Saturday, May 10, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಬೆಳುವಾಯಿಯಿಂದ ಆರಂಭವಾದ ಈ ಯುವತಿಯ ಸಾಧನೆ ದೆಹಲಿವರೆಗೂ ತಲುಪಿದ ಹಾದಿ ಇದು

ಅನುಷಾ ಜೈನ್ ಎಂಬ ಬಹುಮುಖ ಪ್ರತಿಭೆ

January 24, 2020
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹಿಂದೆ ಗುರು ಮುಂದೆ ಗುರಿಯಿದ್ದರೆ ಏನನ್ನಾದರೂ ಸಾಧಿಸಬಹುದು ಎಂಬ ಮಾತಿಗೆ ಶ್ರೇಷ್ಠ ಉದಾಹರಣೆಯಾಗಿರುವ ಹಾಗೂ ಹಲವಾರು ಕ್ಷೇತ್ರಗಳಲ್ಲಿ ತಮ್ಮ ಸಾಧನೆಯ ಮೂಲಕ ಮಿಂಚಿರುವ ಬಹುಮುಖ ಪ್ರತಿಭೆ ಕು.ಅನುಷಾ ಜೈನ್ ಅವರೇ ಇಂದಿನ ನಮ್ಮ ಲೇಖನದ ಕೇಂದ್ರ ಬಿಂದು.


ಮೂಲತಃ ಬೆಳುವಾಯಿಯವರಾದ ಸುದರ್ಶನ್ ಜೈನ್ ಹಾಗೂ ನಾಗರತ್ನ ಜೈನ್ ದಂಪತಿಗಳ ಪುತ್ರಿಯಾದ ಅನುಷಾ, ತಮ್ಮ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣವನ್ನು ಬೆಳುವಾಯಿಯ ಸರಕಾರಿ ಶಾಲೆಯಲ್ಲಿ ಮುಗಿಸಿ, ನಂತರ ಪದವಿ ಪೂರ್ವ ಶಿಕ್ಷಣವನ್ನು ಮೂಡಬಿದ್ರೆಯ ಎಕ್ಸಲೆಂಟ್ ಕಾಲೇಜಿನಲ್ಲಿ ಪಡೆದಿದ್ದಾರೆ. ಇದರೊಂದಿಗೆ ಪದವಿ ಶಿಕ್ಷಣವನ್ನು ಸಾಂಸ್ಕೃತಿಕ ಕಲೆಗಳ ಆಲಯ ಎಂದೇ ಹೆಸರು ಪಡೆದಿರುವ ಆಳ್ವಾಸ್ ಕಾಲೇಜಿನಲ್ಲಿ ಓದುತ್ತಿರುವುದು ವಿಶೇಷ. ಬಾಲ್ಯದಿಂದಲೇ ಕಲೆಯ ಕಡೆಗೆ ಹೆಚ್ಚಿನ ಒಲವು ಹೊಂದಿರುವ ಇವರು ಭಾಷಣ, ನಾಟಕ, ನೃತ್ಯ, ಸಂಗೀತ, ಚಿತ್ರಕಲೆ, ಯೋಗ, ಆಟ-ಪಾಠ ಮುಂತಾದವುಗಳಲ್ಲಿ ಮುಂಚುಣಿಯಲ್ಲಿದ್ದು, ಬಹುಮುಖ ಪ್ರತಿಭೆಯೆಂದೇ ಗುರುತಿಸಿಕೊಂಡಿದ್ದಾರೆ.


ಪ್ರತಿಭಾ ಕಾರಂಜಿಯಿಂದ ಹಿಡಿದು ನಾನಾ ಬಗೆಯ ಸ್ಪರ್ಧೆಗಳಲ್ಲಿ ಜಿಲ್ಲಾ ಹಾಗೂ ರಾಜ್ಯಮಟ್ಟಗಳಲ್ಲಿ ಭಾಗವಹಿಸಿ ತನ್ನ ಪ್ರತಿಭೆಯನ್ನು ಸಮಾಜಕ್ಕೆ ಪರಿಚಯಿಸಿಕೊಂಡಿದ್ದಾರೆ. ಭರತನಾಟ್ಯ, ಯಕ್ಷಗಾನ, ಮೋಹಿನಿ ಅಟ್ಟಂ, ನಾಟಕ ಮುಂತಾದ ಹಲವು ನೃತ್ಯ ಪ್ರಕಾರಗಳಲ್ಲಿ ಪರಿಣಿತರಾಗಿದ್ದು, ಭರತನಾಟ್ಯವನ್ನು ವಿದುಷಿ ಸುಖದಾ ಬರ್ವೆ ಇವರಲ್ಲಿ ಸತತ 12 ವರ್ಷಗಳಿಂದ ಅಭ್ಯಾಸ ಮಾಡುತ್ತಿದ್ದಾರೆ. ಕರ್ನಾಟಕ ಪರೀಕ್ಷಾ ಮಂಡಳಿ ಆಯೋಜಿಸುವ ಜೂನಿಯರ್, ಸೀನಿಯರ್ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದು ಈಗ ಪೂರ್ವ ವಿದ್ವತ್ ತಯಾರಿಯಲಿದ್ದಾರೆ.

ಯಕ್ಷಗಾನವನ್ನು ಶ್ರೀ ದೇವಾನಂದ ಭಟ್ ಅವರಲ್ಲಿ 5 ವರ್ಷ ಅಭ್ಯಾಸ ಮಾಡಿದ್ದು ಮೋಹಿನಿ ಅಟ್ಟಂ ಹಾಗೂ ಕಥಕ್ ನೃತ್ಯ ಪದ್ಧತಿಯನ್ನು ಆಳ್ವಾಸ್ ಕಾಲೇಜಿನ ನೃತ್ಯ ಗುರುಗಳ ಬಳಿ ಅಭ್ಯಾಸ ಮಾಡುತ್ತಿದ್ದಾರೆ.

ಕೇವಲ ಕಲೆಯಲ್ಲಿ ಮಾತ್ರವಲ್ಲ ಶೈಕ್ಷಣಿಕ ಚಟುವಟಿಕೆಗಳಲ್ಲೂ ಮುಂಚೂಣಿಯಲ್ಲಿದ್ದು ಎಸ್’ಎಸ್’ಎಲ್’ಸಿ ಪರೀಕ್ಷೆಯಲ್ಲಿ ಶೇ.93ರಷ್ಟು ಅಂಕ ಪಡೆದು ಪಿಯುಸಿಯಲ್ಲಿಯೂ ಉತ್ತಮ ಅಂಕಗಳೊಂದಿಗೆ ತೇರ್ಗಡೆ ಹೊಂದಿದ್ದಾರೆ. ರಾಷ್ಟ್ರಮಟ್ಟದ ವಿಜ್ಞಾನ ಮಾದರಿಯಲ್ಲಿ ಭಾಗವಹಿಸಿ ಎಲ್ಲರ ಪ್ರಶಂಸೆಗೂ ಪಾತ್ರರಾಗಿದ್ದಾರೆ.

ಮಕ್ಕಿಮನೆ ಕಲಾವೃಂದದ ಮೂಲಕ ಕರ್ನಾಟಕ ರಾಜ್ಯದಾದ್ಯಂತ ಏಕವ್ಯಕ್ತಿ ಪ್ರದರ್ಶನ ಹಾಗೂ ಗುಂಪು ನೃತ್ಯಗಳ ಮೂಲಕ ತಮ್ಮ ನೃತ್ಯದ ಛಾಪು ಮೂಡಿಸಿ ಹಲವಾರು ನೃತ್ಯ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಥಮ ಬಹುಮಾನವನ್ನು ತಮ್ಮ ಮುಡಿಗೇರಿಸಿಕೊಂಡಿದ್ದಾರೆ.


ಇವರು ಕಲಾಶ್ರೀ ಪುರಸ್ಕಾರ, ಚಿಗುರು ಪುರಸ್ಕಾರ ಹಾಗೂ ಎನ್’ಸಿಸಿಯಲ್ಲಿ ಚಿನ್ನದ ಪದಕ ಗೆದ್ದು ಉತ್ತಮ ಕೆಡೆಟ್ ಎಂದು ಗುರುತಿಸಿಕೊಂಡು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪರೇಡ್’ಗೆ ಆಯ್ಕೆಯಾಗಿದ್ದರು.


ಹೀಗೆ ತಮ್ಮ ಪ್ರತಿಭೆಯ ಮೂಲಕ ವಿಶ್ವ ಆಳ್ವಾಸ್ ನುಡಿಸಿರಿ, ಆಳ್ವಾಸ್ ವಿರಾಸತ್, ಧರ್ಮಸ್ಥಳ ಲಕ್ಷದೀಪೋತ್ಸವ ಹಾಗೂ ಮಹಾಮಸ್ತಕಾಭಿಷೇಕ ಉತ್ಸವಗಳಲ್ಲಿ ನೃತ್ಯದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದಾರೆ. ಹೀಗೆಯೇ ಇನ್ನೂ ಹಲವಾರು ಕ್ಷೇತ್ರಗಳಲ್ಲಿ ಇವರು ತಮ್ಮ ಸಾಧನೆ ಮಾಡಲಿ ಎಂದು ಆ ಭಗವಂತನಲ್ಲಿ ಬೇಡುತ್ತ ಇವರ ಭವಿಷ್ಯ ಉಜ್ವಲವಾಗಲಿ ಎಂದು ಆಶಿಸೋಣ.

ಲೇಖನ ಸಹಕಾರ: ರೋಹನ್ ಪಿಂಟೋ ಗೇರುಸೊಪ್ಪ


Get in Touch With Us info@kalpa.news Whatsapp: 9481252093

Tags: Anusha JainBeluvaiKannada News WebsiteMoodbidriPratibha KaranjiSouth KendraSpecial ArticleYakshaganaಅನುಷಾ ಜೈನ್ಪ್ರತಿಭಾ ಕಾರಂಜಿಬೆಳುವಾಯಮೂಡಬಿದ್ರೆಯಕ್ಷಗಾನ
Previous Post

ಕಂದಾಯ ಇಲಾಖಾ ನೌಕರರ ವಸತಿ ಸಹಕಾರಿಗೆ ಅವಿರೋಧ ಆಯ್ಕೆ

Next Post

ಕಳ್ಳ ನಾಯಕರ ಸ್ವಾರ್ಥಕ್ಕಾಗಿ ಸಿಎಎ ವಿರೋಧಿ ನಿರ್ಣಯದ ಫಲ ಎಂತಹ ಅನಾಹುತ ತಂದೀತು ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಳ್ಳ ನಾಯಕರ ಸ್ವಾರ್ಥಕ್ಕಾಗಿ ಸಿಎಎ ವಿರೋಧಿ ನಿರ್ಣಯದ ಫಲ ಎಂತಹ ಅನಾಹುತ ತಂದೀತು ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025

ಕಳಸವಳ್ಳಿ ರಸ್ತೆ ನಿರ್ಮಾಣಕ್ಕೆ 600 ಕೋಟಿ ರೂ. ಮಂಜೂರು | ಸಂಸದ ರಾಘವೇಂದ್ರ

May 9, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭಾರತ – ಪಾಕಿಸ್ತಾನ ಯುದ್ಧ ಭೀತಿ | ಐಪಿಎಲ್ 2025 ಪಂದ್ಯಗಳು ಮುಂದೂಡಿಕೆ

May 9, 2025

ಭದ್ರಾವತಿ | ವಾಕಿಂಗ್ ತೆರಳಿದ್ದ ವ್ಯಕ್ತಿಯ ಭೀಕರ ಹತ್ಯೆ

May 9, 2025
Internet Image

ಶಿಕಾರಿಪುರ | ಮನೆ ಬೀಗ ಮುರಿದು ಕಳ್ಳತನ | ಆರೋಪಿ ಬಂಧನ

May 9, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!