No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Thursday, March 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಸಚಿನ್ ಪಾರ್ಶ್ವನಾಥ್

ನನ್ನ ಯೋಧರನ್ನು War Criminals ಎನ್ನುವ ನಾಯಿಗಳನ್ನು ಶಿಕ್ಷಿಸುವ ತಾಕತ್ತು ಈ ವ್ಯವಸ್ಥೆಗಿಲ್ಲವೇಕೆ?

ಆ ಯೋಧ ಬಯಸಿದ ಕೆಲಸ ಕಾಲ ಬಳಿ ಬಿದ್ದಿರುತ್ತಿತ್ತು. ಆದರೆ, ಅವರು ಆರಿಸಿಕೊಂಡಿದ್ದು ವೀರಸ್ವರ್ಗವನ್ನು

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 7, 2020
in ಸಚಿನ್ ಪಾರ್ಶ್ವನಾಥ್
0
ನನ್ನ ಯೋಧರನ್ನು War Criminals ಎನ್ನುವ ನಾಯಿಗಳನ್ನು ಶಿಕ್ಷಿಸುವ ತಾಕತ್ತು ಈ ವ್ಯವಸ್ಥೆಗಿಲ್ಲವೇಕೆ?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಪ್ರಪಂಚದಲ್ಲಿ ಎಲ್ಲದಕ್ಕಿಂತ ದೊಡ್ಡ ನೋವು ಯಾವುದು ಗೊತ್ತಾ? ಮಗನ ಶವಕ್ಕೆ ತಂದೆ ಸಂಸ್ಕಾರ ಮಾಡುವುದು. ಅಂತಹ ನೋವನ್ನು ನುಂಗಿದ ಅಪ್ಪ, ನನ್ನ ಮಗ ಅತ್ಯುನ್ನತ ತ್ಯಾಗ ಮಾಡಿದ್ದಾನೆ. ಅದಕ್ಕಾಗಿಯೇ ಅವನು ತರಬೇತಿ ಪಡೆದಿದ್ದ ಮತ್ತು ಅದನ್ನೇ ಸಾಧಿಸಿದ್ದಾನೆ ಎಂದರೆ ಏನರ್ಥ? ಒಂದೋ ಆ ತಂದೆ ಸೈನಿಕನಾಗಿರಬೇಕು ಅಥವಾ ಆ ಮಗ ವೀರ ಯೋಧನಾಗಿರಬೇಕು. ವಿಶೇಷ ಎಂದರೆ ಈ ಸಮಯದಲ್ಲಿ ಈ ಎರಡೂ ಸತ್ಯ. ಮೊನ್ನೆಯಷ್ಟೇ ಹಂದ್ವಾರಾ ಎನ್‌ಕೌಂಟರ್‌ನಲ್ಲಿ ಹುತಾತ್ಮರಾದ ಮೇಜರ್ ಅನೂಜ್ ಸೂದರ ತಂದೆ ನಿವೃತ್ತ ಬ್ರಿಗೇಡಿಯರ್ ಚಂದ್ರಕಾಂತ್ ಸೂದ್‌ರ ಮಾತು. ಅಬ್ಬಾ ಅದೆಂತಹ ದೇಶವಿದ್ದೀತು ಭಾರತ? ಇಂತಹ ಶ್ರೇಷ್ಠ ಮಕ್ಕಳ ಪಡೆಯಲು.

ಅವತ್ತು ಮೇ ಎರಡರ ಶನಿವಾರ. ಮಧ್ಯಾಹ್ನ ಮೂರುವರೆ ಗಂಟೆ ಸುಮಾರಿಗೆ ಉತ್ತರ ಕಾಶ್ಮೀರದ ಹಂದ್ವಾರಾ ಬಳಿ ಉಗ್ರರು ಮತ್ತು ಭಾರತೀಯ ಯೋಧರ ನಡುವೆ ಕಾಳಗ ಆರಂಭವಾಯಿತು. ಸಂಜೆಯ ಹೊತ್ತಿಗೆ ಇಬ್ಬರು ಮುಖ್ಯ ಸೇನಾಧಿಕಾರಿಗಳು ಲಷ್ಕರ್ ಉಗ್ರರೊಂದಿಗೆ ಒಂದು ಮನೆಯಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ಬಂದಾಗ ಅವರನ್ನು ಸಂಪರ್ಕಿಸುವ ಎಲ್ಲಾ ಪ್ರಯತ್ನಗಳು ಆರಂಭವಾದವು. ದುರಾದೃಷ್ಟವಶಾತ್ ಯಾವ ಯಶಸ್ಸು ಸಿಗದಿದ್ದಾಗ ಕರ್ನಲ್ ಅಶುತೋಷ್ ಶರ್ಮಾರ ಮೊಬೈಲಿಗೆ ಕರೆ ಮಾಡಿದಾಗ ಅಸ್ಸಲಾಮ್ ವಾಲೇಕುಮ್ ಎಂದು ದುರುಳನೊಬ್ಬ ಪ್ರತಿಕ್ರಿಯಿಸಿದ. ಅಲ್ಲಿಗೆ ಭರವಸೆಗಳು ಕರಗಿದ್ದವು. ಮೇಜರ್ ಅನೂಜ್ ಸೂದ್’ರೊಂದಿಗೆ ಕರ್ನಲ್ ಅಶುತೋಷ್ ಶರ್ಮಾ, ನಾಯಕ್ ರಾಜೇಶ್, ಲ್ಯಾನ್ಸ್‌ ನಾಯಕ್ ದಿನೇಶ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಸಬ್ ಇನ್ಸ್‌ಪೆಕ್ಟರ್ ಶಕೀಲ್ ಖಾಜಿ ಹುತಾತ್ಮರಾದರು.

ಅನೂಜ್ ಸೂದರ ತಂದೆಯವರ ಮಗನ ಸಾವಿನ ಬಗ್ಗೆ ಕೇಳಿದರೆ ಇಲ್ಲ ಅವನು ಅದಕ್ಕೆಂದೇ ಇದ್ದವನು. ನಮ್ಮ ಕಾಯುವುದೇ ಅವನ ಹೊಣೆ. ಆದರೆ ಆತನ ವಿವಾಹವಾಗಿ ಕೆಲವು ತಿಂಗಳು ಅಷ್ಟೇ ಆಗಿತ್ತು. ಅದಕ್ಕೆ ನನ್ನ ಸೊಸೆಯನ್ನು ನೆನೆದು ದುಃಖವಾಗುತ್ತಿದೆ ಎಂದರು. ಸ್ವತಃ ಚಂದ್ರಕಾಂತ್ ಅವರು ನಿವೃತ್ತ ಬ್ರಿಗೇಡಿಯರ್. ನಿಜಕ್ಕೂ ಹೆಮ್ಮೆ ಅನ್ನಿಸುತ್ತದೆ. ಆದರೆ ಮುವತ್ತೊಂದರ ಹರೆಯದ ಅನೂಜ್ ಸೂದರ ಕುರಿತು ನಿಮಗೆ ಹೇಳಬೇಕಿದೆ.

Internet Image

“When you’re older, you will realise the only thing that matters, the only thing, is that you had courage and honour. Lose those things and you won’t die any quicker, but you’ll be less than the dirt from your boots. You’ll still be dust, but you’ll have wasted a short time in the light.”. ಇದು ಅನೂಜ್ ಸೂದರ ಇನ್ಸ್ಟಾಗ್ರಾಂನಲ್ಲಿ ಹಾಕಿದ ಸಾಲುಗಳು, ನೀನು ವೃದ್ಧನಾದಾಗ ಒಂದು ವಿಷಯ ಅರ್ಥ ಆಗುತ್ತೆ. ಅದೇನೆಂದರೆ ನಿಜಕ್ಕೂ ಮಹತ್ವ ಅಂತಿದ್ದರೆ ಅದು ಧೈರ್ಯ ಮತ್ತು ಗೌರವಕ್ಕೆ ಅಷ್ಟೇ ಅಂತ. ಅವನ್ನು ಕಳೆದುಕೊಂಡರೆ ನೀನೇನು ಬೇಗ ಸಾಯದೇ ಇರಬಹುದು. ಆದರೆ ನಿನ್ನ ಕಾಲ ಧೂಳಿಗೂ ತೃಣ ಆಗ ನೀನು. ನಿಜವಾಗಿಯೂ ನೀನು ಮಹತ್ತರವಾದದ್ದು ಕಳೆದುಕೊಂಡಿರ್ತಿಯಾ. ಒಬ್ಬ ವೀರನ ಪುತ್ರನಿಂದ, ಪುತ್ರನೂ ಮಹಾವೀರನಾದಾಗ ಅವನಿಂದ ಇದನ್ನಲ್ಲದೆ ಮತ್ತೇನು ನಿರೀಕ್ಷಿಸಲು ಸಾಧ್ಯ?

