ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಸೊರಬ ತಾಲೂಕಿನ ಆನವಟ್ಟಿಯಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ವಾಹನವನ್ನು, ಮಾಲು ಸಹಿತ ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ವಾಹನ ಚಾಲಕ ದೇವರಾಜ್ ಎಂದು ಗುರುತಿಸಲಾಗಿದ್ದು, ಚಾಲಕ ನಾಪತ್ತೆಯಾಗಿದ್ದಾನೆ. ಆರೋಪಿಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಅಬಕಾರಿ ನಿರೀಕ್ಷಕ ಹನುಮಂತಪ್ಪ ಡಿ.ಎನ್. ಅವರ ನೇತೃತ್ವದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಎಸ್.ಡಿ. ಚಂದ್ರಪ್ಪ, ವೀರೇಂದ್ರ ಪಾಟೀಲ್ ಹಾಗೂ ಅರ್ಜುನ ಅವರು ಹಾಜರಿದ್ದರು.
ಅಲ್ಲದೇ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ನಗರ-ಮಾಸ್ತಿಕಟ್ಟೆ ರಸ್ತೆಯ ಕಾನಗೋಡು ಸರ್ಕಲ್ನಲ್ಲಿ ಹೋಂಡಾ ಆಕ್ಟೀವಾದಲ್ಲಿ ಅಕ್ರಮವಾಗಿ ಮದ್ಯ ಸಾಗಾಣಿಕೆ ಮಾಡುತ್ತಿರುವುದನ್ನು ಗುರುತಿಸಿ ವಾಹನ ಸತ 20,000ರೂ. ಮೌಲ್ಯದ ಮದ್ಯವನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯು ನಾಪತ್ತೆಯಾಗಿದ್ದಾನೆ.
ಆರೋಪಿಯ ವಿರುದ್ಧ ತನಿಖೆ ಮುಂದುವರೆದಿದೆ ಎಂದು ತಿಳಿಸಿರುವ ಅಧಿಕಾರಿಗಳು, ಈ ಅಬಕಾರಿ ಉಪನಿರೀಕ್ಷಕ ಉತ್ಕುಮಾರ್ ಅವರ ನೇತೃತ್ವದಲ್ಲಿ ನಡೆಸಲಾದ ಕಾರ್ಯಾಚರಣೆಯಲ್ಲಿ ಅಬಕಾರಿ ರಕ್ಷಕ ನಾಗರಾಜ್ ಮತ್ತು ಉಮೇಶ್ ಅವರು ಹಾಜರಿದ್ದರು.
Get in Touch With Us info@kalpa.news Whatsapp: 9481252093
Discussion about this post