ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಗೆ ಹೊರಗಿನಿಂದ ಆಗಮಿಸುವವರಿಗೆ ನಗರದಲ್ಲಿ ಕ್ವಾರಂಟೈನ್ ಮಾಡುವುದನ್ನು ವಿರೋಧಿಸಿರುವ ಬಜರಂಗದಳ, ಜಿಲ್ಲಾಡಳಿತ ಯಾವುದೇ ಕಾರಣಕ್ಕೂ ಇಂತಹ ಕೆಲಸ ಮಾಡಬಾರದು ಎಂದಿದೆ.
ಈ ಕುರಿತಂತೆ ಮಾತನಾಡಿರುವ ಬಜರಂಗದಳದ ಮುಖಂಡ ದಯಾಳು, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಆಶಾ ಕಾರ್ಯಕರ್ತೆಯರ ಶ್ರಮದ ಫಲ ಇಂದು ಜಿಲ್ಲೆ ಕೊರೋನಾ ಮುಕ್ತವಾಗಿದೆ. ಇದಕ್ಕಾಗಿ ಇವರನ್ನೆಲ್ಲಾ ಅಭಿನಂದಿಸುತ್ತೇವೆ. ಆದರೆ, ಈಗ ನಗರಕ್ಕೆ ಆಗಮಿಸಿರುವ ತಬ್ಲಿಘಿಗಳು ನಗರಕ್ಕೆ ಆಗಮಿಸಿದ್ದು, ಇವರನ್ನು ನಗರ ವ್ಯಾಪ್ತಿಯಲ್ಲಿ ಕ್ವಾರಂಟೈನ್’ನಲ್ಲಿರಿಸಲಾಗಿದ್ದು, ಇದನ್ನು ನಾವು ವಿರೋಧಿಸುತ್ತೇವೆ ಎಂದಿದ್ದಾರೆ.
ನಗರ ವ್ಯಾಪ್ತಿ ಹೊರತುಪಡಿಸಿ, ಹೊರಕ್ಕೆ ಕ್ವಾರಂಟೈನ್ ಮಾಡಿಕೊಳ್ಳಲಿ. ಕೋಟೆ ಭಾಗ ಸೇರಿದಂತೆ ನಗರ ವ್ಯಾಪ್ತಿಯಲ್ಲಿ ಕ್ವಾರಂಟೈನ್ ಮಾಡಲು ನಾವು ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ. ಒಂದು ವೇಳೆ ಇಂತಹ ಕ್ರಮಕ್ಕೆ ಮುಂದಾದರೆ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
Get in Touch With Us info@kalpa.news Whatsapp: 9481252093
Discussion about this post