ರೋಮಾಂಚನವಾಗುತ್ತದೆ ವೀರನ ಕಥೆ ಹೇಳಲು, ಇನ್ನೆಷ್ಟು ಚಂದವಿರಬೇಡ ಆ ಬದುಕು.?! ಬದುಕಿದರೆ ಹಾಗೆ ಬದುಕಬೇಕು. Indian Institute of Science (IISc)ನಲ್ಲಿ, M.Tech ಪದವೀಧರ. Indian Institute of Technology (IIT) ಪಾಸ್ ಆದವರು. ಅವರು ಹೇಳಿದ ಉದ್ಯೋಗ ಅವರ ಅರಸಿ ಬರುತ್ತಿತ್ತು. ಎಲ್ಲಾ ಬಿಟ್ಟು ಜೀವ ಪಣಕ್ಕಿಟ್ಟು ಸೇನೆ ಸೇರಿದರು. ತಂದೆಯ ಬದುಕು, ಉದ್ಯೋಗ ಕಣ್ಣಾರೆ ಕಂಡು ನಂತರ ಇಂತಹ ಪ್ರತಿಭಾವಂತ ಯುವಕ ಈ ಹಾದಿಯನ್ನು ತುಳಿದಿದ್ದರೆ ಅದು ಖಂಡಿತ ಅವರಲ್ಲಿನ ರಾಷ್ಟ್ರ ಪ್ರೇಮವೇ ಆಗಿರುತ್ತದೆ. ಒಮ್ಮೊಮ್ಮೆ ಬೇಸರವಾಗುತ್ತದೆ. ಈ ನಮ್ಮ ಭಾರತದಲ್ಲಿ ಸೈನಿಕರ ಬಲಿದಾನಗಳಿಗೆ ಸಾಕ್ಷಿ ಕೇಳುವವರು ಇದ್ದಾರಲ್ಲ ಅಂತ. ಈಗಲೂ ಅಂತಹುದೇ ಒಂದು ಘಟನೆ ನಡೆಯಿತು. ಅವರ ಬಗ್ಗೆ ಜಾಮಿಯ ವಿವಿಯ ಒಂದು ಎಡಬಿಡಂಗಿ ಹೇಳ್ತಾಳೆ ಅವರೆಲ್ಲ War Criminals ಅಂದರೆ ಯುದ್ಧಾಪರಾಧಿಗಳು. ಅವರಿಗೆ ಯಾಕೆ ನೀವು ಇಷ್ಟು ರೋಧಿಸುವಿರಿ? ಅಂತ. ರಕ್ತ ಕುದ್ದು ಬಿಡುತ್ತದೆ. ಯಾರನ್ನು ನೋಡಿ ಅನಕ್ಷರಸ್ಥ ಗ್ರಾಮ ಭಾರತ ಕಂಬನಿ ಮಿಡಿಯುತ್ತೋ, ವಿದ್ಯಾವಂತರಲ್ಲದ ಅಕ್ಷರಸ್ಥ ಅನಾಗರೀಕರು ತಮ್ಮ ಪ್ರಚಾರದ ಹುಚ್ಚಿಗೆ ವೀರರ ಹೀಗಳೆಯುವ ಕಾಯಕ ಮಾಡುತ್ತಾರೆ. ಅವರಿಗೆ ಕೊನೆಗೆ ಒಂದು ಶಿಕ್ಷೆಯೂ ನಮ್ಮ ಸಂವಿಧಾನ ನೀಡುವುದಿಲ್ಲ.

ಮಂಗಳವಾರ ಬೆಳಿಗ್ಗೆ ಪಂಚಕುಲಾಗೆ ಹುತಾತ್ಮ ಯೋಧ ಅನೂಜರ ದೇಹ ತಂದಾಗ ಆಕ್ರಂದನ ಹೃದಯ ತಟ್ಟುತ್ತಿತ್ತು. ಚಿಕ್ಕ ವಯಸ್ಸಿನಲ್ಲಿ ಪತಿಯನ್ನು ಕಳೆದುಕೊಂಡ ಪತ್ನಿ ಆಕೃತಿ, ಮಗನ ಶವಕ್ಕೆ ಸಂಸ್ಕಾರ ಮಾಡಬೇಕಾದ ತಂದೆ. ತುಂಬಾ ಕಠಿಣವಾದ ಘಳಿಗೆ. ಲಾಕ್‌ಡೌನ್ ಮುಗಿದ ಮೇಲೆ ಬರುವ ಭರವಸೆ ಕೊಟ್ಟು ಹೋದ ಮನೆಯ ಮಗ ಬಂದಿದ್ದು ಹುತಾತ್ಮನಾಗಿ. ಇದು ಕೇವಲ ಅನೂಜ್ ಸೂದ್ ಒಬ್ಬರ ಕಥೆಯಲ್ಲ. ಭಾರತೀಯ ಪ್ರತಿ ಯೋಧನ ಜೀವನ. ಅವರ ಹೃದಯದಲ್ಲಿ ರಾಷ್ಟ್ರಪ್ರೇಮ ಬಿಟ್ಟರೆ ಮತ್ತೇನು ಇರಲು ಸಾಧ್ಯವೇ ಇಲ್ಲ. ಹೃದಯದ ಪ್ರತಿ ಬಡಿತವೂ ಮತ್ತಷ್ಟು ದೇಶಭಕ್ತಿಯನ್ನೇ ಸ್ಪುರಿಸುತ್ತದೆ.

ಅನೂಜರ ದಿಟ್ಟಿಸಿ ನೋಡುತ್ತಾ, ಮತ್ತೊಮ್ಮೆ ಬಾಚಿ ಅಳುತ್ತಾ ಇದ್ದ ಆಕೃತಿಯವರ ನೋಡುತ್ತಿದ್ದರೆ ಯಾಕಾದರೂ ಅನೂಜ್ ಸೂದ್ ಎದ್ದು ಬರಬಾರದೋ ಎನ್ನಿಸುತ್ತಿತ್ತು. ಅವರಿಗೇನಿತ್ತು ಅಂತಹ ಜವಾಬ್ದಾರಿ? ಕೈ ತುಂಬಾ ಸಂಬಳ ಪಡೆಯಲು ಎಂದೋ ಕಳಿಸಬಹುದಿತ್ತು. ವೀರರ ಕುಟುಂಬಗಳೇ ಹಾಗೆ. ಅವರು ಅನನ್ಯ ದೇಶಭಕ್ತರರೇ ಆಗಿರುತ್ತಾರೆ. ಅಂತಹುದರಲ್ಲಿ ಅವರಿಗೆ ಸಾಕ್ಷಿ ಪುರಾವೆ ಕೇಳುವುದು, ಯುದ್ಧ ಅಪರಾಧಿಗಳು ಅಂತ ಹೀಗಳೆಯುವುದು ಅಥವಾ ಹೊಟ್ಟೆಪಾಡಿಗಾಗಿ ವೃತ್ತಿ ಮಾಡುವವರು ಎನ್ನುವುದು ತುಂಬಾ ದೊಡ್ಡ ಅಪರಾಧ. ಸಂವಿಧಾನಾತ್ಮಕ ಶಿಕ್ಷೆ ವಿಧಿಸುವ ಕ್ರಮ ಆರಂಭವಾಗಲಿ.

ನಿಜಕ್ಕೂ ಇಂತಹ ವೀರ ಪುತ್ರರ ಪಡೆದ ಭಾರತ ಮಾತೆ ಧನ್ಯಳು. ಅವರ ಕಾಲ ಧೂಳಿಗೂ ನಾವು ಸಮಾನರಲ್ಲ. ಈ ಪೀಳಿಗೆ ಅಸಂಖ್ಯವಾಗಲಿ. ಈ ಸಂದರ್ಭದಲ್ಲಿ ಶ್ರೇಷ್ಠ ಸಂತ ವಿದ್ಯಾನಂದ ಶೆಣೈಯವರ ಕೆಲ ಸಾಲುಗಳು ನೆನಪಿಗೆ ಬರುತ್ತಿದೆ.

ಮೂರು ಸಾಗರ, ನೂರು ಮಂದಿರ ದೈವ ಸಾಸಿರವಿದ್ದರೆ,
ಗಂಗೆಯಿದ್ದರೆ ಸಿಂಧುವಿದ್ದರೆ ಗಿರಿ ಹಿಮಾಲಯವಿದ್ದರೆ,
ವೇದವಿದ್ದರೆ ಭೂಮಿಯಿದ್ದರೆ ಘನ ಪರಂಪರೆಯಿದ್ದರೆ,
ಏನು ಸಾರ್ಥಕ ಮನೆಯ ಮಕ್ಕಳೇ ಮಲಗಿ ನಿದ್ರಿಸುತ್ತಿದ್ದರೆ?
ಅರ್ಥ ಆಗುವವರಿಗೆ ಅರ್ಥ ಆಗಿದೆ.


Get in Touch With Us info@kalpa.news Whatsapp: 9481252093

Tags: Bharat Ke VeerBrave WarriorIITindian armyKannadaNewsWebsiteLatestNewsKannadaMajor anuj soodSachin ParshwanathWar Criminalsಬ್ರಿಗೇಡಿಯರ್ಭಾರತ ಮಾತೆಭಾರತೀಯ ಸೇನೆಮೇಜರ್ ಅನೂಜ್ ಸೂದ್ವೀರ ಯೋಧ
Share228Tweet123Send
Previous Post

ನಾಲ್ಕು ದಿನದಲ್ಲಿ ಒಂದು ಲಕ್ಷ ವಲಸೆ ಕಾರ್ಮಿಕರನ್ನು ಅವರ ಊರಿಗೆ ಕಳುಹಿಸಲಾಗಿದೆ: ಡಿಸಿಎಂ ಸವದಿ

Next Post

ಕ್ವಾರಂಟೈನ್ ಅವಧಿ ಮುಗಿಸಿ ವಿಧಾನಸೌಧಕ್ಕೆ ಬಂದ ಸಚಿವರು ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕ್ವಾರಂಟೈನ್ ಅವಧಿ ಮುಗಿಸಿ ವಿಧಾನಸೌಧಕ್ಕೆ ಬಂದ ಸಚಿವರು ಹೇಳಿದ್ದೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

ಪ್ರಬುದ್ಧ ಶಿಷ್ಯ ಪರಂಪರೆಯನ್ನು ರೂಪಿಸುವುದು ಮಹತ್ವದ ಕಾರ್ಯ | ಮೃದಂಗ ವಿದ್ವಾಂಸ ವಾಸುದೇವರಾವ್ ಅಭಿಮತ

March 25, 2026
ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

ಮೂಡುಬಿದಿರೆಯ ನ್ಯೂ ವೈಬ್ರೆಂಟ್ – ಅರಬಿಂದೋ ಪಿಯು ಕಾಲೇಜು ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ

March 25, 2026
ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

ಮಾ.26 | ಸಿಎ ವಿದ್ಯಾರ್ಥಿಗಳಿಗಾಗಿ ಐಸಿಎಐ ರೀಡಿಂಗ್ ರೂಂ ಲೋಕಾರ್ಪಣೆ

March 25, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL