ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ಮಹಾಮಾರಿಯನ್ನು ರಾಜ್ಯದಲ್ಲಿ ನಿಯಂತ್ರಣಕ್ಕೆ ತರುವ ಹಿನ್ನೆಲೆಯಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಅನ್ನು ಕೊಂಚ ಸಡಿಲಿಸಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಎಪ್ರಿಲ್ 20ರಿಂದ ದ್ವಿಚಕ್ರ ವಾಹನಗಳಿಗೆ ಓಡಾಡಾಲು ಅನುಮತಿ ನೀಡಿದೆ.
ಈ ಕುರಿತಂತೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಎಪ್ರಿಲ್ 20ರ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ(ಐಟಿ, ಬಿಟಿ) ಶೇ. 33ರಷ್ಟು ಸಿಬ್ಬಂದಿ ಕಚೇರಿಗೆ ಹೋಗಿ ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ ಎಂದರು.
ಕಂಟೈನ್ಮೆಂಟ್ ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ದ್ವಿಚಕ್ರ ವಾಹನಗಳ ಓಡಾಟಕ್ಕೆ ಅವಕಾಶ ನೀಡಲಾಗಿದೆ. ಅಲ್ಲದೇ ಕಟ್ಟಡ ಕಾಮಗಾರಿಯನ್ನೂ ಸಹ ಮುಂದುವರೆಸಬಹುದಾಗಿದ್ದು, ಕಚೇರಿಗೆ ತೆರಳುವವರು ಪೊಲೀಸರಿಂದ ಪಾಸ್ ಪಡೆಯುವ ಅವಶ್ಯಕತೆಯಿಲ್ಲ ಎಂದರು.
ಇನ್ನು, ರಾಜ್ಯದಲ್ಲಿ ಮೇ 3ರವರೆಗೂ ನಿಷೇಧಾಜ್ಞೆ ಮುಂದುವರೆಯಲಿದ್ದು, ಅಲ್ಲಿಯವರೆಗೂ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶವಿಲ್ಲ ಎಂದರು.
Get in Touch With Us info@kalpa.news Whatsapp: 9481252093
Discussion about this post