No Result
View All Result
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8
English Articles

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

by ಕಲ್ಪ ನ್ಯೂಸ್
June 5, 2026
0

Kalpa Media House  |  Special Article  | On June 8, Indian fans will be amongst the first in the world...

Read moreDetails
From the Village Tracks to International Triumphs: The Inspiring Saga of Geetha A. Shetty

From the Village Tracks to International Triumphs: The Inspiring Saga of Geetha A. Shetty

June 5, 2026
ಭದ್ರಾವತಿ | ಹೃದಯಾಘಾತದಿಂದ 23 ವರ್ಷದ ಯುವತಿ ಸಾವು! ಸಾವಿನಲ್ಲೂ ಸಾರ್ಥಕತೆ ಮೆರೆದ ಪೋಷಕರು

Young Woman Dies of Cardiac Arrest; Parents Give New Life Through Organ Donation

June 3, 2026
ಗುಜರಾತ್’ನಲ್ಲಿ ಭೀಕರ ದುರಂತ | ಮಹಾರಾಷ್ಟ್ರ ಸಾರಿಗೆಯ 2 ಬಸ್’ಗಳ ಮುಖಾಮುಖಿ ಡಿಕ್ಕಿ | 7 ಮಂದಿ ಸಜೀವ ದಹನ

Tragic Accident in Gujarat | Head-on Collision Between Two MSRTC Buses | 7 Burnt Alive

June 3, 2026
ಸಿಂಗಾಪುರ ವಿರುದ್ಧ 25-0 ಅಂತರದ ಜಯದೊಂದಿಗೆ ಭಾರತದ U18 ಮಹಿಳಾ ತಂಡ ಸೆಮಿಫೈನಲ್‌ಗೆ ಲಗ್ಗೆ

India U18 Women Storm into Semifinals with 25–0 Win Over Singapore

June 3, 2026
  • Advertise With Us
  • Grievances
  • About Us
  • Contact Us
Friday, June 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಹುಟ್ಟು ಹೋರಾಟಗಾರ ಬಿಎಸ್’ವೈ ಕೈ ಹಿಡಿಯುತ್ತಾರೆಯೇ 15 ಕ್ಷೇತ್ರದ ಮತದಾರರು?

ಪ್ರಕಾಶ್ ಅಮ್ಮಣ್ಣಾಯ ಹೇಳಿದ ಕುತೂಹಲ ಮಾಹಿತಿ ಏನು? ಬಿಜೆಪಿಗೆ ಎಷ್ಟು ಸ್ಥಾನ ಗೊತ್ತಾ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 5, 2019
in Special Articles
0
ಹುಟ್ಟು ಹೋರಾಟಗಾರ ಬಿಎಸ್’ವೈ ಕೈ ಹಿಡಿಯುತ್ತಾರೆಯೇ 15 ಕ್ಷೇತ್ರದ ಮತದಾರರು?

Image Courtesy: The News Minute

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಒಂದೆಡೆ ಜೆಡಿಎಸ್-ಕಾಂಗ್ರೆಸ್ ಪಕ್ಷಗಳಿಗೆ ಒಂದು ರೀತಿಯ ಅಳಿವು ಉಳಿವಿನ ಪ್ರಶ್ನೆಯಾಗಿದ್ದರೆ ಇನ್ನೊಂದೆಡೆ ಬಿಜೆಪಿ ಅದರಲ್ಲೂ ಪ್ರಮುಖವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮರ್ಯಾದೆ ಹಾಗೂ ಘನತೆಯ ಪ್ರಶ್ನೆಯಾಗಿದೆ ಇಂದು ಮತದಾನವಾದ ರಾಜ್ಯ ಉಪಚುನಾವಣೆ.

ಹೌದು…. ಬಿ.ಎಸ್. ಯಡಿಯೂರಪ್ಪ… ಈ ಹೆಸರಿನೊಂದಿಗೇ ಹೋರಾಟ ಎಂಬುದು ಬೆಸೆದುಕೊಂಡಿದೆ. ರಾಜ್ಯದ ರಾಜ್ಯದ ರಾಜಕೀಯ ಇತಿಹಾಸವನ್ನೊಮ್ಮೆ ತಿರುವಿ ನೋಡಿದರೆ ಸಿದ್ಧಾಂತದೊಂದಿಗೆ ಹೋರಾಟ ನಡೆಸಿದವರ ಹೆಸರಿನಲ್ಲಿ ಮುಂಚೂಣಿಯಲ್ಲಿ ನಿಲ್ಲುವ ವ್ಯಕ್ತಿತ್ವ ಇವರದ್ದು.

1965ರಲ್ಲಿ ಆರ್’ಎಸ್’ಎಸ್ ಕಾರ್ಯಕರ್ತರಾಗಿ ಸಾರ್ವಜನಿಕ ಜೀವನಕ್ಕೆ ಕಾಲಿಟ್ಟು ಬಿಎಸ್’ವೈ, ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರ ಜೊತೆ ಸಂಪರ್ಕಕ್ಕೆ ಬಂದಿದ್ದು, ಇವರ ಹೋರಾಟದ ಕಿಚ್ಚು, ನಿಷ್ಠೆ, ಸಮಾಜಮುಖಿ ಬದುಕಿಗೆ ನಾಂದಿಯಾಯಿತು.

ಶಿಕಾರಿಪುರವನ್ನು ತಮ್ಮ ಕಾರ್ಯಕ್ಷೇತ್ರವನ್ನಾಗಿ ಆರಿಸಿಕೊಂಡ ಇವರು, 1972 ರಲ್ಲಿ ಶಿಕಾರಿಪುರ ತಾಲ್ಲೂಕಿನ ಜನ ಸಂಘದ ಅಧ್ಯಕ್ಷರಾಗಿ ಸಕ್ರಿಯ ರಾಜಕಾರಣ ಪ್ರವೇಶಿಸಿದರು. 1975 ರಲ್ಲಿ ಶಿಕಾರಿಪುರ ಪುರಸಭಾ ಸದಸ್ಯರಾಗಿ, ಮಾರ್ಚ್ 1977 ರಿಂದ ಫೆಬ್ರವರಿ 1981ರವರೆಗೆ ಶಿಕಾರಿಪುರ ಪುರಸಭಾ ಅಧ್ಯಕ್ಷರಾಗಿ, ಶಿಕಾರಿಪುರದ ನೀರು, ವಿದ್ಯುತ್, ರಸ್ತೆ, ಸ್ವಚ್ಚತೆ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ನಿರಂತರ ಹೋರಾಟ ನಡೆಸಿದ ಬಿಎಸ್’ವೈ ಅಧಿಕಾರ ಸಿಕ್ಕಾಗ ಶಿಕಾರಿಪುರ ನಗರದ ಚಿತ್ರಣವನ್ನೇ ಬದಲಾಯಿಸಿದರು.

1983ರಲ್ಲಿ ಪ್ರಥಮ ಬಾರಿಗೆ ಕರ್ನಾಟಕದ ವಿಧಾನಸಭೆಗೆ ಭಾರಿ ಬಹುಮತದಿಂದ ಪ್ರವೇಶಿಸಿದ ಯಡಿಯೂರಪ್ಪ, ಶಿಕಾರಿಪುರದ ಕ್ಷೇತ್ರದಿಂದ ಐದು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದು, ಐದು ಬಾರಿ ವಿಧಾನಪರಿಷತ್ತಿಗೆ ಆಯ್ಕೆಯಾಗಿದ್ದಾರೆ.

1996ರಲ್ಲಿ ಮತ್ತು 2004ರಲ್ಲಿ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿ ಪ್ರಭಾವಿ ಹೋರಾಟ ನಡೆಸಿ, 2006ರಲ್ಲಿ ಉಪಮುಖ್ಯಮಂತ್ರಿಯಾಗಿ ಖಾತೆ-ಹಣಕಾಸು ಹಾಗೂ ಸಣ್ಣ ನೀರಾವರಿ ಇಲಾಖೆಯನ್ನು ಯಶಸ್ವಿಯಾಗಿ ನಿರ್ವಹಿಸಿದರು.

ಜ್ಯೋರ್ತಿವಿಜ್ಞಾನಂ ಪ್ರಕಾಶ್ ಅಮ್ಮಣ್ಣಾಯ ಏನೆನ್ನುತ್ತಾರೆ?
ಉಪಚುನಾವಣೆ ಫಲಿತಾಂಶ ಕುರಿತಂತೆ ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ ಅವರನ್ನು ಮಾತನಾಡಿಸಿದ ವೇಳೆ ಅವರು ಹೇಳಿದ್ದಿಷ್ಟು…

ಬಿ.ಎಸ್. ಯಡಿಯೂರಪ್ಪನವರಿಗೆ ಏಳು ಕ್ಷೇತ್ರಗಳ ಗೆಲುವು ನಿಶ್ಚಿತ. ಜನವರಿಯ ನಂತರ ಅದು 8 ಆಗುತ್ತದೆ. ಹೇಗೆ ಎನ್ನುವುದಕ್ಕೆ ಕಾಲವೇ ಉತ್ತರಿಸುತ್ತದೆ.


ಬಿ.ಎಸ್. ಯಡಿಯೂರಪ್ಪನವರಿಗೆ ಇರುವ ತೊಂದರೆಗಳೆಲ್ಲವೂ ನಿವಾರಣೆಯಾಗುತ್ತವೆ. ಆದರೆ, ಅವರು ಈ ಹಂತದಲ್ಲಿ ಅತ್ಯಂತ ತಾಳ್ಮೆ ಹಾಗೂ ಸಹನೆಯಿಂದ ಇರಬೇಕಾಗುತ್ತದೆ. ಒಂದು ವೇಳೆ ಅವರು ಆತುರದಿಂದ ಗಡಿಬಿಡಿ ಮಾಡಿಕೊಂಡರೆ ಏನು ಬೇಕಾದರೂ ಆಗಬಹುದು ಎಂಬುದಂತೂ ಸತ್ಯ.

ಧರಂಸಿಂಗ್ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ನೀಡಿದ್ದ ಬೆಂಬಲವನ್ನು 2006ರಲ್ಲಿ ಜೆಡಿಎಸ್ ವಾಪಸ್ ಪಡೆಯಿತು. ನಂತರ ರಚನೆಗೊಂಡ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರಕಾರದಲ್ಲಿ ಯಡಿಯೂರಪ್ಪನವರು ಉಪ ಮುಖ್ಯಮಂತ್ರಿಯಾದರು. ಮೊದಲ 20 ತಿಂಗಳು ಕುಮಾರಸ್ವಾಮಿಯವರು ಮುಖ್ಯಮಂತ್ರಿ ಮತ್ತು ನಂತರದ 20 ತಿಂಗಳು ಯಡಿಯೂರಪ್ಪನವರು ಮುಖ್ಯಮಂತ್ರಿ ಎಂದು ಸರಕಾರ ರಚನೆ ಸಂದರ್ಭದಲ್ಲಿ ಉಭಯ ಪಕ್ಷಗಳ ನಡುವೆ ಒಪ್ಪಂದವಾಗಿತ್ತು.

ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಉಪಮುಖ್ಯಮಂತ್ರಿ ಯಡಿಯೂರಪ್ಪನವರು ಹಣಕಾಸು ಖಾತೆಗೂ ಸಚಿವರಾಗಿದ್ದರು. ಒಪ್ಪಂದದಂತೆ 2007ರ ಅಕ್ಟೋಬರ್‌ನಲ್ಲಿ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಬೇಕಾದಾಗ, ಕುಮಾರಸ್ವಾಮಿಯವರು ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡಲು ನಿರಾಕರಿಸಿದರು.

ಜೆಡಿಎಸ್ ನಡೆ ವಿರೋಧಿಸಿ ಯಡಿಯೂರಪ್ಪ ಮತ್ತು ಬಿಜೆಪಿಯ ಎಲ್ಲ ಸಚಿವರು ರಾಜೀನಾಮೆ ನೀಡಿದರು. ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಅಕ್ಟೋಬರ್ 5ರಂದು ಬಿಜೆಪಿ ಹಿಂಪಡೆಯಿತು. ನಂತರ ರಾಷ್ಟ್ರಪತಿ ಆಡಳಿತ ಶುರುವಾಯಿತು.

ನವೆಂಬರ್ 7ರಂದು ಬಿಜೆಪಿ ಮತ್ತು ಜೆಡಿಎಸ್ ನಡುವಿನ ಭಿನ್ನಮತ ಶಮನಗೊಂಡು ರಾಷ್ಟ್ರಪತಿ ಆಳ್ವಿಕೆ ಅಂತ್ಯಗೊಂಡಿತು. ನ. 12, 2007ರಂದು ಮುಖ್ಯಮಂತ್ರಿಯಾಗಿ ಯಡಿಯೂರಪ್ಪನವರು ಪ್ರಮಾಣವಚನ ಸ್ವೀಕರಿಸಿದರು. ಆದರೆ ಸಚಿವರಿಗೆ ಖಾತೆ ಹಂಚಿಕೆ ವೇಳೆ ಭಿನ್ನಮತ ಉಲ್ಬಣಗೊಂಡಿತು. ಬಿಜೆಪಿ ಮತ್ತು ಜೆಡಿಎಸ್ ನಡುವಿನ ಸಮ್ಮಿಶ್ರ ಸರಕಾರ ಅಂತ್ಯಗೊಂಡು, ಯಡಿಯೂರಪ್ಪನವರು ನವೆಂಬರ್ 19, 2007ರಂದು ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದರು.

2008ರ ಮೇ 30ರ ಶುಕ್ರವಾರ ಕರ್ನಾಟಕದ 25 ನೆಯ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರಿಸಿದ ಅವರು, ಪರಿಸ್ಥಿತಿಯ ಹಿನ್ನೆಲೆಯಲ್ಲಿ 2011ರ ಜುಲೈ 31ರಂದು ಮುಖ್ಯಮಂತ್ರಿಗಳ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.

2014ರ 2014 ರ ಲೋಕಸಭಾ ಚುನಾವಣೆಯಲ್ಲಿ 363,305 ಮತಗಳ ಅಂತರದಿಂದ ಲೋಕಸಭಾಸದಸ್ಯರಾಗಿ ಆಯ್ಕೆಯಾಗಿ ದಾಖಲೆ ಬರೆದ ಬಿಎಸ್’ವೈ, 2018ರ ಮೇ 17ರಿಂದ ಮೇ 19ವರೆಗೆ 2 ದಿನ ಮಾತ್ರ ಕರ್ನಾಟಕದ ಮುಖ್ಯಮಂತ್ರಿಯಾಗಿದ್ದರು. ಈಗ 2019ರ ಜುಲೈ 26ರಂದು ನಾಲ್ಕನೇ ಬಾರಿಗೆ ಮುಖ್ಯಮಂತ್ರಿಯಾಗಿರುವ ಯಡಿಯೂರಪ್ಪ ಸರ್ಕಾರ ಅಳಿವು ಉಳಿವಿನ ಪ್ರಶ್ನೆಯಾಗಿ ಇಂದಿನ ಉಪ ಚುನಾವಣೆ ಕಾಡುತ್ತಿದೆ.

ರಾಜ್ಯದ ರೈತರು, ಶೋಷಿತರು ಹಾಗೂ ಬಡವರ್ಗದ ಪರವಾಗಿ ನೂರಾರು ಹೋರಾಟ ಮಾಡಿರುವ ಯಡಿಯೂರಪ್ಪ 1988ರಲ್ಲಿ ಬಸವಕಲ್ಯಾಣದಿಂದ ರೈತ ಜಾಗೃತಿಯನ್ನು ಮೂಡಿಸಲು ನಡೆದಿದ ಭಾರಿ ರೈತ ಜಾಥಾ ಲಕ್ಷಾಂತರ ರೈತರ ಪಾಲ್ಗೊಳ್ಳುವಿಕೆಯಿಂದ ಐದು ಐತಿಹಾಸಿಕ ದಾಖಲೆ ಬರೆಯಿತು.

ಇದರೊಂದಿಗೆ ಬನವಾಸಿಯಿಂದ ಬೆಂಗಳೂರಿಗೆ, ಕೃಷ್ಣರಾಜಸಾಗರಕ್ಕೆ ನಡೆಸಿದ ಜಾಥಾಗಳು ಯಡಿಯೂರಪ್ಪನವರನ್ನು ರಾಜ್ಯ ನಾಯಕರನ್ನಾಗಿ ಬೆಳೆಸುವಲ್ಲಿ ಪ್ರಮುಖ ಹಂತಗಳಾದವು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ನೇತೃತ್ವದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವಲ್ಲಿ ಯಶಸ್ವಿಯಾದರೂ, ಬಹುಮತದ ಕೊರತೆಯಿಂದ ಅಧಿಕಾರದಿಂದ ವಂಚಿತವಾಗಬೇಕಾಯಿತು. ಈ ವೇಳೆ ನಡೆದ ಕಾಂಗ್ರೆಸ್ ಹಾಗೂ ಜೆಡಿಎಸ್’ನ ಅನೈತಿಕ ರಾಜಕೀಯ ಮೈತ್ರಿ ಪರಿಣಾಮ ಸಮ್ಮಿಶ್ರ ಸರ್ಕಾರ ಅಸ್ಥಿತ್ವಕ್ಕೆ ಬಂದು ಬಿಎಸ್’ವೈ ಪ್ರತಿಪಕ್ಷ ನಾಯಕರಾದರು.

ಆದರೆ, ಕೆಲವು ತಿಂಗಳ ಹಿಂದೆ ಕಾಂಗ್ರೆಸ್ ಹಾಗೂ ಜೆಡಿಎಸ್’ನ 15 ಶಾಸಕರು ತಮ್ಮ ಪಕ್ಷದ ವಿರುದ್ಧ ಸಿಡಿದೆದ್ದು ರಾಜೀನಾಮೆ ನೀಡಿದ್ದರು. ಅಂದಿನ ಸ್ಪೀಕರ್ ರಮೇಶ್ ಕುಮಾರ್ ಅವರು ಇವರನ್ನೆಲ್ಲಾ ಅನರ್ಹಗೊಳಿಸಿದ್ದರು.

ಶಾಸಕರ ರಾಜೀನಾಮೆಯಿಂದ ತೆರವಾದ ಕ್ಷೇತ್ರಗಳಿಗೆ ಇಂದು ಮತದಾನ ನಡೆದಿದೆ. ಈ 15 ಶಾಸಕರು ಈಗ ಬಿಜೆಪಿಯಿಂದ ಸ್ಪರ್ಧಿಸಿದ್ದು, ಇವರುಗಳ ಗೆಲುವು ಯಡಿಯೂರಪ್ಪ ಸರ್ಕಾರ ಅಳಿವು ಉಳಿವಿನ ಪ್ರಶ್ನೆಯಾಗಿದೆ. ಇವೆಲ್ಲಕ್ಕೂ ಡಿ.9ರಂದು ಉತ್ತರ ದೊರೆಯಲಿದೆ.

Get in Touch With Us info@kalpa.news Whatsapp: 9481252093

Tags: BJPCM B S YediyurappacongressJDSKannada ArticleKarnataka By Election 2019Karnataka politicsPrakash Ammannayaಪ್ರಕಾಶ್ ಅಮ್ಮಣ್ಣಾಯಬಿ.ಎಸ್. ಯಡಿಯೂರಪ್ಪಮುಖ್ಯಮಂತ್ರಿವಿಧಾನಸಭಾ ಉಪಚುನಾವಣೆ
Share213Tweet123Send
Previous Post

ಅದ್ಬುತ ಕಂಠಸಿರಿಯ ಗಾಯಕಿ ಜಯಶ್ರೀ ಧರಣೇಂದ್ರ ಜೈನ್ ಹೊರನಾಡು ರಾಜ್ಯದ ಹೆಮ್ಮೆ

Next Post

ಜಮ್ಮು ಕಾಶ್ಮೀರದಲ್ಲಿ 11 ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಮ್ಮು ಕಾಶ್ಮೀರದಲ್ಲಿ 11 ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

ಜಮ್ಮು ಕಾಶ್ಮೀರದಲ್ಲಿ 11 ನೂತನ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇಂದ್ರ ನಿರ್ಧಾರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

ವಿಐಎಸ್‌ಎಲ್‌ ಕಾರ್ಖಾನೆ ಅಭಿವೃದ್ಧಿಗೆ ಅಗತ್ಯ ಬಂಡವಾಳ: ಕೇಂದ್ರ ಸಚಿವ ಕುಮಾರಸ್ವಾಮಿ ಭರವಸೆ

June 5, 2026
SWR to run special trains for Good Friday, Easter rush

ಮೈಸೂರು – ಬೆಂಗಳೂರು ವಿಶೇಷ ರೈಲು ಸೇವೆ ಕಾಯಂ

June 5, 2026
ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

ದೃಷ್ಠಿ ಕಳೆದುಕೊಳ್ಳುವ ಸ್ಥಿತಿಯಲ್ಲಿದ್ದ ಯುವತಿ | ಮರುದೃಷ್ಠಿ ನೀಡಿದ ಶಿವಮೊಗ್ಗದ ಶಂಕರ ಕಣ್ಣಿನ ಆಸ್ಪತ್ರೆ

June 5, 2026
ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

ಭಾರತ-ಅಫ್ಘಾನಿಸ್ತಾನ ಟೆಸ್ಟ್ | ರಿಷಭ್ ಪಂತ್‌ಗೆ 50ನೇ ಟೆಸ್ಟ್ ಮೈಲಿಗಲ್ಲು | ಎಂಎಸ್ ಧೋನಿ ಎಲೈಟ್ ಪಟ್ಟಿಗೆ

June 5, 2026
INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

INDIA OPENS IMAX ADVANCE BOOKINGS FOR CHRISTOPHER NOLAN’S NEW MYTHIC ACTION EPIC, The Odyssey FROM JUNE 8

June 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL