No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಇದು ನೀವು ಈವರೆಗೂ ತಿಳಿದಿರದ ಎಫ್’ಎಂ ರೇಡಿಯೋ ಲೈಫ್’ನ ಒಂದಿಷ್ಟು ವಿಚಾರಗಳು…

ಹೆಸರಿಡದ ಬಾಂಧವ್ಯಗಳ ವಿಸ್ಮಯ ಲೋಕವೇ ಎಫ್ ಎಂ ರೇಡಿಯೋ ಜಗತ್ತು...

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 13, 2019
in Special Articles
0
ಇದು ನೀವು ಈವರೆಗೂ ತಿಳಿದಿರದ ಎಫ್’ಎಂ ರೇಡಿಯೋ ಲೈಫ್’ನ ಒಂದಿಷ್ಟು ವಿಚಾರಗಳು…

Image Courtesy: Internet

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಯಾರ್ ಹೇಳಿದ್ದು ಪ್ರಾಮಾಣಿಕವಾದ, ಸ್ವಾರ್ಥರಹಿತವಾದ ಪ್ರೀತಿ ಸ್ನೇಹ ಇಂದಿನ ದಿನದಲ್ಲಿ ಸಿಗ್ತಾನೆ ಇಲ್ಲ, ಎಲ್ಲಾ ಸಂಭಂದಗಳಲ್ಲೂ ಸ್ವಾರ್ಥ ಅಡಗಿದೆ ಅಂತ, ಕೆಲವೊಂದು ಜಗತ್ತು ಅದೇ ಹಳೆಯ ಮುಗ್ಧತೆಯ ತನ್ನೊಳಗೆ ಹಾಗೆಯೇ ಬಚ್ಚಿಟ್ಟುಕೊಂಡು ಹಾಯಾಗಿದೆ. ಅಂತಹ ಮುಗ್ಧತೆ , ಪ್ರಾಮಾಣಿಕತೆ, ನಂಬಿಕೆ, ಪ್ರೀತಿ, ವಿಶ್ವಾಸಗಳಿಂದ ಕಟ್ಟಲ್ಪಟ್ಟ ಸುಂದರ ಸೌಧಗಳಲ್ಲಿ ಒಂದು ನನ್ನ ಎಫ್’ಎಂ ರೇಡಿಯೋ ಜಗತ್ತು, ಇಂದಿನ ಇಂಟರ್ನೆಟ್ ಯುಗದಲ್ಲಿ ಸೋಶಿಯಲ್ ಮೀಡಿಯಾಗಳ ಬಣ್ಣ ಬಣ್ಣದ ಬಣ್ಣನೆಗಳ ನಡುವೆ, ಗರಿಗೆದರಿ ಹಾರುತ್ತಿರುವ ಭಾವನೆಗಳ ನಡುವೆ, ಬೆಚ್ಚನೆ ಮುದುರಿ ಕುಳಿತು, ತನ್ನ ಪುಟ್ಟ ಪ್ರಪಂಚದಲ್ಲಿ ತಾನೇ ರಾಜ, ರಾಣಿಯಾಗಿ, ಕಲ್ಪನೆಯ ಲೋಕದೊಳಗೊಂದು ವಾಸ್ತವ ಜಗತ್ತನ್ನು ಕಟ್ಟಿಕೊಂಡು, ಅಲ್ಲಿ ಬೆರಳೆಣಿಕೆಯಷ್ಟು ಜನರಿಗಷ್ಟೇ ಪ್ರವೇಶಿಸುವ ಅವಕಾಶ ಕೊಟ್ಟು, ಒಂಥರಾ ಮುಟ್ಟಿದರೆ ಮುನಿಯ ಅನ್ನೋ ಹಾಗೆ, ತಾನೇ ಕಟ್ಟಿದ ಭದ್ರ ಕೋಟೆಯೊಳಗೆ, ಹಾಡುಗಳ ಲೋಕದಲ್ಲಿ ಬರುವ ಪ್ರತಿ ಪಾತ್ರಗಳಲ್ಲಿ ತನ್ನನ್ನೇ ಕಲ್ಪಿಸಿಕೊಳ್ಳುತ್ತ , ಪ್ರತೀ ಸಾಲಿಗೂ ತನ್ನ ಜೀವನವನ್ನೇ ಹೋಲಿಸಿಕೊಳ್ಳುತ್ತಾ, ಖುಷಿಯಿದ್ದಾಗ ಆಲಾಪನೆಗಳ ಜೊತೆಯಲ್ಲಿ ತೇಲುತ್ತಾ, ಬೇಜಾರಲ್ಲಿದ್ದಾಗ ಹಾಡಿನ ಸಾಹಿತ್ಯದ ಜೊತೆ ಕಳೆದು ಹೋಗಿ ಕಣ್ಣಂಚು ಒದ್ದೆ ಮಾಡಿಕೊಳ್ಳುತ್ತಾ, ಸ್ಫೂರ್ತಿ ತುಂಬುವ ಸಾಲುಗಳಿಂದ ಪಡೆದ ಹುರುಪಿನೊಡನೆ ಮುಂದೆ ಸಾಗುತ, ಹಾಡುಗಳ ಕೇಳಲಾಗದ ದಿನ ಅರಿಯದ ಚಡಪಡಿಕೆ,ಹೇಳಲಾಗದ ತಳಮಳಗಳ ನಡುವೆ ಕಳೆದು ಮತ್ತೆ ಆಲಿಸುವ ತನಕ, ಕಾಣದ ಕಡಲಿಗೆ ಹಂಬಲಿಸುವ ಮನಗಳ ಮಿಡಿತಕ್ಕೆ, ಹೆಸರಿಡಲು ಪದಗಳು ಸಿಗಲಾರವು.

ಅದರಲ್ಲೇನಿದೆ ಅಂಥದ್ದು?? ಅಂತ ಈ ಎಫ್’ಎಂ ರೇಡಿಯೋ ಜಗದ ಸೆಳೆತ, ಸೋಜಿಗದ ಅರಿವಿರದವರು ಹೇಳುವ ಮಾತು ಹಲವಿರಬಹುದು. ಆದರೆ ಹೇಳಲಾಗದ, ವಿವರಣೆಗೆ ನಿಲುಕದ, ಅರ್ಥ ಆಗದ ಅಪರಿಮಿತ ಅನುಭೂತಿಯ ಜಗತ್ತೇ ಈ ಎಫ್’ಎಂ ರೇಡಿಯೋದ ವಿಸ್ಮಯ.

ಇಲ್ಲಿ ಆಕರ್ಷಣೆ ಕೇವಲ ಹಾಡುಗಳದ್ದಲ್ಲ. ಹಾಡುಗಳ ಮಾಯಾಲೋಕದೊಳಗೊಬ್ಬ ಗೆಳೆಯ ಅಥವಾ ಗೆಳತಿ, ಪ್ರತಿ ದಿನ ಹೊಸತನದೊಂದಿಗೆ ಬರುವ ಆರ್’ಜೆ ಅನ್ನುವ ಆ ಬಾನುಲಿಯ ಸ್ನೇಹಿತ, ಸ್ನೇಹಿತೆ ಮನೆಯ ಸದಸ್ಯರಂತೆ ಆಗಿ ಬಿಡ್ತಾರೆ. ಆ ಸ್ನೇಹಕ್ಕೆ ವಯಸ್ಸಿನ ಹಂಗಿಲ್ಲ, ಬಣ್ಣಗಳ ಬಣವಿಲ್ಲ, ಸೌಂದರ್ಯದ ಸಂಗವಿಲ್ಲ, ಮೇಲು ಕೀಳು, ಜಾತಿ ಭೇದಗಳ ಪರಿಭೇಧವೂ ಇಲ್ಲ. ಎಲ್ಲೋ ಕೂರು ಮಾತಾಡುವ ಧ್ವನಿಯೊಂದರ ಜೊತೆಗೆ ಹೇಳಲಾಗದ ಸಿಹಿಯಾದ ಭಾವವೊಂದು, ಸ್ನೇಹ ಸಂಬಂಧವೊಂದು ಬೆಸೆದುಬಿಟ್ಟಿರುತ್ತದೆ. ಕಣ್ಣಿಗೆ ಕಾಣಿಸದೆ ಮಾತಾಡೋ ವ್ಯಕ್ತಿ ನಮ್ಮ ಪಕ್ಕದಲ್ಲೇ ಓಡಾಡೋ ಹುಡುಗ, ಅಲ್ಲಲ್ಲ ನಮ್ಮ ಸ್ನೇಹಿತ, ಅವ್ನು/ಅವಳು ಎಷ್ಟು ಚೆನ್ನಾಗಿ ನಮ್ಮನ್ನ ಅರ್ಥ ಮಾಡ್ಕೊಂಡು, ನನ್ನ ಜೊತೇನೆ ಮಾತಾಡ್ತಾ ಇದ್ದಾರೆ. ಆ ಅನುಭವ ನನಗು ಆಗಿತ್ತಲ್ವಾ, ಸರಿಯಾಗೇ ಹೇಳ್ತಿದ್ದಾನೆ, ಅವನು ಯೋಚ್ನೆ ಮಾಡೋ ರೀತಿ, ಅವನು ಕೊಡೊ ಉದಾಹರಣೆಗಳು, ಅವನ ಇಂದಿನ ನಿನ್ನೆ ಅನುಭವಗಳಿಂದ ಹಿಡಿದು ನಾಳಿನ ಕನಸುಗಳು ನನ್ನದೇ ಅಂತ ಅನಿಸ್ತಾ ಇದೆ ಅಲ್ವಾ, ಅವ್ನು ಹೀಗೆ ಇದ್ದಾನೆ ಅನ್ನೋದು, ಅದೆಲ್ಲೋ ಮೈಕ್ ಮುಂದೆ ಕೂತ್ಕೊಂಡು ಮಾತಾಡೋ ವ್ಯಕ್ತಿಗಿಂತ ಹೆಚ್ಚಾಗಿ ಇಲ್ಲಿ ಅವನ ಪ್ರತೀ ಮಾತು ಕೇಳೋ ಮನಸುಗಳಿಗೆ ಅವನೇನು, ಅವನ ವ್ಯಕ್ತಿತ್ವ ಎಂತದ್ದು ಅನ್ನೋದರ ಪರಿಚಯ ಆಗ್ತಾ ಹೋಗುತ್ತೆ.

