ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿಕಾರಿಪುರ: ಮುಖ್ಯಮಂತ್ರಿಗಳ ಸ್ವಕ್ಷೇತ್ರದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ರಾಜ್ಯ ಕಾಯಕಲ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪಟ್ಟಣದ ಸಾರ್ವಜನಿಕರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಹಿರಿಯ ಅಧಿಕಾರಿಗಳ ತಂಡ ಇಂದು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದು, ಇಲ್ಲಿನ ಸ್ವಚ್ಛತೆ ಹಾಗೂ ಕೊರೋನಾ ಮಹಾಮಾರಿ ವಿಚಾರವಾಗಿ ತೆಗೆದುಕೊಂಡ ಕ್ರಮದ ಬಗ್ಗೆ ಪರಿಶೀಲನೆ ನಡೆಸಿತು.
ಈ ಸಂದರ್ಭದಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ. ರಾಘವೇಂದ್ರ ರಾವ್, ಡಾ. ಅನಿಲ್ ಕುಮಾರ್, ಡಾ. ಧನಂಜಯ, ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ವೈದ್ಯರಾದ ಡಾ. ಅನಿಲ್ ಕುಮಾರ್, ಡಾ. ಶಿವಾನಂದ್, ಡಾ. ಚಂದ್ರಶೇಖರ್, ಡಾ. ಸುರೇಶ್ ಕುಮಾರ್, ಸಹಾಯವಾಣಿ ಮುಖ್ಯಸ್ಥ ಮಂಜುನಾಥ್, ನರ್ಸ್ ಸಿಬ್ಬಂದಿಗಳ ಮುಖ್ಯಸ್ಥೆ ಲೀಲಾಬಾಯಿ ವೈ ಲಂಬಾಣಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
(ವರದಿ: ರಾಜಾರಾವ್ ಜಾಧವ್, ಶಿಕಾರಿಪುರ)
Get In Touch With Us info@kalpa.news Whatsapp: 9481252093





Discussion about this post