Friday, June 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಚಿಕ್ಕ ಬಳ್ಳಾಪುರ

ಮಹಿಳೆಯರ ಸ್ವಾವಲಂಭಿ ಬದುಕಿಗೆ ಸಹಕಾರ ಸಂಘಗಳು ಆಸರೆ: ಸಚಿವೆ ಶಶಿಕಲಾ ಜೊಲ್ಲೆ

December 17, 2019
in ಚಿಕ್ಕ ಬಳ್ಳಾಪುರ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೌರಿಬಿದನೂರು: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರ ಸಾಧನೀಯ ಭಾವನೆಯು ನಿಜಕ್ಕೂ ಶ್ಲಾಘನೀಯವಾಗಿದ್ದು, ಇದರಿಂದ ಮಹಿಳೆಯರ ಸ್ವಾವಲಂಭಿ ಬದುಕಿಗೆ ಮಾದರಿಯಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಬಸವೇಶ್ವರ ಸಮುದಾಯ ಭವನದಲ್ಲಿ ಮಂಗಳವಾರ ಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ವತಿಯಿಂದ ಆಯೋಜಿಸಿದ್ದ ’ದಶಮಾನೋತ್ಸವ ಸಂಭ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮನೆಯಲ್ಲಿ ಮಕ್ಕಳಿಗಾಗಿ ಮತ್ತು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಿಗಾಗಿ ಸ್ವರ್ಗವನ್ನು ನಿರ್ಮಾಣ ಮಾಡುವ ಜವಾಬ್ದಾರಿ ಪ್ರತಿಯೊಬ್ಬ ಮಹಿಳೆಯರಲ್ಲಿದೆ. ಇದರಿಂದ ಕೇವಲ ಕುಟುಂಬ ನಿರ್ವಹಣೆ ಮಾತ್ರವಲ್ಲ, ಇಡೀ ಸಮಾಜವನ್ನು ಸರಿದಾರಿಯಲ್ಲಿ ನಡೆಸುವ ಹೊಣೆಗಾರಿಕೆಯನ್ನು ಹೊಂದಿರುತ್ತಾರೆ. ಮನೆಯಲ್ಲಿ ಮಹಿಳೆಯರು ನಿರ್ವಹಣೆ ಮಾಡುವ ಜವಾಬ್ದಾರಿಯುತವಾದ ಕಾರ್ಯಗಳಿಂದ ಇಡೀ ಸಂಸಾರವನ್ನು ವ್ಯವಸ್ಥಿತವಾಗಿ ನಿರ್ವಹಣೆ ಮಾಡುವ ಕ್ಷಮತೆ ಅವರಲ್ಲಿದೆ ಎಂದರು.

ಕೇವಲ ಗ್ರಾಮೀಣ ಭಾಗದ ಮಹಿಳೆಯರೇ ಸೇರಿ ಸಹಕಾರ ಸಂಘವನ್ನು ಸ್ಥಾಪನೆ ಮಾಡಿ ನೂರಾರು ಹೆಣ್ಣುಮಕ್ಕಳ ಸ್ವಾವಲಂಭಿ ಬದುಕಿಗೆ ಆಸರೆಯಾಗಿರುವ ಸಮೃದ್ದಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರ ನಿಯಮಿತವು ದಶಮಾನೋತ್ಸವ ಮಾತ್ರವಲ್ಲ ಶತಮಾನೋತ್ಸವವನ್ನು ಆಚರಿಸಿಕೊಳ್ಳುವಂತೆ ಬೆಳೆಯಬೇಕು. ಮಹಿಳೆಯರು ಕೇವಲ ಸಿನಿಮಾ ಮತ್ತು ಧಾರಾವಾಹಿಗಳನ್ನು ನೋಡಿ ಆದರ್ಶ ಜೀವನವನ್ನು ಮಾಡುವುದನ್ನು ಬಿಟ್ಟು ಸಮಾಜದಲ್ಲಿ ಸಾಧನೆ ಮಾಡಿರುವ ಸಾಧಕರ ಜೀವನಶೈಲಿಯನ್ನು ಅನುಸರಿಸಬೇಕಾಗಿದೆ. ಇದರಿಂದ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯ ಸೇರಿದಂತೆ ಇನ್ನಿತರರ ಕ್ಷೇತ್ರದಲ್ಲಿ ಗಣನೀಯವಾಗಿ ಪ್ರಗತಿ ಸಾಧಿಸಲು ಸಹಕಾರಿಯಾಗಲಿದೆ ಎಂದರು.

ಮಹಿಳೆಯರು ಆರಂಭಿಸುವ ಪ್ರತಿಯೊಂದು ಸ್ವಾವಲಂಭಿ ಉದ್ಯೋಗದಿಂದ ಸಾಕಷ್ಟು ಕುಟುಂಬಗಳು ನೆಮ್ಮದಿಯಿಂದ ನಡೆಯಲು ಸಾಧ್ಯವಾಗುತ್ತದೆ. ಇದರ ಜೊತೆಯಲ್ಲಿ ಸಂಘದಿಂದ ಸಾಲವನ್ನು ಪಡೆದಂತಹ ಪ್ರತಿಯೊಬ್ಬರೂ ಸಕಾಲಕ್ಕೆ ಮರುಪಾವತಿ ಮಾಡುವ ಮೂಲಕ ಆರೋಗ್ಯಕರವಾದ ವ್ಯವಹಾರ ಮಾಡಲು ಕೈ ಜೋಡಿಸಬೇಕಾಗಿದೆ ಎಂದರು.

ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಅಧ್ಯಕ್ಷರಾದ ಬಿ.ಎಚ್. ಕೃಷ್ಣಾರೆಡ್ಡಿ, ಗ್ರಾಮೀಣ ಭಾಗದಲ್ಲಿ ಆರಂಭವಾದ ಸಹಕಾರಿ ನಿಯಮಿತವು ಮಹಿಳೆಯರ ಬದುಕಿಗೆ ಆಸರೆಯಾಗಿ ದಶಮಾನೋತ್ಸವ ಆಚರಿಸಿಕೊಳ್ಳುತ್ತಿರುವುದು ಸಂತಸದ ವಿಚಾರವಾಗಿದೆ. ಸಹಕಾರ ಸಂಘಗಳಿಗೆ ಬೆನ್ನೆಲುಬಾಗಿರುವ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ಸಂಸದ ಅಣ್ಣಾ ಸಾಹೇಬ್ ಜೊಲ್ಲೆ ಅವರ ಪಾತ್ರ ಹೆಚ್ಚಾಗಿದೆ. ಮಹಿಳೆಯರು ನಿತ್ಯದ ಕಾರ್ಯ ಚಟುವಟಿಕೆಗಳ ಜೊತೆಯಲ್ಲಿ ಸಹಕಾರ ಸಂಘಗಳ ಸದ್ಬಳಕೆಯನ್ನು ಪಡೆದುಕೊಂಡು ಆರ್ಥಿಕವಾಗಿ ಪ್ರಗತಿ ಸಾಧಿಸಿ ಕುಟುಂಬಕ್ಕೆ ಆಸರೆಯಾಗಬೇಕಾಗಿದೆ. ಇದಕ್ಕಾಗಿ ಸರ್ಕಾರದಲ್ಲಿ ಸಾಕಷ್ಟು ಯೋಜನೆಗಳು ಲಭ್ಯವಿದ್ದು ಅವುಗಳ ಬಳಕೆಯನ್ನು ಪಡೆದುಕೊಳ್ಳುವಲ್ಲಿ ಎಲ್ಲರೂ ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕಾಗಿದೆ ಎಂದು ತಿಳಿಸಿದರು.

ಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಅಧ್ಯಕ್ಷರಾದ ಸಿ. ಗಂಗಲಕ್ಷ್ಮಮ್ಮ ಮಾತನಾಡಿ, ದಶಕದ ಹಿಂದೆ ಗ್ರಾಮೀಣ ಭಾಗದ ಮಹಿಳೆಯ ಸಬಲೀಕರಣಕ್ಕಾಗಿ ನಿಸ್ವಾರ್ಥ ಸೇವೆಯನ್ನು ಬಯಸಿ ಆರಂಭಿಸಿದ ಪತ್ತಿನ ಸಹಕಾರ ಸಂಘವು ಇಂದು ಸಾವಿರಾರು ಮಹಿಳೆಯರಿಗೆ ಆಸರೆಯಾಗಿರುವುದು ಸಂತಸದ ವಿಚಾರವಾಗಿದೆ. ಮಹಿಳೆಯರ ಸ್ವಾವಲಂಭಿ ಬದುಕಿಗೆ ಶ್ರಮಿಸಲು ದಶಕಗಳಿಂದ ಬೆನ್ನೆಲುಬಾಗಿ ಸಹಕಾರ ನೀಡಿದ ಎಲ್ಲರಿಗೂ ಋಣಿಯಾಗಿದ್ದೇನೆ. ಮುಂದಿನ ದಿನಗಳಲ್ಲಿ ಶಕ್ತಿಮೀರಿ ಮಹಿಳೆಯರ ಸಬಲೀಕರಣಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸಲು ಬದ್ಧರಾಗಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಎನ್. ಜ್ಯೋತಿರೆಡ್ಡಿ, ಮಾಜಿ ಜಿಪಂ ಸದಸ್ಯರಾದ ಸಿ.ಆರ್. ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿಯಮಿತದ ಮಾಜಿ ನಿರ್ದೇಶಕರಾದ ನಾಗೇಂದ್ರಗುಪ್ತ, ಪ್ರಗತಿ ಗ್ರಾಮೀಣ ಬ್ಯಾಂಕ್’ನ ನಿವೃತ್ತ ವ್ಯವಸ್ಥಾಪಕರಾದ ಕೆ.ಎಂ. ಬಸವರಾಜು, ಹಿಂದೂ ಸಾದರ ಕ್ಷೇಮಾಭಿವೃದ್ಧಿ ಸಂಘದ ಕೇಂದ್ರ ಘಟಕದ ಅಧ್ಯಕ್ಷರಾದ ಡಿ.ಇ. ರವಿಕುಮಾರ್, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸಿ.ವಿ. ವರಲಕ್ಷ್ಮಿ, ಪುರಸಭೆ ಮಾಜಿ ಸದಸ್ಯರಾದ ವಿಮಲಾಕ್ಷಿ, ಬಿಬಿಎಂಸಿ ಸದಸ್ಯರಾದ ನಾಗರಾಜು, ನಿವೃತ್ತ ಪ್ರಾಂಶುಪಾಲೆ ಸಿ.ನಾಗರತ್ನಮ್ಮ, ಸಿಡಿಪಿಒ ಕೆಂಪಹನುಮಯ್ಯ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸೋಮಶೇಖರಯ್ಯ, ಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತದ ಉಪಾಧ್ಯಕ್ಷೆ ರಾಜೇಶ್ವರಿ, ನಿರ್ದೇಶಕರಾದ ಶಾರದಮ್ಮ, ತುಳಿಸಮ್ಮ, ರಶ್ಮಿ, ಮೀನಾಕ್ಷಿ, ವರಲಕ್ಷ್ಮೀ, ವಿಜಯಲಕ್ಷ್ಮೀ, ಅನುರಾಧ, ವಿಜಯ ಎನ್. ಮೂರ್ತಿ, ರಾಧಮ್ಮ, ಎಂ.ಕೆ. ಬೃಂದಾದೇವಿ, ರೂಪ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಆರ್. ಅರ್ಚನ, ಮುಖಂಡರಾದ ಪಿ.ಟಿ. ಶ್ರೀನಿವಾಸ್, ಜಿ.ಕೆ. ಸತೀಶ್, ಆರ್.ಪಿ. ಗೋಪಾಲಗೌಡ, ಬಿ.ಜಿ. ಗೋವಿಂದರಾಜು, ಪ್ರೇಮಲೀಲಾ, ರಾಮಣ್ಣ, ಸಂಧ್ಯಾಶ್ರೀನಿವಾಸ್, ಜಿ.ಕೆ. ಅರುಣ್ ಕುಮಾರ್, ಸಂಕೇತ್ ಶ್ರೀರಾಮ್, ಜಿ.ಕೆ. ರಮೇಶ್ ಕುಮಾರ್, ಪ್ರಭಾಕರ್, ಸಾಗಾನಹಳ್ಳಿ ಶಿವಕುಮಾರ್ ಸೇರಿದಂತೆ ಇನ್ನಿತರರು ಭಾಗವಹಿಸಿದ್ದರು.

ಇದೇ ಸಂದರ್ಭದಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಪರವಾಗಿ ಅಶ್ವತ್ಥಪ್ಪ ಅವರು ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ತಮ್ಮನ್ನು ಖಾಯಂಗೊಳಿಸುವಂತೆ ಮನವಿ ಪತ್ರ ನೀಡಿದರು.

ಕಾರ್ಯಕ್ರಮದಲ್ಲಿ ಪತ್ತಿನ ಸಹಕಾರಿ ನಿಯಮಿತದಲ್ಲಿ ಹೆಚ್ಚಿನ ವ್ಯವಹಾರ ಹಾಗೂ ಹೂಡಿಕೆ ಮಾಡಿದ ಮಹಿಳೆಯರನ್ನು, ನೂತನವಾಗಿ ನಗರಸಭೆಗೆ ಆಯ್ಕೆಯಾದ ಮಹಿಳಾ ಸದಸ್ಯರನ್ನು ಹಾಗೂ ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರು ಮತ್ತು ನಿರ್ದೇಶಕರನ್ನು ವೇದಿಕೆಯಲ್ಲಿ ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ವಿವಿಧ ಸ್ಥಳೀಯ ಸಹಕಾರ ಸಂಘಗಳ ವತಿಯಿಂದ ಸಚಿವೆ ಶಶಿಕಲಾ ಜೊಲ್ಲೆ ಅವರನ್ನು ಸನ್ಮಾನಿಸಿದರು.

(ವರದಿ: ಬಿ.ಎಂ. ಅಜಯ್, ಗೌರಿಬಿದನೂರು)

Get in Touch With Us info@kalpa.news Whatsapp: 9481252093

Tags: Bayalu Seeme NewsChikkaballapurCo-operative SocietyGauribidanurKannada NewsMinister Shashikala JolleMP Anna Saheb JolleWomenಗೌರಿಬಿದನೂರುಮಹಿಳೆಸಚಿವೆ ಶಶಿಕಲಾ ಜೊಲ್ಲೆಸಮೃದ್ಧಿ ಮಹಿಳಾ ಸೌಹಾರ್ದ ಪತ್ತಿನ ಸಹಕಾರಿಸಂಸದ ಅಣ್ಣಾ ಸಾಹೇಬ್ ಜೊಲ್ಲೆಸಹಕಾರ ಸಂಘ
Previous Post

ಪಾಕಿಸ್ಥಾನ ಮಾಜಿ ಅಧ್ಯಕ್ಷ ಮುಶ್ರಫ್’ಗೆ ಮರಣ ದಂಡನೆ

Next Post

ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ: ಕನ್ನಡ ಭಾವಗೀತೆ ಗಾಯನ ಸ್ಪರ್ಧೆ ಫಲಿತಾಂಶ ಪ್ರಕಟ, ಇಲ್ಲಿದೆ ವಿಜೇತರ ಪಟ್ಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025

ಸಮಾಜದ ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಅತ್ಯಗತ್ಯ: ಸಂತೋಷ್ ಪಾಟೀಲ್ 

June 26, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭೂತಕಾಲದ ವಿಚಾರಗಳು ತಿಳಿದಾಗ ಮಾತ್ರ ವ್ಯಕ್ತಿ ಭವಿಷ್ಯ ನಿರ್ಮಿಸಲು ಸಾಧ್ಯ

June 26, 2025

ನಿಸ್ವಾರ್ಥ ಸೇವೆಯಿಂದ ಆತ್ಮತೃಪ್ತಿ ಲಭ್ಯ: ಡಾ. ಧನಂಜಯ ಸರ್ಜಿ

June 26, 2025

ಕೇಂದ್ರಾಡಳಿತ ಪ್ರದೇಶ ದಿಯು ದಮನ್‌ಗೆ ಶಾಸಕ ಡಿ. ಎಸ್. ಅರುಣ್ ಭೇಟಿ

June 26, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!