No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Saturday, February 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಿಕ್ಕ ಬಳ್ಳಾಪುರ

ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 17, 2019
in ಚಿಕ್ಕ ಬಳ್ಳಾಪುರ
0
ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಸಾಧನೀಯ ಭಾವನೆಯು ನಿಜಕ್ಕೂ ಶ್ಲಾಘನೀಯವಾಗಿದ್ದು, ಇದರಿಂದ ಮಹಿಳೆಯರ ಸ್ವಾವಲಂಭಿ ಬದುಕಿಗೆ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಬಸವೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ವತಿಯಿಂದ ಆಯೋಜಿಸಿದ್ದ ’ದಶಮಾನೋತ್ಸವ ಸಂಭ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನೆಯಲ್ಲಿ ಮಕ್ಕಳಿಗಾಗಿ ಮತ್ತು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಿಗಾಗಿ ಸ್ವರ್ಗವನ್ನು ನಿರ್ಮಾಣ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಮಹಿಳೆಯರಲ್ಲಿದೆ. ಇದರಿಂದ ಕೇವಲ ಕುಟುಂಬ ನಿರ್ವಹಣೆ ಮಾತ್ರವಲ್ಲ, ಇಡೀ ಸಮಾಜವನ್ನು ಸರಿದಾರಿಯಲ್ಲಿ ನಡೆಸುವ ಹೊಣೆಗಾರಿಕೆಯನ್ನು ಹೊಂದಿರುತ್ತಾರೆ. ಮನೆಯಲ್ಲಿ ಮಹಿಳೆಯರು ನಿರ್ವಹಣೆ ಮಾಡುವ ಜವಾಬ್ದಾರಿಯುತವಾದ ಕಾರ್ಯಗಳಿಂದ ಇಡೀ ಸಂಸಾರವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವ ಕ್ಷಮತೆ ಅವರಲ್ಲಿದೆ ಎಂದರು.

ಕೇವಲ ಗ್ರಾಮೀಣ ಭಾಗದ ಮಹಿಳೆಯರೇ ಸೇರಿ ಸಹಕಾರ ಸಂಘವನ್ನು ಸ್ಥಾಪನೆ ಮಾಡಿ ನೂರಾರು ಹೆಣ್ಣುಮಕ್ಕಳ ಸ್ವಾವಲಂಭಿ ಬದುಕಿಗೆ ಆಸರೆಯಾಗಿರುವ ಸಮೃದ್ದಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರ ನಿಯಮಿತವು ದಶಮಾನೋತ್ಸವ ಮಾತ್ರವಲ್ಲ ಶತಮಾನೋತ್ಸವವನ್ನು ಆಚರಿಸಿಕೊಳ್ಳುವಂತೆ ಬೆಳೆಯಬೇಕು. ಮಹಿಳೆಯರು ಕೇವಲ ಸಿನಿಮಾ ಮತ್ತು ಧಾರಾವಾಹಿಗಳನ್ನು ನೋಡಿ ಆದರ್ಶ ಜೀವನವನ್ನು ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಸಾಧನೆ ಮಾಡಿರುವ ಸಾಧಕರ ಜೀವನಶೈಲಿಯನ್ನು ಅನುಸರಿಸಬೇಕಾಗಿದೆ. ಇದರಿಂದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸೇರಿದಂತೆ ಇನ್ನಿತರರ ಕ್ಷೇತ್ರದಲ್ಲಿ ಗಣನೀಯವಾಗಿ ಪ್ರಗತಿ ಸಾಧಿಸಲು ಸಹಕಾರಿಯಾಗಲಿದೆ ಎಂದರು.

ಮಹಿಳೆಯರು ಆರಂಭಿಸುವ ಪ್ರತಿಯೊಂದು ಸ್ವಾವಲಂಭಿ ಉದ್ಯೋಗದಿಂದ ಸಾಕಷ್ಟು ಕುಟುಂಬಗಳು ನೆಮ್ಮದಿಯಿಂದ ನಡೆಯಲು ಸಾಧ್ಯವಾಗುತ್ತದೆ. ಇದರ ಜೊತೆಯಲ್ಲಿ ಸಂಘದಿಂದ ಸಾಲವನ್ನು ಪಡೆದಂತಹ ಪ್ರತಿಯೊಬ್ಬರೂ ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಆರೋಗ್ಯಕರವಾದ ವ್ಯವಹಾರ ಮಾಡಲು ಕೈ ಜೋಡಿಸಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷರಾದ ಬಿ.ಎಚ್. ಕೃಷ್ಣಾರೆಡ್ಡಿ, ಗ್ರಾಮೀಣ ಭಾಗದಲ್ಲಿ ಆರಂಭವಾದ ಸಹಕಾರಿ ನಿಯಮಿತವು ಮಹಿಳೆಯರ ಬದುಕಿಗೆ ಆಸರೆಯಾಗಿ ದಶಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಸಹಕಾರ ಸಂಘಗಳಿಗೆ ಬೆನ್ನೆಲುಬಾಗಿರುವ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರ ಪಾತ್ರ ಹೆಚ್ಚಾಗಿದೆ. ಮಹಿಳೆಯರು ನಿತ್ಯದ ಕಾರ್ಯ ಚಟುವಟಿಕೆಗಳ ಜೊತೆಯಲ್ಲಿ ಸಹಕಾರ ಸಂಘಗಳ ಸದ್ಬಳಕೆಯನ್ನು ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸಿ ಕುಟುಂಬಕ್ಕೆ ಆಸರೆಯಾಗಬೇಕಾಗಿದೆ. ಇದಕ್ಕಾಗಿ ಸರ್ಕಾರದಲ್ಲಿ ಸಾಕಷ್ಟು ಯೋಜನೆಗಳು ಲಭ್ಯವಿದ್ದು ಅವುಗಳ ಬಳಕೆಯನ್ನು ಪಡೆದುಕೊಳ್ಳುವಲ್ಲಿ ಎಲ್ಲರೂ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

ಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷರಾದ ಸಿ. ಗಂಗಲಕ್ಷ್ಮಮ್ಮ ಮಾತನಾಡಿ, ದಶಕದ ಹಿಂದೆ ಗ್ರಾಮೀಣ ಭಾಗದ ಮಹಿಳೆಯ ಸಬಲೀಕರಣಕ್ಕಾಗಿ ನಿಸ್ವಾರ್ಥ ಸೇವೆಯನ್ನು ಬಯಸಿ ಆರಂಭಿಸಿದ ಪತ್ತಿನ ಸಹಕಾರ ಸಂಘವು ಇಂದು ಸಾವಿರಾರು ಮಹಿಳೆಯರಿಗೆ ಆಸರೆಯಾಗಿರುವುದು ಸಂತಸದ ವಿಚಾರವಾಗಿದೆ. ಮಹಿಳೆಯರ ಸ್ವಾವಲಂಭಿ ಬದುಕಿಗೆ ಶ್ರಮಿಸಲು ದಶಕಗಳಿಂದ ಬೆನ್ನೆಲುಬಾಗಿ ಸಹಕಾರ ನೀಡಿದ ಎಲ್ಲರಿಗೂ ಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಶಕ್ತಿಮೀರಿ ಮಹಿಳೆಯರ ಸಬಲೀಕರಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಲು ಬದ್ಧರಾಗಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎನ್. ಜ್ಯೋತಿರೆಡ್ಡಿ, ಮಾಜಿ ಜಿಪಂ ಸದಸ್ಯರಾದ ಸಿ.ಆರ್. ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಮಾಜಿ ನಿರ್ದೇಶಕರಾದ ನಾಗೇಂದ್ರಗುಪ್ತ, ಪ್ರಗತಿ ಗ್ರಾಮೀಣ ಬ್ಯಾಂಕ್’ನ ನಿವೃತ್ತ ವ್ಯವಸ್ಥಾಪಕರಾದ ಕೆ.ಎಂ. ಬಸವರಾಜು, ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಕೇಂದ್ರ ಘಟಕದ ಅಧ್ಯಕ್ಷರಾದ ಡಿ.ಇ. ರವಿಕುಮಾರ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಿ.ವಿ. ವರಲಕ್ಷ್ಮಿ, ಪುರಸಭೆ ಮಾಜಿ ಸದಸ್ಯರಾದ ವಿಮಲಾಕ್ಷಿ, ಬಿಬಿಎಂಸಿ ಸದಸ್ಯರಾದ ನಾಗರಾಜು, ನಿವೃತ್ತ ಪ್ರಾಂಶುಪಾಲೆ ಸಿ.ನಾಗರತ್ನಮ್ಮ, ಸಿಡಿಪಿಒ ಕೆಂಪಹನುಮಯ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸೋಮಶೇಖರಯ್ಯ, ಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಉಪಾಧ್ಯಕ್ಷೆ ರಾಜೇಶ್ವರಿ, ನಿರ್ದೇಶಕರಾದ ಶಾರದಮ್ಮ, ತುಳಿಸಮ್ಮ, ರಶ್ಮಿ, ಮೀನಾಕ್ಷಿ, ವರಲಕ್ಷ್ಮೀ, ವಿಜಯಲಕ್ಷ್ಮೀ, ಅನುರಾಧ, ವಿಜಯ ಎನ್. ಮೂರ್ತಿ, ರಾಧಮ್ಮ, ಎಂ.ಕೆ. ಬೃಂದಾದೇವಿ, ರೂಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಅರ್ಚನ, ಮುಖಂಡರಾದ ಪಿ.ಟಿ. ಶ್ರೀನಿವಾಸ್, ಜಿ.ಕೆ. ಸತೀಶ್, ಆರ್.ಪಿ. ಗೋಪಾಲಗೌಡ, ಬಿ.ಜಿ. ಗೋವಿಂದರಾಜು, ಪ್ರೇಮಲೀಲಾ, ರಾಮಣ್ಣ, ಸಂಧ್ಯಾಶ್ರೀನಿವಾಸ್, ಜಿ.ಕೆ. ಅರುಣ್ ಕುಮಾರ್, ಸಂಕೇತ್ ಶ್ರೀರಾಮ್, ಜಿ.ಕೆ. ರಮೇಶ್ ಕುಮಾರ್, ಪ್ರಭಾಕರ್, ಸಾಗಾನಹಳ್ಳಿ ಶಿವಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಪರವಾಗಿ ಅಶ್ವತ್ಥಪ್ಪ ಅವರು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ತಮ್ಮನ್ನು ಖಾಯಂಗೊಳಿಸುವಂತೆ ಮನವಿ ಪತ್ರ ನೀಡಿದರು.

ಕಾರ್ಯಕ್ರಮದಲ್ಲಿ ಪತ್ತಿನ ಸಹಕಾರಿ ನಿಯಮಿತದಲ್ಲಿ ಹೆಚ್ಚಿನ ವ್ಯವಹಾರ ಹಾಗೂ ಹೂಡಿಕೆ ಮಾಡಿದ ಮಹಿಳೆಯರನ್ನು, ನೂತನವಾಗಿ ನಗರಸಭೆಗೆ ಆಯ್ಕೆಯಾದ ಮಹಿಳಾ ಸದಸ್ಯರನ್ನು ಹಾಗೂ ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಿವಿಧ ಸ್ಥಳೀಯ ಸಹಕಾರ ಸಂಘಗಳ ವತಿಯಿಂದ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಸನ್ಮಾನಿಸಿದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsChikkaballapurCo-operative SocietyGauribidanurKannada NewsMinister Shashikala JolleMP Anna Saheb JolleWomenಗೌರಿಬಿದನೂರುಮಹಿಳೆಸಚಿವೆ ಶಶಿಕಲಾ ಜೊಲ್ಲೆಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿಸಂಸದ ಅಣ್ಣಾ ಸಾಹೇಬ್ ಜೊಲ್ಲೆಸಹಕಾರ ಸಂಘ
Share199Tweet123Send
Previous Post

ಪಾಕಿಸ್ಥಾನ ಮಾಜಿ ಅಧ್ಯಕ್ಷ ಮುಶ್ರಫ್’ಗೆ ಮರಣ ದಂಡನೆ

Next Post

ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

ಸೊರಬ | ಚಂದ್ರಗುತ್ತಿಯಲ್ಲಿ ಅಪೂರ್ವ ಶಾಸನ ಪತ್ತೆ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL