ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ನಿವಾಸದಲ್ಲಿ ನಿನ್ನೆ ರಾತ್ರಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಅದೃಷ್ಟವಷಾತ್ ಅವರು ಪಾರಾಗಿದ್ದಾರೆ.
ಗಾಂಧಿ ಭವನದ ಸಮೀಪ ಇರುವ ಸಚಿವರ ಸರ್ಕಾರಿ ನಿವಾಸದಲ್ಲಿ ಸಚಿವರು ಮಲಗುವ ಕೋಣೆಯಲ್ಲಿ ಎಸಿ ಸ್ವಿಚ್ ಹಾಕುತ್ತಿದ್ದಂತೆ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಈಶ್ವರಪ್ಪ ಮತ್ತು ಅವರ ಪತ್ನಿ ಮನೆಯಿಂದ ಹೊರಗೆ ಬಂದು ಅಳಿಯ ಸಂತೋಷ್ ಅವರಿಗೆ ವಿಚಾರ ತಿಳಿಸಿ, ಬಳಿಕ ಅಗ್ನಿಶಾಮಕ ದಳದ ಸಿಬ್ಬಂದಿಗೂ ಮಾಹಿತಿ ನೀಡಿದ್ದಾರೆ.
ವಿಷಯ ತಿಳಿದ ಕೂಡಲೇ ಅಗ್ನಿ ಶಾಮಕ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿ, ಬೆಂಕಿ ನಂದಿಸಿದ್ದು, ಯಾವುದೇ ಅನಾಹುತ ಸಂಭವಿಸಿಲ್ಲ. ಆದರೆ, ಈಶ್ವರಪ್ಪ ಅವರು ಮಲಗುವ ಕೋಣೆ ಸಂಪೂರ್ಣವಾಗಿ ಭಸ್ಮವಾಗಿದ್ದು, ರೂಂನಲ್ಲಿದ್ದ ಬೆಡ್, ಎಸಿ, ಬಟ್ಟೆಗಲು, ಸೋಫಾ, ಕರ್ಟನ್ ಎಲ್ಲವೂ ಸುಟ್ಟು ಭಸ್ಮವಾಗಿದೆ.
Get in Touch With Us info@kalpa.news Whatsapp: 9481252093







Discussion about this post