ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಹೊಸ ಭಾಷ್ಯ ಬರೆಯುವಲ್ಲಿ ಶ್ರಮಿಸುತ್ತಿರುವ ಸಂಸದ ಬಿ.ವೈ. ರಾಘವೇಂದ್ರ ಮಹತ್ವದ ಘೋಷಣೆಯೊಂದನ್ನು ಮಾಡಿದ್ದಾರೆ.
ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನ, ಬಟರ್ ಫ್ಲೈ ಪಾರ್ಕ್ ಮಾದರಿಯಲ್ಲಿಯೇ ಗಾಜನೂರು ಬಳಿಯಲ್ಲಿ ಬಯೋ ಡೈವರ್ಸಿಟಿ ಪಾರ್ಕ್ ನಿರ್ಮಿಸಲಾಗುವುದು ಎಂದವರು ತಿಳಿಸಿದ್ದಾರೆ.
ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಉತ್ತರ ಕನ್ನಡ ಮೂರೂ ಜಿಲ್ಲೆಗಳನ್ನು ಒಳಗೊಂಡಂತೆ ಸಹ್ಯಾದ್ರಿ ಪಾರಂಪರಿಕ ಪ್ರಾಧಿಕಾರವನ್ನು ಈ ಹಿಂದೆ ಸೃಜಿಸಲಾಗಿತ್ತು. ಈಗ ಇದಕ್ಕೆ ಅಧಿಕಾರಿಗಳ ನೇಮಕವೂ ಸಹ ಆಗಿದ್ದು, ಈ ಮೂಲಕವೇ ಪಾರ್ಕ್ ನಿರ್ಮಾಣವಾಗಲಿದೆ ಎಂದರು.
ಸಹ್ಯಾದ್ರಿ ಪಾರಂಪರಿಕ ಪ್ರಾಧಿಕಾರಕ್ಕಾಗಿ ಹಿಂದೆ 10 ಕೋಟಿ ಹಣವನ್ನು ಮೀಸಲಿಡಲಾಗಿತ್ತು. ಈಗ ಅದು ಬಡ್ಡಿ ಸೇರಿ 12 ಕೋಟಿ ಆಗಿದೆ. ಇದೇ ಹಣದಲ್ಲಿ ಒಟ್ಟು 100 ಎಕರೆ ಪ್ರದೇಶದಲ್ಲಿ ಜೈವಿಕ ಉದ್ಯಾನವನ ನಿರ್ಮಿಸಲಾಗುತ್ತದೆ ಎಂದರು.
ಶಿವಮೊಗ್ಗ ಜಿಲ್ಲೆಗೆ ಪ್ರವಾಸಿಗರು ಬಂದರೆ ಕನಿಷ್ಠ ಎರಡು ಮೂರು ದಿನಗಳ ಕಾಲ ಸಂತೋಷವಾಗಿ ಕಾಲ ಕಳೆಯುವಂತಾಗಬೇಕು ಎಂಬುದು ನಮ್ಮ ಉದ್ದೇಶ ಎಂದರು.
Get in Touch With Us info@kalpa.news Whatsapp: 9481252093
Discussion about this post