ಅಲ್ಲೊಂದು ನಂಬಿಕೆ ಸೃಷ್ಟಿಯಾಗಿ, ಮನಸಿನ ಮಾತುಗಳ ವಿನಿಮಯ ಕೇವಲ ಧ್ವನಿಯಿಂದಲೇ ನಡೆಯುತ್ತೆ.ಮಾತಲ್ಲೇ ಕೇಳುಗರು ಹುಡುಕ್ತಾ ಇದ್ದ ಅದೆಷ್ಟೋ ಪ್ರಶ್ನೆಗಳಿಗೆ ಉತ್ತರವೂ ಸಿಕ್ಕಿರುತ್ತೆ. ಬದುಕುವ ಆಸೆ ಕ್ಷಣ ಕ್ಷಣಕ್ಕೂ ಪುಟಿದೇಳುತ್ತೆ, ಉತ್ಸಾಹ ಗರಿಗೆದರುತ್ತೆ, ಎಲ್ಲ ಬಾಂಧವ್ಯಗಳ ನಡುವೆ ಇದ್ದರೂ ಕೂಡ ಒಮ್ಮೆಯಾದರೂ ಮೂಡುವ ಒಂಟಿ ಅನ್ನೋ ಭಾವನೆಗಳನ್ನ ಓಡಿಸಿ ನಮ್ಮ ಜೊತೆ ಎಲ್ಲೊ ಮಾತಾಡೋ ಒಂದು ಜೀವ, ಕಾಣದ ಕೈ, ಆ ಕನಸು, ನನಸಿನ ಲೋಕದ ಹಾಡುಗಳು ನಮ್ಮ ಜೊತೆಯಿರುವಾಗ ನಾನು ಹೇಗೆ ಒಂಟಿ ಅನ್ನೋ ಫೀಲ್ ಸಿಗೋದೇ ಎಫ್’ಎಂಎಂ ಎಂಬ ವಿಸ್ಮಯದ ಜಗತ್ತಿನಿಂದ, ರಾತ್ರಿ ದುಡಿದು ದಣಿದ ಜೀವಗಳಿಗೆ, ಬೆಳಿಗ್ಗೆ ಎದ್ದು ಮತ್ತೊಂದು ಅದೇ ತರಹ ದುಡಿಯುವ ದಿನಕ್ಕೆ ಸೆಟ್ ಆಗೋ ಹೊತ್ತಿಗೆ ಮೂಡುವ ಇಷ್ಟೇನಾ ಲೈಫ್ ಅಂದ್ರೆ ಅನ್ನೋ ಪ್ರಶ್ನೆನ ಅಳಿಸಿ ಅವರನ್ನ ಹೊಸ ಎನರ್ಜಿ ಜೊತೆಗೆ, ಉತ್ಸಾಹದ ಜೊತೆಗೆ ಒಂದೊಳ್ಳೆ ಲವಲವಿಕೆಯ ದಿನಕ್ಕೆ ರೆಡಿ ಮಾಡೋ, ಹುರಿದುಂಬಿಸೋ ಮಾತುಗಳು ಹಾಡುಗಳ ಜೊತೆಗೆ, ಸಂಜೆ ಸುಸ್ತಾದ ಮನಕ್ಕೆ ತಿಳಿಹಾಸ್ಯದ ಮೂಲಕ ಮುಖ ಅರಳಿಸೋ ಕಸರತ್ತು, ರಾತ್ರಿ ಸಿಹಿ ನೆನಪು, ಕಥೆ ಹೇಳುವ ತನಕ, ಜೊತೆ ಜೊತೆಗೆ ಮಹಾನಗರಗಳ ಹಗಲು ರಾತ್ರಿಗಳಲ್ಲಿ ಮುಂದೆ ಮುಂದೆ ಕರೆದುಕೊಂಡು ಹೋಗೋ ಜಾದೂಗಾರರ ಜಗತ್ತೇ ಈ ಎಫ್’ಎಂ ಲೋಕ….

ಇಲ್ಲಿ ಮಾತಾಡೋ ಪ್ರತಿ ಆರ್ ಜೆ ಯೊಳಗೊಬ್ಬ ಮುಗ್ಧ ಮಗು ಇರಬಹುದು, ಸ್ಪೂರ್ತಿ ತುಂಬುವ ಸ್ನೇಹಿತ ಇರಬಹುದು, ಕಾಳಜಿ ತೋರೋ ಅಮ್ಮ, ಗದರೋ ತಂದೆ, ಕೀಟಲೆ ಮಾಡೋ ತಮ್ಮ ತಂಗಿ, ದಾರಿ ತೋರಿಸೋ ಗುರು, ಅದೆಲ್ಲವನ್ನು ಮೀರಿಸಿದ ಮಾಯಾಲೋಕದ ಜಾದೂಗಾರ ಇರಬಹುದು. ಈ ಎಲ್ಲ ಪಾತ್ರಗಳ ಮೂಲಕ ಕೇಳುಗರ ಮನಸಿಗೆ ಲಗ್ಗೆ ಹಾಕುವ ಆ ಆರ್’ಜೆ, ನಿಮ್ಮ ಪ್ರೀತಿ ತುಂಬಿದ ಮಾತುಗಳು, ನಿಮ್ಮ ಸ್ನೇಹ, ನಿಮ್ಮ ನಂಬಿಕೆ, ನಿಮ್ಮ ಹಾಸ್ಯ, ಒಮ್ಮೊಮ್ಮೆ ಅವರ ಮಾತಿನಿಂದ ನೀವು ಮನಸ್ಸು ಹಗುರ ಮಾಡಿಕೊಂಡ ಆ ಕ್ಷಣಗಳು, ಒಂದಿಷ್ಟು ಮನಸುಗಳಲಿ ಬೀಸಿದ ಬದಲಾವಣೆಯ ಗಾಳಿ, ಸ್ವಾರ್ಥವಿಲ್ಲದ ಪ್ರೀತಿ, ನಿಷ್ಕಲ್ಮಶ ಕಾಳಜಿ, ನೀವು ಅವನ ಮಾತನ್ನ ಕೇಳ್ತಾ ಇದ್ದೀರಿ ಅನ್ನೋ ಖುಷಿಯಿಂದಾನೆ ಸ್ಫೂರ್ತಿ ಪಡೀತಾನೆ ಶಕ್ತಿ ಪಡ್ಕೋತಾನೇ.. ಪ್ರತೀ ಮಾತಿಗೂ ಕಿವಿಯಾಗೋ ಕೇಳುಗರೇ ಅವನ ಸ್ಪೂರ್ತಿ ಶಕ್ತಿ….

ಅವನ/ಅವಳ ಮಾತು ನಿಮ್ಮನ್ನ ತಲುಪಬೇಕಾದರೆ, ಅವರು ನಿಭಾಯಿಸಬೇಕಾದ ಪಾತ್ರಗಳು ಹತ್ತು ಹಲವು, ವಯಸ್ಸು ಎಷ್ಟಿರಲಿ ಅನುಭವ ಇರಲಿ, ಇಲ್ಲದಿರಲಿ, ಎಲ್ಲವನು ಬಲ್ಲವರ ಹಾಗೆ ಅವರು ಮಾತಾಡಬೇಕೆಂದರೆ ಮನದೊಳಗೊಬ್ಬ ಕೇಳುಗ, ವಿಚಾರವಾದಿ, ಚಿಂತಕ, ಶಿಕ್ಷಕ, ಹಾಸ್ಯಗಾರ, ಡಾಕ್ಟರ್, ವಿಜ್ಞಾನಿ, ಎಲ್ಲರೂ ಇರಲೇಬೇಕು. ಪಂಚೇಂದ್ರಿಯಗಳಿಂದ ಸಿಗುವ ಅನುಭವಕ್ಕಾಗಿ ಮೈಯೆಲ್ಲಾ ಕಣ್ಣಾಗಿ ಇಟ್ಟುಕೊಂಡಿರಬೇಕಾಗುತ್ತದೆ, ಪ್ರತಿ ದಿನ ತಾನು ಕಂಡ, ಕೇಳಿದ, ಅನುಭವಿಸಿದ, ಕಲಿತ, ಓದಿದ ಸಂಗತಿಗಳಿಗೊಂದಿಷ್ಟು ಬಣ್ಣ ಹಚ್ಚಿ, ರಸವತ್ತಾಗಿ ವರ್ಣಿಸಿ, ಜೋಪಾನವಾಗಿ ಪೋಣಿಸಿ ಅಣಿಮುತ್ತುಗಳಂತೆ ಉದುರಿಸುವುದರ ಜೊತೆಗೆ ತನ್ನ, ಹಾಡುಗಳ ಬುಟ್ಟಿಯ ಆ ದಿನದ ಹಾಡುಗಳ ನಿಮಗೆ ತಲುಪಿಸಬೇಕು. ಅವನ ನೋವು ನಲಿವುಗಳು, ಆ ದಿನದ ಅವನ ಮನಸ್ಥಿತಿ, ವ್ಯೆಯಕ್ತಿಕ ಜೀವನ ನೋವು ನಲಿವು, ಇಲ್ಲಿ ನಗಣ್ಯ, ಅವನೊಳಗಿನ ಎಂಟರ್ಟೈನರ್’ಗೆ ಮಾತ್ರ ಅಲ್ಲಿ ಜಾಗ. ಕಣ್ಣಿಗೆ ಕಾಣದ ಕೊಡುಕೊಳ್ಳುವಿಕೆ ಎಂದು ಉದಾಸೀನ ಮಾಡುವಂತಿಲ್ಲ. ಇಲ್ಲಿರೋದು ಅದನ್ನೂ ಮೀರಿದ ಅಪರೂಪದ ವ್ಯವಹಾರ. ಮನಸಿನ ಒಳಬೀದಿಗಳಲಿ ಖುಷಿಯ ಹಂಚುವ ವೃತ್ತಿ ಅವನದಾದರೂ, ಖುಷಿಯ ಹಂಚುವುದರ ಜೊತೆಗೆ, ಕಿವಿ ಹಿಂಡುವ, ತುಸು ಗಂಭೀರ, ನೋವಾಗದಂತೆ ಒಂದಿಷ್ಟು ವಿಚಾರಗಳ ಸೂಕ್ಷ್ಮವಾಗಿ ಮುಟ್ಟಿಸುವ, ಮೈಮರೆತವರ ಎಚ್ಚರಿಸುವ, ಹೊಸ ವಿಚಾರಗಳ ತಿಳಿಸುವ ಅವನು ಎಂದಿಗೂ ಪ್ರವಚನಕಾರನಲ್ಲ, ಉಪದೇಶ ಮಾಡಿ ಅಧಿಕಾರವನ್ನೂ ಚಲಾಯಿಸಲ್ಲ. ಹೀಗೆ ಮಾಡಿ ಎಂದು ಆದೇಶಿಸುವುದೂ ಇಲ್ಲ. ಯಾಕೆಂದರೆ ಇಲ್ಲಿ ಯಾವುದೇ ನೀತಿ ನಿಯಮಗಳಿಲ್ಲ. ಕಟ್ಟು ಕಟ್ಟಳೆಗಳಿಲ್ಲ…

ಇದು ಕೇವಲ ಮನಸಿನ ಒಳಗಿನ ಚಿತ್ರಮಂದಿರಲಿ, ಅಲ್ಲೇ ಗಿರಕಿ ಹೊಡೆಯುವ, ಕುಣಿದು ಕುಪ್ಪಳಿಸುವ, ನಾಚಿ ನೀರಾಗುವ, ಮಧುರ ಕಲ್ಪನೆಗಳಲ್ಲಿ ಮುಳುಗೇಳುವ, ಕಣ್ಣಂಚು ಒದ್ದೆ ಮಾಡಿಕೊಳ್ಳುವ, ಕನಸಿನೂರಿಗೆ ಸಾಗುವ ದಾರಿಯಲಿ ಪ್ರತೀ ಸಲ ಬಿದ್ದಾಗಲೂ ಮೇಲೆದ್ದು, ಹೊಸ ಶಕ್ತಿ ತುಂಬಿಕೊಳ್ಳುವ, ವಾಸ್ತವದೊಳಗಿನ ಕಲ್ಪನಾ ಲೋಕ, ಮಾಯಾನಗರಿ… ಈ ಎಫ್’ಎಂ ಜಗತ್ತು….

ಇಲ್ಲಿ ಹಾಡುಗಳು ಮನದ ಶರಧಿಯಲಿ ತೇಲುವ ದೋಣಿಯಾದರೆ, ಹುಟ್ಟು ಹಾಕುವ ನಾವಿಕರೇ ಅದರ ಪ್ರೀತಿಯ ಕೇಳುಗರು… ನಡು ನಡುವೆ ಮನದ ಆಗಸದಲ್ಲಿ ಬೀಸೋ ತಂಗಾಳಿಯಲ್ಲಿ ತೇಲಿ ಬರೋ ಧ್ವನಿಗಳೇ ಹೆಸರಿಡಲಾಗದ ಬಾನುಲಿಯ ಬಂಧುಗಳು…

Get In Touch With Us info@kalpa.news Whatsapp: 9481252093

Tags: FM RadioKannada ArticleMangaluruRed FM 93.5RJ Nayana ShettySocial mediaಆರ್ ಜೆ ನಯನಾ ಶೆಟ್ಟಿಎಫ್’ಎಂ ರೇಡಿಯೋಮಾಯಾಲೋಕ
Share198Tweet123Send
Previous Post

ಆ ಕ್ಷಣ ನನ್ನ ಕಣ್ಣಂಚಲ್ಲಿ ನನಗೆ ತಿಳಿಯದೆ ಕಣ್ಣೀರು ಬಂದಿತ್ತು

Next Post

ಮಂಡಲ ಪೂಜೆ ಹಿನ್ನೆಲೆ: ಶಬರಮಲೆಯಲ್ಲಿ 10 ಸಾವಿರ ಪೊಲೀಸರ ನಿಯೋಜನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮಂಡಲ ಪೂಜೆ ಹಿನ್ನೆಲೆ: ಶಬರಮಲೆಯಲ್ಲಿ 10 ಸಾವಿರ ಪೊಲೀಸರ ನಿಯೋಜನೆ

ಮಂಡಲ ಪೂಜೆ ಹಿನ್ನೆಲೆ: ಶಬರಮಲೆಯಲ್ಲಿ 10 ಸಾವಿರ ಪೊಲೀಸರ ನಿಯೋಜನೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಜೂ.12ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 11, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಮೈಸೂರು–ಮದಾರ್ ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್‌ಗೆ ಎರಡು ಹೆಚ್ಚುವರಿ ಟ್ರಿಪ್‌ಗಳ ವಿಸ್ತರಣೆ

June 11, 2026
SWR to run special trains for Good Friday, Easter rush

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

June 11, 2026
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

June 11, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL