾವಿಯ ಸುತ್ತಲೂ ಇದ್ದವು. ಆ ನಾಲ್ಕೂ ಬಾವಿಗಳು ಸಿಹಿಯಾದ ನೀರಿನಿಂದ ತುಂಬಿ ತುಳುಕುತ್ತಾ ತಮ್ಮಲ್ಲಿರುವ ನೀರನ್ನು ಹಿಡಿದಿಟ್ಟುಕೊಳ್ಳಲಾಗದೆ ಉಕ್ಕಿ ಹರಿಯುತ್ತಿದ್ದವು. ಆದರೆ ಆಶ್ಚರ್ಯಕರವಾಗಿ ಮಧ್ಯದಲ್ಲಿರುವ ಬಾವಿಯು ಸಂಪೂರ್ಣವಾಗಿ ಬರಿದಾಗಿತ್ತು. ಭೀಮನೂ ಸಹ ಆ ದೃಶ್ಯವನ್ನು ನೋಡಿ ಸೋಜಿಗಗೊಂಡ.

ನಕುಲನೂ ಸಹ ತನಗೆ ಸಿಕ್ಕ ಬಾಣವನ್ನು ಎತ್ತಿಕೊಂಡು ಹಿಂದಿರುಗಿ ಬರುತ್ತಿದ್ದ. ಒಂದು ಸ್ಥಳದಲ್ಲಿ ಹಸುವೊಂದು ಕರುವಿಗೆ ಜನ್ಮ ನೀಡುತ್ತಿದ್ದ ಸ್ಥಳದಲ್ಲಿ ನಿಂತುಕೊಂಡ. ಕರು ಹಾಕಿದ ತಕ್ಷಣ ಆ ಹಸುವು ತನ್ನ ಕಂದನ ಮೈಯನ್ನು ನೆಕ್ಕತೊಡಗಿತು. ಹಾಗೆ ನೆಕ್ಕುವ ಮೂಲಕ ಕರುವಿನ ಶರೀರವು ಸ್ವಚ್ಛಗೊಂಡ ಬಳಿಕವೂ ಹಸುವು ಕರುವನ್ನು ನೆಕ್ಕುವುದನ್ನು ಮುಂದುವರೆಸಿತು. ಅದರಿಂದಾಗಿ ಆ ಕರುವಿನ ಚರ್ಮ ಕಿತ್ತುಹೋಗುವಂತಾಯಿತು. ಆದರೂ ಸಹ ಆ ತಾಯಿ ಹಸು ಕರುವನ್ನು ನೆಕ್ಕುವುದನ್ನು ಬಿಡಲಿಲ್ಲ. ಅದನ್ನು ಗಮನಿಸಿದ ಕೆಲವು ಜನ ಬಹಳ ಕಷ್ಟಪಟ್ಟು ಆ ಹಸು ಕರುಗಳನ್ನು ಬೇರ್ಪಡಿಸಿದರು. ನಕುಲನಿಗೂ ಸಹ ಹಸುವಿನಂತಹ ಸಾಧು ಪ್ರಾಣಿಯ ವರ್ತನೆಯು ಆಶ್ಚರ್ಯವನ್ನುಂಟು ಮಾಡಿತು.

ಸಹದೇವನು ತನ್ನ ಬಾಣವನ್ನು ಪರ್ವತವೊಂದರ ಹತ್ತಿರದಿಂದ ಎತ್ತಿಕೊಂಡ. ಅಲ್ಲಿ ಮೇಲಿನಿಂದ ಕೆಳಗೆ ಉರುಳುತ್ತಿದ್ದ ಬೃಹತ್ ಬಂಡೆಯೊಂದನ್ನು ನೋಡಿದ. ಉರುಳುತ್ತಿದ್ದ, ಆ ಹೆಬ್ಬಂಡೆಯು ತನ್ನ ಅಡಿಗೆ ಸಿಕ್ಕ ದೊಡ್ಡ ದೊಡ್ಡ ಬಂಡೆಗಳನ್ನು ಸಹ ಪುಡಿಪುಡಿ ಮಾಡುತ್ತಾ, ಬೃಹದಾಕಾರದ ಮರಗಳನ್ನು ನೆಲಕ್ಕೆ ಒರಗುವಂತೆ ಮಾಡುತ್ತಿತ್ತು. ಅಂತಹ ಬಂಡೆಯು ಒಂದು ಚಿಕ್ಕ ಗಿಡವು ಅಡ್ಡ ಬಂದುದರಿಂದ ನಿಂತುಕೊಂಡಿತು. ಸಹಜವಾಗಿಯೇ ಸಹದೇವನೂ ಸಹ ಈ ಸೋಜಿಗವನ್ನು ನೋಡಿ ಅಚ್ಚರಿಗೊಂಡ.

ಎಲ್ಲ ಪಾಂಡವರೂ ತಾವು ಕಂಡ ಸಂಗತಿಗಳ ಕುರಿತು ಕೃಷ್ಣನಿಗೆ ಹೇಳಿ ಅವನಿಂದ ವಿವರಣೆಯನ್ನು ಬಯಸಿದರು. ಕೃಷ್ಣನು ನಸುನಕ್ಕು ಅವುಗಳನ್ನು ವಿವರಿಸತೊಡಗಿದ…

“ಕಲಿಯುಗದಲ್ಲಿ ಪುರೋಹಿತರು ಬಹಳ ಮಧುರವಾದ ಧ್ವನಿಯನ್ನು ಹೊಂದಿರುತ್ತಾರೆ ಮತ್ತು ಬಹಳ ಉನ್ನತವಾದ ಜ್ಞಾನವನ್ನೂ ಹೊಂದಿರುತ್ತಾರೆ; ಆದರೂ ಸಹ ಆ ಕೋಗಿಲೆಯು ಮೊಲವನ್ನು ಕಿತ್ತು ತಿಂದಂತೆ ಅವರು ಭಕ್ತರನ್ನು ಸುಲಿದು, ಪೀಡಿಸುತ್ತಾರೆ.

ಕಲಿಯುಗದಲ್ಲಿ ಬಡವರು ಶ್ರೀಮಂತರ ಮಧ್ಯೆಯೇ ಬದುಕುತ್ತಾರೆ ಮತ್ತು ಆ ಶ್ರೀಮಂತರು ತುಂಬಿ ತುಳುಕುವಷ್ಟು ಧನಕನಕಗಳನ್ನು ಹೊಂದಿರುತ್ತಾರೆ; ಆದರೂ ಸಹ ಅವರು ಬಡವರಿಗೆ ಬಿಡಿಗಾಸನ್ನೂ ಕೊಡುವುದಿಲ್ಲ. ಆ ತುಂಬಿ ಹರಿಯುತ್ತಿದ್ದ ನಾಲ್ಕು ಬಾವಿಗಳಂತೆ ಬರಿದಾದ ಬಾವಿಗೆ ಅವರು ನೀರುಣಿಸುವುದಿಲ್ಲ.

ಕಲಿಯುಗದಲ್ಲಿ ತಾಯ್ತಂದೆಯರು ತಮ್ಮ ಮಕ್ಕಳನ್ನು ಎಷ್ಟು ಪ್ರೀತಿಸುತ್ತಾರೆಂದರೆ ಅವರ ಮಮಕಾರವು ಮಕ್ಕಳನ್ನು ಹಾಳು ಮಾಡುವುದಷ್ಟೇ ಅಲ್ಲ ಅವರ ಜೀವನವನ್ನೂ ನಾಶ ಮಾಡುತ್ತದೆ; ಆ ಆಕಳು ತನ್ನ ಕರುವಿನ ಮೇಲೆ ತೋರಿಸಿದ ಮಮತೆಯಂತೆ.

ಕಲಿಯುಗದಲ್ಲಿ ಪರ್ವತದ ಮೇಲಿಂದ ಬೀಳುವ ಹೆಬ್ಬಂಡೆಯಂತೆ ಜನರು ತಮ್ಮ ಸುಗುಣಗಳನ್ನು ಕಳಚಿಕೊಂಡು ಅಧಃಪತನಕ್ಕೆ ಬೀಳುತ್ತಾರೆ ಮತ್ತು ಅವರನ್ನು ತಡೆಯಲು ಯಾರಿಂದಲೂ ಸಾಧ್ಯವಾಗುವುದಿಲ್ಲ; ಆದರೆ ಅಂತಿಮವಾಗಿ ಭಗವನ್ನಾಮ ಸ್ಮರಣೆ ಮಾತ್ರ ಅವರನ್ನು ಆ ಪುಟ್ಟ ಗಿಡದಂತೆ ಕೆಳಗೆ ಜಾರದಂತೆ ಹಿಡಿದು ರಕ್ಷಿಸುತ್ತದೆ”.

~ಶ್ರೀಮದ್ಭಾಗವತದಿಂದ ಆಯ್ದ ಉದ್ಧವ ಗೀತೆಯ ಭಾಗ.

ಕೃಷ್ಣಾ ಎನಬಾರದೆ..

ನರ ಜನ್ಮ ಬಂದಾಗ ನಾಲಿಗೆ ಇದ್ದಾಗ| ಕೃಷ್ಣ ಎನಬಾರದೆ||

ಭಕ್ತಿ ಪೂರ್ವಕವಾಗಿ ಕೃಷ್ಣನಿಗೆ ಒಂದು ಬಾರಿ ಮಾಡಿದ ನಮಸ್ಕಾರವು ಹತ್ತು ಅಶ್ವಮೇಧ ಯಾಗ ಮಾಡಿದುದಕೆ ಸಮ ಅಂತ ಬಲ್ಲವರು ಹೇಳುತ್ತಾರೆ. ಅಶ್ವಮೇಧ ಯಾಗ ಮಾಡಿದವನಿಗೆ ಮತ್ತೆ ಪುನರಪಿ ಜನನಂ, ಪುನರಪಿ ಮರಣಂ. ಆದರೆ ಸರ್ವೋತ್ತಮ ನಾದ ದೇವ ದೇವನನ್ನು ನನ್ನ ಸ್ವಾಮಿ ಎಂದು ಒಪ್ಪಿಕೊಂಡವರಿಗೆ, ತಮ್ಮ ಸಂಪೂರ್ಣ ಬದುಕನ್ನು ಅವನಿಗೆ ಸಮರ್ಪಿಸಿಗೊಳಿಸಿದವರಿಗೆ ಮತ್ತೆ ಗರ್ಭವಾಸ ಇಲ್ಲವೆಂದು ಶಾಸ್ತ್ರ ಹೇಳುತ್ತದೆ. ಆದ್ದರಿಂದ ಮಲಗೆದ್ದು ಕೂಡುವಾಗ, ಮೈ ಮುರಿದು ಏಳುತಲೊಮ್ಮೆ, ತನ್ನ ಮಂದಗಮನೆಯ ಕೂಡ ಸರಸವಾಡುತಲೊಮ್ಮೆ, ಮಕ್ಕಳಾಡಿಸುವಾಗ ಅಕ್ಕರದಿ ನಲಿವಾಗ ಮತ್ತು ದೂರವಾಣಿ ಕರೆ ಮಾಡಿದಾಗ ಅಥವಾ ಸ್ವೀಕಾರ ಮಾಡಿದಾಗ, ಮನೆಯವರು ಅಥವಾ ಬಂಧು, ಬಳಗ, ಸ್ನೇಹಿತ ವರ್ಗದ , ಜೊತೆಗೆ ಮಾತನಾಡುವಾಗ ಆ ಭಗವಂತನಾದ ದೇವ ದೇವನ ಸ್ಮರಣೆ ಕಿಂಚಿತ್ತೂ ಆದರು ಆಗಲಿ.

 ( ಪ್ರೇರಣೆ/ಚಿರಋಣಿ- ಅ.ವಿಜಯವಿಠಲರವರ ಬರಹಗಳು)

Tags: DrGururajPoshettihalliKaliyugaKalpaNewsKannadaArticleLordSriKrishnaSpecialArticleSrimadBhagavataಕಲಿಯುಗಡಾ_ಗುರುರಾಜಪೋಶೆಟ್ಟಿಹಳ್ಳಿಧರ್ಮಭಾಗವತ_ಪುರಾಣಶ್ರೀಮದ್_ಭಾಗವತಶ್ರೀವೇದವ್ಯಾಸ
Share232Tweet123Send
Previous Post

ಭದ್ರಾವತಿ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಶಾಂತಿಯುತ: ಹಿಂದೂ ನಾವೆಲ್ಲ ಒಂದು-ಕೇಸರಿ ಅಬ್ಬರ

Next Post

ಶಿವಮೊಗ್ಗ: ಘನತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ, ನಾಗರಿಕರ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಘನತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ, ನಾಗರಿಕರ ಕಿಡಿ

ಶಿವಮೊಗ್ಗ: ಘನತ್ಯಾಜ್ಯ ವಿಲೇವಾರಿ ಘಟಕದ ಅಸಮರ್ಪಕ ನಿರ್ವಹಣೆ, ನಾಗರಿಕರ ಕಿಡಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

ವೆಂಕಟಾಚಲಧಾಮದ 15ನೇ ವಾರ್ಷಿಕೋತ್ಸವ | ಚಿನ್ನದ ಕಿರೀಟ ಸಮರ್ಪಣೆ

June 6, 2026
ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

ಮಕ್ಕಳಲ್ಲಿ ಪರಿಸರ ಜಾಗೃತಿ ಮೂಡಿಸಿದ ಕುಮದ್ವತಿ ರೆಸಿಡೆನ್ಷಿಯಲ್ ಸ್ಕೂಲ್ | ಹೇಗಿತ್ತು ಆಚರಣೆ?

June 6, 2026
ಯುಗಾದಿ | ಯಶವಂತಪುರ-ಹೊಸಪೇಟೆ ನಡುವೆ ವಿಶೇಷ ಎಕ್ಸ್’ಪ್ರೆಸ್ ರೈಲು

ತಾಳಗುಪ್ಪ-ಶಿವಮೊಗ್ಗ-ಮೈಸೂರಿನ ನಾಲ್ಕು ರೈಲುಗಳ ಕುರಿತಾಗಿ ಅಪ್ಡೇಟ್

June 6, 2026
ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

ಸಚಿವರ ಅಸಮಾಧಾನ ಆಡಳಿತದ ಮೇಲೆ ಪರಿಣಾಮ: ಸಿ.ಟಿ. ರವಿ

June 6, 2026
ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

ಶಿವಮೊಗ್ಗ | ಕ್ರೇನ್’ಗೆ ಸಿಲುಕಿ ಬೆಳ್ತಂಗಡಿ ಮೂಲದ ಕಾರ್ಮಿಕ ದಾರುಣ ಸಾವು

June 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL