Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

18 ಪುರಾಣಗಳಲ್ಲಿ ಯಾವುದು ಏನು ಹೇಳುತ್ತದೆ? ದಿನಕ್ಕೊಂದರ ಬಗ್ಗೆ ತಿಳಿಯಿರಿ: ಮಾಲಿಕೆ-8 ಆಗ್ನೇಯ ಮಹಾಪುರಾಣ

April 3, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಪ್ರ.ಶ. 7ನೆಯ ಶತಮಾನಕ್ಕಿಂತ ಈಚಿನದು. ಇದರ ಅಲಂಕಾರಶಾಸ್ತ್ರ ವಿಭಾಗ ಪ್ರ.ಶ. 900ರ ಬಳಿಕ ಇದರಲ್ಲಿ ಕ್ರಮಶಃ ಪ್ರಕ್ಷಿಪ್ತವಾದುದು ವಸಿಷ್ಮನಿಗೆ ಅಗ್ನಿ ಹೇಳಿದ್ದರಿಂದ ಪುರಾಣಕ್ಕೆ ಈ ಹೆಸರು. ಪುರಾಣಗಳ ವಿಶ್ವಕೋಶ ಸ್ವರೂಪಕ್ಕಿದು ಪರಮಾದರ್ಶ. ಇದರಲ್ಲಿ ವಿಷ್ಣುವಿನ ಅವತಾರಗಳು ಉಕ್ತವಾಗಿವೆ.

ರಾಮಕೃಷ್ಣರ ಕತೆಗಳನ್ನು ರಾಮಾಯಣ, ಮಹಾಭಾರತ, ಹರಿವಂಶಗಳಲ್ಲಿರುವಂತೆಯೇ ಹೇಳಲಾಗಿದೆ. ದ್ವಾದಶಸಹಸೀ ಸ್ತೋತ್ರವಿಲ್ಲಿದೆ. ಹೀಗಿದ್ದರೂ ಅಗ್ನಿಪುರಾಣ ಒಟ್ಟಿನಲ್ಲಿ ಶಿವನಿಗೇ ಹೆಚ್ಚಿನ ಗುರುತ್ವವನ್ನು ಕೊಟ್ಟಿದೆ.

ಲಿಂಗ, ದುರ್ಗಾರಾಧನೆಗಳ ಯೋಗಮಾರ್ಗಬೋಧನವಲ್ಲದೆ, ತಾಂತ್ರಿಕ ಕೃತ್ಯ, ಮೂರ್ತಿಶಿಲ್ಪ, ವಿಗ್ರಹ ಪ್ರತಿಷ್ಠೆ, ಗಣೇಶ ಪೂಜೆ, ಸೂರ್ಯೋಪಾಸನೆ, ಮರಣ, ಪುನರ್ಜನ್ಮ, ಯೋಗ, ಗೀತಾತತ್ವ, ಯಮ ಗೀತೆ ಮುಂತಾದ ವಿಷಯಗಳ ಜೊತೆಗೇ ಪೌರಾಣಿಕ ವಿಷಯಗಳಾದ ಸೃಷ್ಟಿ ವಿಚಾರ, ವಂಶಾನುಚರಿತ, ಭೂವಿವರಣೆಗಳೂ ಅಗ್ನಿಪುರಾಣಾಂತರ್ಗತ. ಭೂಗೋಲಶಾಸ್ತ್ರ, ಖಗೋಳಶಾಸ್ತ್ರ, ಜ್ಯೋತಿಶಶಾಸ್ತ್ರ, ವಿವಾಹಧರ್ಮ, ಉತ್ತರಕ್ರಿಯೆ, ಶಕುನಶಾಸ್ತ್ರ, ವಾಸ್ತುಶಿಲ್ಪ, ಜೀವನಾಚಾರ, ರಾಜನೀತಿ, ಯುದ್ಧಕಲೆ, ಯಾಜ್ಞವಲ್ಕಸ್ಮೃತಿಗನು ಗುಣವಾದ ಧರ್ಮ ವಿವರಣೆ, ವೈದ್ಯಶಾಸ್ತ್ರ, ಛಂದಶಾಶಸ್ತ್ರ, ಅಲಂಕಾರಶಾಸ್ತ್ರ, ವ್ಯಾಕರಣಶಾಸ್ತ್ರ ಮತ್ತು ಶಬ್ದಕೋಶಗಳ ವಿಷಯಗಳಿಗೆ ಬೇರೆ ಬೇರೆ ವಿಭಾಗಗಳು ಮೀಸಲಾಗಿವೆ.

ಈ ಪುರಾಣದ ಹೊರಗಿರುವ ಎಷ್ಟೋ ಮಾಹಾತ್ಮ್ಯಗಳನ್ನೂ ಅಗ್ನಿಪುರಾಣೋಕ್ತವೆನ್ನುವ ರೂಢಿಯಿದೆ. ಶ್ಲೋಕ ಸಂಖ್ಯೆ ಸುಮಾರು 15400 ಎಂಬುದು ರೂಢಿ. 11500ಕ್ಕಂತೂ ಕಡಿಮೆ ಇಲ್ಲ. ಪ್ರಸ್ತುತ ಮಹಾಪುರಾಣಾಂತರ್ಗತವಾದ ಅಲಂಕಾರ ಶಾಸ್ತ್ರಾಂಶಗಳು ಹೀಗಿವೆ: ಶಾಸ್ತ್ರ-ಕಾವ್ಯಗಳೆಂದು ವಾಙ್ಮಯವೆರಡು ವಿಧ. ಶಾಸ್ತ್ರ ಶಬ್ದಪ್ರಧಾನ ಮತ್ತು ಇತಿಹಾಸನಿಷ್ಠ. ವೇದ ಅಥವಾ ಲೋಕಮೂಲವಾದುದು ಕಾವ್ಯ. ಅದು ಅಭಿಧಾಪ್ರಧಾನ, ಸ್ಫುಟಾಲಂಕಾರಯುಕ್ತ, ಸಗುಣ ಮತ್ತು ನಿರ್ದುಷ್ಟ. ರಸಸಿದ್ಧಿಯುಳ್ಳ ನಾದದಲ್ಲಿ ಅದರ ಹುಟ್ಟು.

ಗದ್ಯ, ಪದ್ಯ ಮಿಶ್ರ ಎಂದು ತ್ರಿವಿಧ. ಪಾದವಿಲ್ಲದ ಪದಸಂತತಿ ಗದ್ಯ. ಚತುಷ್ಪಾದವುಳ್ಳದ್ದು ಪದ್ಯ. ಅದರ ಛಂದಸ್ಸು ವೃತ್ತ, ಜಾತಿ ಎಂದು ದ್ವಿವಿಧ. ಧ್ವನಿ, ವರ್ಣ, ಪದ, ವಾಕ್ಯಗಳು ವಾಙ್ಮಯದ ಚತುರಂಗಗಳು. ಇಷ್ಟವಾದ ಅರ್ಥವನ್ನು ವ್ಯವಚ್ಛೇದಿಸಿ ಹೇಳುವ ಪದಾವಳಿಯೇ ವಾಕ್ಯ. ಮಿಶ್ರಕಾವ್ಯಗಳಲ್ಲಿ ಚಂಪುಕಾವ್ಯ ಶ್ರವ್ಯ, ನಾಟಕ (ರೂಪಕ) ಕಾವ್ಯದೃಶ್ಯ. ಚೂರ್ಣಕ, ಉತ್ಕಲಿಕೆ ಮತ್ತು ವೃತ್ತಗಂಧಿ ಎಂಬ ಹೆಸರಿನವು ಗದ್ಯಪ್ರಕಾರಗಳು.

ಆಖ್ಯಾಯಿಕೆ, ಕಥೆ, ಖಂಡಕಥೆ, ಪರಿಕಥೆ ಮತ್ತು ಕಥಾನಿಕೆ ಎಂಬೀ ಐದು ಗದ್ಯಕಾವ್ಯದ ಮಾದರಿಗಳು. ಮಹಾಕಾವ್ಯ, ಕಲಾಪ, ಪರ್ಯಾಬಂಧ, ವಿಶೇಷಕ, ಕುಲಕ, ಮುಕ್ತಕ, ಕೋಷ ಎಂಬೀ ಏಳು ಪದಕಾವ್ಯದ ಮಾದರಿಗಳು. ಪ್ರಕರಣ, ಡಿಮ, ಈಹಾಮೃಗ, ಸಮವಕಾರ, ಪ್ರಹಸನ, ವ್ಯಾಯೋಗ, ಭಾಣ, ವೀಥಿ, ಅಂಕ, ಕ್ರೋಟಕ, ನಾಟಕ, ಸಟ್ಟಕ, ಶಿಲ್ಪಕ, ಕರ್ಣೆ, ಏಕ, ದುರ್ಮಲ್ಲಿಕೆ, ಪ್ರಸ್ಥಾನ, ಭಾಣಿಕೆ, ಆಭಾಣಿ, ಗೋಷ್ಠಿ, ಹಲ್ಲೀಶಕ, ಕಾವ್ಯ, ಶ್ರೀಗದಿತ, ನಾಟ್ಯರಾಸಕ, ರಾಸಕ, ಉಲ್ಲಾಪ್ಯಕ, ಪ್ರೇಕ್ಷಣ-ಎಂದು ನಾಟಕ 27 ವಿಧ. ನಾಟಕದ ಪೂರ್ವಭಾಗ ಪೂರ್ವರಂಗ. ಅದರ ಅಂಗಗಳು 32. ಉತ್ತರ ಭಾಗದ ಅಂಗಗಳಾದ ನಾಂದಿ, ಸೂತ್ರಧಾರ, ನಟಿ, ಆಮುಖ, ವಸ್ತು, ಅರ್ಥಪ್ರಕೃತಿ, ಕಾರ್ಯಾವಸ್ಥೆ, ಸಂಧಿಗಳು-ಇವು ಅನಂತರ ಬರುತ್ತವೆ.

ಆಮೇಲೆ ರಸನಿಷ್ಪತ್ತಿ ವಿಚಾರ
ಪರಬ್ರಹ್ಮನಿಗಿರುವ ಪ್ರಕೃತಿಸಹಜವಾದ ಆನಂದ ಆಗೀಗ ಆವಿರ್ಭವಿಸುತ್ತದೆ. ಅಂಥ ಆನಂದಾಭಿವ್ಯಕ್ತಿಯೊಂದು ಚೈತನ್ಯ ಚಮತ್ಕಾರ. ಅದೇ ರಸ. ಅಹಂಕಾರ ರಸದ ಪ್ರಥಮ ಪರಿಣಾಮ. ಅದರಿಂದ ಅಭಿಮಾನದ ವಿಕಾಸ. ಮೂರು ಲೋಕಗಳೂ ಅಭಿಮಾನದಲ್ಲಿ ಸಮಾಪ್ತ. ಅಭಿಮಾನದಿಂದ ರತಿ ಅಥವಾ ರಾಗ ಹುಟ್ಟುತ್ತದೆ. ಅದು ಪರಿಪುಷ್ಪವಾದಾಗ ಶೃಂಗಾರವೆನ್ನಿಸುತ್ತದೆ. ಶೃಂಗಾರಾದಿ ನವರಸಗಳು ಈ ಆದಿಶೃಂಗಾರದ ಪ್ರಭೇದಗಳು. ಅವು ತಮ್ಮ ತಮ್ಮ ಸ್ಥಾಯಿಗಳಿಂದ ವ್ಯಕ್ತವಾಗುತ್ತವೆ.

ಅವುಗಳಲ್ಲಿ ಶೃಂಗಾರ, ವೀರ, ರೌದ್ರ, ಬೀಭತ್ಸಗಳು ಮೂಲಭೂತವಾದಂಥವು. ಅವುಗಳಿಂದ ಅನುಕ್ರಮವಾಗಿ ಹಾಸ್ಯ, ಅದ್ಭುತ, ಕರುಣ, ಭಯಾನಕ, ಈ ರಸಗಳು ನಿಷ್ಪನ್ನವಾಗುತ್ತವೆ. ರಸವಿಲ್ಲದ ಮಾತು ತ್ಯಾಗವಿಲ್ಲದ ಐಶ್ವರ್ಯದಂತೆ ವ್ಯರ್ಥ. ಕವಿ ಶೃಂಗಾರಿಯಾದರೆ ಜಗತ್ತೆಲ್ಲ ರಸಮಯ; ಆತ ರಾಗರಹಿತನಾದರೆ ಪ್ರಪಂಚವೆಲ್ಲ ನೀರಸವಾದೀತು. ಭಾವವಿಲ್ಲದ ರಸವಿಲ್ಲ, ರಸವಿಲ್ಲದ ಭಾವವಿಲ್ಲ. ಸ್ಥಾಯಿಗಳ ಮೂಲಕ ಭಾವಗಳು ರಸಿಕ ರಸಗಳನ್ನು ಭಾವಿಸುವಂತೆ ಮಾಡುತ್ತವೆ.

ರಸಗಳು ರಸಿಕನಿಂದ ಭಾವ್ಯ. ಸ್ಥಾಯಿಗಳು ಒಂಬತ್ತು. ಅನುಭಾವಗಳು ಎಂಟು. ಅನುಭಾವಗಳು ವ್ಯಭಿಚಾರಶೀಲ, ನಿರ್ವೇದಾದಿ, ಉನ್ಮಾದಾಂತವಾದ ಸಂಚಾರೀಭಾವಗಳು ಕೂಡ ವ್ಯಭಿಚಾರಿಗಳೇ. ಪ್ರಿಯರಲ್ಲಿ ಉಂಟಾಗುವ ಸುಖಾನುಭವ ರತಿ. ಹರ್ಷಾದಿಗಳಿಂದ ಮನಸ್ಸು ಅರಳುವುದು ಹಾಸ. ಯಮಾದಿಗಳನ್ನು ನೋಡುವುದರಿಂದ ಉಂಟಾಗುವ ಚಿತ್ತವೈಕ್ಲವ್ಯ ಭಯ. ನಿಂದ್ಯ, ದುರ್ಭಗಪದಾರ್ಥಗಳಲ್ಲಿ ನಮಗುಂಟಾಗುವುದು ಜುಗುಪ್ಸಾಭಾವ. ಪದಾರ್ಥಗಳ ಅತಿಶಯವನ್ನು ಕಂಡು ಚಿತ್ತವಿಸ್ಮೃತಿಯುಂಟಾಗುವುದು ವಿಸ್ಮಯ.

ಇಷ್ಟವಾದ ವ್ಯಕ್ತಿ, ವಸ್ತುಗಳು ನಾಶದಿಂದ ಮನೋವೈಕ್ಲವ್ಯವುಂಟಾದರದು ಶೋಕ. ಪ್ರತಿಕೂಲಕಾರಿಗಳ ಬಗ್ಗೆ ತೀಭಾವ ವೇಳುವುದು ಕ್ರೋಧ ಪುರುಷಾರ್ಥ ಸಮಾಪ್ತಿಗಾಗಿ ಹೊರಟವರಲ್ಲಿ ಉದಯವಾಗುವುದು ಉತ್ಸಾಹಭಾವ. ವಿಭಾವಗಳೆರಡು. ನಾಯಕರ ಮಾದರಿಗಳು ನಾಲ್ಕು. ಅವರಲ್ಲಿಯ ಒಂದೊಂದು ಮಾದರಿಯಲ್ಲಿ ಅನುಕೂಲಾದಿ ಒಳಭೇದಗಳು ನಾಲ್ಕು. ನಾಯಕನ ಅನುಯಾಯಿಗಳದ್ದು ಮೂರು ಮಾದರಿ. ನಾಯಿಕೆಯರದು 3-4 ನಮೂನೆ.
ವ್ಯಭಿಚಾರಶೀಲವುಳ್ಳ ವಿಶಿಷ್ಟ ಅನುಭಾವಗಳೆನ್ನಿಸುವ ಆರಂಭ ಅಥವಾ ವ್ಯಾಪಾರಗಳು ಮಾನಸ, ವಾಚಿಕ, ಬೌದ್ಧಿಕ ಮತ್ತು ಶಾರೀರಿಕ ಎಂಬುದಾಗಿ ನಾಲ್ಕು ವಿಧ. ಪುರುಷನ ಮಾನಸಾರಂಭಗಳು ಎಂಟು. ಸ್ತ್ರೀಯವು ಹನ್ನೆರಡು. ಸ್ತ್ರೀಪುರುಷರ ವಾಗಾರಂಭಗಳು 12. ರೀತಿ, ವೃತ್ತಿ, ಪ್ರವೃತ್ತಿಗಳು ಬೌದ್ಧಿಕ ಆರಂಭಗಳು. ವೈದಭಾರ್‌ಯದಿ ರೀತಿಗಳು ನಾಲ್ಕು. ಭಾರತ್ಯಾದಿ ವೃತ್ತಿಗಳು ನಾಲ್ಕು. ಪ್ರವೃತ್ತಿಗಳು ಹಲವು. ಅಂಗ, ಪ್ರತ್ಯಂಗಗಳ ಕರ್ಮಗಳೂ ಚೇಷ್ಟಾವಿಶೇಷಗಳೂ ಶರೀರಾರಂಭಗಳು.

ಅಂಗಗಳು 6, ಪ್ರತ್ಯಂಗಗಳು 8, ಅಂಗ, ಪ್ರತ್ಯಂಗ ಚೇಷ್ಟೆಗಳು 12. ಚೇಷ್ಟಾವಿಶೇಷಗಳು ಸ್ತ್ರೀಗೆ ಮಾತ್ರ. ಅಂಗಪ್ರತ್ಯಂಗಕರ್ಮಗಳು ಸ್ತ್ರೀಪುರುಷರಿಗೆ ಸಾಧಾರಣ. ಅಭಿನಯಗಳು ನಾಲ್ಕು : ಸ್ತಂಭಾದಿ ಸಾತ್ತಿವಕ, ವಾಗಾರಂಭರೂಪದ ವಾಚಿಕ, ಶರೀರಾರಂಭರೂಪದ ಆಂಗಿಕ, ಬುದ್ಧ್ಯಾರಂಭ ರೂಪದ ಆಹಾರ್ಯ.

ಶಬ್ದಾಲಂಕಾರ ವರ್ಗಗಳು 9
ಛಾಯೆ, ಮುದ್ರೆ, ಉಕ್ತಿ, ಯುಕ್ತಿ, ಗುಂಫನೆ, ವಾಕೋವಾಕ್ಯ, ಅನುಪ್ರಾಸ ಯಮಕಗಳು, ಚಿತ್ರ, ಸಮಸ್ಯೆ ಎಂದು ಅರ್ಥಾಲಂಕಾರವರ್ಗಗಳು 8 : ಸ್ವರೂಪ, ಸಾದೃಶ್ಯ, ಉತ್ಪ್ರೇಕ್ಷೆ, ಅತಿಶಯ, ವಿಭಾವನೆ, ವಿರೋಧ, ಹೇತು, ಸಮ-ಎಂಬ ತತ್ತ್ವಗಳನ್ನವು ಆಧರಿಸಿವೆ. ಸಮವೆಂಬ ತತ್ತ್ವದ 6 ಉಪವಿಭಾಗಗಳು ಉಭಯಾಲಂಕಾರವರ್ಗಗಳೆನ್ನಿಸುತ್ತವೆ: ಪ್ರಶಸ್ತಿ, ಕಾಂತಿ, ಔಚಿತ್ಯ, ಸಂಕ್ಷೇಪ, ಯಾವದರ್ಥತೆ, ಅಭಿವ್ಯಕ್ತಿ-ಎಂದು.

ಸಾಮಾನ್ಯ ಮತ್ತು ವೈಶೇಷಿಕ ಎಂದು ಕಾವ್ಯಗುಣಗಳ ವರ್ಷಗಳೆರಡು. ಸಾಮಾನ್ಯ ಶಬ್ದಗುಣಗಳು ಆರು. ಸಾಮಾನ್ಯ ಅರ್ಥಗುಣಗಳು ಆರು ಮತ್ತು ಉಭಯಗುಣಗಳು ಆರು. ವೈಶೇಷಿಕ ಗುಣಗಳು ಆಯಾ ಕೃತಿಗೆ ವಿಶಿಷ್ಟ. ದೋಷಗಳು ಮೂರು ಮುಖ್ಯ ಆಶ್ರಯಗಳನ್ನಾಧರಿಸಿವೆ. ವಕ್ತೃ, ವಾಚಕ, ವಾಚ್ಯ-ಎಂದು. ಅಗ್ನಿಪುರಾಣ ತನ್ನ ಅಲಂಕಾರ ವಿಭಾಗದಲ್ಲಿ ಹೆಚ್ಚಾಗಿ ಭರತ, ಭಾಮಹ, ದಂಡಿಗಳ ಗ್ರಂಥಗಳನ್ನಾಧರಿಸಿದೆ. ಇದರ ಪ್ರಕಾರ ಆಕ್ಷೇಪ ವ್ಯಾಪಾರದಲ್ಲಿ ಧ್ವನಿ ಅಡಕವಾಗುತ್ತದೆ.

ಸಮವೆಂಬ ಅರ್ಥಾಲಂಕಾರದ ಕೊನೆಯ ಪ್ರಭೇದವಾದ ಪ್ರಕಟತ್ವವೆಂಬ ಉಭಯಾಲಂಕಾರ ವನ್ನು ಅಭಿವ್ಯಕ್ತಿ ಎಂದು ಕರೆದು ಶ್ರುತಿ, ಆಕ್ಷೇಪಗಳು ಅಭಿವ್ಯಕ್ತಿಯ ಉಪವಿಭಾಗಗಳೆಂದು ಸಾರುತ್ತದೆ. ಇದರ ಪರಿಭಾಷೆಯಂತೆ ಶ್ರುತಿಯಲ್ಲಿ ಅಭಿಧಾ, ಲಕ್ಷಣಾ ವ್ಯಾಪಾರಗಳು ಅಡಕವಾಗುತ್ತವೆ : ಆಕ್ಷೇಪವೆಂದರೆ ಧ್ವನಿ ಅಥವಾ ವ್ಯಂಜನಾವ್ಯಾಪಾರ. ಈ ದೃಷ್ಟಿಯಿಂದ ಅಲಂಕಾರ ವ್ಯಾಪಕವೂ ಧ್ವನಿವ್ಯಾಪ್ಯವೂ ಆಗುತ್ತದೆ. ಧ್ವನಿ ಅಲಂಕಾರದ ಜಾತಿಗೆ ಸೇರಿದ ಒಂದು ಅಂಗ ಎನ್ನಿಸುತ್ತದೆ. ವಿವಿಧ ಅಲಂಕರಣ ವ್ಯಾಪಾರಗಳಲ್ಲಿ ಧ್ವನನ ವ್ಯಾಪಾರವೂ ಒಂದೆಂದಾಗುತ್ತದೆ.


Get in Touch With Us info@kalpa.news Whatsapp: 9481252093

Tags: 18 Puranas18 ಪುರಾಣDr Gururaj PoshettihalliHindu MythologyKannadaNewsWebsiteಜ್ಯೋತಿಷ್ಯ ಶಾಸ್ತ್ರಡಾ.ಗುರುರಾಜ ಪೋಶೆಟ್ಟಿಹಳ್ಳಿರಾಮಕೃಷ್ಣರ ಕತೆ
Previous Post

ಏಕಕಾಲದಲ್ಲಿ ಶನಿ-ಕುಜ-ಗುರು ಪ್ರಭಾವ: ಹೆಚ್ಚಾಗಲಿದೆ ವೈರಸ್ ಜಿಹಾದ್, ಮನೆಯಲ್ಲಿರುವುದೊಂದೇ ಪರಿಹಾರ

Next Post

ಅಮೆರಿಕಾ-ವಿಕೋಪ ಸ್ಥಿತಿಯಲ್ಲಿ ಕೊರೋನಾ ಸೋಂಕು: ನಾಲ್ಕು ವಾರ ಮನೆಯಲ್ಲಿರುವಂತೆ ನಾಗರಿಕರಿಗೆ ಟ್ರಂಪ್ ಕಟ್ಟುನಿಟ್ಟಿನ ಸೂಚನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಮೆರಿಕಾ-ವಿಕೋಪ ಸ್ಥಿತಿಯಲ್ಲಿ ಕೊರೋನಾ ಸೋಂಕು: ನಾಲ್ಕು ವಾರ ಮನೆಯಲ್ಲಿರುವಂತೆ ನಾಗರಿಕರಿಗೆ ಟ್ರಂಪ್ ಕಟ್ಟುನಿಟ್ಟಿನ ಸೂಚನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

A Divine Journey to South India on Bharat Gaurav Train Here is the full details of tour

June 30, 2025

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025

ಹಾಸನ | ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಒಂದೇ ದಿನ ಮೂವರ ಸಾವು | ಆತಂಕ

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

A Divine Journey to South India on Bharat Gaurav Train Here is the full details of tour

June 30, 2025

ರೈಲು ನಿಲ್ದಾಣದಲ್ಲಿ ‘ಮಾರ್ಗದರ್ಶಕ್’ ಸ್ಮಾರ್ಟ್ ಡಿಜಿಟಲ್ ಸಂಚರಣೆ ವ್ಯವಸ್ಥೆ ಆರಂಭ

June 30, 2025

ಮೈಸೂರು ರೈಲ್ವೆ ನಿಲ್ದಾಣ ಕುರಿತಾಗಿ ಪ್ರಯಾಣಿಕರಿಗೆ ಮಹತ್ವದ ಮಾಹಿತಿ ನೀಡಿದ ರೈಲ್ವೆ ಇಲಾಖೆ

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!